AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಸ್ಸಾಂನಲ್ಲಿ ಶಾಲಾ ಮಕ್ಕಳು ದಾಟುವಾಗಲೇ ಮುರಿದು ಬಿದ್ದ ತೂಗು ಸೇತುವೆ; 30ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಗಾಯ

ಚೇರಗಿ ವಿದ್ಯಾಪೀಠ ಹೈಸ್ಕೂಲ್ ವಿದ್ಯಾರ್ಥಿಗಳು ಸಿಂಗ್ಲಾ ನದಿಯನ್ನು ದಾಟುತ್ತಿದ್ದಾಗ ಇದ್ದಕ್ಕಿದ್ದಂತೆ ತೂಗು ಸೇತುವೆ ಕುಸಿದು ವಿದ್ಯಾರ್ಥಿಗಳು ನದಿಗೆ ಬಿದ್ದಿದ್ದಾರೆ.

ಅಸ್ಸಾಂನಲ್ಲಿ ಶಾಲಾ ಮಕ್ಕಳು ದಾಟುವಾಗಲೇ ಮುರಿದು ಬಿದ್ದ ತೂಗು ಸೇತುವೆ; 30ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಗಾಯ
ಅಸ್ಸಾಂನಲ್ಲಿ ಕುಸಿದ ತೂಗು ಸೇತುವೆ
TV9 Web
| Edited By: |

Updated on: Oct 05, 2021 | 7:47 PM

Share

ಗುವಾಹಟಿ: ಅಸ್ಸಾಂ ರಾಜ್ಯದ ಕರೀಂಗಂಜ್ ಜಿಲ್ಲೆಯಲ್ಲಿ ಶಾಲಾ ವಿದ್ಯಾರ್ಥಿಗಳು ಸಂಜೆ ಮನೆಗೆ ವಾಪಾಸ್ ಹೋಗುತ್ತಿದ್ದಾಗ ತೂಗು ಸೇತುವೆ ಕುಸಿದು ಬಿದ್ದಿದೆ. ಇದರಿಂದ 30ಕ್ಕೂ ಹೆಚ್ಚು ಮಕ್ಕಳು ಗಾಯಗೊಂಡಿದ್ದಾರೆ. ಸ್ಥಳೀಯರ ಸಮಯಪ್ರಜ್ಞೆಯಿಂದ ಭಾರೀ ಅನಾಹುತ ತಪ್ಪಿದ್ದು, ಯಾರಿಗೂ ಪ್ರಾಣಾಪಾಯವಾಗಿಲ್ಲ.

ಕರೀಂಗಂಜ್ ಜಿಲ್ಲೆಯ ಚೇರಗಿ ಪ್ರದೇಶದಲ್ಲಿ ಸೋಮವಾರ ಈ ಘಟನೆ ನಡೆದಿದೆ. ಸಿಂಗ್ಲಾ ನದಿಗೆ ಹಾಕಲಾಗಿರುವ ತೂಗು ಸೇತುವೆ ಚೇರಗಿ ಪ್ರದೇಶ ಹಾಗೂ ಹಳ್ಳಿಯ ನಡುವೆ ಸಂಪರ್ಕ ಕಲ್ಪಿಸುತ್ತದೆ. ಕಳೆದ ಹಲವು ವರ್ಷಗಳಿಂದ ವಿದ್ಯಾರ್ಥಿಗಳು ಇತರ ಪ್ರದೇಶಗಳು ಮತ್ತು ಶಾಲೆಗಳನ್ನು ತಲುಪಲು ಈ ಸೇತುವೆಯನ್ನು ಬಳಸುತ್ತಿದ್ದಾರೆ. ಸೋಮವಾರ ಸಂಜೆ ವಿದ್ಯಾರ್ಥಿಗಳು ಶಾಲೆಯಿಂದ ಮನೆಗೆ ವಾಪಾಸ್ ಹೋಗುವಾಗ ಈ ಘಟನೆ ನಡೆದಿದೆ.

ಚೇರಗಿ ವಿದ್ಯಾಪೀಠ ಹೈಸ್ಕೂಲ್ ವಿದ್ಯಾರ್ಥಿಗಳು ಸಿಂಗ್ಲಾ ನದಿಯನ್ನು ದಾಟುತ್ತಿದ್ದಾಗ ಇದ್ದಕ್ಕಿದ್ದಂತೆ ತೂಗು ಸೇತುವೆ ಕುಸಿದು ವಿದ್ಯಾರ್ಥಿಗಳು ನದಿಗೆ ಬಿದ್ದಿದ್ದಾರೆ. ತಕ್ಷಣ ಸ್ಥಳೀಯರು ನೀರಿಗೆ ಧುಮುಕಿ ವಿದ್ಯಾರ್ಥಿಗಳನ್ನು ರಕ್ಷಿಸಿದ್ದಾರೆ. ಈ ಘಟನೆಯಲ್ಲಿ 30ಕ್ಕೂ ಹೆಚ್ಚು ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ.

ಗಾಯಗೊಂಡ ವಿದ್ಯಾರ್ಥಿಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. 3 ವರ್ಷಗಳ ಹಿಂದೆ ತೂಗು ಸೇತುವೆಯನ್ನು ನಿರ್ಮಿಸಲಾಗಿದೆ. ಸೇತುವೆ ಕುಸಿಯಲು ಕಾರಣವೇನು ಎಂಬುದು ಇನ್ನೂ ತಿಳಿದುಬಂದಿಲ್ಲ. ಸಮಯಕ್ಕೆ ಸರಿಯಾಗಿ ಅಕ್ಕಪಕ್ಕದ ಮನೆಯವರು ಧಾವಿಸಿ ಬಂದು ಸಹಾಯ ಮಾಡಿದ್ದರಿಂದ ಯಾರಿಗೂ ಹೆಚ್ಚಿನ ಅಪಾಯವಾಗಿಲ್ಲ.

ಇದನ್ನೂ ಓದಿ: Lakhimpur Kheri Violence: ಲಖಿಂಪುರ ಖೇರಿ ಹತ್ಯೆ ಸ್ಥಳದಲ್ಲಿ ನನ್ನ ಮಗ ಇದ್ದುದು ನಿಜವಾದರೆ ರಾಜೀನಾಮೆ ನೀಡುತ್ತೇನೆ; ಸಚಿವ ಅಜಯ್ ಮಿಶ್ರಾ

Karnataka Bypolls 2021: ಕೊನೆಗೂ ಹಾನಗಲ್ ಉಪಚುನಾವಣೆ ಬಿಜೆಪಿ ಉಸ್ತುವಾರಿ ಪಟ್ಟಿಗೆ ಬಿವೈ ವಿಜಯೇಂದ್ರ ಸೇರ್ಪಡೆ

ರಾಯ್ ಆತ್ಮಹತ್ಯೆ ತನಿಖೆ ಬಗ್ಗೆ ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
ರಾಯ್ ಆತ್ಮಹತ್ಯೆ ತನಿಖೆ ಬಗ್ಗೆ ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ಮಹಿಳಾ ಸಬಲೀಕರಣ ಮತ್ತು ಉದ್ಯೋಗ ಸೃಷ್ಟಿಗೆ ವಿಶೇಷ ಒತ್ತು
ಮಹಿಳಾ ಸಬಲೀಕರಣ ಮತ್ತು ಉದ್ಯೋಗ ಸೃಷ್ಟಿಗೆ ವಿಶೇಷ ಒತ್ತು
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ
‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ