AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಸ್ಸಾಂನಲ್ಲಿ ಶಾಲಾ ಮಕ್ಕಳು ದಾಟುವಾಗಲೇ ಮುರಿದು ಬಿದ್ದ ತೂಗು ಸೇತುವೆ; 30ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಗಾಯ

ಚೇರಗಿ ವಿದ್ಯಾಪೀಠ ಹೈಸ್ಕೂಲ್ ವಿದ್ಯಾರ್ಥಿಗಳು ಸಿಂಗ್ಲಾ ನದಿಯನ್ನು ದಾಟುತ್ತಿದ್ದಾಗ ಇದ್ದಕ್ಕಿದ್ದಂತೆ ತೂಗು ಸೇತುವೆ ಕುಸಿದು ವಿದ್ಯಾರ್ಥಿಗಳು ನದಿಗೆ ಬಿದ್ದಿದ್ದಾರೆ.

ಅಸ್ಸಾಂನಲ್ಲಿ ಶಾಲಾ ಮಕ್ಕಳು ದಾಟುವಾಗಲೇ ಮುರಿದು ಬಿದ್ದ ತೂಗು ಸೇತುವೆ; 30ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಗಾಯ
ಅಸ್ಸಾಂನಲ್ಲಿ ಕುಸಿದ ತೂಗು ಸೇತುವೆ
TV9 Web
| Edited By: |

Updated on: Oct 05, 2021 | 7:47 PM

Share

ಗುವಾಹಟಿ: ಅಸ್ಸಾಂ ರಾಜ್ಯದ ಕರೀಂಗಂಜ್ ಜಿಲ್ಲೆಯಲ್ಲಿ ಶಾಲಾ ವಿದ್ಯಾರ್ಥಿಗಳು ಸಂಜೆ ಮನೆಗೆ ವಾಪಾಸ್ ಹೋಗುತ್ತಿದ್ದಾಗ ತೂಗು ಸೇತುವೆ ಕುಸಿದು ಬಿದ್ದಿದೆ. ಇದರಿಂದ 30ಕ್ಕೂ ಹೆಚ್ಚು ಮಕ್ಕಳು ಗಾಯಗೊಂಡಿದ್ದಾರೆ. ಸ್ಥಳೀಯರ ಸಮಯಪ್ರಜ್ಞೆಯಿಂದ ಭಾರೀ ಅನಾಹುತ ತಪ್ಪಿದ್ದು, ಯಾರಿಗೂ ಪ್ರಾಣಾಪಾಯವಾಗಿಲ್ಲ.

ಕರೀಂಗಂಜ್ ಜಿಲ್ಲೆಯ ಚೇರಗಿ ಪ್ರದೇಶದಲ್ಲಿ ಸೋಮವಾರ ಈ ಘಟನೆ ನಡೆದಿದೆ. ಸಿಂಗ್ಲಾ ನದಿಗೆ ಹಾಕಲಾಗಿರುವ ತೂಗು ಸೇತುವೆ ಚೇರಗಿ ಪ್ರದೇಶ ಹಾಗೂ ಹಳ್ಳಿಯ ನಡುವೆ ಸಂಪರ್ಕ ಕಲ್ಪಿಸುತ್ತದೆ. ಕಳೆದ ಹಲವು ವರ್ಷಗಳಿಂದ ವಿದ್ಯಾರ್ಥಿಗಳು ಇತರ ಪ್ರದೇಶಗಳು ಮತ್ತು ಶಾಲೆಗಳನ್ನು ತಲುಪಲು ಈ ಸೇತುವೆಯನ್ನು ಬಳಸುತ್ತಿದ್ದಾರೆ. ಸೋಮವಾರ ಸಂಜೆ ವಿದ್ಯಾರ್ಥಿಗಳು ಶಾಲೆಯಿಂದ ಮನೆಗೆ ವಾಪಾಸ್ ಹೋಗುವಾಗ ಈ ಘಟನೆ ನಡೆದಿದೆ.

ಚೇರಗಿ ವಿದ್ಯಾಪೀಠ ಹೈಸ್ಕೂಲ್ ವಿದ್ಯಾರ್ಥಿಗಳು ಸಿಂಗ್ಲಾ ನದಿಯನ್ನು ದಾಟುತ್ತಿದ್ದಾಗ ಇದ್ದಕ್ಕಿದ್ದಂತೆ ತೂಗು ಸೇತುವೆ ಕುಸಿದು ವಿದ್ಯಾರ್ಥಿಗಳು ನದಿಗೆ ಬಿದ್ದಿದ್ದಾರೆ. ತಕ್ಷಣ ಸ್ಥಳೀಯರು ನೀರಿಗೆ ಧುಮುಕಿ ವಿದ್ಯಾರ್ಥಿಗಳನ್ನು ರಕ್ಷಿಸಿದ್ದಾರೆ. ಈ ಘಟನೆಯಲ್ಲಿ 30ಕ್ಕೂ ಹೆಚ್ಚು ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ.

ಗಾಯಗೊಂಡ ವಿದ್ಯಾರ್ಥಿಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. 3 ವರ್ಷಗಳ ಹಿಂದೆ ತೂಗು ಸೇತುವೆಯನ್ನು ನಿರ್ಮಿಸಲಾಗಿದೆ. ಸೇತುವೆ ಕುಸಿಯಲು ಕಾರಣವೇನು ಎಂಬುದು ಇನ್ನೂ ತಿಳಿದುಬಂದಿಲ್ಲ. ಸಮಯಕ್ಕೆ ಸರಿಯಾಗಿ ಅಕ್ಕಪಕ್ಕದ ಮನೆಯವರು ಧಾವಿಸಿ ಬಂದು ಸಹಾಯ ಮಾಡಿದ್ದರಿಂದ ಯಾರಿಗೂ ಹೆಚ್ಚಿನ ಅಪಾಯವಾಗಿಲ್ಲ.

ಇದನ್ನೂ ಓದಿ: Lakhimpur Kheri Violence: ಲಖಿಂಪುರ ಖೇರಿ ಹತ್ಯೆ ಸ್ಥಳದಲ್ಲಿ ನನ್ನ ಮಗ ಇದ್ದುದು ನಿಜವಾದರೆ ರಾಜೀನಾಮೆ ನೀಡುತ್ತೇನೆ; ಸಚಿವ ಅಜಯ್ ಮಿಶ್ರಾ

Karnataka Bypolls 2021: ಕೊನೆಗೂ ಹಾನಗಲ್ ಉಪಚುನಾವಣೆ ಬಿಜೆಪಿ ಉಸ್ತುವಾರಿ ಪಟ್ಟಿಗೆ ಬಿವೈ ವಿಜಯೇಂದ್ರ ಸೇರ್ಪಡೆ

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!