AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸರ್ಕಾರಿ ಮದ್ರಸಾಗಳನ್ನು ಮುಚ್ಚಲು ಮಸೂದೆ ಮಂಡಿಸಲಿದೆ ಅಸ್ಸಾಂ ಸರ್ಕಾರ

ಅಸ್ಸಾಂ ಸರ್ಕಾರ ಸರ್ಕಾರಿ ಹಣದಲ್ಲಿ ನಡೆಯುತ್ತಿದ್ದ ಮದ್ರಸಾಗಳನ್ನು ಮುಚ್ಚುವ ಕುರಿತು ಇಂದು ಮಸೂದೆ ಮಂಡಿಸಲಿದೆ. ಧಾರ್ಮಿಕ ಬೋಧನೆಗೆ ಸರ್ಕಾರಿ ಹಣ ನೀಡಲು ಸಾಧ್ಯವಿಲ್ಲ ಎಂದುಅಸ್ಸಾಂನ ಶಿಕ್ಷಣ ಸಚಿವ ಹಿಮಾಂತಾ ಬಿಸ್ವಾ ಶರ್ಮಾ ತಿಳಿಸಿದ್ದಾರೆ.

ಸರ್ಕಾರಿ ಮದ್ರಸಾಗಳನ್ನು ಮುಚ್ಚಲು ಮಸೂದೆ ಮಂಡಿಸಲಿದೆ ಅಸ್ಸಾಂ ಸರ್ಕಾರ
ಸಾಂಕೇತಿಕ ಚಿತ್ರ
guruganesh bhat
| Edited By: |

Updated on: Dec 28, 2020 | 1:14 PM

Share

ಗುಹಾಹಾಟಿ: ಸರ್ಕಾರದ ಹಣದಲ್ಲಿ ಧಾರ್ಮಿಕ ಗ್ರಂಥ ಕುರಾನ್​ನ್ನು ಬೋಧಿಸಲು ಸಾಧ್ಯವಿಲ್ಲ ಎಂದು ಅಸ್ಸಾಂನ ಶಿಕ್ಷಣ ಸಚಿವ ಹಿಮಾಂತಾ ಬಿಸ್ವಾ ಶರ್ಮಾ ಹೇಳಿದ್ದಾರೆ.

ಸರ್ಕಾರದ ವತಿಯಿಂದ ನಡೆಯುತ್ತಿದ್ದ ಮದ್ರಸಾಗಳನ್ನು ಮುಚ್ಚುವ ಮಸೂದೆಯೊಂದನ್ನು ಇಂದಿನಿಂದ ಆರಂಭವಾದ ಚಳಿಗಾಲದ ಅಧಿವೇಶನದಲ್ಲಿ ಅಸ್ಸಾಂ ಸರ್ಕಾರ ಮಂಡಿಸಲಿದೆ. ಸ್ವಾತಂತ್ರ್ಯಾ ಪೂರ್ವದಲ್ಲಿ ಮುಸ್ಲಿಂ ಲೀಗ್​ ಆರಂಭಿಸಿದ್ದ ಈ ಯೋಜನೆಯನ್ನು ಕೈಬಿಡಲು ನಿರ್ಧರಿಸಲಾಗಿದೆ.

ಪ್ರಸ್ತುತ ರಾಜ್ಯದ 683 ಸರ್ಕಾರಿ ಮದ್ರಸಾಗಳ ನಿರ್ವಹಣೆಗೆ ಪ್ರತಿ ವರ್ಷ 260 ಕೋಟಿ ರೂ. ವೆಚ್ಚವಾಗುತ್ತಿದೆ ಎಂದು ಅಸ್ಸಾಂನ ಶಿಕ್ಷಣ ಸಚಿವ ಹಿಮಾಂತಾ ಬಿಸ್ವಾ ಸರ್ಮಾ ತಿಳಿಸಿದ್ದಾರೆ. ಸರ್ಕಾರಿ ಮದ್ರಸಾಗಳನ್ನು ಸಾರ್ವಜನಿಕ ಶಾಲೆಗಳನ್ನಾಗಿ ಪರಿವರ್ತಿಸಲಾಗುವುದು, ಇಲ್ಲವೇ ಮುಚ್ಚಲಾಗುವುದು.

ಸಂಸ್ಕೃತ ಶಾಲೆಗಳನ್ನು ಸಹ ಮುಚ್ಚಲಾಗುವುದು ಸರ್ಕಾರದಿಂದ ನಡೆಸಲಾಗುತ್ತಿದ್ದ ಸಂಸ್ಕೃತ ಶಾಲೆಗಳನ್ನು ಸಹ ಮುಚ್ಚಲಾಗುವುದು ಎಂದು ಅವರು ತಿಳಿಸಿದ್ದಾರೆ. 1995ರಲ್ಲಿ ಜಾರಿಗೆ ಬಂದಿದ್ದ ಅಸ್ಸಾಂ ಮದ್ರಸಾಸ್ ಎಜುಕೇಶನ್ ಕಾಯ್ದೆಯನ್ನು ರದ್ದುಗೊಳಿಸಿ ನೂತನ ಕಾಯ್ದೆ ಜಾರಿಗೆ ತರಲು ಸರ್ಬಾನಂದ್ ಸೊನೊವಲ್ ನೇತೃತ್ವದ ರಾಜ್ಯ ಸರ್ಕಾರ ನಿರ್ಧರಿಸಿದೆ.

ಮದ್ರಸಾಗಳಲ್ಲಿ ಶಿಕ್ಷಣ ಪಡೆಯುತ್ತಿರುವ ಮಕ್ಕಳ ಪಾಲಕರಿಗೆ ತಮ್ಮ ಮಕ್ಕಳು ಇತರ ಶಾಲೆಗಳಂತೆ ಸಾಮಾನ್ಯ ವಿಷಯಗಳನ್ನು ಅಧ್ಯಯನ ಮಾಡುತ್ತಿಲ್ಲ ಎಂಬ ವಿಷಯ ಅರಿವಿರಲಿಲ್ಲ. ಇತ್ತೀಚಿನ ಸರ್ವೆಯೊಂದರಲ್ಲಿ ಈ ಆಘಾತಕಾರಿ ವಿಷಯ ಬಹಿರಂಗವಾಗಿತ್ತು. ಈ ಸರ್ವೆ ಆಧರಿಸಿ ನೂತನ ಮಸೂದೆ ಮಂಡಿಸಲು ಅಸ್ಸಾಂ ಸರ್ಕಾರ ಸಿದ್ಧತೆ ನಡೆಸಿದೆ.

ಅಸ್ಸಾಂ ಹೊರತಾಗಿ ಭಾರತೀಯ ಕಲೆ-ಸಂಸ್ಕೃತಿ ಪರಿಪೂರ್ಣವಾಗುವುದಿಲ್ಲ: ಅಮಿತ್ ಶಾ

Follow Us
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಗದಗ: ಬಸ್ ನಿಲ್ಲಿಸದಿರುವುದನ್ನ ಪ್ರಶ್ನಿಸಿದ ವಿದ್ಯಾರ್ಥಿ ಮೇಲೆ ದರ್ಪ
ಗದಗ: ಬಸ್ ನಿಲ್ಲಿಸದಿರುವುದನ್ನ ಪ್ರಶ್ನಿಸಿದ ವಿದ್ಯಾರ್ಥಿ ಮೇಲೆ ದರ್ಪ