AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಳ್ಳತನದ ಆರೋಪದಲ್ಲಿ ಕೇರಳದಲ್ಲಿ ಅಸ್ಸಾಂ ಮೂಲದ ವ್ಯಕ್ತಿಯ ಬರ್ಬರ ಹತ್ಯೆ

ಕೇರಳದಲ್ಲಿ ಕಳ್ಳತನದ ಆರೋಪದ ಮೇಲೆ ಅಸ್ಸಾಂ ಮೂಲದ ವ್ಯಕ್ತಿಯೊಬ್ಬನನ್ನು ಇತರ 6 ಜನರು ಥಳಿಸಿ ಕೊಲೆ ಮಾಡಿದ್ದಾರೆ. 6 ಆರೋಪಿಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ ಎಂದು ಪೆರುಂಬವೂರ್ ಪೊಲೀಸ್ ಠಾಣೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಸದ್ಯಕ್ಕೆ ಅವರನ್ನು ಬಂಧಿಸಿಲ್ಲ. ಇನ್ನೂ ಪ್ರಕರಣ ದಾಖಲಿಸಲಾಗಿಲ್ಲ. ವಿಚಾರಣೆಯ ಬಳಿಕ ಕೇಸ್ ದಾಖಲಿಸಲಾಗುವುದು ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.

ಕಳ್ಳತನದ ಆರೋಪದಲ್ಲಿ ಕೇರಳದಲ್ಲಿ ಅಸ್ಸಾಂ ಮೂಲದ ವ್ಯಕ್ತಿಯ ಬರ್ಬರ ಹತ್ಯೆ
Death Image Credit source: iStock
ಸುಷ್ಮಾ ಚಕ್ರೆ
|

Updated on: Apr 01, 2026 | 3:51 PM

Share

ತಿರುವನಂತಪುರಂ, ಏಪ್ರಿಲ್ 1: ಕೇರಳದಲ್ಲಿ ಕಳ್ಳತನದ ಆರೋಪದ ಮೇಲೆ ಅಸ್ಸಾಂ ಮೂಲದ ವ್ಯಕ್ತಿಯೊಬ್ಬನನ್ನು ಇಂದು ಬೆಳಿಗ್ಗೆ ಪೆರುಂಬವೂರ್ ಬಳಿ ಕೇರಳದ (Kerala) 6 ಸಹೋದ್ಯೋಗಿಗಳು ಥಳಿಸಿ ಕೊಂದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಇಂದು (ಬುಧವಾರ) ಬೆಳಿಗ್ಗೆ ಪೆರುಂಬವೂರ್ ಬಳಿ ಅದೇ ರಾಜ್ಯದವರಾದ 6 ಜನ ಸೇರಿ ಈ ಕೊಲೆ ಮಾಡಿದ್ದಾರೆ. ಅವರು ಆತ ತಮ್ಮ ಫೋನ್ ಕದಿಯಲು ಪ್ರಯತ್ನಿಸುತ್ತಿದ್ದಾನೆ ಎಂದು ಅನುಮಾನಗೊಂಡು ಈ ಕೃತ್ಯ ಎಸಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

6 ಆರೋಪಿಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ ಎಂದು ಪೆರುಂಬವೂರ್ ಪೊಲೀಸ್ ಠಾಣೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಆದರೆ, ಅವರನ್ನು ಔಪಚಾರಿಕವಾಗಿ ಬಂಧಿಸಲಾಗಿಲ್ಲ. ಅವರ ವಿರುದ್ಧ ಇನ್ನೂ ಪ್ರಕರಣ ದಾಖಲಿಸಿಲ್ಲ ಎಂದು ಪೊಲೀಸ್ ಅಧಿಕಾರಿ ಹೇಳಿದ್ದಾರೆ.

ಇದನ್ನೂ ಓದಿ: ತನ್ನ ಕಾಮದಾಟಕ್ಕೆ ಅಡ್ಡಿಯಾಗುತ್ತಿದ್ದ ಪತಿಯನ್ನೇ ಸುಪಾರಿ ನೀಡಿ ಕೊಲೆ ಮಾಡಿಸಿದ ಪತ್ನಿ!

“ನಾವು ಇದಕ್ಕೆ ಸಂಬಂಧಿಸಿದ ಎಲ್ಲಾ ವಿವರಗಳನ್ನು ಸಂಗ್ರಹಿಸುತ್ತಿದ್ದೇವೆ” ಎಂದು ಪೊಲೀಸರು ಹೇಳಿದ್ದಾರೆ. ಮೃತ ವ್ಯಕ್ತಿಗೆ 25 ವರ್ಷ ವಯಸ್ಸಾಗಿತ್ತು. ಆತ ಮತ್ತು ಇತರ 6 ಆರೋಪಿಗಳು ಪೆರುಂಬವೂರ್‌ನ ಪ್ಲೈವುಡ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

“ಆ ವ್ಯಕ್ತಿಯನ್ನು ಥಳಿಸಿದ ನಂತರ ಆರೋಪಿಗಳು ಆತನನ್ನು ಆಸ್ಪತ್ರೆಗೆ ಕರೆದೊಯ್ದರು. ಅಲ್ಲಿ ಚಿಕಿತ್ಸೆ ಆರಂಭಿಸುವ ಮೊದಲೇ ಆ ವ್ಯಕ್ತಿ ಸಾವನ್ನಪ್ಪಿದ್ದಾನೆ. ಈ ಬಗ್ಗೆ ತಕ್ಷಣ ಆಸ್ಪತ್ರೆಯ ಸಿಬ್ಬಂದು ನಮಗೆ ಮಾಹಿತಿ ನೀಡಿದರು” ಎಂದು ಪೊಲೀಸರು ಹೇಳಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Follow Us