AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Manish Sisodia: ದೆಹಲಿ ಮದ್ಯ ನೀತಿ ಪ್ರಕರಣದಲ್ಲಿ ಮನೀಶ್ ಸಿಸೋಡಿಯಾ, ಇತರ ಆರೋಪಿಗಳ ಆಸ್ತಿ ಜಪ್ತಿ

ವಶಪಡಿಸಿಕೊಂಡ ಆಸ್ತಿಗಳಲ್ಲಿ ಅಮನ್​​ದೀಪ್ ಸಿಂಗ್ ಧಾಲ್, ರಾಜೇಶ್ ಜೋಶಿ, ಗೌತಮ್ ಮಲ್ಹೋತ್ರಾ ಮತ್ತು ಕೆಲವರ ಆಸ್ತಿ ಸೇರಿದೆ. ಸಿಸೋಡಿಯಾ ಮತ್ತು ಅವರ ಪತ್ನಿ ಸೀಮಾ ಅವರ ಎರಡು ಆಸ್ತಿಗಳು ಮತ್ತು ಅವರ ಬ್ಯಾಂಕ್ ಖಾತೆಗಳಲ್ಲಿದ್ದ ₹ 11 ಲಕ್ಷವನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಮೂಲಗಳು ತಿಳಿಸಿವೆ.

Manish Sisodia: ದೆಹಲಿ ಮದ್ಯ ನೀತಿ ಪ್ರಕರಣದಲ್ಲಿ ಮನೀಶ್ ಸಿಸೋಡಿಯಾ, ಇತರ ಆರೋಪಿಗಳ ಆಸ್ತಿ ಜಪ್ತಿ
ಮನೀಶ್ ಸಿಸೋಡಿಯಾ
ರಶ್ಮಿ ಕಲ್ಲಕಟ್ಟ
ರಶ್ಮಿ ಕಲ್ಲಕಟ್ಟ|

Updated on:Jul 07, 2023 | 8:01 PM

Share

ದೆಹಲಿ: ದೆಹಲಿ ಮದ್ಯ ನೀತಿ ಪ್ರಕರಣದಲ್ಲಿ (Delhi Liquor Policy Case) ಜೈಲಿನಲ್ಲಿರುವ ಆಮ್ ಆದ್ಮಿ ಪಕ್ಷದ ನಾಯಕ ಮನೀಶ್ ಸಿಸೋಡಿಯಾ (Manish Sisodia) ಮತ್ತು ಇತರ ಆರೋಪಿಗಳಿಂದ ₹ 52 ಕೋಟಿಗಿಂತಲೂ ಹೆಚ್ಚು ಮೌಲ್ಯದ ಆಸ್ತಿಯನ್ನು ಜಾರಿ ನಿರ್ದೇಶನಾಲಯ (Enforcement Directorate) ಜಪ್ತಿ ಮಾಡಿದೆ ಎಂದು ಎನ್​​​ಡಿಟಿವಿ ವರದಿ ಮಾಡಿದೆ. ವಶಪಡಿಸಿಕೊಂಡ ಆಸ್ತಿಗಳಲ್ಲಿ ಅಮನ್​​ದೀಪ್ ಸಿಂಗ್ ಧಾಲ್, ರಾಜೇಶ್ ಜೋಶಿ, ಗೌತಮ್ ಮಲ್ಹೋತ್ರಾ ಮತ್ತು ಕೆಲವರ ಆಸ್ತಿ ಸೇರಿದೆ. ಸಿಸೋಡಿಯಾ ಮತ್ತು ಅವರ ಪತ್ನಿ ಸೀಮಾ ಅವರ ಎರಡು ಆಸ್ತಿಗಳು ಮತ್ತು ಅವರ ಬ್ಯಾಂಕ್ ಖಾತೆಗಳಲ್ಲಿದ್ದ ₹ 11 ಲಕ್ಷವನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಮೂಲಗಳು ತಿಳಿಸಿವೆ.

ಸಿಸೋಡಿಯಾ ಅವರ ನಿಕಟವರ್ತಿ ದಿಲ್ಲಿಯ ಉದ್ಯಮಿ ದಿನೇಶ್ ಅರೋರಾ ಅವರನ್ನು ಬಂಧಿಸಿದ ಒಂದು ದಿನದ ನಂತರ ಜಾರಿ ನಿರ್ದೇಶನಾಲಯ ಈ ರೀತಿ ಆಸ್ತಿ ಜಪ್ತಿ ಮಾಡಿದೆ.ದೆಹಲಿಯ ಮದ್ಯ ನೀತಿ ಹಗರಣಕ್ಕೆ ಸಂಬಂಧಿಸಿದ ಇಡಿ ಪ್ರಕರಣವು ಕೇಂದ್ರೀಯ ತನಿಖಾ ದಳ (ಸಿಬಿಐ) ತನಿಖೆ ನಡೆಸುತ್ತಿರುವ ಪ್ರಕರಣಕ್ಕಿಂತ ಭಿನ್ನವಾಗಿದೆ.

ದೆಹಲಿಯ ಮಾಜಿ ಉಪಮುಖ್ಯಮಂತ್ರಿ  ಸಿಸೋಡಿಯಾ ಮತ್ತು ಇತರರು ದೆಹಲಿಯಲ್ಲಿ ಹೊಸ ಮದ್ಯ ಮಾರಾಟ ನೀತಿಯನ್ನು ತಂದ ವಿಚಾರದಲ್ಲಿ ಭ್ರಷ್ಟಾಚಾರದ ಆರೋಪಗಳನ್ನು ಎದುರಿಸುತ್ತಿದ್ದಾರೆ. ಅವ್ಯವಹಾರ ಬಗ್ಗೆ ಲೆಫ್ಟಿನೆಂಟ್ ಗವರ್ನರ್ ವಿಕೆ ಸಕ್ಸೇನಾ ಕಳೆದ ವರ್ಷ ಸಿಬಿಐ ತನಿಖೆಗೆ ಆದೇಶಿಸಿದ್ದರು.

ಇದಾದ ನಂತರ ದೆಹಲಿ ಸರ್ಕಾರವು ಹಳೆಯ ಮದ್ಯದ ನೀತಿಗೆ ಮರಳಿತು. ಏತನ್ಮಧ್ಯೆ ಅಬಕಾರಿ ಇಲಾಖೆಯಲ್ಲಿನ ಭ್ರಷ್ಟಾಚಾರವನ್ನು ಮುಚ್ಚಿಹಾಕಲು ದೆಹಲಿ ಸರ್ಕಾರವು ಹಳೆಯ ಮದ್ಯ ಮಾರಾಟ ನೀತಿಗೆ ಮರಳಿದೆ ಎಂದು ಬಿಜೆಪಿ ಹೇಳಿದೆ.

ಇದನ್ನೂ ಓದಿಮೋದಿ ಉಪನಾಮ ಪ್ರಕರಣದಲ್ಲಿ ಸಾವರ್ಕರ್ ವಿಷಯ ಪ್ರಸ್ತಾಪಿಸಿದ ಗುಜರಾತ್ ಹೈಕೋರ್ಟ್; ಕಾಂಗ್ರೆಸ್ ಕಿಡಿ

ಮಧ್ಯವರ್ತಿಗಳು, ವ್ಯಾಪಾರಿಗಳು ಮತ್ತು ಅಧಿಕಾರಶಾಹಿಗಳನ್ನು ಬಳಸಿಕೊಂಡು ತಮ್ಮ ಪರವಾಗಿ ದೆಹಲಿ ಮದ್ಯ ನೀತಿಯನ್ನು ರೂಪಿಸುವ ಉದ್ಯಮಿಗಳು ಮತ್ತು ರಾಜಕಾರಣಿಗಳ “ದಕ್ಷಿಣ ಲಾಬಿ” ಪ್ರಭಾವದ ಮೇಲೆ ಸಿಬಿಐ ತನಿಖೆ ಕೇಂದ್ರೀಕರಿಸಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 7:47 pm, Fri, 7 July 23

Follow Us
Rashmi Kallakatta
Rashmi Kallakatta

ಊರು ಕಾಸರಗೋಡು. ಓದಿದ್ದು ಇಂಜಿನಿಯರಿಂಗ್, ಪಬ್ಲಿಕ್ ಅಡ್ಮಿನಿಸ್ಟ್ರೇಷನ್ ಮತ್ತು ಇಂಗ್ಲಿಷ್ ಸ್ನಾತಕೋತ್ತರ ಪದವಿ. ಕನ್ನಡಪ್ರಭ, ಪ್ರಜಾವಾಣಿ ಡಿಜಿಟಲ್ ಮತ್ತು ಪ್ರಿಂಟ್ ವಿಭಾಗದಲ್ಲಿ ಕೆಲಸದ ಅನುಭವ. ಬ್ಲಾಗರ್, ಸಾಹಿತ್ಯ ಪ್ರೇಮಿ. ಇಲ್ಲಿವರೆಗೆ 2 ಪುಸ್ತಕಗಳು ಪ್ರಕಟವಾಗಿವೆ. ಕಲೆ,ಸಾಹಿತ್ಯ,ತಂತ್ರಜ್ಞಾನ,ಸಂದರ್ಶನ, ಫ್ಯಾಕ್ಟ್ ಚೆಕಿಂಗ್ ಆಸಕ್ತಿಕರ ವಿಷಯಗಳು. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷ ಅನುಭವ

ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ‘ಶಿವ ತಾಂಡವ’ ರಂಗು!
ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ‘ಶಿವ ತಾಂಡವ’ ರಂಗು!
ಐಪಿಎಲ್ ಫೈನಲ್: ಬೆಂಗಳೂರಿನಲ್ಲಿ ಖಾಕಿ ಸರ್ಪಗಾವಲು; ತೀವ್ರ ಕಟ್ಟೆಚ್ಚರ
ಐಪಿಎಲ್ ಫೈನಲ್: ಬೆಂಗಳೂರಿನಲ್ಲಿ ಖಾಕಿ ಸರ್ಪಗಾವಲು; ತೀವ್ರ ಕಟ್ಟೆಚ್ಚರ
ಬಾಗೇಪಲ್ಲಿ ಭೀಕರ ರಸ್ತೆ ಅಪಘಾತ ಪ್ರಕರಣ: ಎಸ್‌ಪಿ ಬಿಗ್ ಸ್ಟೇಟ್‌ಮೆಂಟ್
ಬಾಗೇಪಲ್ಲಿ ಭೀಕರ ರಸ್ತೆ ಅಪಘಾತ ಪ್ರಕರಣ: ಎಸ್‌ಪಿ ಬಿಗ್ ಸ್ಟೇಟ್‌ಮೆಂಟ್
ಪ್ರಮಾಣವಚನ ದಿನವೇ ಕಾಂಗ್ರೆಸ್ ಭವನ ಶಂಕುಸ್ಥಾಪನೆಗೆ ಡಿಕೆಶಿ ಪ್ಲ್ಯಾನ್​
ಪ್ರಮಾಣವಚನ ದಿನವೇ ಕಾಂಗ್ರೆಸ್ ಭವನ ಶಂಕುಸ್ಥಾಪನೆಗೆ ಡಿಕೆಶಿ ಪ್ಲ್ಯಾನ್​
ಪವರ್​ ಪ್ಲೇನಲ್ಲೇ ಗುಜರಾತ್ ಪವರ್ ಕಸಿದ ಆರ್​ಸಿಬಿ
ಪವರ್​ ಪ್ಲೇನಲ್ಲೇ ಗುಜರಾತ್ ಪವರ್ ಕಸಿದ ಆರ್​ಸಿಬಿ
ಆರ್​​ಸಿಬಿ ಫ್ಯಾನ್ಸ್‌ಗೆ ಬೆಂಗಳೂರು ಕಮಿಷನರ್ ಕಠಿಣ ವಾರ್ನಿಂಗ್!
ಆರ್​​ಸಿಬಿ ಫ್ಯಾನ್ಸ್‌ಗೆ ಬೆಂಗಳೂರು ಕಮಿಷನರ್ ಕಠಿಣ ವಾರ್ನಿಂಗ್!
ಸಿದ್ ಶ್ರೀರಾಮ್ ಗಾಯನಕ್ಕೆ ಹಿನ್ನೆಲೆ ಸಂಗೀತದ ಅವಶ್ಯಕತೆಯೇ ಇಲ್ಲ: ವಿಡಿಯೋ
ಸಿದ್ ಶ್ರೀರಾಮ್ ಗಾಯನಕ್ಕೆ ಹಿನ್ನೆಲೆ ಸಂಗೀತದ ಅವಶ್ಯಕತೆಯೇ ಇಲ್ಲ: ವಿಡಿಯೋ
ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಬಿಗ್​​ ಅಪ್ಡೇಡ್​​ ನೀಡಿದ ಡಿ.ಕೆ ಶಿವಕುಮಾರ್
ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಬಿಗ್​​ ಅಪ್ಡೇಡ್​​ ನೀಡಿದ ಡಿ.ಕೆ ಶಿವಕುಮಾರ್
ಶ್ರೀ ಕೃಷ್ಣನ ಸನ್ನಿಧಾನದಲ್ಲಿ ವಸಿಷ್ಠ ಸಿಂಹ, ಹರಿಪ್ರಿಯ ದಂಪತಿ: ವಿಡಿಯೋ
ಶ್ರೀ ಕೃಷ್ಣನ ಸನ್ನಿಧಾನದಲ್ಲಿ ವಸಿಷ್ಠ ಸಿಂಹ, ಹರಿಪ್ರಿಯ ದಂಪತಿ: ವಿಡಿಯೋ
ಪುತ್ರಿ ರೂಪಾ ಶಶಿಧರ್ ಸಚಿವ ಸ್ಥಾನ ನೀಡುವ ಬಗ್ಗೆ ಮಹತ್ವದ ಹೇಳಿಕೆ
ಪುತ್ರಿ ರೂಪಾ ಶಶಿಧರ್ ಸಚಿವ ಸ್ಥಾನ ನೀಡುವ ಬಗ್ಗೆ ಮಹತ್ವದ ಹೇಳಿಕೆ