AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಸ್ಸಾಂ: ಶಾಲಾ ಅಸೆಂಬ್ಲಿಯಲ್ಲಿ 30ಕ್ಕೂ ಹೆಚ್ಚು ವಿದ್ಯಾರ್ಥಿಗಳ ಕೂದಲು ಕತ್ತರಿಸಿದ ಶಿಕ್ಷಕಿ; ತನಿಖೆಗೆ ಜಿಲ್ಲಾಧಿಕಾರಿ ಆದೇಶ

ನಿಕಿ ಎಂದು ಗುರುತಿಸಲಾದ ಶಿಕ್ಷಕಿ, ತಾನು ಶಾಲೆಯ ಅಧಿಕಾರಿಗಳ ಆದೇಶವನ್ನು ಅನುಸರಿಸಿದ್ದೇನೆ ಎಂದು ಹೇಳಿದ್ದಾರೆ. ಆದರೆ, ಘಟನೆಯ ನಂತರ ವಿದ್ಯಾರ್ಥಿಗಳು ತರಗತಿಗಳಿಗೆ ಹಾಜರಾಗಲು ನಿರಾಕರಿಸುತ್ತಿದ್ದಾರೆ ಎಂದು ಅವರ ಪೋಷಕರು ತಿಳಿಸಿದ್ದಾರೆ

ಅಸ್ಸಾಂ: ಶಾಲಾ ಅಸೆಂಬ್ಲಿಯಲ್ಲಿ 30ಕ್ಕೂ ಹೆಚ್ಚು ವಿದ್ಯಾರ್ಥಿಗಳ ಕೂದಲು ಕತ್ತರಿಸಿದ ಶಿಕ್ಷಕಿ; ತನಿಖೆಗೆ ಜಿಲ್ಲಾಧಿಕಾರಿ ಆದೇಶ
ಪ್ರಾತಿನಿಧಿಕ ಚಿತ್ರImage Credit source: Pexels
ರಶ್ಮಿ ಕಲ್ಲಕಟ್ಟ
ರಶ್ಮಿ ಕಲ್ಲಕಟ್ಟ|

Updated on:May 27, 2023 | 2:11 PM

Share

ಅಸ್ಸಾಂನ (Assam) ಮಜುಲಿ ಜಿಲ್ಲೆಯ (Majuli district) ಶಾಲೆಯೊಂದರಲ್ಲಿ ಶಿಕ್ಷಕಿಯೊಬ್ಬರು ಗುರುವಾರ ಬೆಳಿಗ್ಗೆ ಅಸೆಂಬ್ಲಿಯಲ್ಲಿ ಶಿಸ್ತು ಕಲಿಸಲು 30 ಕ್ಕೂ ಹೆಚ್ಚು ವಿದ್ಯಾರ್ಥಿಗಳ ಕೂದಲನ್ನು ಕತ್ತರಿಸಿದ್ದಾರೆ ಎಂದು ಆರೋಪಿಸಲಾಗಿದ್ದು, ಘಟನೆಯ ಕುರಿತು ಜಿಲ್ಲೆಯ ಜಿಲ್ಲಾಧಿಕಾರಿ ತನಿಖೆಗೆ ಆದೇಶಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.ಶಾಲೆಯ ಮಾರ್ಗಸೂಚಿಗಳ ಪ್ರಕಾರ ಮಕ್ಕಳು ಉದ್ದ ಕೂದಲನ್ನು ಇಟ್ಟುಕೊಳ್ಳುತ್ತಿದ್ದಾರೆ ಎಂದು ಶಾಲೆಯ ಅಧಿಕಾರಿಗಳು ಉನ್ನತ ಅಧಿಕಾರಿಗಳಿಗೆ ಹೇಳಿಕೆಯಲ್ಲಿ ತಿಳಿಸಿದ್ದಾರೆ. ಅವರಿಗೆ ಹಲವಾರು ಬಾರಿ ಎಚ್ಚರಿಕೆ ನೀಡಲಾಯಿತು. ಈ ಬಗ್ಗೆ ಮಕ್ಕಳ ಪೋಷಕರಿಗೆ ತಿಳಿಸಲಾಯಿತು. ಆದರೆ ಏನೂ ಬದಲಾವಣೆ ಆಗಿಲ್ಲ. ಇದು ಕೇವಲ ಶಿಸ್ತು ಕಲಿಸುವ ವಿಧಾನವಾಗಿತ್ತು ಎಂದು ಶಾಲೆಯ ಅಧಿಕಾರಿಗಳು ಹೇಳಿದ್ದಾರೆ.

ಈ ಬಗ್ಗೆ ತನಿಖೆ ನಡೆಸಿ ಕೂಡಲೇ ವರದಿ ನೀಡುವಂತೆ ಜಿಲ್ಲಾಧಿಕಾರಿ ಕಾವೇರಿ ಬಿ ಶರ್ಮಾ ಶುಕ್ರವಾರ ಸಂಜೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಪ್ರಾಥಮಿಕ ತನಿಖೆಯ ಪ್ರಕಾರ, ಶಿಕ್ಷಕರು ಉದ್ದನೆಯ ಕೂದಲನ್ನು ಕತ್ತರಿಸಿದ್ದಾರೆ. ಕೆಲವು ವರದಿಗಳು ಹೇಳುವಂತೆ ಪೂರ್ತಿ ಕತ್ತರಿಸಲಾಗಿಲ್ಲ ಎಂದು ಕಾವೇರಿ ಅವರು ಹೇಳಿರುವುದಾಗಿ ಹಿಂದೂಸ್ತಾನ್ ಟೈಮ್ಸ್ ವರದಿ ಮಾಡಿದೆ.

ನಿಕಿ ಎಂದು ಗುರುತಿಸಲಾದ ಶಿಕ್ಷಕಿ, ತಾನು ಶಾಲೆಯ ಅಧಿಕಾರಿಗಳ ಆದೇಶವನ್ನು ಅನುಸರಿಸಿದ್ದೇನೆ ಎಂದು ಹೇಳಿದ್ದಾರೆ. ಆದರೆ, ಘಟನೆಯ ನಂತರ ವಿದ್ಯಾರ್ಥಿಗಳು ತರಗತಿಗಳಿಗೆ ಹಾಜರಾಗಲು ನಿರಾಕರಿಸುತ್ತಿದ್ದಾರೆ ಎಂದು ಅವರ ಪೋಷಕರು ತಿಳಿಸಿದ್ದಾರೆ. ಗುರುವಾರ ನನ್ನ ಮಗು ಕೂದಲನ್ನು ಮುಂಭಾಗದಲ್ಲಿ ಟ್ರಿಮ್ ಮಾಡಿಕೊಂಡು ಅಳುತ್ತಾ ಮನೆಗೆ ಬಂದಿತ್ತು ಎಂದು ವಿದ್ಯಾರ್ಥಿಯ ಪೋಷಕರೊಬ್ಬರು ಮಾಧ್ಯಮಗಳಿಗೆ ತಿಳಿಸಿದ್ದಾರೆ. ಈಗ ಆ ಮಗು ಶಾಲೆಗೆ ಹೋಗಲು ನಿರಾಕರಿಸುತ್ತಿದೆ ಎಂದು ಅವರು ಹೇಳಿದ್ದಾರೆ.

ಶಾಲಾ ಅಧಿಕಾರಿಗಳಿಗೆ ಶಿಸ್ತು ವಿಧಿಸುವ ಸ್ವಾತಂತ್ರ್ಯವಿದೆ. ಆದರೆ ಕೆಲವು ಮಿತಿಗಳಿವೆ ಎಂದು ಪೋಷಕರು ಹೇಳಿದ್ದಾರೆ. ವಿದ್ಯಾರ್ಥಿಗಳು ತಮ್ಮನ್ನು ತಾವು ಸ್ವಚ್ಛವಾಗಿಟ್ಟುಕೊಳ್ಳಬೇಕು ಮತ್ತು ಏಕರೂಪವಾಗಿ ಕಾಣಬೇಕು ಎಂಬುದು ನಿಜ. ಆದರೆ ಅಸೆಂಬ್ಲಿ ಸಮಯದಲ್ಲಿ ಇಡೀ ಶಾಲೆಯ ಮುಂದೆ ಕೂದಲು ಟ್ರಿಮ್ ಮಾಡುವುದು ಅವಮಾನಕರ ಎಂದು ಪೋಷಕರು ಹೇಳಿದ್ದಾರೆ.

ಇದನ್ನೂ ಓದಿ: ಹಿಂಸಾಚಾರ ಪೀಡಿತ ಮಣಿಪುರಕ್ಕೆ ಇಂದು ಸೇನಾ ಮುಖ್ಯಸ್ಥ ಜನರಲ್ ಮನೋಜ್ ಪಾಂಡೆ ಭೇಟಿ

ರಾಜ್ಯ ಸರ್ಕಾರದ ಮಾರ್ಗಸೂಚಿಯಲ್ಲಿ ಶಿಕ್ಷಕರು ಕ್ಯಾಂಪಸ್‌ನಲ್ಲಿ ವಿದ್ಯಾರ್ಥಿಗಳ ಕೂದಲನ್ನು ಕತ್ತರಿಸಲು ಯಾವುದೇ ಅವಕಾಶವಿಲ್ಲ ಎಂದು ಜಿಲ್ಲಾಡಳಿತದ ಅಧಿಕಾರಿಗಳು ತಿಳಿಸಿದ್ದಾರೆ. ಅಪ್ರಾಪ್ತ ಮಕ್ಕಳೊಂದಿಗೆ ವ್ಯವಹರಿಸಲು ಇತರ ಮಾರ್ಗಗಳಿವೆ. ಆ ದಿನ ನಿಜವಾಗಿ ಏನಾಯಿತು ಎಂಬುದನ್ನು ಅರಿಯಲು ನಾವು ತನಿಖೆ ಮಾಡುತ್ತಿದ್ದೇವೆ ಅಧಿಕಾರಿ ಹೇಳಿದರು.

ಎರಡು ವಾರಗಳ ಹಿಂದೆ ಕ್ಯಾಚಾರ್ ಜಿಲ್ಲೆಯ ಶಾಲೆಯೊಂದು ಕ್ಯಾಂಪಸ್‌ನಲ್ಲಿ ಆಕಸ್ಮಿಕವಾಗಿ ಮಾತೃಭಾಷೆಯಲ್ಲಿ ಮಾತನಾಡಿದ ವಿದ್ಯಾರ್ಥಿಗೆ ₹250 ದಂಡ ವಿಧಿಸಿತ್ತು. ದಂಡ ವಿಧಿಸುವ ಮೂಲಕ ವಿದ್ಯಾರ್ಥಿಗಳಿಗೆ ಶಿಸ್ತನ್ನು ಕಲಿಸಲು ಅವರು ಬಯಸಿದ್ದರು, ಹಣ ಸಂಗ್ರಹಿಸುವುದು ಅವರ ಉದ್ದೇಶವಲ್ಲ ಎಂದು ಶಾಲೆಯ ಅಧಿಕಾರಿಗಳು ಹೇಳಿಕೆ ನೀಡಿದ್ದರು.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 2:09 pm, Sat, 27 May 23

Follow Us
Rashmi Kallakatta
Rashmi Kallakatta

ಊರು ಕಾಸರಗೋಡು. ಓದಿದ್ದು ಇಂಜಿನಿಯರಿಂಗ್, ಪಬ್ಲಿಕ್ ಅಡ್ಮಿನಿಸ್ಟ್ರೇಷನ್ ಮತ್ತು ಇಂಗ್ಲಿಷ್ ಸ್ನಾತಕೋತ್ತರ ಪದವಿ. ಕನ್ನಡಪ್ರಭ, ಪ್ರಜಾವಾಣಿ ಡಿಜಿಟಲ್ ಮತ್ತು ಪ್ರಿಂಟ್ ವಿಭಾಗದಲ್ಲಿ ಕೆಲಸದ ಅನುಭವ. ಬ್ಲಾಗರ್, ಸಾಹಿತ್ಯ ಪ್ರೇಮಿ. ಇಲ್ಲಿವರೆಗೆ 2 ಪುಸ್ತಕಗಳು ಪ್ರಕಟವಾಗಿವೆ. ಕಲೆ,ಸಾಹಿತ್ಯ,ತಂತ್ರಜ್ಞಾನ,ಸಂದರ್ಶನ, ಫ್ಯಾಕ್ಟ್ ಚೆಕಿಂಗ್ ಆಸಕ್ತಿಕರ ವಿಷಯಗಳು. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷ ಅನುಭವ

‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!