AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಂಧ್ರಪ್ರದೇಶದ ಅನಂತಪುರದಲ್ಲಿ ಸಿಲಿಂಡರ್ ಸ್ಫೋಟದಿಂದ ಗೋಡೆ ಕುಸಿತ; ನಾಲ್ವರು ಸಾವು, ಇಬ್ಬರಿಗೆ ಗಾಯ

ಆಂಧ್ರಪ್ರದೇಶದ ಅನಂತಪುರ ಜಿಲ್ಲೆಯ ಮುಳಕಲೇಡು ಗ್ರಾಮದ ಪಕ್ಕದ ಕಟ್ಟಡದಲ್ಲಿ ಇಂದು ಮುಂಜಾನೆ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡ ನಂತರ ಮನೆಯ ಗೋಡೆ ಕುಸಿದು ನಾಲ್ಕು ಜನರು ಸಾವನ್ನಪ್ಪಿದ್ದಾರೆ ಮತ್ತು ಇಬ್ಬರು ಗಾಯಗೊಂಡಿದ್ದಾರೆ.

ಆಂಧ್ರಪ್ರದೇಶದ ಅನಂತಪುರದಲ್ಲಿ ಸಿಲಿಂಡರ್ ಸ್ಫೋಟದಿಂದ ಗೋಡೆ ಕುಸಿತ; ನಾಲ್ವರು ಸಾವು, ಇಬ್ಬರಿಗೆ ಗಾಯ
ಆಂಧ್ರ ಪ್ರದೇಶದಲ್ಲಿ ಗೋಡೆ ಕುಸಿತImage Credit source: ANI
TV9 Web
| Edited By: |

Updated on: May 28, 2022 | 1:01 PM

Share

ಅನಂತಪುರ: ಆಂಧ್ರಪ್ರದೇಶದ ಅನಂತಪುರ ಜಿಲ್ಲೆಯ ಮುಳಕಲೇಡು ಗ್ರಾಮದಲ್ಲಿ ಇಂದು ಮನೆಯೊಂದರ ಗೋಡೆ ಕುಸಿದು ನಾಲ್ವರು ಸಾವನ್ನಪ್ಪಿದ್ದಾರೆ ಮತ್ತು ಇಬ್ಬರು ಗಾಯಗೊಂಡಿದ್ದಾರೆ. ಪಕ್ಕದ ಮನೆಯೊಂದರಲ್ಲಿ ಗ್ಯಾಸ್ ಸಿಲಿಂಡರ್ (LPG Cylinder) ಸ್ಫೋಟಗೊಂಡ ಬಳಿಕ ಮನೆಯ ಗೋಡೆ ಕುಸಿದಿದೆ. ಮಾಹಿತಿ ತಿಳಿದ ಕೂಡಲೆ ಪೊಲೀಸರು ಸ್ಥಳಕ್ಕೆ ದೌಡಾಯಿಸಿದ್ದಾರೆ. ಈ ಘಟನೆಗೆ ಸಂಬಂಧಿಸಿದಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ

ಆಂಧ್ರಪ್ರದೇಶದ ಅನಂತಪುರ ಜಿಲ್ಲೆಯ ಮುಳಕಲೇಡು ಗ್ರಾಮದ ಪಕ್ಕದ ಕಟ್ಟಡದಲ್ಲಿ ಇಂದು ಮುಂಜಾನೆ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡ ನಂತರ ಮನೆಯ ಗೋಡೆ ಕುಸಿದು ನಾಲ್ಕು ಜನರು ಸಾವನ್ನಪ್ಪಿದ್ದಾರೆ ಮತ್ತು ಇಬ್ಬರು ಗಾಯಗೊಂಡಿದ್ದಾರೆ. “ಇಂದು ಬೆಳ್ಳಂಬೆಳಗ್ಗೆ ಅನಂತಪುರದ ಮುಳಕಲೇಡು ಗ್ರಾಮದ ನಿವಾಸದಲ್ಲಿ ಸಿಲಿಂಡರ್ ಸ್ಫೋಟಗೊಂಡಿದೆ. ಸ್ಫೋಟದ ಪರಿಣಾಮ ಅಕ್ಕಪಕ್ಕದ ಮನೆಯ ಗೋಡೆ ಕುಸಿದು ನಾಲ್ವರು ಸಾವನ್ನಪ್ಪಿದ್ದಾರೆ ಮತ್ತು ಇಬ್ಬರು ತೀವ್ರವಾಗಿ ಗಾಯಗೊಂಡಿದ್ದಾರೆ” ಎಂದು ಅನಂತಪುರದ ಪೊಲೀಸ್ ವರಿಷ್ಠಾಧಿಕಾರಿ (ಎಸ್ಪಿ) ಫಕೀರಪ್ಪ ತಿಳಿಸಿದ್ದಾರೆ.

ಈ ಘಟನೆ ಕುರಿತು ಮಾಹಿತಿ ಪಡೆದ ಪೊಲೀಸರು ತಕ್ಷಣ ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆ ಆರಂಭಿಸಿದ್ದಾರೆ ಎಂದು ಎಸ್ಪಿ ಫಕೀರಪ್ಪ ತಿಳಿಸಿದ್ದಾರೆ. ಗಾಯಾಳುಗಳನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದ್ದು, ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಶವಾಗಾರಕ್ಕೆ ಕೊಂಡೊಯ್ಯಲಾಗಿದೆ. ಘಟನೆಗೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿದ್ದು, ಮುಂದಿನ ತನಿಖೆ ನಡೆಸಲಾಗುತ್ತಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ