AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಗಳವಾಡಿದ್ದ ಹೆಂಡತಿಯನ್ನು ರೈಲ್ವೆ ಹಳಿ ಮೇಲೆ ತಬ್ಬಿ ಸಂತೈಸುತ್ತಿದ್ದ ಗಂಡ… ರೈಲು ಬಂದು ಇಬ್ಬರನ್ನೂ ಸ್ವಾಹಾ ಮಾಡಿತು, ಎಲ್ಲಿ?

Alcoholic Husband: ವಾರಣಾಸಿಯ ಸಾರನಾಥ ಪೊಲೀಸ್ ಠಾಣೆ ವ್ಯಾಪ್ತಿಯ ಪಂಚಕೋಶಿ ರೈಲ್ವೆ ಕ್ರಾಸಿಂಗ್‌ನಲ್ಲಿ ಈ ದುರಾದೃಷ್ಟ ನಡೆದಿದೆ. ದಂಪತಿಗೆ ಮೂವರು ಮಕ್ಕಳು ಇದ್ದಾರೆ; ಮಗನಿಗೆ 6 ವರ್ಷ, ಇಬ್ಬರು ಹೆಣ್ಣುಮಕ್ಕಳಿಗೆ 3 ಮತ್ತು 4 ವರ್ಷ ವಯಸ್ಸು.

ಜಗಳವಾಡಿದ್ದ ಹೆಂಡತಿಯನ್ನು ರೈಲ್ವೆ ಹಳಿ ಮೇಲೆ ತಬ್ಬಿ ಸಂತೈಸುತ್ತಿದ್ದ ಗಂಡ... ರೈಲು ಬಂದು ಇಬ್ಬರನ್ನೂ ಸ್ವಾಹಾ ಮಾಡಿತು, ಎಲ್ಲಿ?
ರೈಲ್ವೆ ಹಳಿ ಮೇಲೆ ಹೆಂಡತಿಯನ್ನು ತಬ್ಬಿ ಸಂತೈಸುತ್ತಿದ್ದ ಗಂಡ... ರೈಲು ಬಂದು ಇಬ್ಬರನ್ನೂ ಸ್ವಾಹಾ ಮಾಡಿತು
TV9 Web
| Edited By: |

Updated on:Oct 14, 2023 | 9:52 AM

Share

ವಾರಣಾಸಿಯಲ್ಲಿ (Varanasi) ನಿನ್ನೆ ಶುಕ್ರವಾರ ರೈಲ್ವೇ ಹಳಿಗಳ ಮೇಲಿದ್ದ ಮಹಿಳೆ ಮತ್ತು ಆಕೆಯ ಗಂಡನ ಮೇಲೆ ರೈಲು ಹಾದುಹೋಗಿ (speeding train) ದುರಂತ ಅಂತ್ಯ ಕಂಡಿದ್ದಾರೆ ಎಂದು ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ. ಪೊಲೀಸ್ ವರದಿಗಳ ಪ್ರಕಾರ, ಪತಿ ಜಗಳವಾಡಿಕೊಂಡು (Family Quarrel) ಮನೆಯಿಂದ ಬಂದಿದ್ದ ತನ್ನ ಹೆಂಡತಿಯನ್ನು ತಬ್ಬಿ ಸಂತೈಸುತ್ತಿದ್ದಾಗ ಈ ದುರಾದೃಷ ಘಟನೆ ನಡೆದಿದೆ ಎಂದು ವರದಿಯಾಗಿದೆ. ಮದ್ಯ ವ್ಯಸನಿ ಗಂಡನಿಂದ (alcoholic Husband) ಬೇಸತ್ತು ಆ ಗೃಹಿಣಿ ತನ್ನ ಪ್ರಾಣ ಕಳೆದುಕೊಳ್ಳಲು ರೈಲ್ವೆ ಹಳಿ ಬಳಿ ಬಂದಿದ್ದಳು. ವಾರಣಾಸಿಯ ಸಾರನಾಥ ಪೊಲೀಸ್ ಠಾಣೆ ವ್ಯಾಪ್ತಿಯ ಪಂಚಕೋಶಿ ರೈಲ್ವೆ ಕ್ರಾಸಿಂಗ್‌ನಲ್ಲಿ ಬುಧವಾರ ರಾತ್ರಿ ಈ ಘಟನೆ ನಡೆದಿದೆ.

ಸಾರಾನಾಥ್ ಪೊಲೀಸ್ ಠಾಣೆಯ ಸ್ಟೇಷನ್ ಹೌಸ್ ಆಫೀಸರ್ (ಎಸ್‌ಎಚ್‌ಒ) ಬ್ರಿಜೇಶ್ ಕುಮಾರ್ ಸಿಂಗ್ ಅವರ ಪ್ರಕಾರ, 30 ವರ್ಷ ವಯಸ್ಸಿನ ಗೋವಿಂದ್ ಸೋಂಕರ್ ಮದ್ಯದ ದಾಸನಾಗಿದ್ದ. ಪ್ರತಿ ರಾತ್ರಿ ಮದ್ಯ ಸೇವಿಸುತ್ತಿದ್ದ. ಅದರಿಂದ ಪತ್ನಿ ಖುಷ್ಬು ಸೋಂಕರ್, 28 ವರ್ಷ, ಅದರಿಂದ ರೋಸಿಹೋಗಿದ್ದಳು.

ಕುಡಿದ ಅಮಲಿನಲ್ಲಿದ್ದ ಗೋವಿಂದ್ ದುರ್ಘಟನೆಗೂ ಮುನ್ನ, ತನ್ನ ಪತ್ನಿಯೊಂದಿಗೆ ಭಾರೀ ಜಗಳದಲ್ಲಿ ತೊಡಗಿದ್ದ ಎಂದು ಘಟನೆಯ ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ನಂತರ, ಗೋವಿಂದನ ಹೆಂಡತಿ ರೈಲು ಹಳಿಗಳತ್ತ ಸಾಗಿದಳು. ಅವಳನ್ನು ಸಮಾಧಾನಪಡಿಸುವ ಪ್ರಯತ್ನದಲ್ಲಿ ಗೋವಿಂದನೂ ತನ್ನ ಹೆಂಡತಿಯನ್ನು ಹಿಂಬಾಲಿಸಿದ್ದ. ಅವಳನ್ನು ಅಪ್ಪಿಕೊಂಡು, ಸಮಾಧಾನಪಡಿಸುತ್ತಿದ್ದ. ಇನ್ನೇನು ಇಬ್ಬರೂ ರೈಲ್ವೆ ಹಳಿ ಬಿಟ್ಟು ಬರಬೇಕಿತ್ತು… ಸರಿಯಾಗಿ ಅದೇ ಸಮಯದಲ್ಲಿ ರೈಲೊಂದು ಬಂದು ಇಬ್ಬರನ್ನೂ ಸ್ವಾಹಾ ಮಾಡಿದೆ.

Also Read: ಅಂಗಡಿಯಲ್ಲಿ ಆಕಸ್ಮಿಕವಾಗಿ ಗಾಯಗೊಂಡಿದ್ದ ಹಾವನ್ನು ಬದುಕಿಸಲು ಚಿಕಿತ್ಸೆಗಾಗಿ ರಾಷ್ಟ್ರ ರಾಜಧಾನಿ ದೆಹಲಿಗೆ ರವಾನೆ!

ಗೋವಿಂದ್ ಹಣ್ಣುಗಳನ್ನು ಮಾರಾಟ ಮಾಡಿ, ಜೀವನ ಸಾಗಿಸುತ್ತಿದ್ದ ಎಂದು ಪೊಲೀಸರು ತಿಳಿಸಿದ್ದಾರೆ. ಮೃತ ದಂಪತಿಯ ಶವಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 9:48 am, Sat, 14 October 23

Follow Us
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?