Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗುರುಗ್ರಾಮ್‌ನ ಮಸೀದಿ ಮೇಲೆ 200 ಜನರ ಗುಂಪು ದಾಳಿ; ಪ್ರಾರ್ಥನೆ ಮಾಡುತ್ತಿದ್ದ ಜನರ ಮೇಲೆ ಹಲ್ಲೆ, ಬೆದರಿಕೆ

ಬುಧವಾರ ರಾತ್ರಿ ಭೋರಾ ಕಲನ್ ಗ್ರಾಮದಲ್ಲಿ ನಡೆದ ಘಟನೆಯಲ್ಲಿ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ, ಆದರೆ ಗುರುವಾರ ಸಂಜೆಯವರೆಗೆ ಯಾರನ್ನೂ ಬಂಧಿಸಲಾಗಿಲ್ಲ.

ಗುರುಗ್ರಾಮ್‌ನ ಮಸೀದಿ ಮೇಲೆ 200 ಜನರ ಗುಂಪು ದಾಳಿ; ಪ್ರಾರ್ಥನೆ ಮಾಡುತ್ತಿದ್ದ ಜನರ ಮೇಲೆ ಹಲ್ಲೆ, ಬೆದರಿಕೆ
ಪ್ರಾತಿನಿಧಿಕ ಚಿತ್ರ
Follow us
TV9 Web
| Updated By: ರಶ್ಮಿ ಕಲ್ಲಕಟ್ಟ

Updated on:Oct 13, 2022 | 9:18 PM

ಗುರುಗ್ರಾಮ್: 200 ಕ್ಕೂ ಹೆಚ್ಚು ಜನರ ಗುಂಪು ಗುರುಗ್ರಾಮ್‌ನ ಹಳ್ಳಿಯೊಂದರಲ್ಲಿ ಮಸೀದಿಯನ್ನು(mosque) ಧ್ವಂಸ ಮಾಡಿದೆ ಎಂದು ಪಿಟಿಐ ವರದಿ ಮಾಡಿದೆ. ಪ್ರಾರ್ಥನೆ ಮಾಡುತ್ತಿದ್ದ ಜನರ ಮೇಲೆ ಹಲ್ಲೆ ನಡೆದಿದ್ದು, ಗ್ರಾಮದಿಂದ ಹೊರಹಾಕುವುದಾಗಿ ಬೆದರಿಕೆಯನ್ನೂ ಒಡ್ಡಲಾಗಿದೆ. ಬುಧವಾರ ರಾತ್ರಿ ಭೋರಾ ಕಲನ್ ಗ್ರಾಮದಲ್ಲಿ ನಡೆದ ಘಟನೆಯಲ್ಲಿ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ, ಆದರೆ ಗುರುವಾರ ಸಂಜೆಯವರೆಗೆ ಯಾರನ್ನೂ ಬಂಧಿಸಲಾಗಿಲ್ಲ. ಸುಬೇದಾರ್ ನಜರ್ ಮೊಹಮ್ಮದ್ ನೀಡಿದ ದೂರಿನ ಪ್ರಕಾರ, ಭೋರ ಕಾಳನ್ ಗ್ರಾಮದಲ್ಲಿ ಕೇವಲ ನಾಲ್ಕು ಮುಸ್ಲಿಂ ಕುಟುಂಬಗಳಿವೆ. ರಾಜೇಶ್ ಚೌಹಾಣ್ ಅಲಿಯಾಸ್ ಬಾಬು, ಅನಿಲ್ ಭಡೋರಿಯಾ ಮತ್ತು ಸಂಜಯ್ ವ್ಯಾಸ್ ನೇತೃತ್ವದ ಸುಮಾರು 200 ಜನರನ್ನು ಒಳಗೊಂಡ ಗುಂಪು ಮಸೀದಿಯನ್ನು ಸುತ್ತುವರೆದು ಪ್ರಾರ್ಥನಾ ಮಂದಿರಕ್ಕೆ ಪ್ರವೇಶಿಸಿದಾಗ ಬುಧವಾರ ಬೆಳಿಗ್ಗೆ ಗದ್ದಲ ಪ್ರಾರಂಭವಾಯಿತು. ಅಲ್ಲಿ ನಮಾಜ್ ಮಾಡುತ್ತಿದ್ದವರನ್ನು ಗ್ರಾಮದಿಂದ ಹೊರಹಾಕುವುದಾಗಿ ಆ ಗುಂಪು ಬೆದರಿಕೆ ಹಾಕಿದೆ.

ರಾತ್ರಿ ಮತ್ತೆ ನಾವು ಮಸೀದಿಯ ಪ್ರಾರ್ಥನಾ ಮಂದಿರದ ಒಳಗೆ ಪ್ರಾರ್ಥನೆ ಮಾಡುತ್ತಿದ್ದಾಗ ಗುಂಪು ಬಂದು ನಮಾಜ್ ಮಾಡುವವರ ಮೇಲೆ ಹಲ್ಲೆ ನಡೆಸಿ ಪ್ರಾರ್ಥನಾ ಮಂದಿರಕ್ಕೆ ಬೀಗ ಜಡಿದಿದೆ. ನಮ್ಮನ್ನು ಕೊಲ್ಲುವುದಾಗಿ ಬೆದರಿಕೆ ಹಾಕಿದ್ದಾರೆ” ಎಂದು ಸುಬೇದಾರ್ ತಮ್ಮ ದೂರಿನಲ್ಲಿ ತಿಳಿಸಿದ್ದಾರೆ.

ಪೊಲೀಸರು ತಲುಪುವಷ್ಟರಲ್ಲಿ ಆರೋಪಿಗಳು ಪರಾರಿಯಾಗಿದ್ದರು. ಪೊಲೀಸರು ಸ್ಥಳದಿಂದ ಮೊಬೈಲ್ ಫೋನ್ ಅನ್ನು ವಶಪಡಿಸಿಕೊಂಡಿದ್ದಾರೆ. ಇದು ದಾಳಿ ನಡೆಸಲು ಬಂದ ಗುಂಪಿನಲ್ಲಿರುವರದ್ದಾಗಿರುವ ಸಾಧ್ಯತೆ ಇದೆ ಮೊಹಮ್ಮದ್ ಅವರ ದೂರಿನ ನಂತರ, ರಾಜೇಶ್ ಚೌಹಾಣ್, ಅನಿಲ್ ಭಡೋರಿಯಾ, ಸಂಜಯ್ ವ್ಯಾಸ್ ಮತ್ತು ಇತರ ಹಲವರ ವಿರುದ್ಧ ಗಲಭೆ, ಧಾರ್ಮಿಕ ಕಲಹವನ್ನು ಉಂಟುಮಾಡಲು ಪ್ರಯತ್ನಿಸುವುದು ಮತ್ತು ಬಿಲಾಸ್‌ಪುರ ಪೊಲೀಸ್ ಠಾಣೆಯಲ್ಲಿ ಕಾನೂನುಬಾಹಿರ ಸಭೆಯ ಆರೋಪದಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ.

ದೂರಿನನ್ವಯ ಎಫ್‌ಐಆರ್ ದಾಖಲಾಗಿದ್ದು, ಸತ್ಯಾಸತ್ಯತೆ ಪರಿಶೀಲಿಸುತ್ತಿದ್ದೇವೆ. ಕಾನೂನು ಪ್ರಕಾರ ಕ್ರಮ ಕೈಗೊಳ್ಳಲಾಗುವುದು ಎಂದು ತನಿಖಾಧಿಕಾರಿ ಹಿರಿಯ ಪೊಲೀಸ್ ಅಧಿಕಾರಿ ಗಜೇಂದರ್ ಸಿಂಗ್ ಹೇಳಿದ್ದಾರೆ

Published On - 9:10 pm, Thu, 13 October 22

ಸರ್ಕಾರದ ದುರಾಡಳಿತ ವಿರುದ್ಧ ಬಿಜೆಪಿ ಜನಜಾಗೃತಿ ಅಭಿಯಾನ: ವಿಜಯೇಂದ್ರ
ಸರ್ಕಾರದ ದುರಾಡಳಿತ ವಿರುದ್ಧ ಬಿಜೆಪಿ ಜನಜಾಗೃತಿ ಅಭಿಯಾನ: ವಿಜಯೇಂದ್ರ
ಒರಿಜಿನಲ್ ರಂಗಾಯಣ ರಘುವಿಗೆ ಡುಪ್ಲಿಕೇಟ್ ರಂಗಾಯಣ ರಘು ಸಿಕ್ಕಾಗ
ಒರಿಜಿನಲ್ ರಂಗಾಯಣ ರಘುವಿಗೆ ಡುಪ್ಲಿಕೇಟ್ ರಂಗಾಯಣ ರಘು ಸಿಕ್ಕಾಗ
ಇಂದಿನಿಂದ ಕಸದ ಮೇಲೂ ತೆರಿಗೆ, ದಾರಿ ಯಾವುದಯ್ಯ ಬದುಕಲು?
ಇಂದಿನಿಂದ ಕಸದ ಮೇಲೂ ತೆರಿಗೆ, ದಾರಿ ಯಾವುದಯ್ಯ ಬದುಕಲು?
ಕಣ್ಮನ ಸೆಳೆಯುತ್ತಿದೆ ಶಿವಕುಮಾರ ಶ್ರೀಗಳ 125 ಅಡಿ ಉದ್ದದ ರಂಗೋಲಿ ಚಿತ್ರ
ಕಣ್ಮನ ಸೆಳೆಯುತ್ತಿದೆ ಶಿವಕುಮಾರ ಶ್ರೀಗಳ 125 ಅಡಿ ಉದ್ದದ ರಂಗೋಲಿ ಚಿತ್ರ
ದೇವರಿಗೆ ತಪ್ಪು ಕಾಣಿಕೆ ಕಟ್ಟುವುದು ಹೇಗೆ? ಮುಡಿಪು ಇಡುವುದರ ಮಹತ್ವ ಇಲ್ಲಿದೆ
ದೇವರಿಗೆ ತಪ್ಪು ಕಾಣಿಕೆ ಕಟ್ಟುವುದು ಹೇಗೆ? ಮುಡಿಪು ಇಡುವುದರ ಮಹತ್ವ ಇಲ್ಲಿದೆ
ರವಿ ಮೀನ ರಾಶಿ, ಚಂದ್ರ ವೃಷಭ ರಾಶಿಯಲ್ಲಿ ಸಂಚರಿಸುವ ಈ ದಿನದ ರಾಶಿ ಭವಿಷ್ಯ
ರವಿ ಮೀನ ರಾಶಿ, ಚಂದ್ರ ವೃಷಭ ರಾಶಿಯಲ್ಲಿ ಸಂಚರಿಸುವ ಈ ದಿನದ ರಾಶಿ ಭವಿಷ್ಯ
‘ಅರ್ಜುನ್ ಜನ್ಯ ರೀತಿಯ ಹುಚ್ಚ ಬೇರೆ ಯಾರಿಲ್ಲ: ರಾಜ್ ಬಿ. ಶೆಟ್ಟಿ
‘ಅರ್ಜುನ್ ಜನ್ಯ ರೀತಿಯ ಹುಚ್ಚ ಬೇರೆ ಯಾರಿಲ್ಲ: ರಾಜ್ ಬಿ. ಶೆಟ್ಟಿ
ನಿರ್ದೇಶಕರ ಪಾಲಿಗೆ ಶಿವಣ್ಣ ಅಪರಂಜಿ; ಕಾರಣ ಕೊಟ್ಟು ವಿವರಿಸಿದ ಉಪೇಂದ್ರ
ನಿರ್ದೇಶಕರ ಪಾಲಿಗೆ ಶಿವಣ್ಣ ಅಪರಂಜಿ; ಕಾರಣ ಕೊಟ್ಟು ವಿವರಿಸಿದ ಉಪೇಂದ್ರ
ರಾಮನಗರ: ಮಾನವೀಯತೆ ಮೆರೆದ ಪೊಲೀಸ್​ ಪೇದೆಗೆ ಮೆಚ್ಚುಗೆ
ರಾಮನಗರ: ಮಾನವೀಯತೆ ಮೆರೆದ ಪೊಲೀಸ್​ ಪೇದೆಗೆ ಮೆಚ್ಚುಗೆ
ಈದ್ ಆಚರಿಸಿದ ಮುಸ್ಲಿಮರ ಮೇಲೆ ಹೂಮಳೆ ಸುರಿಸಿದ ಹಿಂದೂಗಳು
ಈದ್ ಆಚರಿಸಿದ ಮುಸ್ಲಿಮರ ಮೇಲೆ ಹೂಮಳೆ ಸುರಿಸಿದ ಹಿಂದೂಗಳು