AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಮಾ ಮಸೂದೆ ಚರ್ಚೆಗೆ ಒತ್ತಾಯಿಸಿದ ಮಹಿಳಾ ಸದಸ್ಯರ ಮೇಲೆ ರಾಜ್ಯಸಭೆಯಲ್ಲಿ ಹಲ್ಲೆ: ಶರದ್​ ಪವಾರ್

ಸಾಮಾನ್ಯ ವಿಮೆ ಮಸೂದೆಯ ಬಗ್ಗೆ ಚರ್ಚೆ ನಡೆಸಬೇಕು ಎಂದು ಆಗ್ರಹಿಸಿದ ಮಹಿಳಾ ಸದಸ್ಯರ ಮೇಲೆ ಹಲ್ಲೆ ನಡೆಯಿತು ಎಂದು ಅವರು ದೂರಿದರು.

ವಿಮಾ ಮಸೂದೆ ಚರ್ಚೆಗೆ ಒತ್ತಾಯಿಸಿದ ಮಹಿಳಾ ಸದಸ್ಯರ ಮೇಲೆ ರಾಜ್ಯಸಭೆಯಲ್ಲಿ ಹಲ್ಲೆ: ಶರದ್​ ಪವಾರ್
ಎನ್​ಸಿಪಿ ನಾಯಕ ಶರದ್​ ಪವಾರ್
Follow us
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on:Aug 11, 2021 | 9:15 PM

ದೆಹಲಿ: ರಾಜ್ಯಸಭೆಯಲ್ಲಿ ಮಹಿಳಾ ಸದಸ್ಯರ ಮೇಲೆ ಹಲ್ಲೆ ನಡೆದಿದೆ ಎಂದು ಸಂಸತ್ ಭವನದ ಮುಂದೆ ಮಹಾರಾಷ್ಟ್ರದ ಹಿರಿಯ ರಾಜಕಾರಿಣಿ ಶರದ್​ ಪವಾರ್​​ ಬುಧವಾರ ಹೇಳಿದರು. ಸಾಮಾನ್ಯ ವಿಮೆ ಮಸೂದೆಯ ಬಗ್ಗೆ ಚರ್ಚೆ ನಡೆಸಬೇಕು ಎಂದು ಆಗ್ರಹಿಸಿದ ಮಹಿಳಾ ಸದಸ್ಯರ ಮೇಲೆ ಹಲ್ಲೆ ನಡೆಯಿತು ಎಂದು ಅವರು ದೂರಿದರು.

ಪ್ರಧಾನ ಮಂತ್ರಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಸೇರಿ ಪ್ರಜಾಪ್ರಭುತ್ವವನ್ನು ಕಗ್ಗೊಲೆ ಮಾಡಿದ್ದಾರೆ. ರಾಜ್ಯಸಭೆಯಲ್ಲಿ ಗೂಂಡಾಗಳ ಮಾದರಿಯಲ್ಲಿ ವರ್ತಿಸಿದ್ದಾರೆ. ಕೇವಲ ಒಂದು ವಿಧೇಯಕದ ಬಗ್ಗೆ ಮಾತ್ರ ಚರ್ಚೆ ನಡೆಯಿತು. ಯಾವುದೇ ಚರ್ಚೆಯಿಲ್ಲದೆ 36 ವಿಧೇಯಕ ಅಂಗೀಕರಿಸಿದ್ದಾರೆ ಎಂದು ಗಂಭೀರ ಆರೋಪ ಮಾಡಿದರು.

ನನ್ನ 55 ವರ್ಷಗಳ ರಾಜಕೀಯ ಜೀವನದಲ್ಲಿ ಇದು ಅತ್ಯಂತ ಕೆಟ್ಟ ದಿನ. ರಾಜ್ಯಸಭೆಯಲ್ಲಿ ಮಹಿಳಾ ಸದಸ್ಯರ ಮೇಲೆ ಹಲ್ಲೆ ನಡೆದದ್ದು ಖಂಡನೀಯ. ದೇಶದ ಜನತೆಗೆ ಯಾವ ಸಂದೇಶ ಕೊಡಲು ಹೊರಟಿದ್ದೀರಿ ಎಂದು ಪ್ರಶ್ನಿಸಿದ ಅವರು ದೌರ್ಜನ್ಯದ ಮೂಲಕ ಎಲ್ಲವನ್ನೂ ಮಾಡಲು ಹೊರಟಿದ್ದಾರೆ ಎಂದು ಗಂಭೀರ ಆರೋಪ ಮಾಡಿದರು.

ಸದನದ ಒಳಕ್ಕೆ ಬೇರೆಡೆಯಿಂದ 40 ಪುರುಷ ಮತ್ತು ಮಹಿಳೆಯರನ್ನು ಕರೆತರಲಾಗಿತ್ತು. ಇದು ಪ್ರಜಾಪ್ರಭುತ್ವದ ಮೇಲೆ ನಡೆದ ಹಲ್ಲೆ ಎಂದು ಅವರು ವಿಷಾದಿಸಿದರು.

(Assault on Women Members in Rajyasabha alleges Sharad Pawar)

ಇದನ್ನೂ ಓದಿ: ಮಾನ್ಸೂನ್ ಅಧಿವೇಶನಕ್ಕೆ ಮೊದಲು ಆಂಟನಿ ಮತ್ತು ಶರದ್ ಪವಾರ್​ರನ್ನು ಭೇಟಿಯಾಗಿ ಭಾರತ-ಚೀನಾ ಗಡಿ ಪರಿಸ್ಥಿತಿಯನ್ನು ವಿವರಿಸಿದ ರಾಜನಾಥ ಸಿಂಗ್

ಇದನ್ನೂ ಓದಿ: ಸಿಎಂ ಬಸವರಾಜ ಬೊಮ್ಮಾಯಿ – ಎನ್​ಸಿಪಿ ಮುಖ್ಯಸ್ಥ ಶರದ್ ಪವಾರ್ ಭೇಟಿ; ನದಿ ನೀರು ಹಂಚಿಕೆ ಕುರಿತು ಮಾತುಕತೆ

Published On - 9:12 pm, Wed, 11 August 21

ದಿಂಬಂ ಘಾಟ್​ನಲ್ಲಿ ರಾಶಿ ರಾಶಿ ಟೊಮೆಟೋ ತಿಂದು ತೇಗಿದ ಕಾಡಾನೆ: ವಿಡಿಯೋ ನೋಡಿ
ದಿಂಬಂ ಘಾಟ್​ನಲ್ಲಿ ರಾಶಿ ರಾಶಿ ಟೊಮೆಟೋ ತಿಂದು ತೇಗಿದ ಕಾಡಾನೆ: ವಿಡಿಯೋ ನೋಡಿ
Daily Devotional: ಮನೆ ಹತ್ತಿರ ಅಶ್ವಥ್ಥ ವೃಕ್ಷ ಬೆಳೆದರೆ ಏನು ಮಾಡಬೇಕು?
Daily Devotional: ಮನೆ ಹತ್ತಿರ ಅಶ್ವಥ್ಥ ವೃಕ್ಷ ಬೆಳೆದರೆ ಏನು ಮಾಡಬೇಕು?
horoscope: ಈ ರಾಶಿಯವರು ಅಪರಿಚಿತರಿಂದ ಸ್ವಲ್ಪ ಅಂತರ ಕಾಯ್ದುಕೊಳ್ಳುವರು
horoscope: ಈ ರಾಶಿಯವರು ಅಪರಿಚಿತರಿಂದ ಸ್ವಲ್ಪ ಅಂತರ ಕಾಯ್ದುಕೊಳ್ಳುವರು
3 ವಿಕೆಟ್, 1 ಕ್ಯಾಚ್; ಇತಿಹಾಸ ಬರೆದ ಪ್ಯಾಟ್ ಕಮ್ಮಿನ್ಸ್
3 ವಿಕೆಟ್, 1 ಕ್ಯಾಚ್; ಇತಿಹಾಸ ಬರೆದ ಪ್ಯಾಟ್ ಕಮ್ಮಿನ್ಸ್
ಸೋನು ನಿಗಮ್ ಕನ್ನಡಿಗರನ್ನು ಭಯೋತ್ಪಾದಕರಿಗೆ ಹೋಲಿಸಿದ್ದು ತಪ್ಪು: ಶಮಿತಾ
ಸೋನು ನಿಗಮ್ ಕನ್ನಡಿಗರನ್ನು ಭಯೋತ್ಪಾದಕರಿಗೆ ಹೋಲಿಸಿದ್ದು ತಪ್ಪು: ಶಮಿತಾ
ಅನುಮೋದನೆ ಸಿಕ್ಕರೂ176 ಕೋಚ್ ಗಳ ನೇಮಕ ಯಾಕಾಗಿಲ್ಲ ಅಂತ ಪ್ರಶ್ನಿಸಿದ ಸಿಎಂ
ಅನುಮೋದನೆ ಸಿಕ್ಕರೂ176 ಕೋಚ್ ಗಳ ನೇಮಕ ಯಾಕಾಗಿಲ್ಲ ಅಂತ ಪ್ರಶ್ನಿಸಿದ ಸಿಎಂ
ದಿನೇಶ್ ಗುಂಡೂರಾವ್ ಉಸ್ತುವಾರಿ ಸಚಿವನಾಗಿ ಸಿಕ್ಕಿದ್ದು ನಮ್ಮ ದುರ್ದೈವ: ಪೂಂಜ
ದಿನೇಶ್ ಗುಂಡೂರಾವ್ ಉಸ್ತುವಾರಿ ಸಚಿವನಾಗಿ ಸಿಕ್ಕಿದ್ದು ನಮ್ಮ ದುರ್ದೈವ: ಪೂಂಜ
ಯತ್ನಾಳ್ ಗೆ ಹಿಂದೂ ನಾಯಕ ಅಂತ ಯಾರೂ ಪಟ್ಟ ಕಟ್ಟಿಲ್ಲ: ರೇಣುಕಾಚಾರ್ಯ
ಯತ್ನಾಳ್ ಗೆ ಹಿಂದೂ ನಾಯಕ ಅಂತ ಯಾರೂ ಪಟ್ಟ ಕಟ್ಟಿಲ್ಲ: ರೇಣುಕಾಚಾರ್ಯ
ಶತಮಾನದ ಇತಿಹಾಸ ಹೊಂದಿರುವ ಕೋಲಾರದ ಶಾಲೆ SSLC ಫಲಿತಾಂಶದಲ್ಲಿ ಶೂನ್ಯ ಸಾಧನೆ
ಶತಮಾನದ ಇತಿಹಾಸ ಹೊಂದಿರುವ ಕೋಲಾರದ ಶಾಲೆ SSLC ಫಲಿತಾಂಶದಲ್ಲಿ ಶೂನ್ಯ ಸಾಧನೆ
ಸಿದ್ದರಾಮಯ್ಯ ಅಧಿಕಾರಕ್ಕೆ ಬಂದು ಮಾನಸಿಕವಾಗಿ ಟಿಪ್ಪು ಆಗಿದ್ದಾರೆ: ಶೋಭಾ
ಸಿದ್ದರಾಮಯ್ಯ ಅಧಿಕಾರಕ್ಕೆ ಬಂದು ಮಾನಸಿಕವಾಗಿ ಟಿಪ್ಪು ಆಗಿದ್ದಾರೆ: ಶೋಭಾ