AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

West Bengal, Assam Voter Turnout: ಪಶ್ಚಿಮ ಬಂಗಾಳದಲ್ಲಿ ಶೇ 80.43, ಅಸ್ಸಾಂನಲ್ಲಿ ಶೇ 77 ಮತದಾನ

Assembly Elections 2021 Phase 2 Voting: ನಂದಿಗ್ರಾಮ ವಿಧಾನಸಭಾ ಕ್ಷೇತ್ರದಲ್ಲಿರುವ ಮತಗಟ್ಟೆಯೊಂದರಲ್ಲಿ ಮತದಾರರಿಗೆ ಮತದಾನ ಮಾಡಲು ಬಿಡುತ್ತಿಲ್ಲ ಎಂದು ಆರೋಪಿಸಿ ಮಮತಾ ಬ್ಯಾನರ್ಜಿ ಮತಗಟ್ಟೆಯಿಂದಲೇ ರಾಜ್ಯಪಾಲ ಜಗದೀಪ್ ಧನ್​ಕರ್ ಅವರಿಗೆ ಫೋನ್ ಮಾಡಿ ದೂರಿದ್ದಾರೆ.

West Bengal, Assam Voter Turnout: ಪಶ್ಚಿಮ ಬಂಗಾಳದಲ್ಲಿ ಶೇ 80.43, ಅಸ್ಸಾಂನಲ್ಲಿ ಶೇ 77 ಮತದಾನ
ಮಮತಾ ಬ್ಯಾನರ್ಜಿ
Follow us
ರಶ್ಮಿ ಕಲ್ಲಕಟ್ಟ
| Updated By: guruganesh bhat

Updated on:Apr 01, 2021 | 10:40 PM

ದೆಹಲಿ: ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಲ್ಲಿ ಎರಡನೇ ಹಂತದ ಮತದಾನ ಸಂಜೆ 6ಗಂಟೆಗೆ ಮುಗಿದಿದ್ದು, 5.30ರವರೆಗೆ ಅಸ್ಸಾಂನಲ್ಲಿ ಶೇ 77 ಮತ್ತು ಪಶ್ಚಿಮ ಬಂಗಾಳದಲ್ಲಿ ಶೇ 80.43 ಮತದಾನವಾಗಿದೆ. ಪಶ್ಚಿಮ ಬಂಗಾಳದ ಪ್ರತಿಷ್ಠಿತ ಕಣವಾದ ನಂದಿಗ್ರಾಮದಲ್ಲಿ ಇಂದು ಚುನಾವಣೆ ನಡೆದಿದ್ದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮತ್ತು ಬಿಜೆಪಿ ನಾಯಕ ಸುವೇಂದು ಅಧಿಕಾರಿ ಕಣದಲ್ಲಿದ್ದಾರೆ. ಎರಡನೇ ಹಂತದ ಮತದಾನದ ವೇಳೆ ಹಲವಾರು ಮತಗಟ್ಟೆಗಳಲ್ಲಿ ಅಹಿತಕರ ಘಟನೆಗಳು ನಡೆದಿದೆ.

ನಂದಿಗ್ರಾಮ ವಿಧಾನಸಭಾ ಕ್ಷೇತ್ರದಲ್ಲಿರುವ ಮತಗಟ್ಟೆಯೊಂದರಲ್ಲಿ ಮತದಾರರಿಗೆ ಮತದಾನ ಮಾಡಲು ಬಿಡುತ್ತಿಲ್ಲ ಎಂದು ಆರೋಪಿಸಿ ಮಮತಾ ಬ್ಯಾನರ್ಜಿ ಮತಗಟ್ಟೆಯಿಂದಲೇ ರಾಜ್ಯಪಾಲ ಜಗದೀಪ್ ಧನ್​ಕರ್ ಅವರಿಗೆ ಫೋನ್ ಮಾಡಿ ದೂರಿದ್ದಾರೆ. ಅವರು ಇಲ್ಲಿನ ಸ್ಥಳೀಯರಿಗೆ ಮತದಾನ ಮಾಡಲು ಬಿಡುತ್ತಿಲ್ಲ. ಬೆಳಗ್ಗಿನಿಂದ ನಾನು ಪ್ರಚಾರ ಮಾಡುತ್ತಿದ್ದೆ. ನೀವು ಇದನ್ನೊಮ್ಮೆ ದಯವಿಟ್ಟು ನೋಡಿ ಎಂದು ಮಮತಾ ಫೋನ್ ನಲ್ಲಿ ಹೇಳಿದ್ದಾರೆ.

ನಂದಿಗ್ರಾಮದ ಮತಗಟ್ಟೆಯಲ್ಲಿ ಹಿಂಸಾಚಾರ; ವರದಿ ಸಲ್ಲಿಸಲು ಆದೇಶಿಸಿದ ಚುನಾವಣಾ ಆಯೋಗ ನಂದಿಗ್ರಾಮದ ಬೋಯಲ್ ಪ್ರದೇಶದಲ್ಲಿ ನಡೆದ ಹಿಂಸಾಚಾರದ ಬಗ್ಗೆ ವರದಿ ಸಲ್ಲಿಸುವಂತೆ ಚುನಾವಣಾ ಆಯೋಗ ಜಿಲ್ಲಾಡಳಿತಕ್ಕೆ ನಿರ್ದೇಶಿಸಿದೆ. ಮತದಾನ ಪ್ರಕ್ರಿಯೆಯನ್ನು ನೋಡಲು ಮಮತಾ ಬ್ಯಾನರ್ಜಿ ಹಲವಾರು ಮತಗಟ್ಟೆಗಳಿಗೆ ಇಂದು ಭೇಟಿ ನೀಡಿದ್ದರು. ಮಮತಾ ಬ್ಯಾನರ್ಜಿ ಅವರು ಬೋಯಲ್ ಗೆ ತಲುಪಿದ ಕೂಡಲೇ ಬಿಜೆಪಿ ಬೆಂಬಲಿಗರು ಜೈಶ್ರೀರಾಂ ಘೋಷಣೆ ಕೂಗಲು ಆರಂಭಿಸಿದ್ದಾರೆ . ಟಿಎಂಸಿ ಮತ್ತು ಬಿಜೆಪಿ ಬೆಂಬಲಿಗರ ನಡುವೆ ಸಂಘರ್ಷವೇರ್ಪಟ್ಟಿದ್ದು ಬೂತ್ ಸಂಖ್ಯೆ 7ರಲ್ಲಿ ಮರು ಮತದಾನ ನಡೆಸಬೇಕು ಎಂದು ಟಿಎಂಸಿ ನಾಯಕರು ಒತ್ತಾಯಿಸಿದ್ದಾರೆ.

ಚುನಾವಣಾ ಆಯೋಗದ ವಿರುದ್ಧ ಕಿಡಿ ಕಾರಿದ ಮಮತಾ ನಂದಿಗ್ರಾಮ ವಿಧಾನಸಭಾ ಕ್ಷೇತ್ರದಲ್ಲಿ ಅಹಿತಕರ ಘಟನೆ ನಡೆದಿದ್ದು, ಈ ಬಗ್ಗೆ ಚುನಾವಣಾ ಆಯೋಗ ಯಾವುದೇ ಕ್ರಮ ಕೈಗೊಂಡಿಲ್ಲ. ಬೆಳಗ್ಗಿನಿಂದ ಇಲ್ಲಿಯವರೆಗೆ ನಮ್ಮ ಪಕ್ಷ 63 ದೂರುಗಳನ್ನು ನೀಡಿದೆ. ಆದರೆ ಯಾವುದೇ ಕ್ರಮ ತೆಗೆದುಕೊಳ್ಳಲು ಚುನಾವಣಾ ಆಯೋಗ ಮುಂದಾಗಿಲ್ಲ ಇದು ಸರಿಯಲ್ಲ. ಇದನ್ನು ಪ್ರಶ್ನಿಸಿ ನಾವು ಕೋರ್ಟ್ ಮೆಟ್ಟಿಲೇರುತ್ತೇವೆ ಎಂದಿದ್ದಾರೆ ಮಮತಾ. ನಂದಿಗ್ರಾಮದ ಬೋಯಲ್ ಪ್ರದೇಶದಲ್ಲಿ ಬೂತ್ ಸಂಖ್ಯೆ 7ರ ಹೊರಗೆ ಗಾಲಿ ಕುರ್ಚಿಯಲ್ಲಿ ಕುಳಿತ ಮಮತಾ, ಚುನಾವಣಾ ಆಯೋಗವು ಅಮಿತ್ ಶಾ ಅವರ ಅಣತಿಯಂತೆ ಕಾರ್ಯವೆಸಗುತ್ತಿದೆ. ಇಲ್ಲಿ ಸಮಸ್ಯೆ ಸೃಷ್ಟಿಸುವುದಕ್ಕಾಗಿಯೇ ಹೊರಗಿನ ರಾಜ್ಯಗಳಿಂದ ಗೂಂಡಾಗಳನ್ನು ಕರೆತರಲಾಗಿದೆ ಎಂದು ಆರೋಪಿಸಿದ್ದಾರೆ.

ಮಮತಾ ಮತದಾರರನ್ನು ಅವಮಾನಿಸುತ್ತಿದ್ದಾರೆ: ಸುವೇಂದು ಅಧಿಕಾರಿ ಮಮತಾ ಬ್ಯಾನರ್ಜಿ ಅವರು ಮತದಾರರನ್ನು ಅವಮಾನಿಸುತ್ತಿದ್ದಾರೆ. ನಂದಿಗ್ರಾಮದ ಜನರನ್ನು ಅವಮಾನಿಸುವುದು ಅವರ ಹವ್ಯಾಸ ಆಗಿಬಿಟ್ಟಿದೆ. ಅಪಘಾತದಲ್ಲಿ ಅವರಿಗೆ ಗಾಯವಾಗಿತು, ಅದನ್ನೇ ಅವರು ದೊಡ್ಡದು ಮಾಡಿ ಆರೋಪ ಮಾಡಿದರು. ರಾಜ್ಯಪಾಲರು ಸಂವಿಧಾನಿಕ ಹುದ್ದೆಯಲ್ಲಿರುವವರು. ಅವರಲ್ಲಿ ಆಕೆ ಮಾತನಾಡಬಹುದು ಸಮಸ್ಯೆ ಏನಿಲ್ಲ. ಚುನಾವಣೆ ನಡೆಸುತ್ತಿರುವುದು ಚುನಾವಣಾ ಆಯೋಗ, ರಾಜ್ಯಪಾಲರು ಅಥವಾ ರಾಷ್ಟ್ರಪತಿ ಅಲ್ಲ ಎಂದು ಬಿಜೆಪಿ ನಾಯಕ ಸುವೇಂದು ಅಧಿಕಾರಿ ಹೇಳಿದ್ದಾರೆ.

ಇದನ್ನೂ ಓದಿ: Assam, West Bengal Elections 2021: ಪಶ್ಚಿಮ ಬಂಗಾಳದಲ್ಲಿ ಶೇಕಡಾ 37.42, ಅಸ್ಸಾಂನಲ್ಲಿ ಶೇ 33.24 ಮತದಾನ

(Assembly Elections 2nd Phase West Bengal sees 80.43 percent while Assam has recorded 73.03 percent turnout till 5.30 pm)

Published On - 7:19 pm, Thu, 1 April 21

ಹಣ ಪಡೆದು ನಿರ್ಮಾಪಕಿಯ ಸತಾಯಿಸಿದರೇ ರಚಿತಾ ರಾಮ್, ವಿವರ ಇಲ್ಲಿದೆ
ಹಣ ಪಡೆದು ನಿರ್ಮಾಪಕಿಯ ಸತಾಯಿಸಿದರೇ ರಚಿತಾ ರಾಮ್, ವಿವರ ಇಲ್ಲಿದೆ
ನಂದಿನಿ ಉತ್ಪನ್ನಗಳ ಕಿಯಾಸ್ಕ್​ಗಳು 8 ನಿಲ್ದಾಣಗಳಲ್ಲಿ ಬರಲಿವೆ: ಶಿವಕುಮಾರ್
ನಂದಿನಿ ಉತ್ಪನ್ನಗಳ ಕಿಯಾಸ್ಕ್​ಗಳು 8 ನಿಲ್ದಾಣಗಳಲ್ಲಿ ಬರಲಿವೆ: ಶಿವಕುಮಾರ್
ಥಗ್ ಲೈಫ್ ರಿಲೀಸ್ ಆದರೆ ನಾವೇ ಟಿಕೆಟ್ ಖರೀದಿಸಿ ನೋಡ್ತಿವಿ: ಪ್ರವೀಣ್ ಶೆಟ್ಟಿ
ಥಗ್ ಲೈಫ್ ರಿಲೀಸ್ ಆದರೆ ನಾವೇ ಟಿಕೆಟ್ ಖರೀದಿಸಿ ನೋಡ್ತಿವಿ: ಪ್ರವೀಣ್ ಶೆಟ್ಟಿ
ಮಿನಿಸ್ಟರ್ ಜಮೀರ್ ಅಹ್ಮದ್ ಖಾನ್ ಸಾಹಬ್​ ಕೋ ಗುಸ್ಸಾ ಕ್ಯೋಂ ಆತಾ ಹೈ?
ಮಿನಿಸ್ಟರ್ ಜಮೀರ್ ಅಹ್ಮದ್ ಖಾನ್ ಸಾಹಬ್​ ಕೋ ಗುಸ್ಸಾ ಕ್ಯೋಂ ಆತಾ ಹೈ?
ರಿಹ್ಯಾಬ್ ಸೆಂಟರ್​ಗಳ ಮೇಲೆ ಮಾನವ ಹಕ್ಕುಗಳ ಆಯೋಗ ದಾಳಿ
ರಿಹ್ಯಾಬ್ ಸೆಂಟರ್​ಗಳ ಮೇಲೆ ಮಾನವ ಹಕ್ಕುಗಳ ಆಯೋಗ ದಾಳಿ
ಮರದ ಕೊಂಬೆ ಬಿದ್ದು ಅಕ್ಷಯ್​ ಬ್ರೈನ್ ಡೆಡ್:ಮೊಮ್ಮಗನಿಗಾಗಿ ಅಜ್ಜ-ಅಜ್ಜಿ ಪೂಜೆ
ಮರದ ಕೊಂಬೆ ಬಿದ್ದು ಅಕ್ಷಯ್​ ಬ್ರೈನ್ ಡೆಡ್:ಮೊಮ್ಮಗನಿಗಾಗಿ ಅಜ್ಜ-ಅಜ್ಜಿ ಪೂಜೆ
ಟೆಂಡರ್ ಪ್ರಕ್ರಿಯೆಯಲ್ಲಿ ನಂದಿನಿ ಸಂಸ್ಥೆ ಭಾಗಿಯಾಗಿರಲಿಲ್ಲ: ಅಧಿಕಾರಿಗಳು
ಟೆಂಡರ್ ಪ್ರಕ್ರಿಯೆಯಲ್ಲಿ ನಂದಿನಿ ಸಂಸ್ಥೆ ಭಾಗಿಯಾಗಿರಲಿಲ್ಲ: ಅಧಿಕಾರಿಗಳು
ಕಾರ್ಯಕ್ರಮದಲ್ಲಿ ಶಿವಕುಮಾರ್​ಗೆ ಭಾರೀ ಕರತಾಡನ ಮತ್ತು ಶಿಳ್ಳೆ
ಕಾರ್ಯಕ್ರಮದಲ್ಲಿ ಶಿವಕುಮಾರ್​ಗೆ ಭಾರೀ ಕರತಾಡನ ಮತ್ತು ಶಿಳ್ಳೆ
ನಂದಿನಿ ದೇಶದ ಬೇರೆ ಬೇರೆ ಭಾಗಗಳಲ್ಲಿ ಮಳಿಗೆಗಳನ್ನು ಸ್ಥಾಪಿಸಿದೆ: ಸಿಟಿ ರವಿ
ನಂದಿನಿ ದೇಶದ ಬೇರೆ ಬೇರೆ ಭಾಗಗಳಲ್ಲಿ ಮಳಿಗೆಗಳನ್ನು ಸ್ಥಾಪಿಸಿದೆ: ಸಿಟಿ ರವಿ
ರಾಜಾ ರಘುವಂಶಿ ಹನಿಮೂನ್​ಗೆಂದು ಮನೆಯಿಂದ ಹೊರಟ ವಿಡಿಯೋ
ರಾಜಾ ರಘುವಂಶಿ ಹನಿಮೂನ್​ಗೆಂದು ಮನೆಯಿಂದ ಹೊರಟ ವಿಡಿಯೋ