AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಸ್ಸಾಂನಲ್ಲಿ ಉಗ್ರರಿಂದ ಟ್ರಕ್​ಗಳ ಮೇಲೆ ಗುಂಡಿನ ದಾಳಿ; ಐವರು ಸಾವು, ಒಬ್ಬರ ಸ್ಥಿತಿ ಗಂಭೀರ

Assam Terror Attack: ಗುರುವಾರ ರಾತ್ರಿ ಮಾರ್ಗ ಮಧ್ಯೆ ಟ್ರಕ್​ಗಳನ್ನು ಅಡ್ಡ ಹಾಕಿದ ಉಗ್ರರು ಈ ಕೃತ್ಯ ಎಸಗಿದ್ದಾರೆ. ದಾಳಿ ನಡೆಸಿದವರು ದಿಮಾಸಾ ನ್ಯಾಷನಲ್ ಲಿಬರೇಷನ್ ಆರ್ಮಿ (ಡಿಎನ್​ಎಲ್​ಎ) ಸಂಘಟನೆಗೆ ಸೇರಿದ ಉಗ್ರರು ಎನ್ನಲಾಗಿದೆ.

ಅಸ್ಸಾಂನಲ್ಲಿ ಉಗ್ರರಿಂದ ಟ್ರಕ್​ಗಳ ಮೇಲೆ ಗುಂಡಿನ ದಾಳಿ; ಐವರು ಸಾವು, ಒಬ್ಬರ ಸ್ಥಿತಿ ಗಂಭೀರ
ಅಸ್ಸಾಂನಲ್ಲಿ ಟ್ರಕ್ ಮೇಲೆ ದಾಳಿ
TV9 Web
| Edited By: |

Updated on:Aug 27, 2021 | 12:57 PM

Share

ಗುವಾಹಟಿ: ಅಸ್ಸಾಂ ರಾಜ್ಯದ ದಿಮಾ ಹಸಾವೋ (Dima Hasao) ಜಿಲ್ಲೆಯಲ್ಲಿ ನಿನ್ನೆ ರಾತ್ರಿ ಶಂಕಿತ ಉಗ್ರರು 7 ಟ್ರಕ್​ಗಳ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ. ಈ ಘಟನೆಯಲ್ಲಿ ಐವರು ಸಾವನ್ನಪ್ಪಿದ್ದು, ಒಬ್ಬರಿಗೆ ಗಂಭೀರ ಗಾಯಗಳಾಗಿವೆ. ಗುಂಡಿನ ದಾಳಿ ನಡೆಸಿದ ಬಳಿಕ ಉಗ್ರರು ಆ ಟ್ರಕ್​ಗಳಿಗೆ ಬೆಂಕಿ ಹಚ್ಚಿದ್ದಾರೆ. ಇದರಿಂದ 7 ಟ್ರಕ್​ಗಳು ಕೂಡ ಸುಟ್ಟು ಕರಕಲಾಗಿವೆ. 

ಗುರುವಾರ ರಾತ್ರಿ ಮಾರ್ಗ ಮಧ್ಯೆ ಟ್ರಕ್​ಗಳನ್ನು ಅಡ್ಡ ಹಾಕಿದ ಉಗ್ರರು ಈ ಕೃತ್ಯ ಎಸಗಿದ್ದಾರೆ. ದಾಳಿ ನಡೆಸಿದವರು ದಿಮಾಸಾ ನ್ಯಾಷನಲ್ ಲಿಬರೇಷನ್ ಆರ್ಮಿ (ಡಿಎನ್​ಎಲ್​ಎ) ಸಂಘಟನೆಗೆ ಸೇರಿದ ಉಗ್ರರು ಎನ್ನಲಾಗಿದೆ. ಈ ದಾಳಿಯಲ್ಲಿ 5 ಮಂದಿ ಸಾವನ್ನಪ್ಪಿದ್ದು, ಓರ್ವನ ಸ್ಥಿತಿ ಗಂಭೀರವಾಗಿದೆ. ರಸ್ತೆಯಲ್ಲಿ ಅಡ್ಡ ಹಾಕಿದ ಉಗ್ರರು ಟ್ರಕ್ ಹಾಗೂ ಟ್ರಕ್ ಚಾಲಕರ ಮೇಲೆ ಹಲವು ಸುತ್ತು ಗುಂಡು ಹಾರಿಸಿದ್ದಾರೆ.

ನಿನ್ನೆ ರಾತ್ರಿ 8.30ರ ಸುಮಾರಿಗೆ ಅಸ್ಸಾಂನ ಶಸ್ತ್ರಸಜ್ಜಿತ ಉಗ್ರರ ಗುಂಪು ದಿಮಾ ಹಸಾವೊ ಜಿಲ್ಲೆಯಲ್ಲಿ ಈ ದಾಳಿ ನಡೆಸಿದ್ದು, ಗಾಯಗೊಂಡ ಚಾಲಕನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಆತನ ಸ್ಥಿತಿ ಗಂಭೀರವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ. ಗುಂಡು ಹಾರಿಸಿದ ಬಳಿಕ ಬೆಂಕಿ ಹಚ್ಚಿದ್ದರಿಂದ ಸಿಮೆಂಟ್ ಸಾಗಿಸುತ್ತಿದ್ದ 6 ಟ್ರಕ್​ಗಳು ಮತ್ತು ಕಲ್ಲಿದ್ದಲು ತುಂಬಿದ 1 ಟ್ರಕ್ ಸುಟ್ಟು ಕರಕಲಾಗಿವೆ ಎಂದು ಸ್ಥಳೀಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ವಿಷಯ ತಿಳಿದ ಕೂಡಲೇ ಸ್ಥಳಕ್ಕೆ ಹೆಚ್ಚುವರಿ ಪೊಲೀಸ್ ಪಡೆಗಳನ್ನು ಕಳುಹಿಸಲಾಗಿದೆ. ಘಟನೆಯಲ್ಲಿ ಭಾಗಿಯಾಗಿರುವವರನ್ನು ಬಂಧಿಸಲು ಕೂಂಬಿಂಗ್ ಕಾರ್ಯಾಚರಣೆ ನಡೆಯುತ್ತಿದೆ. ಮೊದಲು ಉಗ್ರರು ಆಟೋಮ್ಯಾಟಿಕ್ ಗನ್​ಗಳಿಂದ ಗುಂಡು ಹಾರಿಸಿದ್ದಾರೆ. ನಂತರ ಟ್ರಕ್​ಗಳಿಗೆ ಬೆಂಕಿ ಹಚ್ಚಿದ್ದಾರೆ. ಈ ದಾಳಿಯ ಹಿಂದೆ ಡಿಎನ್​ಎಲ್​ಎ ಉಗ್ರರ ಕೈವಾಡವಿರುವ ಶಂಕೆ ವ್ಯಕ್ತವಾಗಿದೆ. ಸಾವನ್ನಪ್ಪಿರುವ ಐವರಲ್ಲಿ ಟ್ರಕ್ ಚಾಲಕರು ಹಾಗೂ ಸಹಾಯಕರು ಸೇರಿದ್ದಾರೆ ಎಂದು ದಿಮಾ ಹಸಾವೋ ಜಿಲ್ಲೆಯ ಎಸ್​ಪಿ ಜಯಂತ್ ಸಿಂಗ್ ತಿಳಿಸಿದ್ದಾರೆ.

Assam Attack

ಅಸ್ಸಾಂನಲ್ಲಿ ಟ್ರಕ್ ಮೇಲೆ ದಾಳಿ

ಈ ದಾಳಿಗೆ ಕಾರಣವೇನೆಂಬ ಬಗ್ಗೆ ಇನ್ನೂ ಖಚಿತ ಮಾಹಿತಿ ಲಭ್ಯವಾಗಿಲ್ಲ. ಪೊಲೀಸರು ಈ ಬಗ್ಗೆ ತನಿಖೆ ನಡೆಸಲು ವಿಶೇಷ ತಂಡಗಳನ್ನು ರಚಿಸಿದ್ದು, ತನಿಖೆ ನಡೆಯುತ್ತಿದೆ.

ಇದನ್ನೂ ಓದಿ: Kazakhstan Blast: ಕಾಬೂಲ್ ಬೆನ್ನಲ್ಲೇ ಕಜಕಿಸ್ತಾನದ ಸೇನಾ ನೆಲೆ ಬಳಿಯೂ ಭಾರೀ ಸ್ಫೋಟ

Kabul Blast: ಇವನೇ ನೋಡಿ ಕಾಬೂಲ್ ಸೂಸೈಡ್​ ಬಾಂಬರ್​; ಹೊಣೆಹೊತ್ತ ISIS-Kಯಿಂದ ಅಬ್ದುಲ್ ರೆಹಮಾನ್ ಫೋಟೋ ರಿಲೀಸ್

(Assam Terror Attack: 5 Killed In Assams Dima Hasao District After Suspected Militants Attack and Sets Trucks On Fire)

Published On - 12:54 pm, Fri, 27 August 21

KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಆ ಪಾತ್ರದಲ್ಲಿ ನಟಿಸುವ ಶಿವಣ್ಣನ ಆಸೆ ಇನ್ನೂ ಈಡೇರಿಲ್ಲ: ಯಾವುದು ಆ ಪಾತ್ರ?
ಆ ಪಾತ್ರದಲ್ಲಿ ನಟಿಸುವ ಶಿವಣ್ಣನ ಆಸೆ ಇನ್ನೂ ಈಡೇರಿಲ್ಲ: ಯಾವುದು ಆ ಪಾತ್ರ?
ಸರ್ಕಾರದ ಮುಖ್ಯ ಕಾರ್ಯದರ್ಶಿ ವಿರುದ್ಧವೂ 1.60 ಕೋಟಿ ರೂ. ಲಂಚ ಆರೋಪ
ಸರ್ಕಾರದ ಮುಖ್ಯ ಕಾರ್ಯದರ್ಶಿ ವಿರುದ್ಧವೂ 1.60 ಕೋಟಿ ರೂ. ಲಂಚ ಆರೋಪ
ಸಚಿವ ಮಲ್ಲಿಕಾರ್ಜುನ್ ರಾಜೀನಾಮೆ ಪ್ರಸ್ತಾಪದ ಹಿಂದಿನ ಅಸಲಿ ಕಾರಣ ಇಲ್ಲಿದೆ
ಸಚಿವ ಮಲ್ಲಿಕಾರ್ಜುನ್ ರಾಜೀನಾಮೆ ಪ್ರಸ್ತಾಪದ ಹಿಂದಿನ ಅಸಲಿ ಕಾರಣ ಇಲ್ಲಿದೆ
ದಲಿತರಿಗೆ ಯಾಕೆ ಮುಖ್ಯಮಂತ್ರಿ ಸ್ಥಾನ ನೀಡಬಾರದು: ಕೆ.ಎನ್. ರಾಜಣ್ಣ
ದಲಿತರಿಗೆ ಯಾಕೆ ಮುಖ್ಯಮಂತ್ರಿ ಸ್ಥಾನ ನೀಡಬಾರದು: ಕೆ.ಎನ್. ರಾಜಣ್ಣ
ಭೂಸ್ವಾಧೀನ ಮಾಡಿ ವರ್ಷ ಕಳೆದರೂ ಪರಿಹಾರ ನೀಡದ KBJNL ಕಚೇರಿ ಜಪ್ತಿ
ಭೂಸ್ವಾಧೀನ ಮಾಡಿ ವರ್ಷ ಕಳೆದರೂ ಪರಿಹಾರ ನೀಡದ KBJNL ಕಚೇರಿ ಜಪ್ತಿ
ಇದೆಂತಹ ಅವಮಾನ... ಪಾಕಿಸ್ತಾನ್ ತಂಡಕ್ಕೆ 'ಬಾಬರ್' ಭಯ
ಇದೆಂತಹ ಅವಮಾನ... ಪಾಕಿಸ್ತಾನ್ ತಂಡಕ್ಕೆ 'ಬಾಬರ್' ಭಯ