AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Atiq Ahmad: ಅವರು ನನ್ನನ್ನು ಕೊಲ್ಲಲು ಬಯಸುತ್ತಾರೆ, ನನಗೆ ಜೀವ ಬೆದರಿಕೆ ಇದೆ ಎಂದ ಗ್ಯಾಂಗ್​​ಸ್ಟರ್ ಅತೀಕ್ ಅಹ್ಮದ್

ಅತೀಕ್ ಅಹ್ಮದ್​​ನ್ನು ಎಂಪಿ/ಎಂಎಲ್ಎ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದ್ದು, ವಕೀಲ ಉಮೇಶ್ ಪಾಲ್ ಅವರ ಅಪಹರಣ ಪ್ರಕರಣದಲ್ಲಿ ಅತೀಕ್ ಮತ್ತು ಇತರ ಇಬ್ಬರಿಗೆ ಕಠಿಣ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ.

Atiq Ahmad: ಅವರು ನನ್ನನ್ನು ಕೊಲ್ಲಲು ಬಯಸುತ್ತಾರೆ, ನನಗೆ ಜೀವ ಬೆದರಿಕೆ ಇದೆ ಎಂದ ಗ್ಯಾಂಗ್​​ಸ್ಟರ್ ಅತೀಕ್ ಅಹ್ಮದ್
ಅತೀಕ್ ಅಹ್ಮದ್
ರಶ್ಮಿ ಕಲ್ಲಕಟ್ಟ
|

Updated on:Apr 11, 2023 | 5:23 PM

Share

ಅಹಮದಾಬಾದ್‌ನ (Ahmedabad) ಸಬರಮತಿ ಜೈಲಿನಿಂದ ಉತ್ತರ ಪ್ರದೇಶ ಪೊಲೀಸ್ ಸಿಬ್ಬಂದಿ ತಂಡ ಪ್ರಯಾಗ್‌ರಾಜ್‌ಗೆ ಕರೆದೊಯ್ಯುತ್ತಿರುವಾಗ ಗ್ಯಾಂಗ್‌ಸ್ಟರ್-ರಾಜಕಾರಣಿ ಅತೀಕ್ ಅಹ್ಮದ್ (Atiq Ahmad) ತನಗೆ ಜೀವ ಬೆದರಿಕೆ ಇದೆ ಎಂದು ಮತ್ತೊಮ್ಮೆ ಹೇಳಿದ್ದಾರೆ. ಇದು ಸರಿಯಲ್ಲ. ಅವರು ನನ್ನನ್ನು ಕೊಲ್ಲಲು ಬಯಸುತ್ತಾರೆ ಎಂದು ಯುಪಿ ಪೊಲೀಸ್ ವ್ಯಾನ್‌ನಲ್ಲಿ ಕರೆದೊಯ್ಯುವಾಗ ಅತೀಕ್ ಅಹ್ಮದ್ ಹೇಳಿದ್ದಾರೆ. ಉಮೇಶ್ ಪಾಲ್ ಹತ್ಯೆ ಪ್ರಕರಣದ ವಿಚಾರಣೆಗೆ ಸಂಬಂಧಿಸಿದಂತೆ ರಾಜಕಾರಣಿ ಅತೀಕ್ ಅಹ್ಮದ್​​ನ್ನು ಪ್ರಯಾಗ್‌ರಾಜ್‌ಗೆ ಕರೆದೊಯ್ಯಲಾಗುತ್ತಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಯಾಗ್‌ರಾಜ್ ನ್ಯಾಯಾಲಯ ಬಿ ವಾರೆಂಟ್ ಜಾರಿ ಮಾಡಿದೆ.  ಇದಕ್ಕೂ ಮುನ್ನ ಅಹ್ಮದ್‌ನನ್ನು ಬಿಗಿ ಭದ್ರತೆಯ ನಡುವೆ ಮಾರ್ಚ್ 28 ರಂದು ಸಬರಮತಿ ಜೈಲಿನಿಂದ ಪ್ರಯಾಗ್‌ರಾಜ್‌ಗೆ ಕರೆತರಲಾಯಿತು. ಅವರನ್ನು ಎಂಪಿ/ಎಂಎಲ್ಎ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದ್ದು, ವಕೀಲ ಉಮೇಶ್ ಪಾಲ್ ಅವರ ಅಪಹರಣ ಪ್ರಕರಣದಲ್ಲಿ ಅತೀಕ್ ಮತ್ತು ಇತರ ಇಬ್ಬರಿಗೆ ಕಠಿಣ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ. ಪಾಲ್ ಕುಟುಂಬಕ್ಕೆ ₹ 1 ಲಕ್ಷ ಪರಿಹಾರ ನೀಡುವಂತೆ ಅಪರಾಧಿಗಳಿಗೆ ಆದೇಶಿಸಲಾಗಿದೆ.

2005ರಲ್ಲಿ ಬಹುಜನ ಸಮಾಜ ಪಕ್ಷದ ಶಾಸಕ ರಾಜು ಪಾಲ್ ಅವರ ಹತ್ಯೆಯ ಸಾಕ್ಷಿ ಉಮೇಶ್ ಪಾಲ್ ಅವರನ್ನು ಫೆಬ್ರವರಿ 24 ರಂದು ಪ್ರಯಾಗರಾಜ್‌ನಲ್ಲಿ ಅವರ ಇಬ್ಬರು ಭದ್ರತಾ ಸಿಬ್ಬಂದಿಯೊಂದಿಗೆ ಗುಂಡಿಕ್ಕಿ ಕೊಲ್ಲಲಾಗಿತ್ತು.

2006ರಲ್ಲಿ ಅಹ್ಮದ್ ಮತ್ತು ಅವರ ಸಹಾಯಕರು ಉಮೇಶ್ ಪಾಲ್ ಅವರನ್ನು ಅಪಹರಿಸಿ ನ್ಯಾಯಾಲಯದಲ್ಲಿ ತಮ್ಮ ಪರವಾಗಿ ಹೇಳಿಕೆ ನೀಡುವಂತೆ ಒತ್ತಾಯಿಸಿದರು. ಈ ಸಂಬಂಧ ವಕೀಲರು ದೂರು ದಾಖಲಿಸಿದ್ದರು.

ಇದನ್ನೂ ಓದಿ: ಮೌನವಾಗಿ ಕುಳಿತು ಭಾರತದ ಸಮಸ್ಯೆಗಳನ್ನು ಪರಿಹರಿಸಲು ಸಾಧ್ಯವಿಲ್ಲ: ಕೇಂದ್ರ ವಿರುದ್ಧ ಸೋನಿಯಾ ಗಾಂಧಿ ವಾಗ್ದಾಳಿ

ಇತ್ತೀಚಿನ ಉಮೇಶ್ ಪಾಲ್ ಹತ್ಯೆ ಪ್ರಕರಣ ಸೇರಿದಂತೆ 100ಕ್ಕೂ ಹೆಚ್ಚು ಕ್ರಿಮಿನಲ್ ಪ್ರಕರಣಗಳಲ್ಲಿ ಅಹ್ಮದ್ ಹೆಸರು ಇದೆ ಎಂದು ಪೊಲೀಸರು ತಿಳಿಸಿದ್ದಾರೆ. ಕಳೆದ ತಿಂಗಳು, ತಾನು ಮತ್ತು ತನ್ನ ಕುಟುಂಬ ಸದಸ್ಯರನ್ನು ಕೊಲೆ ಪ್ರಕರಣದಲ್ಲಿ ತಪ್ಪಾಗಿ ಸಿಲುಕಿಸಲಾಗಿದೆ. ಪಾಲ್ ಉತ್ತರ ಪ್ರದೇಶ ಪೊಲೀಸರು ನಕಲಿ ಎನ್‌ಕೌಂಟರ್‌ನಲ್ಲಿ ಕೊಲ್ಲಲ್ಪಟ್ಟಿರಬಹುದು ಎಂದು ಆರೋಪಿಸಿ ರಕ್ಷಣೆಗಾಗಿ ಸುಪ್ರೀಂಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 4:55 pm, Tue, 11 April 23

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ