AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Night Curfew: ಒಮಿಕ್ರಾನ್ ಕೇಸ್​ಗಳ ಏರಿಕೆ; ಅಸ್ಸಾಂನಲ್ಲಿ ಡಿ. 26ರಿಂದ ನೈಟ್ ಕರ್ಫ್ಯೂ ಜಾರಿ

Assam Omicron Cases: ಅಸ್ಸಾಂನಲ್ಲಿ ರಾತ್ರಿ ಕರ್ಫ್ಯೂ ಅನ್ನು ಡಿಸೆಂಬರ್ 31ರವರೆಗೆ ಪ್ರತಿದಿನ ರಾತ್ರಿ 11.30 ರಿಂದ ಬೆಳಿಗ್ಗೆ 6ರವರೆಗೆ ಇರುತ್ತದೆ. ಸಾರ್ವಜನಿಕ ಸ್ಥಳದಲ್ಲಿ ಮಾಸ್ಕ್ ಧರಿಸದವರಿಗೆ 1,000 ರೂ. ದಂಡ ವಿಧಿಸಲಾಗುವುದು.

Night Curfew: ಒಮಿಕ್ರಾನ್ ಕೇಸ್​ಗಳ ಏರಿಕೆ; ಅಸ್ಸಾಂನಲ್ಲಿ ಡಿ. 26ರಿಂದ ನೈಟ್ ಕರ್ಫ್ಯೂ ಜಾರಿ
ಪ್ರಾತಿನಿಧಿಕ ಚಿತ್ರ
TV9 Web
| Updated By: ಸುಷ್ಮಾ ಚಕ್ರೆ|

Updated on: Dec 25, 2021 | 6:55 PM

Share

ಅಸ್ಸಾಂ: ಹಿಮಾಂತ್ ಬಿಸ್ವಾ ಶರ್ಮಾ ನೇತೃತ್ವದ ಅಸ್ಸಾಂ ಸರ್ಕಾರವು ಒಮಿಕ್ರಾನ್ ಆತಂಕದ ಹಿನ್ನೆಲೆಯಲ್ಲಿ ಅಸ್ಸಾಂನಲ್ಲಿ ರಾತ್ರಿ ಕರ್ಫ್ಯೂ ಜಾರಿಗೊಳಿಸಿದೆ. ಡಿಸೆಂಬರ್ 26ರಿಂದ ಅಸ್ಸಾಂನಲ್ಲಿ ರಾತ್ರಿ 11.30ರಿಂದ ಬೆಳಿಗ್ಗೆ 6 ಗಂಟೆಯವರೆಗೆ ನೈಟ್ ಕರ್ಫ್ಯೂ ಜಾರಿಯಲ್ಲಿರುತ್ತದೆ. ರಾಜ್ಯ ಸರ್ಕಾರ ಹೊರಡಿಸಿರುವ ಆದೇಶದ ಪ್ರಕಾರ, ಎಲ್ಲಾ ಕೆಲಸದ ಸ್ಥಳಗಳು, ವ್ಯಾಪಾರ/ವಾಣಿಜ್ಯ ಸಂಸ್ಥೆಗಳು, ರೆಸ್ಟೋರೆಂಟ್‌ಗಳು, ಹೋಟೆಲ್‌ಗಳು, ಡಾಬಾಗಳು, ಶೋ ರೂಂಗಳು, ದಿನಸಿ, ಹಣ್ಣು ಮತ್ತು ತರಕಾರಿ ಅಂಗಡಿಗಳು ರಾತ್ರಿ 10.30ರವರೆಗೆ ತೆರೆದಿರುತ್ತವೆ.

ನಿನ್ನೆ ಅಸ್ಸಾಂನ ಕೊವಿಡ್ ಕೇಸುಗಳ ಸಂಖ್ಯೆ 6,20,025ಕ್ಕೆ ಏರಿಕೆಯಾಗಿದೆ. ಹೀಗಾಗಿ, ಅಸ್ಸಾಂ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ (ಎಎಸ್‌ಡಿಎಂಎ) ರಾಜ್ಯದಲ್ಲಿ ರಾತ್ರಿ ಕರ್ಫ್ಯೂ ಹೇರುವುದಾಗಿ ಘೋಷಿಸಿದೆ. ನೈಟ್ ಕರ್ಫ್ಯೂ ಡಿಸೆಂಬರ್ 26ರಿಂದ ಜಾರಿಗೆ ಬರಲಿದೆ. ರಾತ್ರಿ ಕರ್ಫ್ಯೂ ಅನ್ನು ಡಿಸೆಂಬರ್ 31ರಂದು ತೆಗೆದುಹಾಕಲಾಗುತ್ತದೆ. ರಾತ್ರಿ ಕರ್ಫ್ಯೂ ಪ್ರತಿದಿನ ರಾತ್ರಿ 11.30 ರಿಂದ ಬೆಳಿಗ್ಗೆ 6ರವರೆಗೆ ಇರುತ್ತದೆ.

ಅಸ್ಸಾಂನ ಧಾರ್ಮಿಕ ಸ್ಥಳಗಳು ಪ್ರತಿ ಗಂಟೆಗೆ 60 ಸಂಪೂರ್ಣ ಲಸಿಕೆ ಪಡೆದ ವ್ಯಕ್ತಿಗಳಿಗೆ ಮುಕ್ತವಾಗಲಿದೆ. ಕೋವಿಡ್ -19 ವೈರಸ್ ನಿಯಂತ್ರಣಕ್ಕಾಗಿ ಎಲ್ಲಾ ಸಾರ್ವಜನಿಕ ಸ್ಥಳಗಳಲ್ಲಿ ಜಿಲ್ಲಾ ಮ್ಯಾಜಿಸ್ಟ್ರೇಟ್ ಮತ್ತು ಸೂಪರಿಂಟೆಂಡೆಂಟ್‌ಗಳು ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಬೇಕೆಂದು ಸರ್ಕಾರ ತಿಳಿಸಿದೆ. ಹಾಗೇ, ಸಾರ್ವಜನಿಕ ಸ್ಥಳದಲ್ಲಿ ಮಾಸ್ಕ್ ಧರಿಸದವರಿಗೆ 1,000 ರೂ. ದಂಡ ವಿಧಿಸಲಾಗುವುದು.

ಇದನ್ನೂ ಓದಿ: ಕೊವಿಡ್​ 19 ಸೋಂಕಿತರ ಸಂಖ್ಯೆಯಲ್ಲಿ ಹೆಚ್ಚಳ; ಮಹಾರಾಷ್ಟ್ರದಲ್ಲಿ ಮತ್ತೆ ಶೇ.50ರ ನಿಯಮ ಜಾರಿ, ರಾತ್ರಿ ಗುಂಪುಗೂಡುವುದು ನಿಷೇಧ

ಬೆಂಗಳೂರು ನಗರ ವ್ಯಾಪ್ತಿಯಲ್ಲಿ ಮತ್ತೊಂದು ಒಮಿಕ್ರಾನ್ ಕೇಸ್ ಪತ್ತೆ; 60 ವರ್ಷದ ವ್ಯಕ್ತಿಗೆ ಸೋಂಕು ಧೃಡ

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ