Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸರ್ಕಾರಿ ಮದ್ರಸಾಗಳನ್ನು ಮುಚ್ಚಲು ಮಸೂದೆ ಮಂಡಿಸಲಿದೆ ಅಸ್ಸಾಂ ಸರ್ಕಾರ

ಅಸ್ಸಾಂ ಸರ್ಕಾರ ಸರ್ಕಾರಿ ಹಣದಲ್ಲಿ ನಡೆಯುತ್ತಿದ್ದ ಮದ್ರಸಾಗಳನ್ನು ಮುಚ್ಚುವ ಕುರಿತು ಇಂದು ಮಸೂದೆ ಮಂಡಿಸಲಿದೆ. ಧಾರ್ಮಿಕ ಬೋಧನೆಗೆ ಸರ್ಕಾರಿ ಹಣ ನೀಡಲು ಸಾಧ್ಯವಿಲ್ಲ ಎಂದುಅಸ್ಸಾಂನ ಶಿಕ್ಷಣ ಸಚಿವ ಹಿಮಾಂತಾ ಬಿಸ್ವಾ ಶರ್ಮಾ ತಿಳಿಸಿದ್ದಾರೆ.

ಸರ್ಕಾರಿ ಮದ್ರಸಾಗಳನ್ನು ಮುಚ್ಚಲು ಮಸೂದೆ ಮಂಡಿಸಲಿದೆ ಅಸ್ಸಾಂ ಸರ್ಕಾರ
ಸಾಂಕೇತಿಕ ಚಿತ್ರ
Follow us
guruganesh bhat
| Updated By: ಸಾಧು ಶ್ರೀನಾಥ್​

Updated on: Dec 28, 2020 | 1:14 PM

ಗುಹಾಹಾಟಿ: ಸರ್ಕಾರದ ಹಣದಲ್ಲಿ ಧಾರ್ಮಿಕ ಗ್ರಂಥ ಕುರಾನ್​ನ್ನು ಬೋಧಿಸಲು ಸಾಧ್ಯವಿಲ್ಲ ಎಂದು ಅಸ್ಸಾಂನ ಶಿಕ್ಷಣ ಸಚಿವ ಹಿಮಾಂತಾ ಬಿಸ್ವಾ ಶರ್ಮಾ ಹೇಳಿದ್ದಾರೆ.

ಸರ್ಕಾರದ ವತಿಯಿಂದ ನಡೆಯುತ್ತಿದ್ದ ಮದ್ರಸಾಗಳನ್ನು ಮುಚ್ಚುವ ಮಸೂದೆಯೊಂದನ್ನು ಇಂದಿನಿಂದ ಆರಂಭವಾದ ಚಳಿಗಾಲದ ಅಧಿವೇಶನದಲ್ಲಿ ಅಸ್ಸಾಂ ಸರ್ಕಾರ ಮಂಡಿಸಲಿದೆ. ಸ್ವಾತಂತ್ರ್ಯಾ ಪೂರ್ವದಲ್ಲಿ ಮುಸ್ಲಿಂ ಲೀಗ್​ ಆರಂಭಿಸಿದ್ದ ಈ ಯೋಜನೆಯನ್ನು ಕೈಬಿಡಲು ನಿರ್ಧರಿಸಲಾಗಿದೆ.

ಪ್ರಸ್ತುತ ರಾಜ್ಯದ 683 ಸರ್ಕಾರಿ ಮದ್ರಸಾಗಳ ನಿರ್ವಹಣೆಗೆ ಪ್ರತಿ ವರ್ಷ 260 ಕೋಟಿ ರೂ. ವೆಚ್ಚವಾಗುತ್ತಿದೆ ಎಂದು ಅಸ್ಸಾಂನ ಶಿಕ್ಷಣ ಸಚಿವ ಹಿಮಾಂತಾ ಬಿಸ್ವಾ ಸರ್ಮಾ ತಿಳಿಸಿದ್ದಾರೆ. ಸರ್ಕಾರಿ ಮದ್ರಸಾಗಳನ್ನು ಸಾರ್ವಜನಿಕ ಶಾಲೆಗಳನ್ನಾಗಿ ಪರಿವರ್ತಿಸಲಾಗುವುದು, ಇಲ್ಲವೇ ಮುಚ್ಚಲಾಗುವುದು.

ಸಂಸ್ಕೃತ ಶಾಲೆಗಳನ್ನು ಸಹ ಮುಚ್ಚಲಾಗುವುದು ಸರ್ಕಾರದಿಂದ ನಡೆಸಲಾಗುತ್ತಿದ್ದ ಸಂಸ್ಕೃತ ಶಾಲೆಗಳನ್ನು ಸಹ ಮುಚ್ಚಲಾಗುವುದು ಎಂದು ಅವರು ತಿಳಿಸಿದ್ದಾರೆ. 1995ರಲ್ಲಿ ಜಾರಿಗೆ ಬಂದಿದ್ದ ಅಸ್ಸಾಂ ಮದ್ರಸಾಸ್ ಎಜುಕೇಶನ್ ಕಾಯ್ದೆಯನ್ನು ರದ್ದುಗೊಳಿಸಿ ನೂತನ ಕಾಯ್ದೆ ಜಾರಿಗೆ ತರಲು ಸರ್ಬಾನಂದ್ ಸೊನೊವಲ್ ನೇತೃತ್ವದ ರಾಜ್ಯ ಸರ್ಕಾರ ನಿರ್ಧರಿಸಿದೆ.

ಮದ್ರಸಾಗಳಲ್ಲಿ ಶಿಕ್ಷಣ ಪಡೆಯುತ್ತಿರುವ ಮಕ್ಕಳ ಪಾಲಕರಿಗೆ ತಮ್ಮ ಮಕ್ಕಳು ಇತರ ಶಾಲೆಗಳಂತೆ ಸಾಮಾನ್ಯ ವಿಷಯಗಳನ್ನು ಅಧ್ಯಯನ ಮಾಡುತ್ತಿಲ್ಲ ಎಂಬ ವಿಷಯ ಅರಿವಿರಲಿಲ್ಲ. ಇತ್ತೀಚಿನ ಸರ್ವೆಯೊಂದರಲ್ಲಿ ಈ ಆಘಾತಕಾರಿ ವಿಷಯ ಬಹಿರಂಗವಾಗಿತ್ತು. ಈ ಸರ್ವೆ ಆಧರಿಸಿ ನೂತನ ಮಸೂದೆ ಮಂಡಿಸಲು ಅಸ್ಸಾಂ ಸರ್ಕಾರ ಸಿದ್ಧತೆ ನಡೆಸಿದೆ.

ಅಸ್ಸಾಂ ಹೊರತಾಗಿ ಭಾರತೀಯ ಕಲೆ-ಸಂಸ್ಕೃತಿ ಪರಿಪೂರ್ಣವಾಗುವುದಿಲ್ಲ: ಅಮಿತ್ ಶಾ

ಹೋಟೆಲ್​ನವರು ಚೆನ್ನಾಗಿ ನೋಡಿಕೊಂಡರು: ಬ್ಯಾಂಕಾಕ್​ನಿಂದ ವಾಪಸ್ಸಾದವರು
ಹೋಟೆಲ್​ನವರು ಚೆನ್ನಾಗಿ ನೋಡಿಕೊಂಡರು: ಬ್ಯಾಂಕಾಕ್​ನಿಂದ ವಾಪಸ್ಸಾದವರು
ಅರ್ಜುನ್ ಜನ್ಯಗೆ ಹಾಡು ಹೊಳೆಯುವುದೆಲ್ಲಿ: ಸಂಗತಿ ವಿವರಿಸಿದ ಪ್ರೇಮ್
ಅರ್ಜುನ್ ಜನ್ಯಗೆ ಹಾಡು ಹೊಳೆಯುವುದೆಲ್ಲಿ: ಸಂಗತಿ ವಿವರಿಸಿದ ಪ್ರೇಮ್
ಕೆಲ ಸೆಕೆಂಡ್​​ಗಳ ರೀಲ್ಸ್​ಗೆ ಬಳಸಿದ ಮಚ್ಚು ಫೈಬರ್​ದ್ದಾಗಿತ್ತು: ವಿನಯ್ ಗೌಡ
ಕೆಲ ಸೆಕೆಂಡ್​​ಗಳ ರೀಲ್ಸ್​ಗೆ ಬಳಸಿದ ಮಚ್ಚು ಫೈಬರ್​ದ್ದಾಗಿತ್ತು: ವಿನಯ್ ಗೌಡ
ಯುಗಾದಿ: ಕೆಆರ್​ ಮಾರುಕಟ್ಟೆಯಲ್ಲಿ ಗ್ರಾಹಕರಿಗೆ ಶಾಕ್, ಹೂವಿನ ದರ ಏರಿಕೆ
ಯುಗಾದಿ: ಕೆಆರ್​ ಮಾರುಕಟ್ಟೆಯಲ್ಲಿ ಗ್ರಾಹಕರಿಗೆ ಶಾಕ್, ಹೂವಿನ ದರ ಏರಿಕೆ
ಯತ್ನಾಳ್ ಒಬ್ಬ ಒಳ್ಳೆಯ ನಾಯಕ ಅನ್ನೋದ್ರಲ್ಲಿ ಎರಡು ಮಾತಿಲ್ಲ: ತಂಗಡಿಗಿ
ಯತ್ನಾಳ್ ಒಬ್ಬ ಒಳ್ಳೆಯ ನಾಯಕ ಅನ್ನೋದ್ರಲ್ಲಿ ಎರಡು ಮಾತಿಲ್ಲ: ತಂಗಡಿಗಿ
ವಿಶ್ವದ ಶೇಕಡಾ 60 ರಷ್ಟು ಖನಿಜಗಳು ನಮ್ಮ ದೇಶದಲ್ಲಿವೆ
ವಿಶ್ವದ ಶೇಕಡಾ 60 ರಷ್ಟು ಖನಿಜಗಳು ನಮ್ಮ ದೇಶದಲ್ಲಿವೆ
ಪಕ್ಷದ ಸಂದೇಶ ಮತ್ತು ಸೂಚನೆಗಷ್ಟೇ ನಾವು ಸೀಮಿತವಾಗಿರಬೇಕು: ಸೋಮಣ್ಣ
ಪಕ್ಷದ ಸಂದೇಶ ಮತ್ತು ಸೂಚನೆಗಷ್ಟೇ ನಾವು ಸೀಮಿತವಾಗಿರಬೇಕು: ಸೋಮಣ್ಣ
ಬಾಲಕನನ್ನು ಬಲಿ ಪಡೆದ ಬಿಬಿಎಂಪಿ ಲಾರಿಗೆ ಬೆಂಕಿ
ಬಾಲಕನನ್ನು ಬಲಿ ಪಡೆದ ಬಿಬಿಎಂಪಿ ಲಾರಿಗೆ ಬೆಂಕಿ
ಭಾರತಕ್ಕೆ ತಕ್ಷಣವೇ ವಿಶ್ವಸಂಸ್ಥೆಯ ಸದಸ್ಯತ್ವ ನೀಡಬೇಕು
ಭಾರತಕ್ಕೆ ತಕ್ಷಣವೇ ವಿಶ್ವಸಂಸ್ಥೆಯ ಸದಸ್ಯತ್ವ ನೀಡಬೇಕು
ಮ್ಯಾನ್ಮಾರ್​ಗೆ 15 ಟನ್ ಪರಿಹಾರ ಸಾಮಗ್ರಿ, ಮೆಡಿಕಲ್ ಕಿಟ್ ಕಳುಹಿಸಿದ ಭಾರತ
ಮ್ಯಾನ್ಮಾರ್​ಗೆ 15 ಟನ್ ಪರಿಹಾರ ಸಾಮಗ್ರಿ, ಮೆಡಿಕಲ್ ಕಿಟ್ ಕಳುಹಿಸಿದ ಭಾರತ