AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Assembly Election Result 2023:ನಾಳೆ 4 ರಾಜ್ಯಗಳ ವಿಧಾನಸಭೆ ಚುನಾವಣೆ ಫಲಿತಾಂಶ, ಕ್ಷಣ ಕ್ಷಣದ ಮಾಹಿತಿಗಾಗಿ ಟಿವಿ9 ಫಾಲೋ ಮಾಡಿ

Assembly Election Result 2023 Tomorrow Time: ಲೋಕಸಭೆ ಚುನಾವಣೆ ಹಣೆಬರಹ ನಿರ್ಧರಿಸಲು 'ಪಂಚರಾಜ್ಯ ಫಲಿತಾಂಶ' ಸಿದ್ಧವಾಗಿದೆ. ಈಗಾಗಲೇ ಚುನಾವಣೋತ್ತರ ಸಮೀಕ್ಷೆಗಳು ಹೊರಬಿದ್ದಿದ್ದು, ಬಿಜೆಪಿ ವರ್ಸಸ್​ ಕಾಂಗ್ರೆಸ್ ಮಧ್ಯೆ ಅಖಾಡ ರಂಗೇರಿದೆ. ಗೆಲುವೊಂದೇ ಏಕೈಕ ಮಂತ್ರ ಎಂದು ಮುನ್ನುಗ್ಗುತ್ತಿರುವ 2 ಪಕ್ಷಗಳಿಗೆ ಡಿಸೆಂಬರ್ 3ರ ಭಾನುವಾರ ಅಂತಿಮ ಫಲಿತಾಂಶ ಸಿಗಲಿದೆ.

Assembly Election Result 2023:ನಾಳೆ 4 ರಾಜ್ಯಗಳ ವಿಧಾನಸಭೆ ಚುನಾವಣೆ ಫಲಿತಾಂಶ, ಕ್ಷಣ ಕ್ಷಣದ ಮಾಹಿತಿಗಾಗಿ ಟಿವಿ9 ಫಾಲೋ ಮಾಡಿ
TV9 Web
| Edited By: |

Updated on: Dec 02, 2023 | 12:57 PM

Share

ಪಂಚರಾಜ್ಯಗಳ ಚುನಾವಣೆಯ ಮತದಾನ ಪ್ರಕ್ರಿಯೆಯು ಮುಕ್ತಾಯಗೊಂಡಿದ್ದು ಮತ ಎಣಿಕೆ ಪ್ರಕ್ರಿಯೆ ಡಿಸೆಂಬರ್ 3 ರಂದು ಅಂದರೆ ನಾಳೆ (ಡಿಸೆಂಬರ್ 02) ನಡೆಯಲಿದೆ. ಇದರ ನಡುವೆ ಮಿಜೋರಾಂನಲ್ಲಿ ಮತ ಎಣಿಕೆ ಕಾರ್ಯ ಒಂದು ದಿನಕ್ಕೆ ಮುಂದೂಡಲಾಗಿದೆ. ಡಿಸೆಂಬರ್ 3 ರ ಬದಲಾಗಿ ಡಿಸೆಂಬರ್ 4 ಕ್ಕೆ ಮತ ಎಣಿಕೆ ಕಾರ್ಯ ನಡೆಸುವುದಾಗಿ ಚುನಾವಣಾ ಆಯೋಗವು ಘೋಷಣೆ ಮಾಡಿದೆ. ಈ ಹಿನ್ನೆಲೆಯಲ್ಲಿ ನಾಳೆ ಬೆಳಗ್ಗೆಯಿಂದಲೇ ‘ರಾಜಸ್ಥಾನ, ಮಧ್ಯಪ್ರದೇಶ, ಛತ್ತೀಸ್‌ಗಢ, ತೆಲಂಗಾಣ ವಿಧಾನಸಭೆ ಚುನಾವಣೆಯ ಮತ ಎಣಿಕೆ ಕಾರ್ಯ ಶುರುವಾಗಲಿದ್ದು, ಫಲಿತಾಂಶದ ಕ್ಷಣ ಕ್ಷಣದ ಮಾಹಿತಿಯನ್ನು ಟಿವಿ9 ಕನ್ನಡ ಲೈವ್​ ನೀಡಲಿದೆ.

ಸದ್ಯದ ಈ ಐದು ರಾಜ್ಯಗಳ ವಿಧಾನಸಭಾ ಚುನಾವಣೆ ಫಲಿತಾಂಶಗಳು ಮುಂದಿನ ಚುನಾವಣೆಗಳ ಮೇಲೆ ಪ್ರಭಾವ ಬೀರಲಿದೆ. ಈ ಈ ಫಲಿತಾಶವು ಆಡಳಿತಾರೂಢ ಬಿಜೆಪಿ, ವಿರೋಧ ಪಕ್ಷವಾದ ಕಾಂಗ್ರೆಸ್ ಮತ್ತು ವಿವಿಧ ಪ್ರಾದೇಶಿಕ ಪಕ್ಷಗಳಿಗೆ ಮಹತ್ವದ ಘಟ್ಟವಾಗಿದೆ.

ಇದನ್ನೂ ಓದಿ: ಪಂಚರಾಜ್ಯಗಳಲ್ಲಿ ಮತದಾರರು ಮಣೆ ಹಾಕಿದ್ದು ಯಾರಿಗೆ? ಏನು ಹೇಳುತ್ತಿವೆ ಮತಗಟ್ಟೆ ಸಮೀಕ್ಷೆ?

ಇನ್ನು 4 ರಾಜ್ಯಗಳ ವಿಧಾನಸಭಾ ಚುನಾವಣೆ ಫಲಿತಾಂಶ ಏಕಕಾಲಕ್ಕೆ ಪ್ರಕಟಗೊಳ್ಳುತ್ತಿರುವುದರಿಂದ. ಎಲ್ಲಿಯೂ ಅಹಿತಕರ ಘಟನೆಗಳು ನಡೆಯದಂತೆ ಎಚ್ಚರಿಕೆ ವಹಿಸಲಾಗಿದೆ. ಮತ ಎಣಿಕಾ ಕೇಂದ್ರಗಳ ಸುತ್ತಮುತ್ತ ಹೆಚ್ಚುವರಿ ಬಿಗಿ ಪೊಲೀಸ್ ಸಿಬ್ಬಂದಿ ನಿಯೋಜಿಸಲಾಗಿದೆ.

ಮಿಜೋರಾಂ ಮತ ಎಣಿಕೆ ಮುಂದೂಡಿದ್ಯಾಕೆ?

ಡಿಸೆಂಬರ್ 3 ರಂದು ಭಾನುವಾರ ಆಗಿದ್ದು, ಕ್ರಿಶ್ಚಿಯನ್ನರ ಪವಿತ್ರ ದಿನವಾಗಿದೆ. ಆ ಕಾರಣಕ್ಕಾಗಿ ರಾಜ್ಯದಲ್ಲಿ ಎನ್‌ಜಿಒ ಸಮನ್ವಯ ಸಮಿತಿ ಪ್ರತಿಭಟನೆಗಳನ್ನು ನಡೆಸಿತ್ತು. ಈ ಹಿನ್ನೆಲೆಯಲ್ಲಿ ಆಯೋಗವು ದಿನಾಂಕವನ್ನು ಪರಿಷ್ಕರಿಸಿದ್ದು, ಡಿಸೆಂಬರ್ 3 ರ ಬದಲಾಗಿ ಡಿಸೆಂಬರ್ 4 ಕ್ಕೆ ಮತ ಎಣಿಕೆ ಕಾರ್ಯ ನಡೆಸುವುದಾಗಿ ತಿಳಿಸಿದೆ. ನವೆಂಬರ್ 7 ರಂದು ಮಿಜೊರಾಂನ 40 ವಿಧಾನಸಭಾ ಕ್ಷೇತ್ರಗಳಿಗೆ ಒಂದೇ ಹಂತದಲ್ಲಿ ಮತದಾನ ನಡೆದಿತ್ತು. ಇದೀಗ ಚುನಾವಣಾ ಫಲಿತಾಂಶದ ದಿನಾಂಕ ಬದಲಾವಣೆ ಆಗಿದೆ. ಸರ್ಕಾರ ರಚನೆಗೆ 21 ಮ್ಯಾಜಿಕ್ ನಂಬರ್ ಆಗಿದೆ.

ತೆಲಂಗಾಣದಲ್ಲಿ ಕಾಂಗ್ರೆಸ್​ -ಬಿಆರ್​ಎಸ್ ಪೈಪೋಟಿ​​

ತೆಲಂಗಾಣದಲ್ಲಿ ಕಾಂಗ್ರೆಸ್​ ಹಾಗೂ ಬಿಆರ್​ಎಸ್​​ ನಡುವೆ ಪೈಪೋಟಿ ಇದೆ. ಒಟ್ಟು 119 ವಿಧಾನಸಭಾ ಕ್ಷೇತ್ರಗಳಿದ್ದು, ಇದ್ದು, ಬಹುಮತಕ್ಕೆ 60 ಬೇಕಿದೆ. ಬಹುತೇಕ ಎಕ್ಸಿಟ್ ಪೋಲ್‌ಗಳು ತೆಲಂಗಾಣದಲ್ಲಿ ಕಾಂಗ್ರೆಸ್‌ ಮೇಲುಗೈ ಎಂದು ಭವಿಷ್ಯ ನುಡಿದಿವೆ. ಕಾಂಗ್ರೆಸ್ 60-70 ಸ್ಥಾನಗಳೊಂದಿಗೆ ದೊಡ್ಡ ಪಕ್ಷವಾಗಿ ಹೊರಹೊಮ್ಮಬಹುದು ಎಂದು ರಾಜಕೀಯ ವಿಶ್ಲೇಷಕರು ಕೂಡ ಅಭಿಪ್ರಾಯಪಟ್ಟಿದ್ದಾರೆ.

ಮಧ್ಯಪ್ರದೇಶದಲ್ಲಿ ಬಿಜೆಪಿ-ಕಾಂಗ್ರೆಸ್ ನಡುವೆ ಹಣಾಹಣಿ

ಮಧ್ಯಪ್ರದೇಶದ ಒಟ್ಟು 230 ಕ್ಷೇತ್ರಗಳಿಗೆ ಚುನಾವಣೆ ನಡೆದಿದ್ದು, ಸರಳ ಬಹುಮತ 116 ಬೇಕಿದೆ. ಇಲ್ಲಿ ಸಹ ಕಾಂಗ್ರೆಸ್​ ಹಾಗೂ ಬಿಜೆಪಿ ನಡುವೆ ಪೈಪೋಟಿ ಇದ್ದು,ಬಿಜೆಪಿ 100-123 ಹಾಗೂ ಕಾಂಗ್ರೆಸ್ 102-125 ಸ್ಥಾನಗಳನ್ನು ಪಡೆಯಲಿದೆ ಎಂದು ಜನ್ ಕಿ ಬಾತ್ ಹೇಳಿದೆ. ಇನ್ನು ರಿಪಬ್ಲಿಕ್ ಟಿವಿ ಮ್ಯಾಟ್ರಿಜ್ ಸಮೀಕ್ಷೆ ಪ್ರಕಾರ ಬಿಜೆಪಿಗೆ 118-130 ಸಿಕ್ಕರೆ, ಕಾಂಗ್ರೆಸ್‌ಗೆ 97-107 ಸ್ಥಾನಗಳನ್ನು ಗಳಿಸುವ ಸಾಧ್ಯತೆ ಇದೆ.

ರಾಜಸ್ಥಾನ ಚುನಾವಣೆಯ ಭವಿಷ್ಯವಾಣಿ

ರಾಜಸ್ಥಾನದಲ್ಲೂ ಸಹ ಕಾಂಗ್ರೆಸ್​ ಮತ್ತು ಬಿಜೆಪಿ ನಡುವೆ ಜಿದ್ದಾಜಿದ್ದಿ ಇದ್ದು, ಯಾರೇ ಅಧಿಕಾರಕ್ಕೇರಬೇಕಿದ್ದರೆ ಒಟ್ಟು 199 ಕ್ಷೇತ್ರಗಳಲ್ಲಿ 100 ಸ್ಥಾನ ಗೆಲ್ಲಬೇಕಿದೆ. ಇಂಡಿಯಾ ಟುಡೇ-ಆಕ್ಸಿಸ್ ಮೈ ಇಂಡಿಯಾ ಸಮೀಕ್ಷೆ: ಕಾಂಗ್ರೆಸ್ ಶೇ 42 ಪ್ರತಿಶತ ಮತಗಳೊಂದಿಗೆ 86-106 ಸ್ಥಾನಗಳನ್ನು ಗಳಿಸಿದರೆ, ಬಿಜೆಪಿ 80-100 ಸ್ಥಾನಗಳನ್ನು ಪಡೆಯಲಿದೆ. ಇನ್ನು ಇಂಡಿಯಾ ಟಿವಿ-ಸಿಎನ್‌ಎಕ್ಸ್ ಸಮೀಕ್ಷೆ ಹೇಳುವ ಪ್ರಕಾರ ಶೇ 43 ಮತಗಳೊಂದಿಗೆ ಕಾಂಗ್ರೆಸ್‌ಗೆ 94-104 ಸ್ಥಾನಗಳು ಮತ್ತು ಶೇ 42 ಮತ ಪಡೆಯುವ ಮೂಲಕ ಬಿಜೆಪಿಗೆ 80-90 ಸ್ಥಾನಗಳನ್ನು ಪಡೆಯಲಿದೆ. ಇನ್ನು ಶೇ 38.98 ರಷ್ಟು ಮತ ಹಂಚಿಕೆಯೊಂದಿಗೆ ಕಾಂಗ್ರೆಸ್‌ಗೆ 56-72 ಸ್ಥಾನ ಸಿಕ್ಕರೆ, ಶೇ 41.88 ಮತ ಗಳಿಸುವ ಮೂಲಕ ಬಿಜೆಪಿ 108-128 ಸ್ಥಾನ ಪಡೆಯಲಿದೆ ಎಂದು ಟೈಮ್ಸ್ ನೌ-ಇಟಿಜಿ ಭವಿಷ್ಯ ನುಡಿದಿದೆ.

ಒಟ್ಟಿನಲ್ಲಿ ಈ ಫಲಿತಾಂಶ ಲೋಕಸಭಾ ಚುನಾವಣೆಯ ದಿಕ್ಸೂಚಿ ಎನ್ನಲಾಗಿದ್ದು, ಯಾರು ಮೇಲುಗೈ ಸಾಧಿಸಲಿದ್ದಾರೆ ಎನ್ನುವ ಕುತೂಹಲ ಮೂಡಿಸಿದೆ.

ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಹೊಸ ವರ್ಷದ ಕೊಡುಗೆ: ನೀವು ಬೆಳಗ್ಗೆ ಹಲ್ಲು ಉಜ್ಜೋ ಮುಂಚೆಯೇ ಬಾರ್ ಓಪನ್!
ಹೊಸ ವರ್ಷದ ಕೊಡುಗೆ: ನೀವು ಬೆಳಗ್ಗೆ ಹಲ್ಲು ಉಜ್ಜೋ ಮುಂಚೆಯೇ ಬಾರ್ ಓಪನ್!
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ