AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Manish Sisodia: ದೆಹಲಿ ಮದ್ಯ ನೀತಿ ಪ್ರಕರಣದಲ್ಲಿ ಮನೀಶ್ ಸಿಸೋಡಿಯಾ, ಇತರ ಆರೋಪಿಗಳ ಆಸ್ತಿ ಜಪ್ತಿ

ವಶಪಡಿಸಿಕೊಂಡ ಆಸ್ತಿಗಳಲ್ಲಿ ಅಮನ್​​ದೀಪ್ ಸಿಂಗ್ ಧಾಲ್, ರಾಜೇಶ್ ಜೋಶಿ, ಗೌತಮ್ ಮಲ್ಹೋತ್ರಾ ಮತ್ತು ಕೆಲವರ ಆಸ್ತಿ ಸೇರಿದೆ. ಸಿಸೋಡಿಯಾ ಮತ್ತು ಅವರ ಪತ್ನಿ ಸೀಮಾ ಅವರ ಎರಡು ಆಸ್ತಿಗಳು ಮತ್ತು ಅವರ ಬ್ಯಾಂಕ್ ಖಾತೆಗಳಲ್ಲಿದ್ದ ₹ 11 ಲಕ್ಷವನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಮೂಲಗಳು ತಿಳಿಸಿವೆ.

Manish Sisodia: ದೆಹಲಿ ಮದ್ಯ ನೀತಿ ಪ್ರಕರಣದಲ್ಲಿ ಮನೀಶ್ ಸಿಸೋಡಿಯಾ, ಇತರ ಆರೋಪಿಗಳ ಆಸ್ತಿ ಜಪ್ತಿ
ಮನೀಶ್ ಸಿಸೋಡಿಯಾ
ರಶ್ಮಿ ಕಲ್ಲಕಟ್ಟ
|

Updated on:Jul 07, 2023 | 8:01 PM

Share

ದೆಹಲಿ: ದೆಹಲಿ ಮದ್ಯ ನೀತಿ ಪ್ರಕರಣದಲ್ಲಿ (Delhi Liquor Policy Case) ಜೈಲಿನಲ್ಲಿರುವ ಆಮ್ ಆದ್ಮಿ ಪಕ್ಷದ ನಾಯಕ ಮನೀಶ್ ಸಿಸೋಡಿಯಾ (Manish Sisodia) ಮತ್ತು ಇತರ ಆರೋಪಿಗಳಿಂದ ₹ 52 ಕೋಟಿಗಿಂತಲೂ ಹೆಚ್ಚು ಮೌಲ್ಯದ ಆಸ್ತಿಯನ್ನು ಜಾರಿ ನಿರ್ದೇಶನಾಲಯ (Enforcement Directorate) ಜಪ್ತಿ ಮಾಡಿದೆ ಎಂದು ಎನ್​​​ಡಿಟಿವಿ ವರದಿ ಮಾಡಿದೆ. ವಶಪಡಿಸಿಕೊಂಡ ಆಸ್ತಿಗಳಲ್ಲಿ ಅಮನ್​​ದೀಪ್ ಸಿಂಗ್ ಧಾಲ್, ರಾಜೇಶ್ ಜೋಶಿ, ಗೌತಮ್ ಮಲ್ಹೋತ್ರಾ ಮತ್ತು ಕೆಲವರ ಆಸ್ತಿ ಸೇರಿದೆ. ಸಿಸೋಡಿಯಾ ಮತ್ತು ಅವರ ಪತ್ನಿ ಸೀಮಾ ಅವರ ಎರಡು ಆಸ್ತಿಗಳು ಮತ್ತು ಅವರ ಬ್ಯಾಂಕ್ ಖಾತೆಗಳಲ್ಲಿದ್ದ ₹ 11 ಲಕ್ಷವನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಮೂಲಗಳು ತಿಳಿಸಿವೆ.

ಸಿಸೋಡಿಯಾ ಅವರ ನಿಕಟವರ್ತಿ ದಿಲ್ಲಿಯ ಉದ್ಯಮಿ ದಿನೇಶ್ ಅರೋರಾ ಅವರನ್ನು ಬಂಧಿಸಿದ ಒಂದು ದಿನದ ನಂತರ ಜಾರಿ ನಿರ್ದೇಶನಾಲಯ ಈ ರೀತಿ ಆಸ್ತಿ ಜಪ್ತಿ ಮಾಡಿದೆ.ದೆಹಲಿಯ ಮದ್ಯ ನೀತಿ ಹಗರಣಕ್ಕೆ ಸಂಬಂಧಿಸಿದ ಇಡಿ ಪ್ರಕರಣವು ಕೇಂದ್ರೀಯ ತನಿಖಾ ದಳ (ಸಿಬಿಐ) ತನಿಖೆ ನಡೆಸುತ್ತಿರುವ ಪ್ರಕರಣಕ್ಕಿಂತ ಭಿನ್ನವಾಗಿದೆ.

ದೆಹಲಿಯ ಮಾಜಿ ಉಪಮುಖ್ಯಮಂತ್ರಿ  ಸಿಸೋಡಿಯಾ ಮತ್ತು ಇತರರು ದೆಹಲಿಯಲ್ಲಿ ಹೊಸ ಮದ್ಯ ಮಾರಾಟ ನೀತಿಯನ್ನು ತಂದ ವಿಚಾರದಲ್ಲಿ ಭ್ರಷ್ಟಾಚಾರದ ಆರೋಪಗಳನ್ನು ಎದುರಿಸುತ್ತಿದ್ದಾರೆ. ಅವ್ಯವಹಾರ ಬಗ್ಗೆ ಲೆಫ್ಟಿನೆಂಟ್ ಗವರ್ನರ್ ವಿಕೆ ಸಕ್ಸೇನಾ ಕಳೆದ ವರ್ಷ ಸಿಬಿಐ ತನಿಖೆಗೆ ಆದೇಶಿಸಿದ್ದರು.

ಇದಾದ ನಂತರ ದೆಹಲಿ ಸರ್ಕಾರವು ಹಳೆಯ ಮದ್ಯದ ನೀತಿಗೆ ಮರಳಿತು. ಏತನ್ಮಧ್ಯೆ ಅಬಕಾರಿ ಇಲಾಖೆಯಲ್ಲಿನ ಭ್ರಷ್ಟಾಚಾರವನ್ನು ಮುಚ್ಚಿಹಾಕಲು ದೆಹಲಿ ಸರ್ಕಾರವು ಹಳೆಯ ಮದ್ಯ ಮಾರಾಟ ನೀತಿಗೆ ಮರಳಿದೆ ಎಂದು ಬಿಜೆಪಿ ಹೇಳಿದೆ.

ಇದನ್ನೂ ಓದಿಮೋದಿ ಉಪನಾಮ ಪ್ರಕರಣದಲ್ಲಿ ಸಾವರ್ಕರ್ ವಿಷಯ ಪ್ರಸ್ತಾಪಿಸಿದ ಗುಜರಾತ್ ಹೈಕೋರ್ಟ್; ಕಾಂಗ್ರೆಸ್ ಕಿಡಿ

ಮಧ್ಯವರ್ತಿಗಳು, ವ್ಯಾಪಾರಿಗಳು ಮತ್ತು ಅಧಿಕಾರಶಾಹಿಗಳನ್ನು ಬಳಸಿಕೊಂಡು ತಮ್ಮ ಪರವಾಗಿ ದೆಹಲಿ ಮದ್ಯ ನೀತಿಯನ್ನು ರೂಪಿಸುವ ಉದ್ಯಮಿಗಳು ಮತ್ತು ರಾಜಕಾರಣಿಗಳ “ದಕ್ಷಿಣ ಲಾಬಿ” ಪ್ರಭಾವದ ಮೇಲೆ ಸಿಬಿಐ ತನಿಖೆ ಕೇಂದ್ರೀಕರಿಸಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 7:47 pm, Fri, 7 July 23

Follow Us
ನ್ಯಾಯ ಬೇಕು ಎಂದು 9 ಮಹಡಿಗಳ ಬಿಲ್ಡಿಂಗ್ ಏರಿ ಯುವಕನ ಹೈಡ್ರಾಮಾ
ನ್ಯಾಯ ಬೇಕು ಎಂದು 9 ಮಹಡಿಗಳ ಬಿಲ್ಡಿಂಗ್ ಏರಿ ಯುವಕನ ಹೈಡ್ರಾಮಾ
ವ್ಯಾನ್ ಪುಡಿಪುಡಿ, ಮೈ ಜುಂ ಎನಿಸುವ ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ಸೆರೆ
ವ್ಯಾನ್ ಪುಡಿಪುಡಿ, ಮೈ ಜುಂ ಎನಿಸುವ ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ಸೆರೆ
SSLC ಹಿಂದಿ ಗೊಂದಲ: ಫಲಿತಾಂಶ ವಿಳಂಬ, ಸಚಿವರು ಹೇಳಿದ್ದೇನು?
SSLC ಹಿಂದಿ ಗೊಂದಲ: ಫಲಿತಾಂಶ ವಿಳಂಬ, ಸಚಿವರು ಹೇಳಿದ್ದೇನು?
ಡಿಎಂಕೆ ಪರ ನಿಂತ ಕಾಂಗ್ರೆಸ್ ವಿರುದ್ಧ ಜೆಡಿಎಸ್​​ ಕಿಡಿ: ಕಾರಣ ಇಲ್ಲಿದೆ
ಡಿಎಂಕೆ ಪರ ನಿಂತ ಕಾಂಗ್ರೆಸ್ ವಿರುದ್ಧ ಜೆಡಿಎಸ್​​ ಕಿಡಿ: ಕಾರಣ ಇಲ್ಲಿದೆ
ಟಿಪ್ಪರ್​ ಅಡಿಗೆ ಬಿದ್ದು ಯುವಕ ಆತ್ಮಹತ್ಯೆ: ಭಯಾನಕ ದೃಶ್ಯ ಇಲ್ಲಿದೆ
ಟಿಪ್ಪರ್​ ಅಡಿಗೆ ಬಿದ್ದು ಯುವಕ ಆತ್ಮಹತ್ಯೆ: ಭಯಾನಕ ದೃಶ್ಯ ಇಲ್ಲಿದೆ
HDK ಜತೆ ರಹಸ್ಯ ಮಾತುಕತೆ, ಜೆಡಿಎಸ್ ಸೇರ್ಪಡೆ ಬಗ್ಗೆ ಜಮೀರ್ ಹೇಳಿದ್ದೇನು?
HDK ಜತೆ ರಹಸ್ಯ ಮಾತುಕತೆ, ಜೆಡಿಎಸ್ ಸೇರ್ಪಡೆ ಬಗ್ಗೆ ಜಮೀರ್ ಹೇಳಿದ್ದೇನು?
ಅನಾಥವಾಗಿ ಪ್ರಾಣಬಿಟ್ಟ ತಾಯಿ: ಅಂತ್ಯಕ್ರಿಯೆಗೂ ಒಲ್ಲೆ ಎಂದ ಇವರೆಂಥ ಪುತ್ರರು?
ಅನಾಥವಾಗಿ ಪ್ರಾಣಬಿಟ್ಟ ತಾಯಿ: ಅಂತ್ಯಕ್ರಿಯೆಗೂ ಒಲ್ಲೆ ಎಂದ ಇವರೆಂಥ ಪುತ್ರರು?
KSRTC ಬಸ್ ಪಲ್ಟಿ: ತಪ್ಪಿದ ಭಾರಿ ದುರಂತ, 40 ಪ್ರಯಾಣಿಕರು ಪಾರು!
KSRTC ಬಸ್ ಪಲ್ಟಿ: ತಪ್ಪಿದ ಭಾರಿ ದುರಂತ, 40 ಪ್ರಯಾಣಿಕರು ಪಾರು!
ದೇವನಹಳ್ಳಿಯಲ್ಲಿ ಬೆಳ್ಳಂ ಬೆಳಿಗ್ಗೆ RTO ಅಧಿಕಾರಿಗಳ ಕಾರ್ಯಾಚರಣೆ
ದೇವನಹಳ್ಳಿಯಲ್ಲಿ ಬೆಳ್ಳಂ ಬೆಳಿಗ್ಗೆ RTO ಅಧಿಕಾರಿಗಳ ಕಾರ್ಯಾಚರಣೆ
ಲೆನ್ಸ್‌ಕಾರ್ಟ್ ಉದ್ಯೋಗಿಗಳಿಗೆ ತಿಲಕವಿಟ್ಟ ಬಿಜೆಪಿ ನಾಯಕಿ ನಾಜಿಯಾ ಇಲಾಹಿ
ಲೆನ್ಸ್‌ಕಾರ್ಟ್ ಉದ್ಯೋಗಿಗಳಿಗೆ ತಿಲಕವಿಟ್ಟ ಬಿಜೆಪಿ ನಾಯಕಿ ನಾಜಿಯಾ ಇಲಾಹಿ