AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒರಾಂಗ್​ ರಾಷ್ಟ್ರೀಯ ಉದ್ಯಾನಕ್ಕಿದ್ದ ರಾಜೀವ್ ಗಾಂಧಿ ಹೆಸರು ತೆಗೆಯಲು ನಿರ್ಧರಿಸಿದ ಅಸ್ಸಾಂ ಸರ್ಕಾರ

ಬ್ರಹ್ಮಪುತ್ರ ನದಿಯ ಉತ್ತರ ಭಾಗದ ದಡದಲ್ಲಿರುವ ಒರಾಂಗ್​ ರಾಷ್ಟ್ರೀಯ ಉದ್ಯಾನವನ ಸುಮಾರು 78.80 ಎಕರೆ ವಿಸ್ತೀರ್ಣದಲ್ಲಿದೆ. ಅಸ್ಸಾಂನ ಅತ್ಯಂತ ಹಳೇ ಅರಣ್ಯ ಸರಂಕ್ಷಿತ ಪ್ರದೇಶವಾಗಿದೆ.

ಒರಾಂಗ್​ ರಾಷ್ಟ್ರೀಯ ಉದ್ಯಾನಕ್ಕಿದ್ದ ರಾಜೀವ್ ಗಾಂಧಿ ಹೆಸರು ತೆಗೆಯಲು ನಿರ್ಧರಿಸಿದ ಅಸ್ಸಾಂ ಸರ್ಕಾರ
ಒರಾಂಗ್​ ನ್ಯಾಶನಲ್​ ಪಾರ್ಕ್​
TV9 Web
| Edited By: |

Updated on: Sep 02, 2021 | 1:54 PM

Share

ಇತ್ತೀಚೆಗಷ್ಟೇ ಖೇಲ್​ ರತ್ನ ಪ್ರಶಸ್ತಿಗೆ ಇದ್ದ ರಾಜೀವ್​ಗಾಂಧಿ (Rajiv Gandhi)  ಹೆಸರನ್ನು ತೆಗೆದು, ಅದಕ್ಕೆ ಹಾಕಿ ಮಾಂತ್ರಿಕ ಧ್ಯಾನ್​ ಚಂದ ಹೆಸರಿಡಲಾಗಿತ್ತು. ಇದೀಗ ಅಸ್ಸಾಂನ ಒರಾಂಗ್​​ನಲ್ಲಿರುವ ರಾಜೀವ್​ ಗಾಂಧಿ ರಾಷ್ಟ್ರೀಯ ಉದ್ಯಾನವನ (Orang National Park) ದ ಹೆಸರನ್ನು ಬದಲಿಸಲು ಅಸ್ಸಾಂ ಸರ್ಕಾರ (Assam Government) ನಿರ್ಧರಿಸಿದೆ. ಇಲ್ಲಿನ ನ್ಯಾಶನಲ್​ ಪಾರ್ಕ್​ಗೆ ಇರುವ ರಾಜೀವ್ ಗಾಂಧಿ ಎಂಬ ಹೆಸರನ್ನು ತೆಗೆದು, ಒರಾಂಗ್​ ನ್ಯಾಶನಲ್ ಪಾರ್ಕ್​ ಎಂದು ನಾಮಕರಣ ಮಾಡಲು ಬುಧವಾರ ಅಸ್ಸಾಂ ಕ್ಯಾಬಿನೆಟ್​ ನಿರ್ಣಯ ಅಂಗೀಕಾರ ಮಾಡಿದೆ.

ಅತಿ ಹೆಚ್ಚು ಸಂಖ್ಯೆಯಲ್ಲಿ ರಾಯಲ್​ ಬೆಂಗಾಲಿ ಹುಲಿಗಳನ್ನು ಹೊಂದಿರುವ ಒರಾಂಗ್​ ರಾಷ್ಟ್ರೀಯ ಉದ್ಯಾನಕ್ಕೆ 2005ರಲ್ಲಿ ರಾಜೀವ್​ ಗಾಂಧಿ ಹೆಸರನ್ನು ಇಡಲಾಗಿತ್ತು. ಇತ್ತೀಚೆಗೆ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ ಅವರೊಂದಿಗೆ ಸಂವಾದದಲ್ಲಿ ಪಾಲ್ಗೊಂಡಿದ್ದ ಆದಿವಾಸಿ ಮತ್ತು ಚಹಾ ಬುಡಕಟ್ಟು ಜನಾಂಗದವರು, ಒರಾಂಗ್​ ರಾಷ್ಟ್ರೀಯ ಉದ್ಯಾನವನಕ್ಕಿರುವ ರಾಜೀವ್​ ಗಾಂಧಿ ಹೆಸರನ್ನು ತೆಗೆಯಬೇಕು. ಇದು ಸಮುದಾಯದ ಪರವಾದ ಆಗ್ರಹ ಎಂದು ಹೇಳಿದ್ದರು. ಈ ಒರಾಂಗ್​ದೊಂದಿಗೆ ಆದಿವಾಸಿ ಮತ್ತು ಬುಡಕಟ್ಟು ಜನಾಂಗಕ್ಕೆ ಭಾವನಾತ್ಮಕ ಬೆಸುಗೆ ಇದೆ. ಹಾಗಾಗಿ ಅವರ ಬೇಡಿಕೆಯನ್ನು ಪೂರೈಸುವ ಸಲುವಾಗಿ ರಾಜೀವ್​ ಗಾಂಧಿ ಹೆಸರನ್ನು ತೆಗೆಯಲು ನಿರ್ಧರಿಸಲಾಗಿದೆ ಎಂದು ಅಸ್ಸಾಂ ಸಂಸದೀಯ ವ್ಯವಹಾರಗಳ ಸಚಿವ ಪಿಜುಶ್ ಹಜಾರಿಕಾ ತಿಳಿಸಿದ್ದಾರೆ.

ಬ್ರಹ್ಮಪುತ್ರ ನದಿಯ ಉತ್ತರ ಭಾಗದ ದಡದಲ್ಲಿರುವ ಒರಾಂಗ್​ ರಾಷ್ಟ್ರೀಯ ಉದ್ಯಾನವನ ಸುಮಾರು 78.80 ಎಕರೆ ವಿಸ್ತೀರ್ಣದಲ್ಲಿದೆ. ಅಸ್ಸಾಂನ ಅತ್ಯಂತ ಹಳೇ ಅರಣ್ಯ ಸರಂಕ್ಷಿತ ಪ್ರದೇಶವಾಗಿದೆ. ಮೊದಲು 1985ರಲ್ಲಿ ವನ್ಯಜೀವಿ ಅಭಯಾರಣ್ಯ ಎಂದು ಗುರುತಿಸಲಾಗಿತ್ತು. ನಂತರ 1999ರಲ್ಲಿ ರಾಷ್ಟ್ರೀಯ ಉದ್ಯಾನವನ್ನಾಗಿ ಪರಿವರ್ತಿಸಲಾಗಿದೆ. 2005ರ ಆಗಸ್ಟ್​​ನಲ್ಲಿ, ಅಂದಿನ ತರುಣ್​ ಗೊಗೊಯಿ ನೇತೃತ್ವದ ಕಾಂಗ್ರೆಸ್ ಸರ್ಕಾರ ಈ ಒರಾಂಗ್​ ನ್ಯಾಶನಲ್ ಪಾರ್ಕ್​​ಗೆ ರಾಜೀವ್​ ಗಾಂಧಿ ಹೆಸರನ್ನು ಇಟ್ಟಿತ್ತು. ಆಗಲೇ ಸ್ಥಳೀಯ ಸಮುದಾಯಗಳಿಂದ ವಿರೋಧ ವ್ಯಕ್ತವಾಗಿತ್ತು.

ಇದನ್ನೂ ಓದಿ: ಕೆಲಸದ ಒತ್ತಡವು ಪುರುಷರಿಗಿಂತ ಮಹಿಳೆಯರಲ್ಲಿ ಹೃದಯಾಘಾತ, ಪಾರ್ಶ್ವವಾಯು ಅಪಾಯವನ್ನು ಹೆಚ್ಚಿಸುತ್ತದೆ: ವರದಿ

Dengue: ಮುಂಬೈನಲ್ಲಿ ಏರಿಕೆಯಾದ ಡೆಂಗ್ಯೂ ಪ್ರಕರಣ, ಆಗಸ್ಟ್ ತಿಂಗಳಲ್ಲಿ ಆಸ್ಪತ್ರೆಗೆ ದಾಖಲಾದವರ ಸಂಖ್ಯೆಯಲ್ಲಿ ಹೆಚ್ಚಳ

Follow Us
ಇಂದು ವಟಸಾವಿತ್ರಿ ವೃತವನ್ನು ಆಚರಿಸುವ ಪವಿತ್ರ ದಿನ!
ಇಂದು ವಟಸಾವಿತ್ರಿ ವೃತವನ್ನು ಆಚರಿಸುವ ಪವಿತ್ರ ದಿನ!
ಮಗನಿಗೆ ಬಣ್ಣ ಹಚ್ಚಿಸಿದ ರಿಷಬ್ ಶೆಟ್ಟಿ: ಯಕ್ಷಗಾನ ವೇದಿಕೆಯಲ್ಲಿ ರನ್ವಿತ್
ಮಗನಿಗೆ ಬಣ್ಣ ಹಚ್ಚಿಸಿದ ರಿಷಬ್ ಶೆಟ್ಟಿ: ಯಕ್ಷಗಾನ ವೇದಿಕೆಯಲ್ಲಿ ರನ್ವಿತ್
ಬಿಡದಿ ಟೌನ್​ಶಿಪ್: ರಾಜ್ಯವ್ಯಾಪಿ ಜನಾಂದೋಲನಕ್ಕೆ ಕುಮಾರಸ್ವಾಮಿ ತಂತ್ರ
ಬಿಡದಿ ಟೌನ್​ಶಿಪ್: ರಾಜ್ಯವ್ಯಾಪಿ ಜನಾಂದೋಲನಕ್ಕೆ ಕುಮಾರಸ್ವಾಮಿ ತಂತ್ರ
ರಾಮಮಂದಿರ ದೇಣಿಗೆ ಲೂಟಿ; ಬೀದರ್​ ಶಾಸಕನ ವಿರುದ್ಧವೂ ಎಸ್​ಐಟಿಗೆ ದೂರು
ರಾಮಮಂದಿರ ದೇಣಿಗೆ ಲೂಟಿ; ಬೀದರ್​ ಶಾಸಕನ ವಿರುದ್ಧವೂ ಎಸ್​ಐಟಿಗೆ ದೂರು
ಪುತ್ರನ ಕಳೆದುಕೊಂಡ ಭಾಮಾ ಹರೀಶ್ ಅವರ ತಬ್ಬಿ ಸಂತೈಸಿದ ಧ್ರುವ ಸರ್ಜಾ
ಪುತ್ರನ ಕಳೆದುಕೊಂಡ ಭಾಮಾ ಹರೀಶ್ ಅವರ ತಬ್ಬಿ ಸಂತೈಸಿದ ಧ್ರುವ ಸರ್ಜಾ
ಶಾಲೆ ಒಳಗಡೆ ಬೆಂಕಿ ಹಚ್ಚಿದ ಕಿಡಿಗೇಡಿಗಳು: ಯೂನಿಫಾರ್ಮ್ ಬೆಂಕಿಗಾಹುತಿ
ಶಾಲೆ ಒಳಗಡೆ ಬೆಂಕಿ ಹಚ್ಚಿದ ಕಿಡಿಗೇಡಿಗಳು: ಯೂನಿಫಾರ್ಮ್ ಬೆಂಕಿಗಾಹುತಿ
ಪ್ರದೀಪ್ ಈಶ್ವರ್ ನಡವಳಿಕೆಗೆ ಕೈಮುಗಿದ ಕುಮಾರಸ್ವಾಮಿ
ಪ್ರದೀಪ್ ಈಶ್ವರ್ ನಡವಳಿಕೆಗೆ ಕೈಮುಗಿದ ಕುಮಾರಸ್ವಾಮಿ
ಸೆಶೆಲ್ಸ್‌ನ ಸ್ಟೇಟ್ ಹೌಸ್‌ನಲ್ಲಿ ಪ್ರಧಾನಿ ಮೋದಿಗೆ ಸರ್ಕಾರಿ ಗೌರವದ ಸ್ವಾಗತ
ಸೆಶೆಲ್ಸ್‌ನ ಸ್ಟೇಟ್ ಹೌಸ್‌ನಲ್ಲಿ ಪ್ರಧಾನಿ ಮೋದಿಗೆ ಸರ್ಕಾರಿ ಗೌರವದ ಸ್ವಾಗತ
ಮಗನ ಮೃತದೇಹದ ಎದುರು ಬಿಕ್ಕಿ ಬಿಕ್ಕಿ ಅತ್ತ ನಿರ್ಮಾಪಕ ಭಾಮಾ ಹರೀಶ್
ಮಗನ ಮೃತದೇಹದ ಎದುರು ಬಿಕ್ಕಿ ಬಿಕ್ಕಿ ಅತ್ತ ನಿರ್ಮಾಪಕ ಭಾಮಾ ಹರೀಶ್
ಉತ್ತರ ಕನ್ನಡದ ಹಲವೆಡೆ ವರುಣಾರ್ಭಟ! ಹೊಳೆಯಂತಾದ ರಸ್ತೆಗಳು
ಉತ್ತರ ಕನ್ನಡದ ಹಲವೆಡೆ ವರುಣಾರ್ಭಟ! ಹೊಳೆಯಂತಾದ ರಸ್ತೆಗಳು