AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಕೊವಿಶೀಲ್ಡ್ ಲಸಿಕೆಯ 2 ಡೋಸ್​​ಗಳ ನಡುವಿನ ಅಂತರ ತಕ್ಷಣಕ್ಕೆ ಬದಲಾಗೋದಿಲ್ಲ, ವೈಜ್ಞಾನಿಕ ಅಧ್ಯಯನ ಅಗತ್ಯ’

Covishield: ಕೊವಿಶೀಲ್ಡ್​ ಲಸಿಕೆಯ ಡೋಸ್​​ಗಳ ನಡುವಿನ ಅಂತರವನ್ನು ಪದೇಪದೆ ಬದಲಾವಣೆ ಮಾಡಲಾಗಿದ್ದು, ಸದ್ಯ ಒಂದು ಡೋಸ್​​ನಿಂದ ಇನ್ನೊಂದು ಡೋಸ್​​ಗೆ 84 ದಿನಗಳ ಅಂದರೆ 12-16ವಾರಗಳ ಅಂತರ ಇಡಲಾಗಿದೆ.

‘ಕೊವಿಶೀಲ್ಡ್ ಲಸಿಕೆಯ 2 ಡೋಸ್​​ಗಳ ನಡುವಿನ ಅಂತರ ತಕ್ಷಣಕ್ಕೆ ಬದಲಾಗೋದಿಲ್ಲ, ವೈಜ್ಞಾನಿಕ ಅಧ್ಯಯನ ಅಗತ್ಯ’
ಕೋವಿಶೀಲ್ಡ್ ಲಸಿಕೆ
Follow us
TV9 Web
| Updated By: Lakshmi Hegde

Updated on: Jun 12, 2021 | 4:23 PM

ದೆಹಲಿ: ಕೊವಿಶೀಲ್ಡ್ ಲಸಿಕೆ ಮೊದಲ ಡೋಸ್​ ಹಾಗೂ ಎರಡನೇ ಡೋಸ್​ ನಡುವಿನ ಸಮಯವನ್ನು ತಕ್ಷಣಕ್ಕೆ ಬದಲಾವಣೆ ಮಾಡುವುದಿಲ್ಲ ಎಂದು ಇಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದೆ. ಪ್ರಸ್ತುತ ಎರಡೂ ಡೋಸ್​ಗಳ ಮಧ್ಯೆ ನಿಗದಿಪಡಿಸಲಾದ ಸಮಯಮಿತಿಗೆ ಸಂಬಂಧಪಟ್ಟಂತೆ ಕೊವಿಡ್​ 19 ಲಸಿಕೆ ಕಾರ್ಯಭಾರದ ರಾಷ್ಟ್ರೀಯ ತಜ್ಞರ ತಂಡದೊಂದಿಗೆ ನಡೆಯಲಿರುವ ಮುಂದಿನ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗುವುದು. ಸಮಯ ಮಿತಿಯನ್ನು ಕಡಿಮೆ ಮಾಡಬೇಕಾದರೆ ಹೇಗೆ ಮಾಡಬಹುದು? ಅದರಿಂದ ಆಗುವ ಉಪಯೋಗಗಳೇನು? ಎಂಬಿತ್ಯಾದಿ ಕುರಿತಾಗಿ ಸಭೆಯಲ್ಲಿ ಚರ್ಚಿಸಲಾಗುವುದು. ಅದಕ್ಕಾಗಿ ವೈಜ್ಞಾನಿಕ ಪುರಾವೆಗಳನ್ನೂ ಸಂಗ್ರಹಿಸಲಾಗುತ್ತಿದೆ ಎಂದು ಕೇಂದ್ರ ಸರ್ಕಾರ ಮಾಹಿತಿ ನೀಡಿದೆ.

ಕೊವಿಶೀಲ್ಡ್​ ಲಸಿಕೆಯ ಡೋಸ್​​ಗಳ ನಡುವಿನ ಅಂತರವನ್ನು ಪದೇಪದೆ ಬದಲಾವಣೆ ಮಾಡಲಾಗಿದ್ದು, ಸದ್ಯ ಒಂದು ಡೋಸ್​​ನಿಂದ ಇನ್ನೊಂದು ಡೋಸ್​​ಗೆ 84 ದಿನಗಳ ಅಂದರೆ 12-16ವಾರಗಳ ಅಂತರ ಇಡಲಾಗಿದೆ. ನಿನ್ನೆ ಈ ಬಗ್ಗೆ ಮಾತನಾಡಿದ್ದ ನೀತಿ ಆಯೋಗದ ಸದಸ್ಯ ಡಾ. ವಿ.ಕೆ. ಪೌಲ್​, ಕೊವಿಶೀಲ್ಡ್​ ಲಸಿಕೆ ಡೋಸೇಜ್​​​ಗಳ ನಡುವಿನ ಅಂತರವನ್ನು ತಕ್ಷಣಕ್ಕೆ ಬದಲಾವಣೆ ಮಾಡುವ ವಿಚಾರದಲ್ಲಿ ಯಾರಿಗೂ ಗೊಂದಲ, ಗಾಬರಿ ಬೇಡ. ಸದ್ಯ ಇರುವ ಅಂತರವನ್ನು ಕಡಿಮೆ ಮಾಡಬೇಕೆಂದರೆ ಕೆಲವೊಂದಿಷ್ಟು ವೈಜ್ಞಾನಿಕ ಅಧ್ಯಯನಗಳ ಅಗತ್ಯವಿರುತ್ತದೆ ಎಂದು ಹೇಳಿದ್ದರು. ಕೊರೊನಾ ರೂಪಾಂತರಿ ಸೋಂಕಿನ ನಿಯಂತ್ರಣದ ದೃಷ್ಟಿಯಿಂದಾದರೂ ಕೊವಿಶೀಲ್ಡ್​ ಲಸಿಕೆಯ ಎರಡು ಡೋಸ್​​​ಗಳ ನಡುವಿನ ಅಂತರವನ್ನು ಇನ್ನೂ ಸ್ವಲ್ಪ ಕಡಿಮೆ ಮಾಡಬೇಕು ಎಂದು ಕೆಲವು ಅಧ್ಯಯನಗಳು ಉಲ್ಲೇಖಿಸುತ್ತಿವೆ ಎಂದು ಮಾಧ್ಯಮಗಳು ವರದಿ ಮಾಡಿದ ಬೆನ್ನಲ್ಲೇ ಪೌಲ್​ ಹೀಗೆಂದು ಹೇಳಿಕೆ ನೀಡಿದ್ದರು.

ಕೊವಿಶೀಲ್ಡ್​ ಲಸಿಕೆಯ ಎರಡು ಡೋಸ್​ಗಳ ನಡುವಿನ ಅಂತರವನ್ನು ಕಡಿಮೆ ಮಾಡುವ ಬಗ್ಗೆ ಸಲಹೆಗಳು ಬಂದಿವೆ. ಹಾಗಂತ ಈ ಬಗ್ಗೆ ಜನರು ಗಾಬರಿಪಡುವ ಅಗತ್ಯವಿಲ್ಲ. ಲಸಿಕೆ ಬಗ್ಗೆ ಈಗಾಗಲೇ ತೆಗೆದುಕೊಂಡ ನಿರ್ಧಾರಗಳನ್ನೂ ತುಂಬ ಎಚ್ಚರಿಕೆಯಿಂದ ತೆಗೆದುಕೊಳ್ಳಲಾಗಿದೆ. ಮುಂದೂ ಕೂಡ ಸಾರ್ವಜನಿಕ ಹಿತದೃಷ್ಟಿ, ಕಾಳಜಿಯಿಂದಲೇ ಮುಂದಡಿ ಇಡಲಾಗುವುದು. ತಜ್ಞರು ಯಾವುದೇ ನಿರ್ಧಾರ ತೆಗೆದುಕೊಂಡರೂ ಅದನ್ನು ಗೌರವಿಸಿ ಎಂದು ಪೌಲ್​ ಹೇಳಿದ್ದಾರೆ.

ಇದನ್ನೂ ಓದಿ: GST Council: ಬ್ಲ್ಯಾಕ್ ಫಂಗಸ್ ಔಷಧಗಳಿಗೆ ತೆರಿಗೆ ವಿನಾಯಿತಿ; ಕೊರೊನಾ ಲಸಿಕೆಯ ಮೇಲೆ ಶೇಕಡಾ 5 ಜಿಎಸ್​ಟಿ ಮುಂದುವರಿಕೆ

(At Present No Change in the gap of two doses of Covishield Vaccine)

ಬಾಹ್ಯಾಕಾಶಕ್ಕೆ ಹಾರಿದ ಮಗನನ್ನು ಕಂಡು ಭಾವುಕರಾದ ಶುಭಾಂಶು ಶುಕ್ಲಾ ತಾಯಿ
ಬಾಹ್ಯಾಕಾಶಕ್ಕೆ ಹಾರಿದ ಮಗನನ್ನು ಕಂಡು ಭಾವುಕರಾದ ಶುಭಾಂಶು ಶುಕ್ಲಾ ತಾಯಿ
ಯತ್ನಾಳ್, ಈಶ್ವರಪ್ಪ ಜೋಡಿಗೆ ಕನ್ನಡಿ ತೋರಿಸಿದ ರಾಜ್ಯ ಬಿಜೆಪಿ ಉಸ್ತುವಾರಿ
ಯತ್ನಾಳ್, ಈಶ್ವರಪ್ಪ ಜೋಡಿಗೆ ಕನ್ನಡಿ ತೋರಿಸಿದ ರಾಜ್ಯ ಬಿಜೆಪಿ ಉಸ್ತುವಾರಿ
ಅಣ್ಣಾವ್ರ ಮೊಮ್ಮಗನಿಗೆ ದುನಿಯಾ ವಿಜಿ ಆಕ್ಷನ್ ಕಟ್, ಭರದಿಂದ ಸಾಗಿದೆ ಶೂಟಿಂಗ್
ಅಣ್ಣಾವ್ರ ಮೊಮ್ಮಗನಿಗೆ ದುನಿಯಾ ವಿಜಿ ಆಕ್ಷನ್ ಕಟ್, ಭರದಿಂದ ಸಾಗಿದೆ ಶೂಟಿಂಗ್
ಕಾಂಗ್ರೆಸ್ ಸರ್ಕಾರದ ಭ್ರಷ್ಟಾಚಾರಗಳು ದಿನಕ್ಕೊಂದು ಬಯಲಾಗುತ್ತಿವೆ: ಚಲವಾದಿ
ಕಾಂಗ್ರೆಸ್ ಸರ್ಕಾರದ ಭ್ರಷ್ಟಾಚಾರಗಳು ದಿನಕ್ಕೊಂದು ಬಯಲಾಗುತ್ತಿವೆ: ಚಲವಾದಿ
ಪೊಲೀಸ್ ಮತ್ತು ಪ್ರತಿಭಟನೆಕಾರರ ನಡುವೆ ಸಿಲುಕಿ ಒದ್ದಾಡಿದ ರೇಣುಕಾಚಾರ್ಯ
ಪೊಲೀಸ್ ಮತ್ತು ಪ್ರತಿಭಟನೆಕಾರರ ನಡುವೆ ಸಿಲುಕಿ ಒದ್ದಾಡಿದ ರೇಣುಕಾಚಾರ್ಯ
ರಾಜು ಕಾಗೆ ಕೇಳಿದ ಕೆಲಸಗಳೆಲ್ಲವನ್ನೂ ಮಾಡಿಕೊಟ್ಟಿದ್ದೇನೆ: ಶಿವಕುಮಾರ್
ರಾಜು ಕಾಗೆ ಕೇಳಿದ ಕೆಲಸಗಳೆಲ್ಲವನ್ನೂ ಮಾಡಿಕೊಟ್ಟಿದ್ದೇನೆ: ಶಿವಕುಮಾರ್
ಕೇವಲ ನಾಲ್ಕು ದಿನಗಳ ಪರಿಚಯ ದೈಹಿಕ ಸಂಪರ್ಕದವರೆಗೆ ಮುಂದುವರಿಯಿತು
ಕೇವಲ ನಾಲ್ಕು ದಿನಗಳ ಪರಿಚಯ ದೈಹಿಕ ಸಂಪರ್ಕದವರೆಗೆ ಮುಂದುವರಿಯಿತು
ಕ್ಷಮೆ ಕೇಳಲು ಶಿವರಾಜ್​ಕುಮಾರ್ ಮನೆ ಎದುರು ಕಾಯುತ್ತಿರುವ ಮಡೆನೂರು ಮನು
ಕ್ಷಮೆ ಕೇಳಲು ಶಿವರಾಜ್​ಕುಮಾರ್ ಮನೆ ಎದುರು ಕಾಯುತ್ತಿರುವ ಮಡೆನೂರು ಮನು
ನೀರು ಬಿಡೋದಿಲ್ಲ ಅಂತ ಸ್ಟೇಟಸ್​ ಹಾಕಿದ್ದ BJP ಮುಖಂಡನ ಮೇಲೆ ಹಲ್ಲೆ
ನೀರು ಬಿಡೋದಿಲ್ಲ ಅಂತ ಸ್ಟೇಟಸ್​ ಹಾಕಿದ್ದ BJP ಮುಖಂಡನ ಮೇಲೆ ಹಲ್ಲೆ
ಹಾಸನದಲ್ಲಿ ಕಾಣಿಸಿಕೊಂಡ 12 ಅಡಿ ಉದ್ದದ ಕಾಳಿಂಗ ಸರ್ಪ, ಭಯಭೀತರಾದ ಜನ!
ಹಾಸನದಲ್ಲಿ ಕಾಣಿಸಿಕೊಂಡ 12 ಅಡಿ ಉದ್ದದ ಕಾಳಿಂಗ ಸರ್ಪ, ಭಯಭೀತರಾದ ಜನ!