AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಶ್ರೀನಿವಾಸ್​ ವಿರುದ್ಧ ಅಸ್ಸಾಂ ಯುವ ಕಾಂಗ್ರೆಸ್ ಅಧ್ಯಕ್ಷೆ ಅಂಕಿತಾ ದತ್ತಾರಿಂದ ಕಿರುಕುಳ ಆರೋಪ

ರಾಷ್ಟ್ರೀಯ ಯುವ ಕಾಂಗ್ರೆಸ್ ಅಧ್ಯಕ್ಷ ಬಿ.ವಿ. ಶ್ರೀನಿವಾಸ್ ಅವರ ವಿರುದ್ಧ ಅಸ್ಸಾಂನ ಯುವ ಕಾಂಗ್ರೆಸ್ ಅಧ್ಯಕ್ಷೆ ಡಾ. ಅಂಕಿತಾ ದತ್ತಾ ಕಿರುಕುಳ ಆರೋಪ ಮಾಡಿದ್ದಾರೆ.

ಯುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಶ್ರೀನಿವಾಸ್​ ವಿರುದ್ಧ ಅಸ್ಸಾಂ ಯುವ ಕಾಂಗ್ರೆಸ್ ಅಧ್ಯಕ್ಷೆ ಅಂಕಿತಾ ದತ್ತಾರಿಂದ ಕಿರುಕುಳ ಆರೋಪ
ಅಂಕಿತಾ ದತ್ತಾ
ನಯನಾ ರಾಜೀವ್
|

Updated on: Apr 19, 2023 | 10:38 AM

Share

ರಾಷ್ಟ್ರೀಯ ಯುವ ಕಾಂಗ್ರೆಸ್ ಅಧ್ಯಕ್ಷ ಬಿ.ವಿ. ಶ್ರೀನಿವಾಸ್ ಅವರ ವಿರುದ್ಧ ಅಸ್ಸಾಂನ ಯುವ ಕಾಂಗ್ರೆಸ್ ಅಧ್ಯಕ್ಷೆ ಡಾ. ಅಂಕಿತಾ ದತ್ತಾ ಕಿರುಕುಳ ಆರೋಪ ಮಾಡಿದ್ದಾರೆ. ಈ ಕುರಿತು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ(Rahul Gandhi) ಹಾಗೂ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ವಾದ್ರಾ ಅವರ ಗಮನಕ್ಕೆ ತಂದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ಬೇಸರ ವ್ಯಕ್ತಪಡಿಸಿದ್ದಾರೆ. ಈ ಕುರಿತು ಸರಣಿ ಟ್ವೀಟ್ ಮಾಡಿರುವ ಅವರು, ಶ್ರೀನಿವಾಸ್ ಬಿವಿ ಅವರು ಸತತವಾಗಿ ನನಗೆ ಕಿರುಕುಳ ನೀಡಿದ್ದಾರೆ. ಲಿಂಗ ತಾರತಮ್ಯ ಮಾಡಿದ್ದಾರೆ, ಹೆಣ್ಣು ಎಂಬ ಕಾರಣಕ್ಕೆ ನನಗೆ ಮಾನಸಿಕ ಹಿಂಸೆ ನೀಡಿದ್ದಾರೆ ಎಂದು ಅಂಕಿತಾ ದೂರಿದ್ದಾರೆ. ನೀವು ಓಡ್ಕಾ ಕುಡಿಯುತ್ತೀರಾ ಎಂದು ವ್ಯಂಗ್ಯವಾಗಿ ಪ್ರಶ್ನೆಗಳನ್ನು ಕೇಳಿದ್ದಾರೆ.

ನನ್ನ ಮೌಲ್ಯಗಳು ಹಾಗೂ ಶಿಕ್ಷಣವು ಇದಕ್ಕೆಲ್ಲಾ ಅವಕಾಶ ನೀಡುವುದಿಲ್ಲ, ಈ ಬಗ್ಗೆ ಈಗಾಘಲೇ ಪ್ರಿಯಾಂಕಾ ವಾದ್ರಾ, ರಾಹುಲ್ ಗಾಂಧಿ ಅವರ ಗಮನಕ್ಕೆ ತಂದರೂ ಯಾವುದೇ ಪ್ರಯೋಜನವಾಗಿಲ್ಲ, ಈ ಕಾರಣಕ್ಕಾಗಿ ಬಹಿರಂಗವಾಗಿ ಈ ವಿಷಯ ಪ್ರಸ್ತಾಪಿಸುವುದು ಅನಿವಾರ್ಯವಾಗಿದೆ ಎಂದಿದ್ದಾರೆ.

ಈ ಬಗ್ಗೆ ಬಿಜೆಪಿ ಪ್ರತಿಕ್ರಿಯೆ ನೀಡಿದ್ದು, ಶ್ರೀನಿವಾಸ್ ಮೇಲಿನ ಆರೋಪ ಗಂಭೀರದದ್ದು ಎಂದು ಹೇಳಿದೆ. ಸಮಗ್ರ ತನಿಖೆ ನಡೆಸುವ ಬದಲು ಕಾನೂನು ಕ್ರಮದ ಬೆದರಿಕೆ ಒಡ್ಡಲಾಗುತ್ತಿದೆ. ಬಿಜೆಪಿ ವಕ್ತಾರ ಶಹಜಾದ್ ಪೂನಾವಾಲಾ ವಿಡಿಯೋ ಬಿಡುಗಡೆ ಮಾಡಿ, ‘ಲಡ್ಕಿ ಹೂಂ,  ಲಡ್​  ಸಕ್ತೀ ಹೂಂ’ ಎಂಬ ಘೋಷಣೆ ನೀಡಿದ ಪಕ್ಷ ಸಂಪೂರ್ಣ ಮೌನವಾಗಿರುವುದು ಬೇಸರ ತಂದಿದೆ. ಪ್ರಿಯಾಂಕಾ ಗಾಂಧಿ ಮತ್ತು ರಾಹುಲ್ ಗಾಂಧಿ ಎಲ್ಲಿದ್ದಾರೆ? ಎಂದು ಪ್ರಶ್ನಿಸಿದ್ದಾರೆ.

ಕಾಂಗ್ರೆಸ್ ಹೇಳಿದ್ದೇನು? ಭಾರತೀಯ ಯುವ ಕಾಂಗ್ರೆಸ್ ಅಂಕಿತಾ ಅವರ ಆರೋಪಗಳನ್ನು ಅಸಂಬದ್ಧ ಮತ್ತು ಆಧಾರರಹಿತ ಎಂದು  ಹೇಳಿದೆ. ಶಾರದಾ ಚಿಟ್ ಫಂಡ್ ಪ್ರಕರಣದಲ್ಲಿ ಅಂಕಿತಾ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುತ್ತಿದ್ದು, ಹೀಗಾಗಿ ಬಿಜೆಪಿ ಸೇರುತ್ತಿದ್ದಾರೆ ಎಂದು ಯುವ ಕಾಂಗ್ರೆಸ್ ಹೇಳಿಕೊಂಡಿದೆ. ಬಿಜೆಪಿಯವರ ಒತ್ತಾಯದ ಮೇರೆಗೆ ಅವರು ಇಂತಹ ಆರೋಪ ಮಾಡಿದ್ದಾರೆ.

ಈ ಆರೋಪಗಳು ಸಂಪೂರ್ಣವಾಗಿ ನಿರಾಧಾರ ಎಂದು ಯುವ ಕಾಂಗ್ರೆಸ್‌ನ ಸಂಘಟನಾ ಕಾರ್ಯದರ್ಶಿ ಮತ್ತು ಅಸ್ಸಾಂ ಉಸ್ತುವಾರಿ ವರ್ಧನ್ ಯಾದವ್ ಹೇಳಿದ್ದಾರೆ. ಶೀಘ್ರದಲ್ಲೇ ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುತ್ತೇವೆ. ಅವರಿಗೆ ಲೀಗಲ್ ನೋಟಿಸ್ ಕಳುಹಿಸಲಾಗುತ್ತಿದೆ ಎಂದಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ