AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತದಲ್ಲಿ ಹೆಚ್ಚುತ್ತಿರುವ ಕೊರೊನಾ ಸೋಂಕು: ಲಸಿಕೆ ರಫ್ತಿಗೆ ತಾತ್ಕಾಲಿಕ ತಡೆ?

ಸೆರಮ್​ನಿಂದ ಇಂಗ್ಲೆಂಡ್​ಗೆ ರಫ್ತಾಗಬೇಕಿದ್ದ ಒಟ್ಟು ಲಸಿಕೆಯ ಪೈಕಿ ಕೇವಲ ಅರ್ಧದಷ್ಟು ಲಸಿಕೆ ಡೋಸ್​ಗಳು ಮಾತ್ರ ಭಾರತದಿಂದ ರಫ್ತಾಗಿದೆ. ಲಸಿಕೆ ಅಭಿಯಾನವನ್ನು ನಿಧಾನವಾಗಿ ನಡೆಸಬೇಕಾದ ಅನಿವಾರ್ಯತೆಯ ಎಚ್ಚರಿಕೆಯನ್ನೂ ಸೆರಮ್ ನೀಡಿದೆ.

ಭಾರತದಲ್ಲಿ ಹೆಚ್ಚುತ್ತಿರುವ ಕೊರೊನಾ ಸೋಂಕು: ಲಸಿಕೆ ರಫ್ತಿಗೆ ತಾತ್ಕಾಲಿಕ ತಡೆ?
ಆಸ್ಟ್ರಾಜೆನೆಕಾ ಲಸಿಕೆ (ಪ್ರಾತಿನಿಧಿಕ ಚಿತ್ರ)
Follow us
TV9 Web
| Updated By: ganapathi bhat

Updated on:Apr 05, 2022 | 1:13 PM

ದೆಹಲಿ: ಭಾರತದಲ್ಲಿ ಕೊರೊನಾ ಸೋಂಕು ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕೊವಿಡ್-19 ವಿರುದ್ಧದ ಲಸಿಕೆ ರಫ್ತನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿರುವ ಬಗ್ಗೆ ಬ್ರಿಟನ್​ನ ಜನಪ್ರಿಯ ದೈನಿಕದ ಜಾಲತಾಣ ‘ದಿ ಗಾರ್ಡಿಯನ್’ ವರದಿ ಮಾಡಿದೆ. ಕೊರೊನಾ ವಿರುದ್ಧ ಭಾರತದ ಸೆರಮ್ ಸಂಸ್ಥೆಯಲ್ಲಿ ತಯಾರಾಗಿರುವ ಆಸ್ಟ್ರಾಜೆನೆಕಾ ಲಸಿಕೆಯನ್ನು ಹೊರದೇಶಗಳಿಗೆ ರಫ್ತು ಮಾಡುವ ಪ್ರಕ್ರಿಯೆಗೆ ಹಿನ್ನಡೆ ಉಂಟಾಗಿದೆ ಎಂದು ತಿಳಿದುಬಂದಿದೆ.

ಭಾರತದ ಈ ನಡೆಯನ್ನು ರಾಯಿಟರ್ಸ್ ಸುದ್ದಿಸಂಸ್ಥೆ ಮೊದಲು ವರದಿ ಮಾಡಿತ್ತು. ಭಾರತದ ಈ ನಿರ್ಧಾರದಿಂದಾಗಿ ವಿಶ್ವ ಆರೋಗ್ಯ ಸಂಸ್ಥೆಯ ಬೆಂಬಲದೊಂದಿಗೆ ಕೊರೊನಾ ಲಸಿಕೆ ಹಂಚಿಕೊಳ್ಳುವ ವ್ಯವಸ್ಥೆಯ ಭಾಗವಾಗಿದ್ದ ಸುಮಾರು 180 ದೇಶಗಳಿಗೆ ತೊಂದರೆಯಾಗುವ ಸಾಧ್ಯತೆಯಿದೆ. ಭಾರತದ ಈ ನಿರ್ಧಾರವು ಆಸ್ಟ್ರಾಜೆನೆಕಾ ಲಸಿಕೆ ತಯಾರಿಕೆಯಲ್ಲಿ ಸೆರಂ ಇನ್​ಸ್ಟಿಟ್ಯೂಟ್ ಆಫ್ ಇಂಡಿಯಾ ಹೊಂದಿರುವ ವಿವಾದಾತ್ಮಕ ಪಾತ್ರವನ್ನು ಮತ್ತೊಮ್ಮೆ ಮುನ್ನೆಲೆಗೆ ತಂದಿದೆ ಎಂದು ‘ಗಾರ್ಡಿಯನ್’ ವರದಿಯಲ್ಲಿ ಆಕ್ಷೇಪಿಸಿದೆ.

ಸೆರಮ್​ನಿಂದ ಇಂಗ್ಲೆಂಡ್​ಗೆ ರಫ್ತಾಗಬೇಕಿದ್ದ ಒಟ್ಟು ಲಸಿಕೆಯ ಪೈಕಿ ಕೇವಲ ಅರ್ಧದಷ್ಟು ಲಸಿಕೆ ಡೋಸ್​ಗಳು ಮಾತ್ರ ಭಾರತದಿಂದ ರಫ್ತಾಗಿದೆ. ಲಸಿಕೆ ಅಭಿಯಾನವನ್ನು ಕೊಂಚ ನಿಧಾನವಾಗಿ ನಡೆಸಬೇಕಾದ ಅನಿವಾರ್ಯತೆಯ ಎಚ್ಚರಿಕೆಯನ್ನೂ ಸೆರಮ್ ನೀಡಿದೆ.

ಸೆರಮ್ ಸಂಸ್ಥೆಯ ಲಸಿಕೆ ಹಂಚಿಕೆ ಆದ್ಯತೆ ಹಾಗೂ ಲಸಿಕೆ ಉತ್ಪಾದನೆ ವಿಚಾರದಲ್ಲಿ ಪಾರದರ್ಶಕತೆಯ ಕೊರತೆ ಮೊದಲಿನಿಂದಲೂ ಇತ್ತು. ಅದರಿಂದ ವ್ಯತಿರಿಕ್ತ ಹೇಳಿಕೆಗಳು, ವಿಷಯಗಳ ಸೋರಿಕೆ, ಅನಾಮಧೇಯ ವಿವರಣೆಗಳೂ ಕಂಡುಬಂದಿತ್ತು. ಭಾರತದ ವಿದೇಶಾಂಗ ಇಲಾಖೆಯ ವೆಬ್​ಸೈಟ್ ಮಾಹಿತಿ ಪ್ರಕಾರ ಕಳೆದ ಗುರುವಾರದ ಬಳಿಕ ಭಾರತದಿಂದ ಇತರ ಯಾವುದೇ ದೇಶಕ್ಕೆ ಲಸಿಕೆ ರಫ್ತು ಆಗಿಲ್ಲ. ಭಾರತವು ತನ್ನ ದೇಶದ ಜನರಿಗೆ ಲಸಿಕೆ ವಿತರಿಸಲು, ದೇಶದಲ್ಲಿ ಕೊರೊನಾ ವಿರುದ್ಧ ರೋಗನಿರೋಧಕ ಶಕ್ತಿ ಹೆಚ್ಚಿಸಲು ಯೋಚಿಸುತ್ತಿದೆ ಎಂದು ಹೇಳಲಾಗುತ್ತಿದೆ.

ಭಾರತದಲ್ಲಿ ಕೊರೊನಾ ಪರಿಸ್ಥಿತಿ ಸ್ಥಿರವಾಗುವವರೆಗೆ ಯಾವುದೇ ಲಸಿಕೆ ರಫ್ತು ಆಗುವುದು ಕಷ್ಟಸಾಧ್ಯ. ಇಂಥ ಕಠಿಣ ಪರಿಸ್ಥಿತಿಯಲ್ಲಿ ಸರ್ಕಾರ ಅವಕಾಶ ಪಡೆದುಕೊಳ್ಳಲು ಬಯಸುವುದಿಲ್ಲ. ಭಾರತದಲ್ಲೇ ದೊಡ್ಡ ಪ್ರಮಾಣದ ಜನತೆ ಲಸಿಕೆ ಪಡೆದುಕೊಳ್ಳಬೇಕಿದೆ ಎಂದು ಮೂಲಗಳು ತಿಳಿಸಿರುವ ಬಗ್ಗೆ ರಾಯಿಟರ್ಸ್ ವರದಿ ಮಾಡಿದೆ.

ಕರ್ನಾಟಕದಲ್ಲಿ ಹೊಸ ನಿಯಮಾವಳಿಗಳು ರಾಜ್ಯದಲ್ಲಿ ಹೆಚ್ಚುತ್ತಿರುವ ಕೊರೊನಾ ಪ್ರಕರಣಗಳ ಸಂಖ್ಯೆ ನಿಯಂತ್ರಿಸಲು ರಾಜ್ಯ ಸರ್ಕಾರ ಹೊಸ ನಿಯಮಾವಳಿಗಳನ್ನು ಹೊರಡಿಸಿದೆ. ಕರ್ನಾಟಕ ಮಾತ್ರವಲ್ಲದೆ ನೆರೆಯ ರಾಜ್ಯಗಳಾದ ಮಹಾರಾಷ್ಟ್ರ, ಕೇರಳ ಸಹಿತ ಚಂಡೀಗಡ, ರಾಜಸ್ಥಾನಗಳಲ್ಲಿ ಕೊವಿಡ್-19 ಗಣನೀಯ ಪ್ರಮಾಣದಲ್ಲಿ ಏರಿಕೆಯಾಗುತ್ತಿದೆ. ರಾಜ್ಯದ ಪರಿಸ್ಥಿತಿ ನಿಯಂತ್ರಿಸಲು ರಾಜ್ಯ ಸರ್ಕಾರ ಇಂದು (ಮಾರ್ಚ್ 24) ಹೊಸ ನಿಯಮಾವಳಿಗಳ ಅಧಿಸೂಚನೆ ಹೊರಡಿಸಿದೆ.

ಇದನ್ನೂ ಓದಿ: ಭಾರತದಲ್ಲಿ ಡಿಜಿಟಲ್ ಪ್ರಮಾಣ ಪತ್ರ, ಅಮೆರಿಕದಲ್ಲಿ ಕಾಗದದ ದಾಖಲೆ: ಕೊರೊನಾ ಲಸಿಕೆ ಪ್ರಕ್ರಿಯೆ ಹೋಲಿಸಿದ ನಂದನ್ ನಿಲೇಕಣಿ

ಇದನ್ನೂ ಓದಿ: ಭಾರತದಲ್ಲಿ ರೂಪಾಂತರಿ ಕೊರೊನಾ ಪತ್ತೆ, ಅತಿಹೆಚ್ಚು ಸಕ್ರಿಯ ಪ್ರಕರಣಗಳಿರುವ ಜಿಲ್ಲೆಗಳ ಪಟ್ಟಿಯಲ್ಲಿ ಬೆಂಗಳೂರು

Published On - 11:20 pm, Wed, 24 March 21

ಕೆಣಕ್ಕಿದ ಸಿರಾಜ್​ಗೆ ಪೂರನ್ ನೀಡಿದ ಉತ್ತರ ಹೇಗಿತ್ತು ಗೊತ್ತಾ?
ಕೆಣಕ್ಕಿದ ಸಿರಾಜ್​ಗೆ ಪೂರನ್ ನೀಡಿದ ಉತ್ತರ ಹೇಗಿತ್ತು ಗೊತ್ತಾ?
ಗುಜರಾತ್ ವಿರುದ್ಧ ಸಿಡಿಲಬ್ಬರದ ಶತಕ ಸಿಡಿಸಿದ ಮಿಚೆಲ್ ಮಾರ್ಷ್
ಗುಜರಾತ್ ವಿರುದ್ಧ ಸಿಡಿಲಬ್ಬರದ ಶತಕ ಸಿಡಿಸಿದ ಮಿಚೆಲ್ ಮಾರ್ಷ್
ಬಿಜೆಪಿ ನಾಯಕರೆಲ್ಲ ಜೊತೆಗಿದ್ದೇವೆ, ನಮ್ಮ ಹೋರಾಟ ನಿಲ್ಲಲ್ಲ: ಚಲವಾದಿ
ಬಿಜೆಪಿ ನಾಯಕರೆಲ್ಲ ಜೊತೆಗಿದ್ದೇವೆ, ನಮ್ಮ ಹೋರಾಟ ನಿಲ್ಲಲ್ಲ: ಚಲವಾದಿ
ಗುತ್ತಿಗೆದಾರರಿಗೆ ಹಣ ಪಾವತಿಯಾಗದ ಕಾರಣ ಸಾಯಿ ಲೇಔಟ್​ನಲ್ಲಿ ಸಮಸ್ಯೆ: ನಿಖಿಲ್
ಗುತ್ತಿಗೆದಾರರಿಗೆ ಹಣ ಪಾವತಿಯಾಗದ ಕಾರಣ ಸಾಯಿ ಲೇಔಟ್​ನಲ್ಲಿ ಸಮಸ್ಯೆ: ನಿಖಿಲ್
‘ಅವನು ಸಾಯೋ ಬದಲು ಇವನು ಸಾಯಬಾರದಾ ಎಂದಿದ್ರು’: ಮಡೆನೂರು ಮನು
‘ಅವನು ಸಾಯೋ ಬದಲು ಇವನು ಸಾಯಬಾರದಾ ಎಂದಿದ್ರು’: ಮಡೆನೂರು ಮನು
ಕೇಂದ್ರಕ್ಕೆ ಪವರ್ ಇಲ್ಲ...ರಾಮನಗರ ಹೆಸರು ಬದಲಾವಣೆ ಬಗ್ಗೆ ಡಿಕೆಶಿ ಸ್ಪಷ್ಟನೆ
ಕೇಂದ್ರಕ್ಕೆ ಪವರ್ ಇಲ್ಲ...ರಾಮನಗರ ಹೆಸರು ಬದಲಾವಣೆ ಬಗ್ಗೆ ಡಿಕೆಶಿ ಸ್ಪಷ್ಟನೆ
ಬಿಡಿಎನಲ್ಲಿ ಬಾಕಿಯುಳಿಸಿಕೊಂಡಿರುವ ಸಂಸ್ಥೆಗಳ ಬಡ್ಡಿ ಒಮ್ಮೆ ಮನ್ನಾ: ಡಿಕೆಶಿ
ಬಿಡಿಎನಲ್ಲಿ ಬಾಕಿಯುಳಿಸಿಕೊಂಡಿರುವ ಸಂಸ್ಥೆಗಳ ಬಡ್ಡಿ ಒಮ್ಮೆ ಮನ್ನಾ: ಡಿಕೆಶಿ
ಖರ್ಗೆ ಬಾಯಲ್ಲಿ ಪಾಪಿ ಪಾಕಿಸ್ತಾನದ ಹೆಸರು ಬರಬಾರದು: ವಿ ಸೋಮಣ್ಣ
ಖರ್ಗೆ ಬಾಯಲ್ಲಿ ಪಾಪಿ ಪಾಕಿಸ್ತಾನದ ಹೆಸರು ಬರಬಾರದು: ವಿ ಸೋಮಣ್ಣ
ಅರವಿಂದ ಲಿಂಬಾವಳಿ ಮತ್ತು ಜಿಎಂ ಸಿದ್ದೇಶ್ವರ ಸಭೆಗೆ ಗೈರು
ಅರವಿಂದ ಲಿಂಬಾವಳಿ ಮತ್ತು ಜಿಎಂ ಸಿದ್ದೇಶ್ವರ ಸಭೆಗೆ ಗೈರು
ಮುನಿರತ್ನ ಮೇಲಿರೋದು ಆರೋಪಗಳಲ್ಲ, ಎಫ್​ಐಅರ್ ಆಗಿದೆ: ಖರ್ಗೆ
ಮುನಿರತ್ನ ಮೇಲಿರೋದು ಆರೋಪಗಳಲ್ಲ, ಎಫ್​ಐಅರ್ ಆಗಿದೆ: ಖರ್ಗೆ