AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Asad Kalia: ಗ್ಯಾಂಗ್​ಸ್ಟರ್ ಅತೀಕ್ ಅಹ್ಮದ್​ ಗ್ಯಾಂಗ್​ನ ಸದಸ್ಯ ಅಸದ್ ಕಾಲಿಯಾ ಬಂಧನ

ಗ್ಯಾಂಗ್​ಸ್ಟರ್ ಅತೀಕ್ ಅಹ್ಮದ್(Atiq Ahmad)  ಗ್ಯಾಂಗ್​ನ ಮತ್ತೊಬ್ಬ ಶೂಟರ್ ಅಸದ್ ಕಾಲಿಯಾನನ್ನು ಉತ್ತರ ಪ್ರದೇಶದ ಪೊಲೀಸರು ಬುಧವಾರ ಪ್ರಯಾಗ್​ರಾಜ್​ನಲ್ಲಿ ಬಂಧಿಸಿದ್ದಾರೆ.

Asad Kalia: ಗ್ಯಾಂಗ್​ಸ್ಟರ್ ಅತೀಕ್ ಅಹ್ಮದ್​ ಗ್ಯಾಂಗ್​ನ ಸದಸ್ಯ ಅಸದ್ ಕಾಲಿಯಾ ಬಂಧನ
ಅಸದ್ ಕಾಲಿಯಾ
ನಯನಾ ರಾಜೀವ್
|

Updated on: Apr 20, 2023 | 8:50 AM

Share

ಗ್ಯಾಂಗ್​ಸ್ಟರ್ ಅತೀಕ್ ಅಹ್ಮದ್(Atiq Ahmad)  ಗ್ಯಾಂಗ್​ನ ಮತ್ತೊಬ್ಬ ಶೂಟರ್ ಅಸದ್ ಕಾಲಿಯಾನನ್ನು ಉತ್ತರ ಪ್ರದೇಶದ ಪೊಲೀಸರು ಬುಧವಾರ ಪ್ರಯಾಗ್​ರಾಜ್​ನಲ್ಲಿ ಬಂಧಿಸಿದ್ದಾರೆ. ಕಾಲಿಯಾ ಅತೀಕ್‌ನ ಅತ್ಯಂತ ನಿಕಟ ವ್ಯಕ್ತಿಯಾಗಿದ್ದ, ಕಾಲಿಯಾ ಹಲವು ಪ್ರಕರಣಗಳಲ್ಲಿ ಬೇಕಾಗಿದ್ದ. ಈತನ ಮೇಲೆ ಪೊಲೀಸರು 50 ಸಾವಿರ ಬಹುಮಾನ ಘೋಷಿಸಿದ್ದರು. OG ಧೂಮಂಗಂಜ್ ಮತ್ತು ಪೂರಮುಫ್ತಿ ಪೊಲೀಸರು ಸುತ್ತುವರೆದು ಆತನನ್ನು ಬಂಧಿಸಿದ್ದಾರೆ. ಆತನ ಮತ್ತಿಬ್ಬರು ಸಹಚರರನ್ನು ಕೂಡ ಬಂಧಿಸಲಾಗಿದೆ.

ಡಿಸೆಂಬರ್ 2021 ರಿಂದ, ಅಸದ್ ವಿರುದ್ಧ ನಾಲ್ಕು ಬೆದರಿಕೆ ಮತ್ತು ಸುಲಿಗೆಗೆ ಸಂಬಂಧಿಸಿದ ಪ್ರಕರಣಗಳು ದಾಖಲಾಗಿದ್ದವು. ಅಸದ್ ಬಂಧನಕ್ಕೆ ಪೊಲೀಸರು 50,000 ರೂಪಾಯಿ ಬಹುಮಾನ ಘೋಷಿಸಿದ್ದರು. ಇತ್ತೀಚೆಗೆ, 2019 ರ ವೀಡಿಯೊವನ್ನು ಸಹ ಪ್ರಸಾರ ಮಾಡಲಾಗಿದ್ದು, ಇದರಲ್ಲಿ ಅಸದ್ ತನ್ನ ಸಹಚರರೊಂದಿಗೆ ವ್ಯಕ್ತಿಯ ಮನೆಗೆ ಹೋಗಿ ಬೆದರಿಕೆ ಹಾಕಿರುವುದು ಕಂಡುಬಂದಿತ್ತು.

ಮತ್ತಷ್ಟು ಓದಿ: Atiq Ahmed: ಗ್ಯಾಂಗ್​ಸ್ಟರ್​ ಅತೀಕ್ ಅಹ್ಮದ್ ಹತ್ಯೆ ಪ್ರಕರಣ: 5 ಪೊಲೀಸ್ ಅಧಿಕಾರಿಗಳು ಅಮಾನತು

ಶನಿವಾರ ರಾತ್ರಿ ಪ್ರಯಾಗರಾಜ್‌ನ ಶಾಹಗಂಜ್ ಪ್ರದೇಶದ ಆಸ್ಪತ್ರೆಯೊಂದರ ಹೊರಗೆ ಅತೀಕ್ ಮತ್ತು ಅವರ ಸಹೋದರ ಅಶ್ರಫ್ ನನ್ನು ಮೂವರು ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆ ಮಾಡಿದರು. ಆ ಭಯಾನಕ ಹತ್ಯೆಯ ದೃಶ್ಯಾವಳಿಗಳು ಆಸ್ಪತ್ರೆಯ ಹೊರಗಡೆಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಮರಣೋತ್ತರ ಪರೀಕ್ಷೆಯ ಸಮಯದಲ್ಲಿ ದರೋಡೆಕೋರನ ದೇಹದಲ್ಲಿ ಒಂಬತ್ತು ಗುಂಡೇಟುಗಳು ಕಂಡುಬಂದಿವೆ. ಅವರ ಸಹೋದರ ಅಶ್ರಫ್ ಅಹ್ಮದ್ ಅವರ ದೇಹದಿಂದ ಐದು ಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ವರದಿಯಾಗಿದೆ.

ಅತೀಕ್ ಅಹ್ಮದ್ ತಲೆಗೆ ಒಂದು ಬಾರಿ ಮತ್ತು ಎದೆ ಮತ್ತು ಬೆನ್ನಿನ ಮೇಲೆ ಎಂಟು ಬಾರಿ ಗುಂಡು ಹಾರಿಸಿರುವುದು ಮರಣೋತ್ತರ ಪರೀಕ್ಷೆಯಲ್ಲಿ ಪತ್ತೆಯಾಗಿದೆ. ಅಶ್ರಫ್ ಅವರ ಮುಖದ ಮೇಲೆ ಒಂದು, ಬೆನ್ನಿನ ಮೇಲೆ ನಾಲ್ಕು ಗುಂಡೇಟುಗಳು ಕಂಡುಬಂದಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ