Atiq Ahmad: ಗ್ಯಾಂಗ್​ಸ್ಟರ್ ಅತೀಕ್​ ಅಹ್ಮದ್​ಗಿರುವ ಉಗ್ರರ ನಂಟಿನ ಬಗ್ಗೆ ಯುಪಿ ಪೊಲೀಸ್​ ಚಾರ್ಜ್​ಶೀಟ್​ನಲ್ಲಿ ಏನಿದೆ?

ಗ್ಯಾಂಗ್​ಸ್ಟರ್ ಅತೀಕ್ ಅಹ್ಮದ್(Atiq Ahmad)  ಪಾಕಿಸ್ತಾನದ ಇಂಟರ್-ಸರ್ವೀಸಸ್ ಇಂಟೆಲಿಜೆನ್ಸ್ (ಐಎಸ್‌ಐ) ಮತ್ತು ಭಯೋತ್ಪಾದಕ ಸಂಘಟನೆ ಲಷ್ಕರ್-ಎ-ತೊಯ್ಬಾದೊಂದಿಗೆ ನೇರ ಸಂಪರ್ಕ ಹೊಂದಿರುವುದಾಗಿ ತಪ್ಪೊಪ್ಪಿಕೊಂಡಿದ್ದಾನೆ.

Atiq Ahmad: ಗ್ಯಾಂಗ್​ಸ್ಟರ್ ಅತೀಕ್​ ಅಹ್ಮದ್​ಗಿರುವ ಉಗ್ರರ ನಂಟಿನ ಬಗ್ಗೆ ಯುಪಿ ಪೊಲೀಸ್​ ಚಾರ್ಜ್​ಶೀಟ್​ನಲ್ಲಿ ಏನಿದೆ?
ಅತೀಕ್ ಅಹ್ಮದ್

Updated on: Apr 14, 2023 | 8:09 AM

ಗ್ಯಾಂಗ್​ಸ್ಟರ್ ಅತೀಕ್ ಅಹ್ಮದ್(Atiq Ahmad)  ಪಾಕಿಸ್ತಾನದ ಇಂಟರ್-ಸರ್ವೀಸಸ್ ಇಂಟೆಲಿಜೆನ್ಸ್ (ಐಎಸ್‌ಐ) ಮತ್ತು ಭಯೋತ್ಪಾದಕ ಸಂಘಟನೆ ಲಷ್ಕರ್-ಎ-ತೊಯ್ಬಾದೊಂದಿಗೆ ನೇರ ಸಂಪರ್ಕ ಹೊಂದಿರುವುದಾಗಿ ತಪ್ಪೊಪ್ಪಿಕೊಂಡಿದ್ದಾನೆ. ಯುಪಿ ಪೊಲೀಸರು ಸಲ್ಲಿಸಿರುವ ಚಾರ್ಜ್‌ಶೀಟ್‌ನಲ್ಲಿ ಈ ವಿಷಯ ತಿಳಿಸಿದ್ದಾರೆ. ಪಾಕಿಸ್ತಾನದ ಐಎಸ್ ಐ ಮತ್ತು ಭಯೋತ್ಪಾದಕ ಸಂಘಟನೆ ಲಷ್ಕರ್-ಎ-ತೊಯ್ಬಾ ಜತೆ ನೇರ ಸಂಪರ್ಕ ಹೊಂದಿರುವುದರಿಂದ ನನ್ನ ಬಳಿ ಶಸ್ತ್ರಾಸ್ತ್ರಗಳ ಕೊರತೆ ಇಲ್ಲ ಎಂದು ಅತೀಕ್ ಆರೋಪಪಟ್ಟಿಯಲ್ಲಿ ಉಲ್ಲೇಖಿಸಿದ್ದಾರೆ.

ಪಾಕಿಸ್ತಾನದ ಶಸ್ತ್ರಾಸ್ತ್ರಗಳನ್ನು ಡ್ರೋನ್‌ಗಳ ಸಹಾಯದಿಂದ ಪಂಜಾಬ್ ಗಡಿಯಲ್ಲಿ ಬೀಳಿಸಲಾಗುತ್ತದೆ ಮತ್ತು ಸ್ಥಳೀಯ ಭಯೋತ್ಪಾದಕರು ಅವುಗಳನ್ನು ಸಂಗ್ರಹಿಸುತ್ತಾರೆ. ನೀವು ನನ್ನನ್ನು ನಿಮ್ಮೊಂದಿಗೆ ಕರೆದೊಯ್ದರೆ, ಘಟನೆಯಲ್ಲಿ ಬಳಸಲಾದ ಹಣ, ಶಸ್ತ್ರಾಸ್ತ್ರ ಮತ್ತು ಮದ್ದುಗುಂಡುಗಳನ್ನು ಮರುಪಡೆಯಲು ನಾನು ನಿಮಗೆ ಸಹಾಯ ಮಾಡಬಹುದು ಎಂದಿದ್ದಾರೆ.

ಮತ್ತಷ್ಟು ಓದಿ: ಉಮೇಶ್​ ಪಾಲ್ ಹತ್ಯೆ ಪ್ರಕರಣದ ಆರೋಪಿ ಅತೀಕ್ ಅಹ್ಮದ್​ ಪುತ್ರ ಅಸದ್ ಪೊಲೀಸ್​ ಎನ್​ಕೌಂಟರ್​ನಲ್ಲಿ ಸಾವು

ಮಾರ್ಚ್ 28 ರಂದು, ಎಂಪಿ-ಎಂಎಲ್‌ಎ ನ್ಯಾಯಾಲಯವು ಅತೀಕ್ ಅಹ್ಮದ್‌ಗೆ ಶಿಕ್ಷೆ ವಿಧಿಸಿತು ಮತ್ತು ಈಗ ಮೃತ ಉಮೇಶ್ ಪಾಲ್ ಅವರ ಅಪಹರಣ ಪ್ರಕರಣದಲ್ಲಿ ಕಠಿಣ ಜೀವಾವಧಿ ಶಿಕ್ಷೆಯನ್ನು ವಿಧಿಸಿತು. ಜೈಲಿನಲ್ಲಿರುವ ಗ್ಯಾಂಗ್​ಸ್ಟರ್ ಅತೀಕ್ ಅಹ್ಮದ್‌ನ ಮಗ ಅಸದ್‌ಗೆ ಸಹಾಯ ಮಾಡಿದ ಆರೋಪದ ಮೇಲೆ ಮತ್ತು ಉಮೇಶ್ ಪಾಲ್‌ನನ್ನು ಕೊಲ್ಲಲು ಸಂಚು ರೂಪಿಸಿದ ಆರೋಪದ ಮೇಲೆ ದೆಹಲಿ ಪೊಲೀಸರು ಮೂವರನ್ನು ಬಂಧಿಸಿದ್ದಾರೆ,

ಬಂಧಿತರನ್ನು ಜಾವೇದ್, ಖಾಲಿದ್ ಮತ್ತು ಜೀಶಾನ್ ಎಂದು ಗುರುತಿಸಲಾಗಿದೆ. ತನಿಖೆಯ ವೇಳೆ, ಖಾಲಿದ್ ಮತ್ತು ಜೀಶನ್ ಅವರು ಅಸದ್ ಮತ್ತು ಗುಲಾಮ್‌ಗೆ ಆಶ್ರಯ ನೀಡಿದ್ದರು ಎಂದು ಬಹಿರಂಗಪಡಿಸಿದರು.

ಪ್ರಮುಖ ಸಾಕ್ಷಿ ಉಮೇಶ್ ಪಾಲ್ ಮತ್ತು ಅವರ ಇಬ್ಬರು ಸಶಸ್ತ್ರ ಭದ್ರತಾ ಬೆಂಗಾವಲು ಸಿಬ್ಬಂದಿಗಳಲ್ಲಿ ಒಬ್ಬರನ್ನು ಫೆಬ್ರವರಿ 24 ರಂದು ಗುಂಡಿಕ್ಕಿ ಕೊಂದಿದ್ದರು. ಉಮೇಶ್ ಮತ್ತು ಆತನ ಬಂದೂಕುಧಾರಿಗಳ ಮೇಲೆ ಹಲವಾರು ಸುತ್ತು ಗುಂಡು ಹಾರಿಸಲಾಯಿತು ಮತ್ತು ಬಾಂಬ್‌ಗಳನ್ನು ಎಸೆಯಲಾಯಿತು.

ಏತನ್ಮಧ್ಯೆ, ಅಧಿಕೃತ ಮೂಲಗಳು ಅತೀಕ್ ಅಹ್ಮದ್ ಅವರ ಪುತ್ರ ಅಸದ್ ಅವರ ಅಂತಿಮ ವಿಧಿಗಳಲ್ಲಿ ಪಾಲ್ಗೊಳ್ಳಲು ಅನುಮತಿಸುವುದಿಲ್ಲ ಮತ್ತು ಅವರ ಪತ್ನಿ ಹಾಗೂ ಕುಟುಂಬ ಸದಸ್ಯರು ಮೃತದೇಹವನ್ನು ಪಡೆದುಕೊಳ್ಳಬಹುದು ಎಂದು ಹೇಳಲಾಗಿತ್ತು.

ಸುದ್ದಿಯನ್ನು ಇಂಗ್ಲಿಷ್​ನಲ್ಲಿ ಓದಲು ಇಲ್ಲಿ ಕ್ಲಿಕ್ ಮಾಡಿ

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

 

Published On - 8:08 am, Fri, 14 April 23

Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
Follow Us