AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಸ್ಸಾಂನಲ್ಲಿ ಶಾಲಾ ಶಿಕ್ಷಕರಿಗೆ ನೂತನ ವಸ್ತ್ರ ಸಂಹಿತೆ ಜಾರಿ; ಟೀ ಶರ್ಟ್​, ಲೆಗ್ಗಿಂಗ್ಸ್​, ಜೀನ್ಸ್ ಧರಿಸುವಂತಿಲ್ಲ

ಶಾಲಾ ಶಿಕ್ಷಕರು ಟೀ ಶರ್ಟ್​, ಲೆಗ್ಗಿಂಗ್ಸ್​, ಜೀನ್ಸ್ ಧರಿಸುವಂತಿಲ್ಲ. ಶಾಲೆಗೆ ಬರುವಾಗ ಸ್ವಚ್ಛ, ಸಾಧಾರಣ, ಸಭ್ಯವಾದ ಬಟ್ಟೆ ಧರಿಸಬೇಕು ಎಂದು ನಿಯಮ ಜಾರಿಗೊಳಿಸಿದೆ.

ಅಸ್ಸಾಂನಲ್ಲಿ ಶಾಲಾ ಶಿಕ್ಷಕರಿಗೆ ನೂತನ ವಸ್ತ್ರ ಸಂಹಿತೆ ಜಾರಿ; ಟೀ ಶರ್ಟ್​, ಲೆಗ್ಗಿಂಗ್ಸ್​, ಜೀನ್ಸ್ ಧರಿಸುವಂತಿಲ್ಲ
ಸಾಂದರ್ಭಿಕ ಚಿತ್ರ
ಆಯೇಷಾ ಬಾನು
|

Updated on: May 21, 2023 | 8:16 AM

Share

ಗುವಾಹಟಿ: ಶಾಲಾ ಶಿಕ್ಷಕರಿಗೆ ನೂತನ ವಸ್ತ್ರ ಸಂಹಿತೆ ಜಾರಿಗೊಳಿಸಿ ಅಸ್ಸಾಂ ಸರ್ಕಾರ ಶನಿವಾರ(ಮೇ 20) ಆದೇಶ ಹೊರಡಿಸಿದೆ. ಶಾಲಾ ಶಿಕ್ಷಕರು ಟೀ ಶರ್ಟ್​, ಲೆಗ್ಗಿಂಗ್ಸ್​, ಜೀನ್ಸ್ ಧರಿಸುವಂತಿಲ್ಲ. ಶಾಲೆಗೆ ಬರುವಾಗ ಸ್ವಚ್ಛ, ಸಾಧಾರಣ, ಸಭ್ಯವಾದ ಬಟ್ಟೆ ಧರಿಸಬೇಕು ಎಂದು ನಿಯಮ ಜಾರಿಗೊಳಿಸಿದೆ. ಶಾಲೆಗಳಿಗೆ ಬರುವ ಶಿಕ್ಷಕ, ಶಿಕ್ಷಕಿಯರಿಗೆ ಹೊಸ ನಿಯಮ ಅನ್ವಯವಾಗಲಿದೆ.

ಅಸ್ಸಾಂನ ಶಾಲಾ ಶಿಕ್ಷಣ ಇಲಾಖೆ ಹೊರಡಿಸಿದ ಆದೇಶದಲ್ಲಿ, “ಕೆಲವು ಶಿಕ್ಷಣ ಸಂಸ್ಥೆಗಳಲ್ಲಿ ಶಿಕ್ಷಕರು ತಮ್ಮಿಷ್ಟದ, ಕಣ್ಣು ಕುಕ್ಕುವಂತಹ ಉಡುಪುಗಳನ್ನು ಧರಿಸಿ ಸಾರ್ವಜನಿಕವಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ಇದು ಒಪ್ಪತಕ್ಕದ್ದಲ್ಲ. ಇದಕ್ಕೆ ಕಡಿವಾಣ ಹಾಕುವ ಸಲುವಾಗಿ ವಸ್ತ್ರ ಸಂಹಿತೆ ಜಾರಿಗೊಳಿಸಲಾಗಿದೆ’ ವಿಶೇಷವಾಗಿ ಶಿಕ್ಷಕರು ಕರ್ತವ್ಯಗಳನ್ನು ನಿರ್ವಹಿಸುವಾಗ, ಕೆಲಸದ ಸ್ಥಳದಲ್ಲಿ ಸಭ್ಯತೆ, ವೃತ್ತಿಪರತೆ ಮತ್ತು ಗಂಭೀರತೆಯನ್ನು ಪ್ರತಿಬಿಂಬಿಸುವ ಡ್ರೆಸ್ ಕೋಡ್ ಅನ್ನು ಅನುಸರಿಸುವುದು ಅಗತ್ಯವಾಗಿದೆ ಎಂದು ಅಸ್ಸಾಂ ಶಿಕ್ಷಣ ಇಲಾಖೆ ತಿಳಿಸಿದೆ.

ಇದನ್ನೂ ಓದಿ: CET Exam: ಇಂದು ಭೌತಶಾಸ್ತ್ರ, ರಸಾಯನಶಾಸ್ತ್ರ ಪರೀಕ್ಷೆ, ಮೇ.22 ಕನ್ನಡ ಭಾಷಾ ಪರೀಕ್ಷೆ

ಶಿಕ್ಷಕರು ಇನ್ನು ಮುಂದೆ ‘ಫಾರ್ಮಲ್‌’ (ಪ್ಯಾಂಟ್‌ ಮತ್ತು ಅಂಗಿ) ತೊಟ್ಟು ಶಾಲೆಗಳಿಗೆ ಹಾಜರಾಗಬೇಕು. ಶಿಕ್ಷಕಿಯರು ಸೀರೆ, ಸಭ್ಯ ರೀತಿಯ ಸಲ್ವಾರ್‌ ಸೂಟ್‌ಗಳನ್ನಷ್ಟೇ ಉಡಬೇಕು. ಇವು ತಿಳಿ ವರ್ಣದಿಂದ ಕೂಡಿರಬೇಕು. ಶಿಕ್ಷಕಿಯರು ಟಿ ಶರ್ಟ್‌, ಜೀನ್ಸ್‌ ಮತ್ತು ಲೆಗ್ಗಿನ್ಸ್‌ಗಳನ್ನು ಧರಿಸುವಂತಿಲ್ಲ’ ಎಂದು ಆದೇಶಿಸಿದೆ. ಇನ್ನು ಈ ಸೂಚನೆಗಳನ್ನು ಉಲ್ಲಂಘಿಸುವ ಶಿಕ್ಷಕರ ವಿರುದ್ಧ ನಿಯಮಾನುಸಾರ ಶಿಸ್ತು ಕ್ರಮ ಜರುಗಿಸಲಾಗುವುದು ಎಂದು ತಿಳಿಸಿದೆ.

ದೇಶದ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ