AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಸ್ಸಾಂನಲ್ಲಿ ಶಾಲಾ ಶಿಕ್ಷಕರಿಗೆ ನೂತನ ವಸ್ತ್ರ ಸಂಹಿತೆ ಜಾರಿ; ಟೀ ಶರ್ಟ್​, ಲೆಗ್ಗಿಂಗ್ಸ್​, ಜೀನ್ಸ್ ಧರಿಸುವಂತಿಲ್ಲ

ಶಾಲಾ ಶಿಕ್ಷಕರು ಟೀ ಶರ್ಟ್​, ಲೆಗ್ಗಿಂಗ್ಸ್​, ಜೀನ್ಸ್ ಧರಿಸುವಂತಿಲ್ಲ. ಶಾಲೆಗೆ ಬರುವಾಗ ಸ್ವಚ್ಛ, ಸಾಧಾರಣ, ಸಭ್ಯವಾದ ಬಟ್ಟೆ ಧರಿಸಬೇಕು ಎಂದು ನಿಯಮ ಜಾರಿಗೊಳಿಸಿದೆ.

ಅಸ್ಸಾಂನಲ್ಲಿ ಶಾಲಾ ಶಿಕ್ಷಕರಿಗೆ ನೂತನ ವಸ್ತ್ರ ಸಂಹಿತೆ ಜಾರಿ; ಟೀ ಶರ್ಟ್​, ಲೆಗ್ಗಿಂಗ್ಸ್​, ಜೀನ್ಸ್ ಧರಿಸುವಂತಿಲ್ಲ
ಸಾಂದರ್ಭಿಕ ಚಿತ್ರ
ಆಯೇಷಾ ಬಾನು
|

Updated on: May 21, 2023 | 8:16 AM

Share

ಗುವಾಹಟಿ: ಶಾಲಾ ಶಿಕ್ಷಕರಿಗೆ ನೂತನ ವಸ್ತ್ರ ಸಂಹಿತೆ ಜಾರಿಗೊಳಿಸಿ ಅಸ್ಸಾಂ ಸರ್ಕಾರ ಶನಿವಾರ(ಮೇ 20) ಆದೇಶ ಹೊರಡಿಸಿದೆ. ಶಾಲಾ ಶಿಕ್ಷಕರು ಟೀ ಶರ್ಟ್​, ಲೆಗ್ಗಿಂಗ್ಸ್​, ಜೀನ್ಸ್ ಧರಿಸುವಂತಿಲ್ಲ. ಶಾಲೆಗೆ ಬರುವಾಗ ಸ್ವಚ್ಛ, ಸಾಧಾರಣ, ಸಭ್ಯವಾದ ಬಟ್ಟೆ ಧರಿಸಬೇಕು ಎಂದು ನಿಯಮ ಜಾರಿಗೊಳಿಸಿದೆ. ಶಾಲೆಗಳಿಗೆ ಬರುವ ಶಿಕ್ಷಕ, ಶಿಕ್ಷಕಿಯರಿಗೆ ಹೊಸ ನಿಯಮ ಅನ್ವಯವಾಗಲಿದೆ.

ಅಸ್ಸಾಂನ ಶಾಲಾ ಶಿಕ್ಷಣ ಇಲಾಖೆ ಹೊರಡಿಸಿದ ಆದೇಶದಲ್ಲಿ, “ಕೆಲವು ಶಿಕ್ಷಣ ಸಂಸ್ಥೆಗಳಲ್ಲಿ ಶಿಕ್ಷಕರು ತಮ್ಮಿಷ್ಟದ, ಕಣ್ಣು ಕುಕ್ಕುವಂತಹ ಉಡುಪುಗಳನ್ನು ಧರಿಸಿ ಸಾರ್ವಜನಿಕವಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ಇದು ಒಪ್ಪತಕ್ಕದ್ದಲ್ಲ. ಇದಕ್ಕೆ ಕಡಿವಾಣ ಹಾಕುವ ಸಲುವಾಗಿ ವಸ್ತ್ರ ಸಂಹಿತೆ ಜಾರಿಗೊಳಿಸಲಾಗಿದೆ’ ವಿಶೇಷವಾಗಿ ಶಿಕ್ಷಕರು ಕರ್ತವ್ಯಗಳನ್ನು ನಿರ್ವಹಿಸುವಾಗ, ಕೆಲಸದ ಸ್ಥಳದಲ್ಲಿ ಸಭ್ಯತೆ, ವೃತ್ತಿಪರತೆ ಮತ್ತು ಗಂಭೀರತೆಯನ್ನು ಪ್ರತಿಬಿಂಬಿಸುವ ಡ್ರೆಸ್ ಕೋಡ್ ಅನ್ನು ಅನುಸರಿಸುವುದು ಅಗತ್ಯವಾಗಿದೆ ಎಂದು ಅಸ್ಸಾಂ ಶಿಕ್ಷಣ ಇಲಾಖೆ ತಿಳಿಸಿದೆ.

ಇದನ್ನೂ ಓದಿ: CET Exam: ಇಂದು ಭೌತಶಾಸ್ತ್ರ, ರಸಾಯನಶಾಸ್ತ್ರ ಪರೀಕ್ಷೆ, ಮೇ.22 ಕನ್ನಡ ಭಾಷಾ ಪರೀಕ್ಷೆ

ಶಿಕ್ಷಕರು ಇನ್ನು ಮುಂದೆ ‘ಫಾರ್ಮಲ್‌’ (ಪ್ಯಾಂಟ್‌ ಮತ್ತು ಅಂಗಿ) ತೊಟ್ಟು ಶಾಲೆಗಳಿಗೆ ಹಾಜರಾಗಬೇಕು. ಶಿಕ್ಷಕಿಯರು ಸೀರೆ, ಸಭ್ಯ ರೀತಿಯ ಸಲ್ವಾರ್‌ ಸೂಟ್‌ಗಳನ್ನಷ್ಟೇ ಉಡಬೇಕು. ಇವು ತಿಳಿ ವರ್ಣದಿಂದ ಕೂಡಿರಬೇಕು. ಶಿಕ್ಷಕಿಯರು ಟಿ ಶರ್ಟ್‌, ಜೀನ್ಸ್‌ ಮತ್ತು ಲೆಗ್ಗಿನ್ಸ್‌ಗಳನ್ನು ಧರಿಸುವಂತಿಲ್ಲ’ ಎಂದು ಆದೇಶಿಸಿದೆ. ಇನ್ನು ಈ ಸೂಚನೆಗಳನ್ನು ಉಲ್ಲಂಘಿಸುವ ಶಿಕ್ಷಕರ ವಿರುದ್ಧ ನಿಯಮಾನುಸಾರ ಶಿಸ್ತು ಕ್ರಮ ಜರುಗಿಸಲಾಗುವುದು ಎಂದು ತಿಳಿಸಿದೆ.

ದೇಶದ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಕೊನೆಗೂ ತುಂಗಭದ್ರಾ ಡ್ಯಾಂ ಕ್ರಸ್ಟ್ ಗೇಟ್ ಬದಲಾವಣೆ ಕಾರ್ಯ ಆರಂಭ
ಕೊನೆಗೂ ತುಂಗಭದ್ರಾ ಡ್ಯಾಂ ಕ್ರಸ್ಟ್ ಗೇಟ್ ಬದಲಾವಣೆ ಕಾರ್ಯ ಆರಂಭ
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್