AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಸ್ಸಾಂನಲ್ಲಿ ಶಾಲಾ ಶಿಕ್ಷಕರಿಗೆ ನೂತನ ವಸ್ತ್ರ ಸಂಹಿತೆ ಜಾರಿ; ಟೀ ಶರ್ಟ್​, ಲೆಗ್ಗಿಂಗ್ಸ್​, ಜೀನ್ಸ್ ಧರಿಸುವಂತಿಲ್ಲ

ಶಾಲಾ ಶಿಕ್ಷಕರು ಟೀ ಶರ್ಟ್​, ಲೆಗ್ಗಿಂಗ್ಸ್​, ಜೀನ್ಸ್ ಧರಿಸುವಂತಿಲ್ಲ. ಶಾಲೆಗೆ ಬರುವಾಗ ಸ್ವಚ್ಛ, ಸಾಧಾರಣ, ಸಭ್ಯವಾದ ಬಟ್ಟೆ ಧರಿಸಬೇಕು ಎಂದು ನಿಯಮ ಜಾರಿಗೊಳಿಸಿದೆ.

ಅಸ್ಸಾಂನಲ್ಲಿ ಶಾಲಾ ಶಿಕ್ಷಕರಿಗೆ ನೂತನ ವಸ್ತ್ರ ಸಂಹಿತೆ ಜಾರಿ; ಟೀ ಶರ್ಟ್​, ಲೆಗ್ಗಿಂಗ್ಸ್​, ಜೀನ್ಸ್ ಧರಿಸುವಂತಿಲ್ಲ
ಸಾಂದರ್ಭಿಕ ಚಿತ್ರ
ಆಯೇಷಾ ಬಾನು
ಆಯೇಷಾ ಬಾನು|

Updated on: May 21, 2023 | 8:16 AM

Share

ಗುವಾಹಟಿ: ಶಾಲಾ ಶಿಕ್ಷಕರಿಗೆ ನೂತನ ವಸ್ತ್ರ ಸಂಹಿತೆ ಜಾರಿಗೊಳಿಸಿ ಅಸ್ಸಾಂ ಸರ್ಕಾರ ಶನಿವಾರ(ಮೇ 20) ಆದೇಶ ಹೊರಡಿಸಿದೆ. ಶಾಲಾ ಶಿಕ್ಷಕರು ಟೀ ಶರ್ಟ್​, ಲೆಗ್ಗಿಂಗ್ಸ್​, ಜೀನ್ಸ್ ಧರಿಸುವಂತಿಲ್ಲ. ಶಾಲೆಗೆ ಬರುವಾಗ ಸ್ವಚ್ಛ, ಸಾಧಾರಣ, ಸಭ್ಯವಾದ ಬಟ್ಟೆ ಧರಿಸಬೇಕು ಎಂದು ನಿಯಮ ಜಾರಿಗೊಳಿಸಿದೆ. ಶಾಲೆಗಳಿಗೆ ಬರುವ ಶಿಕ್ಷಕ, ಶಿಕ್ಷಕಿಯರಿಗೆ ಹೊಸ ನಿಯಮ ಅನ್ವಯವಾಗಲಿದೆ.

ಅಸ್ಸಾಂನ ಶಾಲಾ ಶಿಕ್ಷಣ ಇಲಾಖೆ ಹೊರಡಿಸಿದ ಆದೇಶದಲ್ಲಿ, “ಕೆಲವು ಶಿಕ್ಷಣ ಸಂಸ್ಥೆಗಳಲ್ಲಿ ಶಿಕ್ಷಕರು ತಮ್ಮಿಷ್ಟದ, ಕಣ್ಣು ಕುಕ್ಕುವಂತಹ ಉಡುಪುಗಳನ್ನು ಧರಿಸಿ ಸಾರ್ವಜನಿಕವಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ಇದು ಒಪ್ಪತಕ್ಕದ್ದಲ್ಲ. ಇದಕ್ಕೆ ಕಡಿವಾಣ ಹಾಕುವ ಸಲುವಾಗಿ ವಸ್ತ್ರ ಸಂಹಿತೆ ಜಾರಿಗೊಳಿಸಲಾಗಿದೆ’ ವಿಶೇಷವಾಗಿ ಶಿಕ್ಷಕರು ಕರ್ತವ್ಯಗಳನ್ನು ನಿರ್ವಹಿಸುವಾಗ, ಕೆಲಸದ ಸ್ಥಳದಲ್ಲಿ ಸಭ್ಯತೆ, ವೃತ್ತಿಪರತೆ ಮತ್ತು ಗಂಭೀರತೆಯನ್ನು ಪ್ರತಿಬಿಂಬಿಸುವ ಡ್ರೆಸ್ ಕೋಡ್ ಅನ್ನು ಅನುಸರಿಸುವುದು ಅಗತ್ಯವಾಗಿದೆ ಎಂದು ಅಸ್ಸಾಂ ಶಿಕ್ಷಣ ಇಲಾಖೆ ತಿಳಿಸಿದೆ.

ಇದನ್ನೂ ಓದಿ: CET Exam: ಇಂದು ಭೌತಶಾಸ್ತ್ರ, ರಸಾಯನಶಾಸ್ತ್ರ ಪರೀಕ್ಷೆ, ಮೇ.22 ಕನ್ನಡ ಭಾಷಾ ಪರೀಕ್ಷೆ

ಶಿಕ್ಷಕರು ಇನ್ನು ಮುಂದೆ ‘ಫಾರ್ಮಲ್‌’ (ಪ್ಯಾಂಟ್‌ ಮತ್ತು ಅಂಗಿ) ತೊಟ್ಟು ಶಾಲೆಗಳಿಗೆ ಹಾಜರಾಗಬೇಕು. ಶಿಕ್ಷಕಿಯರು ಸೀರೆ, ಸಭ್ಯ ರೀತಿಯ ಸಲ್ವಾರ್‌ ಸೂಟ್‌ಗಳನ್ನಷ್ಟೇ ಉಡಬೇಕು. ಇವು ತಿಳಿ ವರ್ಣದಿಂದ ಕೂಡಿರಬೇಕು. ಶಿಕ್ಷಕಿಯರು ಟಿ ಶರ್ಟ್‌, ಜೀನ್ಸ್‌ ಮತ್ತು ಲೆಗ್ಗಿನ್ಸ್‌ಗಳನ್ನು ಧರಿಸುವಂತಿಲ್ಲ’ ಎಂದು ಆದೇಶಿಸಿದೆ. ಇನ್ನು ಈ ಸೂಚನೆಗಳನ್ನು ಉಲ್ಲಂಘಿಸುವ ಶಿಕ್ಷಕರ ವಿರುದ್ಧ ನಿಯಮಾನುಸಾರ ಶಿಸ್ತು ಕ್ರಮ ಜರುಗಿಸಲಾಗುವುದು ಎಂದು ತಿಳಿಸಿದೆ.

ದೇಶದ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Follow Us
‘ಪರಾಕ್’ ಚಿತ್ರ ಹೇಗೆ ಭಿನ್ನ? ವಿವರಿಸಿದ ನಟ ಶ್ರೀಮುರಳಿ
‘ಪರಾಕ್’ ಚಿತ್ರ ಹೇಗೆ ಭಿನ್ನ? ವಿವರಿಸಿದ ನಟ ಶ್ರೀಮುರಳಿ
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!