AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Atiq Ahmad Killers: ಪ್ರತಾಪ್​ಗಢ ಕಾರಾಗೃಹಕ್ಕೆ ಗ್ಯಾಂಗ್​ಸ್ಟರ್ ಅತೀಕ್ ಅಹ್ಮದ್ ಹಂತಕರ ಸ್ಥಳಾಂತರ

ಪ್ರಯಾಗ್​ರಾಜ್​ನಲ್ಲಿ ಗ್ಯಾಂಗ್​ಸ್ಟರ್ ಅತೀಕ್ ಅಹ್ಮದ್(Atiq Ahmad) ಹಾಗೂ ಅಶ್ರಫ್ ಅಹ್ಮದ್ ಹತ್ಯೆ ಮಾಡಿದ್ದ ಆರೋಪಿಗಳನ್ನು ಭದ್ರತಾ ಕಾರಣಗಳಿಂದ ಬೇರೆ ಜೈಲಿಗೆ ಸ್ಥಳಾಂತರಿಸಲಾಗಿದೆ. ಸನ್ನಿ ಸಿಂಗ್, ಅರುಣ್ ಮೌರ್ಯ, ಲವಲೇಶ್ ತಿವಾರಿಯನ್ನು ಪ್ರಯಾಗ್​ರಾಜ್​ನಿಂದ ಪ್ರತಾಪ್​ಗಢ ಕಾರಾಗೃಹಕ್ಕೆ ಸ್ಥಳಾಂತರಿಸಿದ್ದಾರೆ. ಅಹ್ಮದ್ ಗ್ಯಾಂಗ್ ಅನ್ನು ನಿರ್ಮೂಲನೆ ಮಾಡುವ ಮೂಲಕ ತಾವು ಹೆಸರು ಗಳಿಸಲು ಬಯಸಿದ್ದೆವು ಎಂದು ಮೂವರು ಹಂತಕರು ಹೇಳಿಕೊಂಡಿದ್ದಾರೆ. ಅವರು ಕೊಲೆಯನ್ನು ಎಚ್ಚರಿಕೆಯಿಂದ ಯೋಜಿಸಿದ್ದರು. ಶನಿವಾರ ಇಡೀ ದಿನ ಪೊಲೀಸರ ವಶದಲ್ಲಿದ್ದ ಅಹ್ಮದ್‌ನನ್ನು ಹಿಂಬಾಲಿಸಿದ್ದರು ಎಂದು ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ. […]

Atiq Ahmad Killers: ಪ್ರತಾಪ್​ಗಢ ಕಾರಾಗೃಹಕ್ಕೆ ಗ್ಯಾಂಗ್​ಸ್ಟರ್ ಅತೀಕ್ ಅಹ್ಮದ್ ಹಂತಕರ ಸ್ಥಳಾಂತರ
ಅತೀಕ್ ಅಹ್ಮದ್
ನಯನಾ ರಾಜೀವ್
|

Updated on: Apr 17, 2023 | 6:44 PM

Share

ಪ್ರಯಾಗ್​ರಾಜ್​ನಲ್ಲಿ ಗ್ಯಾಂಗ್​ಸ್ಟರ್ ಅತೀಕ್ ಅಹ್ಮದ್(Atiq Ahmad) ಹಾಗೂ ಅಶ್ರಫ್ ಅಹ್ಮದ್ ಹತ್ಯೆ ಮಾಡಿದ್ದ ಆರೋಪಿಗಳನ್ನು ಭದ್ರತಾ ಕಾರಣಗಳಿಂದ ಬೇರೆ ಜೈಲಿಗೆ ಸ್ಥಳಾಂತರಿಸಲಾಗಿದೆ. ಸನ್ನಿ ಸಿಂಗ್, ಅರುಣ್ ಮೌರ್ಯ, ಲವಲೇಶ್ ತಿವಾರಿಯನ್ನು ಪ್ರಯಾಗ್​ರಾಜ್​ನಿಂದ ಪ್ರತಾಪ್​ಗಢ ಕಾರಾಗೃಹಕ್ಕೆ ಸ್ಥಳಾಂತರಿಸಿದ್ದಾರೆ. ಅಹ್ಮದ್ ಗ್ಯಾಂಗ್ ಅನ್ನು ನಿರ್ಮೂಲನೆ ಮಾಡುವ ಮೂಲಕ ತಾವು ಹೆಸರು ಗಳಿಸಲು ಬಯಸಿದ್ದೆವು ಎಂದು ಮೂವರು ಹಂತಕರು ಹೇಳಿಕೊಂಡಿದ್ದಾರೆ. ಅವರು ಕೊಲೆಯನ್ನು ಎಚ್ಚರಿಕೆಯಿಂದ ಯೋಜಿಸಿದ್ದರು. ಶನಿವಾರ ಇಡೀ ದಿನ ಪೊಲೀಸರ ವಶದಲ್ಲಿದ್ದ ಅಹ್ಮದ್‌ನನ್ನು ಹಿಂಬಾಲಿಸಿದ್ದರು ಎಂದು ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ.

ಪ್ರಯಾಗ್‌ ರಾಜ್‌ನಲ್ಲಿ ವೈದ್ಯಕೀಯ ಪರೀಕ್ಷೆಗೆ ಕರೆದೊಯ್ಯುತ್ತಿದ್ದ ವೇಳೆ ಏಕಾಏಕಿ ದಾಳಿ (Attack) ನಡೆಸಿದ ದುಷ್ಕರ್ಮಿಗಳು ಅತೀಕ್‌ ಅಹ್ಮದ್‌ ಮತ್ತು ಆತನ ಸಹೋದರ ಅಶ್ರಫ್‌ ಮೇಲೆ ಗುಂಡಿನ ದಾಳಿ ನಡೆಸಿ ಹತ್ಯೆ ಮಾಡಿದ್ದರು. ಅತೀಕ್‌ ಮತ್ತು ಅಶ್ರಫ್‌ ಮೃತದೇಹವನ್ನು ಮರಣೋತ್ತರ ಪರೀಕ್ಷೆಯ ನಂತರ ಪ್ರಯಾಗರಾಜ್‌ನಲ್ಲಿರುವ ಅವರ ಗ್ರಾಮದಲ್ಲಿ ಹೂಳಲಾಯಿತು.

ಪ್ರಕರಣದ ಗಂಭೀರತೆ ಅರಿತ ಪೊಲೀಸರು ಎಚ್ಚರಿಕೆ ವಹಿಸಿದ್ದಾರೆ. ಉತ್ತರ ಪ್ರದೇಶದ ಪ್ರಯಾಗರಾಜ್ ಜಿಲ್ಲೆಯಲ್ಲಿ ಭಾನುವಾರ ಇಂಟರ್ನೆಟ್ ಸ್ಥಗಿತಗೊಳಿಸಲಾಗಿದೆ. ಅಲ್ಲದೇ ರಾಜ್ಯದಾದ್ಯಂತ ಬೃಹತ್‌ ಸಭೆ ಆಯೋಜನೆಯನ್ನು ನಿಷೇಧಿಸಲಾಗಿತ್ತು.

ಮತ್ತಷ್ಟು ಓದಿ: Atiq Ahmad Death: ಅತೀಕ್ ಅಹ್ಮದ್, ಅಶ್ರಫ್ ಹತ್ಯೆ ಬಳಿಕ ಸಿಎಂ ಯೋಗಿ ಅಧಿಕಾರಿಗಳಿಗೆ ನೀಡಿದ ಸೂಚನೆ ಏನು?

ಗ್ಯಾಂಗ್​​ಸ್ಟರ್ ರಾಜಕಾರಣಿ ಅತೀಕ್ ಅಹ್ಮದ್  ಮತ್ತು ಅವರ ಸಹೋದರ ಅಶ್ರಫ್ ಹತ್ಯೆ ಬಗ್ಗೆ ಉತ್ತರ ಪ್ರದೇಶ ಪೊಲೀಸ್ ಪಡೆ ಸ್ಥಾಪಿಸಿದ ಮೂವರು ಸದಸ್ಯರ ವಿಶೇಷ ತನಿಖಾ ತಂಡದಿಂದ (SIT) ತನಿಖೆ ನಡೆಸಲಾಗುವುದು. ಈ ತಂಡಕ್ಕೆ ಹೆಚ್ಚುವರಿ ಉಪ ಪೊಲೀಸ್ ಆಯುಕ್ತರಾದ ಸತೀಶ್ ಚಂದ್ರ ನೇತೃತ್ವ ವಹಿಸಲಿದ್ದು ಸತೇಂದ್ರ ಪ್ರಸಾದ್ ತಿವಾರಿ, ಸಹಾಯಕ ಪೊಲೀಸ್ ಕಮಿಷನರ್ (ಕೊತ್ವಾಲಿ), ಮತ್ತು ಪ್ರಯಾಗ್​​​ರಾಜ್ ಪೋಲೀಸ್ ಅಪರಾಧ ವಿಭಾಗದ ತನಿಖಾ ಸೆಲ್ ಇನ್ಸ್ಪೆಕ್ಟರ್ ಓಂ ಪ್ರಕಾಶ್ ಇದರಲ್ಲಿದ್ದಾರೆ.

ತನಿಖೆಯನ್ನು ಗುಣಮಟ್ಟ ಮತ್ತು ಕಾಲಮಿತಿಯಲ್ಲಿ ವೈಜ್ಞಾನಿಕ ರೀತಿಯಲ್ಲಿ ಪೂರ್ಣಗೊಳಿಸುವಂತೆ ಎಸ್‌ಐಟಿಗೆ ಸೂಚಿಸಲಾಗಿದೆ ಎಂದು ಪ್ರಯಾಗ್‌ರಾಜ್‌ನ ಉನ್ನತ ಪೊಲೀಸ್ ಕಚೇರಿಯ ಹೇಳಿಕೆ ತಿಳಿಸಿದೆ.’ಸಾಕ್ಷಿಗಳ ಹೆಚ್ಚಿನ ಸಂಖ್ಯೆಯ ಹೇಳಿಕೆಗಳು / ಸಾಕ್ಷ್ಯಗಳು, ಆರ್ಕೈವಲ್ / ಎಲೆಕ್ಟ್ರಾನಿಕ್ ಪುರಾವೆಗಳ ಸಂಕಲನ (ಮತ್ತು) ವೈಜ್ಞಾನಿಕ / ವಿಧಿವಿಜ್ಞಾನ ಪುರಾವೆಗಳ ಸಂಕಲನ, ಹಾಗೆಯೇ ವಿಧಿ ವಿಜ್ಞಾನ ಪ್ರಯೋಗಾಲಯದಿಂದ ಪರೀಕ್ಷೆಗಳನ್ನು ನಡೆಸುವುದು ಎಂದು ಹೇಳಿಕೆಯಲ್ಲಿ ಉಲ್ಲೇಖಿಸಲಾಗಿದೆ.

ಅತೀಕ್ ಅಹ್ಮದ್ ಮತ್ತು ಅಶ್ರಫ್ ಜತೆಗೆ 20 ಮಂದಿ ಪೊಲೀಸರ ತಂಡವಿತ್ತು, ಹಂತಕರು ಸುಮಾರು 20 ಸುತ್ತು ಗುಂಡು ಹಾರಿಸಿದ್ದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ