AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Assam Flood: ಅಸ್ಸಾಂ ಪ್ರವಾಹದಲ್ಲಿ ಮೃತಪಟ್ಟವರ ಸಂಖ್ಯೆ 190ಕ್ಕೆ ಏರಿಕೆ; 40,000 ಮನೆಗಳಿಗೆ ಹಾನಿಯಾಗಿದೆ ಎಂದ ಸಿಎಂ

ಭಾರೀ ಪ್ರವಾಹದಿಂದಾಗಿ ಅಸ್ಸಾಂನಲ್ಲಿ 30,000ರಿಂದ 40,000 ಮನೆಗಳಿಗೆ ಹಾನಿಯಾಗಿದೆ ಎಂದು ಮುಖ್ಯಮಂತ್ರಿ ಹಿಮಾಂತ್ ಬಿಸ್ವ ಶರ್ಮಾ ಮಾಹಿತಿ ನೀಡಿದ್ದಾರೆ.

Assam Flood: ಅಸ್ಸಾಂ ಪ್ರವಾಹದಲ್ಲಿ ಮೃತಪಟ್ಟವರ ಸಂಖ್ಯೆ 190ಕ್ಕೆ ಏರಿಕೆ; 40,000 ಮನೆಗಳಿಗೆ ಹಾನಿಯಾಗಿದೆ ಎಂದ ಸಿಎಂ
ಅಸ್ಸಾಂನಲ್ಲಿ ಪ್ರವಾಹImage Credit source: News18
TV9 Web
| Edited By: |

Updated on: Jul 09, 2022 | 3:38 PM

Share

ಅಸ್ಸಾಂ: ಅಸ್ಸಾಂನಲ್ಲಿ ಪ್ರವಾಹ ಪರಿಸ್ಥಿತಿ ಇನ್ನಷ್ಟು ಬಿಗಡಾಯಿಸಿದೆ. ಮಳೆ, ಪ್ರವಾಹ, ಭೂಕುಸಿತದಿಂದ ಅಸ್ಸಾಂ (Assam Floods) ರಾಜ್ಯದಲ್ಲಿ ಈ ವರ್ಷ ಮೃತಪಟ್ಟವರ ಸಂಖ್ಯೆ 190ಕ್ಕೆ ಏರಿಕೆಯಾಗಿದೆ. ಅಸ್ಸಾಂನ 14 ಜಿಲ್ಲೆಗಳ 28 ಕಂದಾಯ ವೃತ್ತಗಳು ಮತ್ತು 620 ಗ್ರಾಮಗಳು ಪ್ರವಾಹದ ಪ್ರಭಾವದಿಂದ ತತ್ತರಿಸುತ್ತಲೇ ಇವೆ. ಅಸ್ಸಾಂನಲ್ಲಿ 8,88,177 ಜನರು ಪ್ರವಾಹದಿಂದ ಸಂಕಷ್ಟಕ್ಕೀಡಾಗಿದ್ದಾರೆ. 5.63 ಲಕ್ಷಕ್ಕೂ ಹೆಚ್ಚು ಜನರು ನಿರಾಶ್ರಿತ ಕೇಂದ್ರದಲ್ಲಿ ಆಶ್ರಯ ಪಡೆದಿದ್ದಾರೆ.

ಇತ್ತೀಚಿನ ಭಾರೀ ಪ್ರವಾಹದಿಂದಾಗಿ ಅಸ್ಸಾಂನಲ್ಲಿ 30,000ರಿಂದ 40,000 ಮನೆಗಳಿಗೆ ಹಾನಿಯಾಗಿದೆ ಎಂದು ಮುಖ್ಯಮಂತ್ರಿ ಹಿಮಾಂತ್ ಬಿಸ್ವ ಶರ್ಮಾ ಮಾಹಿತಿ ನೀಡಿದ್ದಾರೆ. ಅವರು ಸಂತ್ರಸ್ತ ಜನರಿಗೆ ಸಹಾಯ ಮಾಡಲು ಎನ್‌ಡಿಆರ್‌ಎಫ್‌ನಿಂದ ಮುಂಗಡ ನಿಧಿಯನ್ನು ಕೋರಿದ್ದಾರೆ. ಶುಕ್ರವಾರ ಸಂಜೆ ನವದೆಹಲಿಯಲ್ಲಿ ನಡೆದ ಸಭೆಯಲ್ಲಿ ಹಿಮಾಂತ್ ಬಿಸ್ವ ಶರ್ಮಾ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಈ ವಿಷಯ ತಿಳಿಸಿದ್ದು, ಕೇಂದ್ರದ ನೆರವು ಕೋರಿದ್ದಾರೆ.

ಇದನ್ನೂ ಓದಿ
Image
Viral News: ಕೆಟ್ಟ ಕನಸಿಗೆ ಹೆದರಿ ಕದ್ದ ದೇವರ ವಿಗ್ರಹಗಳನ್ನು ವಾಪಾಸ್ ತಂದಿಟ್ಟ ಕಳ್ಳರು; ಅಂಥದ್ದೇನಾಯ್ತು?
Image
Vivek Agnihotri: ‘ದಿ ಕಾಶ್ಮೀರ್ ಫೈಲ್ಸ್’ ಕಾಲ್ಪನಿಕ ಕತೆ ಎಂದ ವಿಕಿಪೀಡಿಯಾ ಬರಹ; ವಿವೇಕ್ ಅಗ್ನಿಹೋತ್ರಿ ತೀವ್ರ ಆಕ್ಷೇಪ
Image
ಹೊರಬಿತ್ತು ‘ದಿ ಕಾಶ್ಮೀರ್ ಫೈಲ್ಸ್’ ಒಟಿಟಿ ರಿಲೀಸ್ ದಿನಾಂಕ; ಇಲ್ಲಿದೆ ವಿವರ

ಇದನ್ನೂ ಓದಿ: Assam Flood: ಅಸ್ಸಾಂನಲ್ಲಿ ಪ್ರವಾಹದ ಮಟ್ಟ ಕೊಂಚ ಇಳಿಕೆ; 127 ಜನ ಸಾವು, ಸಂಕಷ್ಟದಲ್ಲಿ 22 ಲಕ್ಷ ಜನ

ಪ್ರವಾಹದಿಂದ ಸುಮಾರು 30,000ರಿಂದ 40,000 ಮನೆಗಳಿಗೆ ಹಾನಿಯಾಗಿದೆ ಎಂದು ಮುಖ್ಯಮಂತ್ರಿ ಹಿಮಾಥ್ ಬಿಸ್ವ ಶರ್ಮ ಗೃಹ ಸಚಿವರಿಗೆ ವಿವರಿಸಿದ್ದಾರೆ. ಮನೆಗಳು ತೀವ್ರವಾಗಿ ಅಥವಾ ಸಂಪೂರ್ಣವಾಗಿ ಹಾನಿಗೊಳಗಾದ ಪ್ರವಾಹ ಪೀಡಿತ ಜನರ ಪುನರ್ವಸತಿಗಾಗಿ ರಾಷ್ಟ್ರೀಯ ವಿಪತ್ತು ಪ್ರತಿಕ್ರಿಯೆ ನಿಧಿಯಿಂದ (ಎನ್‌ಡಿಆರ್‌ಎಫ್) ಮುಂಗಡ ಮೊತ್ತವನ್ನು ಬಿಡುಗಡೆ ಮಾಡುವಂತೆ ಅವರು ಗೃಹ ಸಚಿವರಿಗೆ ಮನವಿ ಮಾಡಿದ್ದಾರೆ.

ಎನ್‌ಡಿಆರ್‌ಎಫ್‌ನಿಂದ ಮುಂಗಡ ನಿಧಿಯನ್ನು ತಕ್ಷಣವೇ ಬಿಡುಗಡೆ ಮಾಡುವಂತೆ ಅವರ ಮನವಿಯನ್ನು ಕೇಂದ್ರ ಗೃಹ ಸಚಿವಾಲಯವು ಪರಿಗಣಿಸಿದೆ ಎಂದು ಗೃಹ ಸಚಿವ ಅಮಿತ್ ಶಾ ಭರವಸೆ ನೀಡಿದ್ದಾರೆ ಎಂದು ಮುಖ್ಯಮಂತ್ರಿ ಹಿಮಾಂತ್ ಬಿಸ್ವ ಶರ್ಮ ಹೇಳಿದ್ದಾರೆ.

ಬಳ್ಳಾರಿಯಲ್ಲಿ ಜನಾರ್ದನ ರೆಡ್ಡಿ ಮನೆ ಮುಂದೆ ಫೈರಿಂಗ್‌: ಶಾಕಿಂಗ್ ರಿಯಾಕ್ಷನ್
ಬಳ್ಳಾರಿಯಲ್ಲಿ ಜನಾರ್ದನ ರೆಡ್ಡಿ ಮನೆ ಮುಂದೆ ಫೈರಿಂಗ್‌: ಶಾಕಿಂಗ್ ರಿಯಾಕ್ಷನ್
ಈ ತಿಂಗಳಿಂದಲೇ ಬಜೆಟ್ ಸಿದ್ಧತೆ ಆರಂಭ ಎಂದ ಸಿಎಂ ಸಿದ್ದರಾಮಯ್ಯ
ಈ ತಿಂಗಳಿಂದಲೇ ಬಜೆಟ್ ಸಿದ್ಧತೆ ಆರಂಭ ಎಂದ ಸಿಎಂ ಸಿದ್ದರಾಮಯ್ಯ
ಬಾಂಗ್ಲಾದಲ್ಲಿ ಮತ್ತೋರ್ವ ಹಿಂದೂ ಮೇಲೆ ಹಲ್ಲೆ ನಡೆಸಿ, ಬೆಂಕಿ ಹಚ್ಚಿದ ಗುಂಪು
ಬಾಂಗ್ಲಾದಲ್ಲಿ ಮತ್ತೋರ್ವ ಹಿಂದೂ ಮೇಲೆ ಹಲ್ಲೆ ನಡೆಸಿ, ಬೆಂಕಿ ಹಚ್ಚಿದ ಗುಂಪು
46 ಎಸೆತಗಳಲ್ಲಿ 58 ರನ್ ಬಾರಿಸಿ ತಂಡ ಗೆಲ್ಲಿಸಿದ ಬಾಬರ್ ಆಝಂ
46 ಎಸೆತಗಳಲ್ಲಿ 58 ರನ್ ಬಾರಿಸಿ ತಂಡ ಗೆಲ್ಲಿಸಿದ ಬಾಬರ್ ಆಝಂ
ಬಿಗ್​​ಬಾಸ್​​ ಶೋನಲ್ಲಿ ಈ ವಾರ ಏನು ಮಾಡ್ತೀನಿ ನೋಡ್ತಿರಿ: ಸುದೀಪ್
ಬಿಗ್​​ಬಾಸ್​​ ಶೋನಲ್ಲಿ ಈ ವಾರ ಏನು ಮಾಡ್ತೀನಿ ನೋಡ್ತಿರಿ: ಸುದೀಪ್
ಮದ್ಯದ ಅಮಲಲ್ಲಿ ಫುಟ್ಪಾತ್​​ಗೆ ಕಾರು ನುಗ್ಗಿಸಿದ ಚಾಲಕ: ಬಾಲಕಿ ಜಸ್ಟ್​​ಮಿಸ್
ಮದ್ಯದ ಅಮಲಲ್ಲಿ ಫುಟ್ಪಾತ್​​ಗೆ ಕಾರು ನುಗ್ಗಿಸಿದ ಚಾಲಕ: ಬಾಲಕಿ ಜಸ್ಟ್​​ಮಿಸ್
ಕರ್ನಾಟಕದವರನ್ನ ಬಿಟ್ಟು ಬೇರೆಯವರಿಗೆ ಮನೆ ಕೊಡಲ್ಲ: ಸಚಿವ ಜಮೀರ್ ಖಡಕ್ ಮಾತು
ಕರ್ನಾಟಕದವರನ್ನ ಬಿಟ್ಟು ಬೇರೆಯವರಿಗೆ ಮನೆ ಕೊಡಲ್ಲ: ಸಚಿವ ಜಮೀರ್ ಖಡಕ್ ಮಾತು
ಬೆಂಗಳೂರಲ್ಲಿ 26 ಕಿ.ಮೀ. ಹೆಜ್ಜೆ ಹಾಕಿದ ಪಾದಚಾರಿಗಳು: ಕಾರಣ ಏನು?
ಬೆಂಗಳೂರಲ್ಲಿ 26 ಕಿ.ಮೀ. ಹೆಜ್ಜೆ ಹಾಕಿದ ಪಾದಚಾರಿಗಳು: ಕಾರಣ ಏನು?
ಟಿ20 ವಿಶ್ವಕಪ್​ಗೆ ತಂಡ ಪ್ರಕಟವಾದ ಬೆನ್ನಲ್ಲೇ ಅಬ್ಬರಿಸಿದ ಆಸೀಸ್ ನಾಯಕ
ಟಿ20 ವಿಶ್ವಕಪ್​ಗೆ ತಂಡ ಪ್ರಕಟವಾದ ಬೆನ್ನಲ್ಲೇ ಅಬ್ಬರಿಸಿದ ಆಸೀಸ್ ನಾಯಕ
ಗಿಲ್ಲಿ ಹಾಡಿಗೆ ಧ್ರುವಂತ್ ಅಪಸ್ವರ: ಉಗುರಲ್ಲೇ ಕೊಲ್ಲುವೆ ಎಂದ ಗಿಲ್ಲಿ
ಗಿಲ್ಲಿ ಹಾಡಿಗೆ ಧ್ರುವಂತ್ ಅಪಸ್ವರ: ಉಗುರಲ್ಲೇ ಕೊಲ್ಲುವೆ ಎಂದ ಗಿಲ್ಲಿ