AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

2041ರ ವೇಳೆಗೆ ಅಸ್ಸಾಂ ಮುಸ್ಲಿಂ ಪ್ರಾಬಲ್ಯದ ರಾಜ್ಯವಾಗಲಿದೆ; ಸಿಎಂ ಹಿಮಂತ ಬಿಸ್ವ ಶರ್ಮಾ

ಪ್ರತಿ 10 ವರ್ಷಗಳಿಗೊಮ್ಮೆ ಹಿಂದೂ ಸಮುದಾಯದ ಜನಸಂಖ್ಯೆಯು ಸುಮಾರು ಶೇ. 16ರಷ್ಟು ಏರಿಕೆಯಾಗುತ್ತಿದೆ ಎಂದು ಅಸ್ಸಾಂ ಸಿಎಂ ಹಿಮಂತ ಬಿಸ್ವ ಶರ್ಮಾ ಹೇಳಿದ್ದಾರೆ. ಮುಸ್ಲಿಂ ಸಮುದಾಯದಲ್ಲಿ ಜನಸಂಖ್ಯೆಯ ಬೆಳವಣಿಗೆಯನ್ನು ಕಡಿಮೆ ಮಾಡಲು ತಮ್ಮ ಸರ್ಕಾರ ಸೂಕ್ತ ಕ್ರಮಗಳನ್ನು ತೆಗೆದುಕೊಂಡಿದೆ ಎಂದು ಅವರು ಹೇಳಿದ್ದಾರೆ.

2041ರ ವೇಳೆಗೆ ಅಸ್ಸಾಂ ಮುಸ್ಲಿಂ ಪ್ರಾಬಲ್ಯದ ರಾಜ್ಯವಾಗಲಿದೆ; ಸಿಎಂ ಹಿಮಂತ ಬಿಸ್ವ ಶರ್ಮಾ
ಹಿಮಂತ ಬಿಸ್ವ ಶರ್ಮಾ
ಸುಷ್ಮಾ ಚಕ್ರೆ
|

Updated on: Jul 19, 2024 | 3:06 PM

Share

ನವದೆಹಲಿ: ಅಸ್ಸಾಂ ಮುಖ್ಯಮಂತ್ರಿ ಡಾ. ಹಿಮಂತ ಬಿಸ್ವ ಶರ್ಮಾ ಇಂದು (ಜುಲೈ 19) ತಮ್ಮ ರಾಜ್ಯದಲ್ಲಿ ಮುಸ್ಲಿಂ ಜನಸಂಖ್ಯೆಯು ಪ್ರತಿ 10 ವರ್ಷಗಳಿಗೊಮ್ಮೆ ಶೇ. 30ರಷ್ಟು ಬೆಳೆಯುತ್ತಿದೆ. ಇದರಿಂದಾಗಿ 2041ರ ವೇಳೆಗೆ ಅಸ್ಸಾಂನಲ್ಲಿ ಮುಸ್ಲಿಮರೇ ಬಹುಸಂಖ್ಯಾತರಾಗುತ್ತಾರೆ ಎಂದು ಹೇಳಿದ್ದಾರೆ. ಗುವಾಹಟಿಯಲ್ಲಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಅಂಕಿಅಂಶಗಳ ಮಾದರಿಯ ಪ್ರಕಾರ ಮುಸ್ಲಿಮರು ಈಗ ಅಸ್ಸಾಂನ ಜನಸಂಖ್ಯೆಯ ಶೇ. 40ರಷ್ಟು ಆಗಿದ್ದಾರೆ ಎಂದು ಹೇಳಿದ್ದಾರೆ.

“2041ರ ವೇಳೆಗೆ ಅಸ್ಸಾಂ ಮುಸ್ಲಿಂ ಬಹುಸಂಖ್ಯಾತ ರಾಜ್ಯವಾಗಲಿದೆ. ಎಂಬುದು ವಾಸ್ತವ. ಇದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ” ಎಂದು ಅವರು ಪ್ರತಿಪಾದಿಸಿದ್ದಾರೆ.

“ಮುಸ್ಲಿಮರ ಜನಸಂಖ್ಯೆಯ ಬೆಳವಣಿಗೆಯನ್ನು ತಡೆಯುವಲ್ಲಿ ಕಾಂಗ್ರೆಸ್ ಪ್ರಮುಖ ಪಾತ್ರವನ್ನು ಹೊಂದಿದೆ. ರಾಹುಲ್ ಗಾಂಧಿ ಮುಸ್ಲಿಂ ಜನಸಂಖ್ಯೆ ನಿಯಂತ್ರಣದ ಬ್ರಾಂಡ್ ಅಂಬಾಸಿಡರ್ ಆಗಿದ್ದರೆ ಆ ಸಮುದಾಯವು ಅವರ ಮಾತನ್ನು ಮಾತ್ರ ಕೇಳುತ್ತದೆ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: Shocking Video: ನಾಯಿಯನ್ನು ಹಗ್ಗದಲ್ಲಿ ಕಟ್ಟಿ ಟೆರೇಸ್‌ನಿಂದ ನೇತಾಡಿಸಿದ ಯುವಕ; ಶಾಕಿಂಗ್ ವಿಡಿಯೋ ವೈರಲ್

ಅಸ್ಸಾಂ ಸರ್ಕಾರವು ಅಸ್ಸಾಂ ಮುಸ್ಲಿಂ ವಿವಾಹಗಳು ಮತ್ತು ವಿಚ್ಛೇದನ ನೋಂದಣಿ ಕಾಯಿದೆ, 1935 ಅನ್ನು ರದ್ದುಗೊಳಿಸುತ್ತದೆ. ಬಾಲ್ಯ ವಿವಾಹವನ್ನು ತಡೆಗಟ್ಟಲು ಮತ್ತು ವಿವಾಹ ಮತ್ತು ವಿಚ್ಛೇದನ ನೋಂದಣಿಯಲ್ಲಿ ಸಮಾನತೆಯನ್ನು ಖಚಿತಪಡಿಸಿಕೊಳ್ಳಲು 1935ರ ಅಸ್ಸಾಂ ಮುಸ್ಲಿಂ ವಿವಾಹಗಳು ಮತ್ತು ವಿಚ್ಛೇದನ ನೋಂದಣಿ ಕಾಯ್ದೆಯನ್ನು ರದ್ದುಗೊಳಿಸಲು ಸಿಎಂ ಹಿಮಂತ ಬಿಸ್ವಾ ಸರ್ಮಾ ನೇತೃತ್ವದ ಅಸ್ಸಾಂ ಸರ್ಕಾರ ನಿರ್ಧರಿಸಿದೆ.

ಇದನ್ನೂ ಓದಿ: ಅಕ್ಕನ ಗಂಡನೇ ಬೇಕು, ಆತನನ್ನೇ ಮದುವೆಯಾಗುತ್ತೇನೆಂದು ಹಠ ಹಿಡಿದ ಯುವತಿ! ಆಮೇಲೆನಾಯ್ತು?

ವಿವಾಹ ಮತ್ತು ವಿಚ್ಛೇದನದ ನೋಂದಣಿಗೆ ಸಮಾನತೆಯನ್ನು ತರಲು, ಅಸ್ಸಾಂ ಮುಸ್ಲಿಂ ವಿವಾಹಗಳು ಮತ್ತು ವಿಚ್ಛೇದನ ನೋಂದಣಿ ಕಾಯ್ದೆಯನ್ನು ರದ್ದುಗೊಳಿಸುವ ಗುರಿಯನ್ನು ಹೊಂದಿರುವ ಅಸ್ಸಾಂ ರದ್ದತಿ ಮಸೂದೆ, 2024ಗೆ ರಾಜ್ಯ ಸಚಿವ ಸಂಪುಟವು ಅನುಮೋದನೆ ನೀಡಿದೆ. ಈ ಮಸೂದೆಯನ್ನು ಅಸ್ಸಾಂ ವಿಧಾನಸಭೆಯ ಮುಂದಿನ ಮಾನ್ಸೂನ್ ಅಧಿವೇಶನದ ಮೊದಲು ಇರಿಸಲಾಗುವುದು, ಮುಸ್ಲಿಂ ನೋಂದಣಿಗೆ ಸೂಕ್ತ ಶಾಸನವನ್ನು ತರಲು ರಾಜ್ಯ ಸಚಿವ ಸಂಪುಟವು ನಿರ್ದೇಶಿಸಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಇರಾನ್ ಯುದ್ಧನೌಕೆ ಮೇಲೆ ದಾಳಿ ಹೇಗಿತ್ತು? ವಿಡಿಯೋ ಬಿಡುಗಡೆ ಮಾಡಿದ ಅಮೆರಿಕ
ಇರಾನ್ ಯುದ್ಧನೌಕೆ ಮೇಲೆ ದಾಳಿ ಹೇಗಿತ್ತು? ವಿಡಿಯೋ ಬಿಡುಗಡೆ ಮಾಡಿದ ಅಮೆರಿಕ
ಹೊರ್ಮುಜ್ ಜಲಸಂಧಿಯಲ್ಲಿ 10 ತೈಲ ಹಡಗುಗಳನ್ನು ಉಡಾಯಿಸಿದ ಇರಾನ್
ಹೊರ್ಮುಜ್ ಜಲಸಂಧಿಯಲ್ಲಿ 10 ತೈಲ ಹಡಗುಗಳನ್ನು ಉಡಾಯಿಸಿದ ಇರಾನ್
ಮೌಲ್ವಿ ಮೇಲೆ ಹಿಂದೂ ಯುವಕರ ಹಲ್ಲೆ: ಮುಸ್ಲಿಮರಿಂದ ಬೃಹತ್ ಪ್ರತಿಭಟನೆ
ಮೌಲ್ವಿ ಮೇಲೆ ಹಿಂದೂ ಯುವಕರ ಹಲ್ಲೆ: ಮುಸ್ಲಿಮರಿಂದ ಬೃಹತ್ ಪ್ರತಿಭಟನೆ
ವೈರಲ್ ವಿಡಿಯೋಗೆ ನಟಿಯರ ಆಕ್ರೋಶ; ಪ್ರತಿಕ್ರಿಯೆ ನೀಡಿದ ಎಸ್. ನಾರಾಯಣ್
ವೈರಲ್ ವಿಡಿಯೋಗೆ ನಟಿಯರ ಆಕ್ರೋಶ; ಪ್ರತಿಕ್ರಿಯೆ ನೀಡಿದ ಎಸ್. ನಾರಾಯಣ್
ಬಣ್ಣ ತೊಳೆಯಲು ಕೆರೆಗೆ ಇಳಿದ ಯುವಕರು ನೀರುಪಾಲು
ಬಣ್ಣ ತೊಳೆಯಲು ಕೆರೆಗೆ ಇಳಿದ ಯುವಕರು ನೀರುಪಾಲು
ಆಗ್ರಾ-ಲಖನೌ ಎಕ್ಸ್‌ಪ್ರೆಸ್‌ವೇಯಲ್ಲಿ ಭೀಕರ ಅಪಘಾತ: ವಿಡಿಯೋ ವೈರಲ್
ಆಗ್ರಾ-ಲಖನೌ ಎಕ್ಸ್‌ಪ್ರೆಸ್‌ವೇಯಲ್ಲಿ ಭೀಕರ ಅಪಘಾತ: ವಿಡಿಯೋ ವೈರಲ್
ಪ್ರತಿದಿನ ಆಕೆ ಹಿಂಸೆ ನೀಡುತ್ತಾಳೆ ಎಂದ ಶಾಲೆ ಮುಖ್ಯ ಶಿಕ್ಷಕ
ಪ್ರತಿದಿನ ಆಕೆ ಹಿಂಸೆ ನೀಡುತ್ತಾಳೆ ಎಂದ ಶಾಲೆ ಮುಖ್ಯ ಶಿಕ್ಷಕ
ಹಾರ್ಮುಜ್ ಜಲಸಂಧಿ ಕ್ಲೋಸ್: ಪರ್ಷಿಯನ್ ಕೊಲ್ಲೀಲಿ ಸಿಲುಕಿದ ಭಾರತದ 37 ಹಡಗು
ಹಾರ್ಮುಜ್ ಜಲಸಂಧಿ ಕ್ಲೋಸ್: ಪರ್ಷಿಯನ್ ಕೊಲ್ಲೀಲಿ ಸಿಲುಕಿದ ಭಾರತದ 37 ಹಡಗು
ದಾವಣಗೆರೆ ಜಿಲ್ಲಾಧಿಕಾರಿ ನಿವಾಸಕ್ಕೆ ಬಾಂಬ್ ಬೆದರಿಕೆ
ದಾವಣಗೆರೆ ಜಿಲ್ಲಾಧಿಕಾರಿ ನಿವಾಸಕ್ಕೆ ಬಾಂಬ್ ಬೆದರಿಕೆ
ದಂಪತಿ ಜಗಳ ಶಾಲೆ ತನಕ:ಶಿಕ್ಷಕನಿಗಾಗಿ ಗಲಾಟೆ ಮಾಡಿದ ಪತ್ನಿ ಹೇಳಿದ್ದೇನು?
ದಂಪತಿ ಜಗಳ ಶಾಲೆ ತನಕ:ಶಿಕ್ಷಕನಿಗಾಗಿ ಗಲಾಟೆ ಮಾಡಿದ ಪತ್ನಿ ಹೇಳಿದ್ದೇನು?