AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಸ್ಸಾಂನಲ್ಲಿ ಶಾಲಾ ಮಕ್ಕಳು ದಾಟುವಾಗಲೇ ಮುರಿದು ಬಿದ್ದ ತೂಗು ಸೇತುವೆ; 30ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಗಾಯ

ಚೇರಗಿ ವಿದ್ಯಾಪೀಠ ಹೈಸ್ಕೂಲ್ ವಿದ್ಯಾರ್ಥಿಗಳು ಸಿಂಗ್ಲಾ ನದಿಯನ್ನು ದಾಟುತ್ತಿದ್ದಾಗ ಇದ್ದಕ್ಕಿದ್ದಂತೆ ತೂಗು ಸೇತುವೆ ಕುಸಿದು ವಿದ್ಯಾರ್ಥಿಗಳು ನದಿಗೆ ಬಿದ್ದಿದ್ದಾರೆ.

ಅಸ್ಸಾಂನಲ್ಲಿ ಶಾಲಾ ಮಕ್ಕಳು ದಾಟುವಾಗಲೇ ಮುರಿದು ಬಿದ್ದ ತೂಗು ಸೇತುವೆ; 30ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಗಾಯ
ಅಸ್ಸಾಂನಲ್ಲಿ ಕುಸಿದ ತೂಗು ಸೇತುವೆ
Follow us
TV9 Web
| Updated By: ಸುಷ್ಮಾ ಚಕ್ರೆ

Updated on: Oct 05, 2021 | 7:47 PM

ಗುವಾಹಟಿ: ಅಸ್ಸಾಂ ರಾಜ್ಯದ ಕರೀಂಗಂಜ್ ಜಿಲ್ಲೆಯಲ್ಲಿ ಶಾಲಾ ವಿದ್ಯಾರ್ಥಿಗಳು ಸಂಜೆ ಮನೆಗೆ ವಾಪಾಸ್ ಹೋಗುತ್ತಿದ್ದಾಗ ತೂಗು ಸೇತುವೆ ಕುಸಿದು ಬಿದ್ದಿದೆ. ಇದರಿಂದ 30ಕ್ಕೂ ಹೆಚ್ಚು ಮಕ್ಕಳು ಗಾಯಗೊಂಡಿದ್ದಾರೆ. ಸ್ಥಳೀಯರ ಸಮಯಪ್ರಜ್ಞೆಯಿಂದ ಭಾರೀ ಅನಾಹುತ ತಪ್ಪಿದ್ದು, ಯಾರಿಗೂ ಪ್ರಾಣಾಪಾಯವಾಗಿಲ್ಲ.

ಕರೀಂಗಂಜ್ ಜಿಲ್ಲೆಯ ಚೇರಗಿ ಪ್ರದೇಶದಲ್ಲಿ ಸೋಮವಾರ ಈ ಘಟನೆ ನಡೆದಿದೆ. ಸಿಂಗ್ಲಾ ನದಿಗೆ ಹಾಕಲಾಗಿರುವ ತೂಗು ಸೇತುವೆ ಚೇರಗಿ ಪ್ರದೇಶ ಹಾಗೂ ಹಳ್ಳಿಯ ನಡುವೆ ಸಂಪರ್ಕ ಕಲ್ಪಿಸುತ್ತದೆ. ಕಳೆದ ಹಲವು ವರ್ಷಗಳಿಂದ ವಿದ್ಯಾರ್ಥಿಗಳು ಇತರ ಪ್ರದೇಶಗಳು ಮತ್ತು ಶಾಲೆಗಳನ್ನು ತಲುಪಲು ಈ ಸೇತುವೆಯನ್ನು ಬಳಸುತ್ತಿದ್ದಾರೆ. ಸೋಮವಾರ ಸಂಜೆ ವಿದ್ಯಾರ್ಥಿಗಳು ಶಾಲೆಯಿಂದ ಮನೆಗೆ ವಾಪಾಸ್ ಹೋಗುವಾಗ ಈ ಘಟನೆ ನಡೆದಿದೆ.

ಚೇರಗಿ ವಿದ್ಯಾಪೀಠ ಹೈಸ್ಕೂಲ್ ವಿದ್ಯಾರ್ಥಿಗಳು ಸಿಂಗ್ಲಾ ನದಿಯನ್ನು ದಾಟುತ್ತಿದ್ದಾಗ ಇದ್ದಕ್ಕಿದ್ದಂತೆ ತೂಗು ಸೇತುವೆ ಕುಸಿದು ವಿದ್ಯಾರ್ಥಿಗಳು ನದಿಗೆ ಬಿದ್ದಿದ್ದಾರೆ. ತಕ್ಷಣ ಸ್ಥಳೀಯರು ನೀರಿಗೆ ಧುಮುಕಿ ವಿದ್ಯಾರ್ಥಿಗಳನ್ನು ರಕ್ಷಿಸಿದ್ದಾರೆ. ಈ ಘಟನೆಯಲ್ಲಿ 30ಕ್ಕೂ ಹೆಚ್ಚು ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ.

ಗಾಯಗೊಂಡ ವಿದ್ಯಾರ್ಥಿಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. 3 ವರ್ಷಗಳ ಹಿಂದೆ ತೂಗು ಸೇತುವೆಯನ್ನು ನಿರ್ಮಿಸಲಾಗಿದೆ. ಸೇತುವೆ ಕುಸಿಯಲು ಕಾರಣವೇನು ಎಂಬುದು ಇನ್ನೂ ತಿಳಿದುಬಂದಿಲ್ಲ. ಸಮಯಕ್ಕೆ ಸರಿಯಾಗಿ ಅಕ್ಕಪಕ್ಕದ ಮನೆಯವರು ಧಾವಿಸಿ ಬಂದು ಸಹಾಯ ಮಾಡಿದ್ದರಿಂದ ಯಾರಿಗೂ ಹೆಚ್ಚಿನ ಅಪಾಯವಾಗಿಲ್ಲ.

ಇದನ್ನೂ ಓದಿ: Lakhimpur Kheri Violence: ಲಖಿಂಪುರ ಖೇರಿ ಹತ್ಯೆ ಸ್ಥಳದಲ್ಲಿ ನನ್ನ ಮಗ ಇದ್ದುದು ನಿಜವಾದರೆ ರಾಜೀನಾಮೆ ನೀಡುತ್ತೇನೆ; ಸಚಿವ ಅಜಯ್ ಮಿಶ್ರಾ

Karnataka Bypolls 2021: ಕೊನೆಗೂ ಹಾನಗಲ್ ಉಪಚುನಾವಣೆ ಬಿಜೆಪಿ ಉಸ್ತುವಾರಿ ಪಟ್ಟಿಗೆ ಬಿವೈ ವಿಜಯೇಂದ್ರ ಸೇರ್ಪಡೆ

ಆರ್​ಸಿಬಿ ವೇಗಿಗಳ ವಿಕೆಟ್ ಬೇಟೆ ಹೇಗಿದೆ ನೀವೇ ನೋಡಿ
ಆರ್​ಸಿಬಿ ವೇಗಿಗಳ ವಿಕೆಟ್ ಬೇಟೆ ಹೇಗಿದೆ ನೀವೇ ನೋಡಿ
ಕನ್ನಡದ ಬಗ್ಗೆ ಕಮಲ್ ಹಾಸನ್​ ಹೇಳಿದ್ದು ಸರಿಯೇ? ನಟಿ ಜಯಮಾಲಾ ಪ್ರತಿಕ್ರಿಯೆ
ಕನ್ನಡದ ಬಗ್ಗೆ ಕಮಲ್ ಹಾಸನ್​ ಹೇಳಿದ್ದು ಸರಿಯೇ? ನಟಿ ಜಯಮಾಲಾ ಪ್ರತಿಕ್ರಿಯೆ
ರೆಹಮಾನ್ ಕೊಲೆಗೆ ಪೊಲೀಸ್ ಕಮೀಶನರ್ ಹೊಣೆ: ಯುವ ಮುಖಂಡರು
ರೆಹಮಾನ್ ಕೊಲೆಗೆ ಪೊಲೀಸ್ ಕಮೀಶನರ್ ಹೊಣೆ: ಯುವ ಮುಖಂಡರು
ಕಮಲ್ ಹಾಸನ್ ನಟನೆಯ ಥಗ್ ಲೈಫ್ ಬ್ಯಾನ್ ಮಾಡೋದು ಚರ್ಚೆಯ ವಿಷಯ: ಸುಮಲತಾ
ಕಮಲ್ ಹಾಸನ್ ನಟನೆಯ ಥಗ್ ಲೈಫ್ ಬ್ಯಾನ್ ಮಾಡೋದು ಚರ್ಚೆಯ ವಿಷಯ: ಸುಮಲತಾ
ಹರಿಪ್ರಸಾದ್ ಮನೆಯಿಂದಲೇ ಶಾಹುಲ್​ಗೆ ಜಮೀರ್ ಮತ್ತು ನಜೀರ್​ರಿಂದ ಫೋನ್
ಹರಿಪ್ರಸಾದ್ ಮನೆಯಿಂದಲೇ ಶಾಹುಲ್​ಗೆ ಜಮೀರ್ ಮತ್ತು ನಜೀರ್​ರಿಂದ ಫೋನ್
ಕಾಂಗ್ರೆಸ್​ಗೆ ಬಿಗ್ ಶಾಕ್: ಮುಸ್ಲಿಂ ಮುಖಂಡರಿಂದ ಸಾಮೂಹಿಕ ರಾಜೀನಾಮೆ
ಕಾಂಗ್ರೆಸ್​ಗೆ ಬಿಗ್ ಶಾಕ್: ಮುಸ್ಲಿಂ ಮುಖಂಡರಿಂದ ಸಾಮೂಹಿಕ ರಾಜೀನಾಮೆ
ಕ್ಯಾಬಿನೆಟ್​ಗೆ ಕಮ್ಯೂನಲ್ ವೈರಸ್ ಮೆತ್ತಿಕೊಂಡಿದೆ, ಚಿಕಿತ್ಸೆ ಬೇಕು: ರವಿ
ಕ್ಯಾಬಿನೆಟ್​ಗೆ ಕಮ್ಯೂನಲ್ ವೈರಸ್ ಮೆತ್ತಿಕೊಂಡಿದೆ, ಚಿಕಿತ್ಸೆ ಬೇಕು: ರವಿ
ಕರ್ನಾಟಕದಲ್ಲಿ ಇನ್ನೂ 3 ದಿನ ಭಾರೀ ಮಳೆ: ಈ ಜಿಲ್ಲೆಗಳಿಗೆ ರೆಡ್​ ಅಲರ್ಟ್​
ಕರ್ನಾಟಕದಲ್ಲಿ ಇನ್ನೂ 3 ದಿನ ಭಾರೀ ಮಳೆ: ಈ ಜಿಲ್ಲೆಗಳಿಗೆ ರೆಡ್​ ಅಲರ್ಟ್​
ನಾಳೆಯೇ ಚುನಾವಣೆ ಘೋಷಿಸಿ; ಮೋದಿಗೆ ಮಮತಾ ಬ್ಯಾನರ್ಜಿ ಬಹಿರಂಗ ಸವಾಲು
ನಾಳೆಯೇ ಚುನಾವಣೆ ಘೋಷಿಸಿ; ಮೋದಿಗೆ ಮಮತಾ ಬ್ಯಾನರ್ಜಿ ಬಹಿರಂಗ ಸವಾಲು
ಕಮಲ್ ಹಾಸನ್ ಕ್ಷಮೆ ಕೇಳಿದ್ರೆ ಮಾತ್ರ ಸಿನಿಮಾ ಬಿಡುಗಡೆ: ಸಾ.ರಾ. ಗೋವಿಂದು
ಕಮಲ್ ಹಾಸನ್ ಕ್ಷಮೆ ಕೇಳಿದ್ರೆ ಮಾತ್ರ ಸಿನಿಮಾ ಬಿಡುಗಡೆ: ಸಾ.ರಾ. ಗೋವಿಂದು