AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Atishi Net Worth: ತನ್ನ ಹೆಸರಲ್ಲಿ ಜಮೀನು, ಒಡವೆ ಇಲ್ಲದೇ ಇದ್ದರೂ ಕೋಟ್ಯಾಧಿಪತಿ ಈ ಅತಿಶಿ

ಉತ್ತಮ ಶೈಕ್ಷಣಿಕ ಅರ್ಹತೆ ಹೊಂದಿರುವ ಅತಿಶಿ, ಸೇಂಟ್ ಸ್ಟೀಫನ್ಸ್ ಕಾಲೇಜಿನಲ್ಲಿ ಇತಿಹಾಸವನ್ನು ಅಧ್ಯಯನ ಮಾಡಿದ್ದು ದೆಹಲಿ ವಿಶ್ವವಿದ್ಯಾಲಯದಲ್ಲಿ ಟಾಪರ್ ಆಗಿದ್ದರು. ಅವರು ಚೆವೆನಿಂಗ್ ವಿದ್ಯಾರ್ಥಿವೇತನದಲ್ಲಿ ಆಕ್ಸ್‌ಫರ್ಡ್ ವಿಶ್ವವಿದ್ಯಾಲಯದಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದರು.  2006 ರಲ್ಲಿ ರೋಡ್ಸ್ ವಿದ್ವಾಂಸರಾಗಿ ಆಕ್ಸ್‌ಫರ್ಡ್‌ನಿಂದ ಶೈಕ್ಷಣಿಕ ಸಂಶೋಧನೆಯಲ್ಲಿ ಎರಡನೇ ಸ್ನಾತಕೋತ್ತರ ಪದವಿಯನ್ನು ಪಡೆದಿದ್ದಾರೆ.

Atishi Net Worth: ತನ್ನ ಹೆಸರಲ್ಲಿ ಜಮೀನು, ಒಡವೆ ಇಲ್ಲದೇ ಇದ್ದರೂ ಕೋಟ್ಯಾಧಿಪತಿ ಈ ಅತಿಶಿ
ಅತಿಶಿ ಮರ್ಲೆನಾ
ರಶ್ಮಿ ಕಲ್ಲಕಟ್ಟ
|

Updated on: Sep 17, 2024 | 2:39 PM

Share

ದೆಹಲಿ ಸೆಪ್ಟೆಂಬರ್ 17: ದೆಹಲಿಯ ನೂತನ ಮುಖ್ಯಮಂತ್ರಿಯಾಗಿ (Delhi CM) ಅತಿಶಿ ಮರ್ಲೆನಾ (Atishi Marlena) ಆಯ್ಕೆಯಾಗಿದ್ದಾರೆ. ಮಂಗಳವಾರ ಬೆಳಗ್ಗೆ ದೆಹಲಿಯ ಅರವಿಂದ್ ಕೇಜ್ರಿವಾಲ್ (Arvind Kejriwal) ಅವರ ಮನೆಯಲ್ಲಿ ನಡೆದ ಶಾಸಕಾಂಗ ಪಕ್ಷದ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಸಭೆಯಲ್ಲಿ, ಕೇಜ್ರಿವಾಲ್ ಅವರು ಸಿಎಂ ಸ್ಥಾನಕ್ಕೆ ಅತಿಶಿ ಹೆಸರನ್ನು ಪ್ರಸ್ತಾಪಿಸಿದರು. ಕೇಜ್ರಿವಾಲ್ ಇಂದು (ಮಂಗಳವಾರ) ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದು, ಸಂಜೆ 4:30 ಕ್ಕೆ ಲೆಫ್ಟಿನೆಂಟ್ ಗವರ್ನರ್ ವಿಕೆ ಸಕ್ಸೇನಾ ಅವರನ್ನು ಭೇಟಿಯಾಗಲಿದ್ದಾರೆ.

ಅಂದಹಾಗೆ ಸುಷ್ಮಾ ಸ್ವರಾಜ್ ಮತ್ತು ಶೀಲಾ ದೀಕ್ಷಿತ್ ನಂತರ ದೆಹಲಿಯ ಮುಖ್ಯಮಂತ್ರಿಯಾದ ಮೂರನೇ ಮಹಿಳೆಯಾಗಿದ್ದಾರೆ ಅತಿಶಿ ಮರ್ಲೆನಾ. ಪ್ರಸ್ತುತ ಭಾರತದಲ್ಲಿ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸುತ್ತಿರುವ ಮಹಿಳಾ ಮುಖ್ಯಮಂತ್ರಿಗಳಲ್ಲಿ ಮಮತಾ ಬ್ಯಾನರ್ಜಿ ಒಬ್ಬರಾದರೆ ಈ ಪಟ್ಟಿಗೆ ಅತಿಶಿಯೂ ಸೇರಲಿದ್ದಾರೆ.

ದೆಹಲಿಯ ನೂತನ ಸಿಎಂ ಅತಿಶಿಯ ಆಸ್ತಿ ಲೆಕ್ಕಾಚಾರ

ಅತಿಶಿ ಅವರ ಅಫಿಡವಿಟ್ ಪ್ರಕಾರ, ಆಕೆಯ ಆಸ್ತಿ ಮೌಲ್ಯ 1.41 ಕೋಟಿ ರೂ. ಆಕೆಯ ಅಫಿಡವಿಟ್ ಪ್ರಕಾರ ಆಕೆಯ ಆಸ್ತಿಯ ಒಟ್ಟು ಮೌಲ್ಯವು 1,20,12,824 ರೂ ಆಗಿದ್ದರೆ, ಆಕೆಯ ಆಸ್ತಿಗಳ ಒಟ್ಟು ಮೊತ್ತವು 1,25,12,823 ರೂ. ಆಗಿದೆ.

ಎಲ್ಲೆಲ್ಲಿ ಎಷ್ಟೆಷ್ಟು ಇದೆ?

  • ನಗದು: ರೂ 50,000 (ಅತಿಶಿ ಕೈಯಲ್ಲಿ) ಮತ್ತು ರೂ 15,000 (ಸಂಗಾತಿ ಕೈಯಲ್ಲಿರುವುದು), ಒಟ್ಟು ರೂ 65,000.
  •  ಬ್ಯಾಂಕ್‌ಗಳು, ಹಣಕಾಸು ಸಂಸ್ಥೆಗಳು ಮತ್ತು ಬ್ಯಾಂಕಿಂಗ್ ಅಲ್ಲದ ಹಣಕಾಸು ಕಂಪನಿಗಳಲ್ಲಿನ ಠೇವಣಿ: ರೂ 1,00,87,323.
  • ಎನ್ಎಸ್ಎಸ್, ಅಂಚೆ ಉಳಿತಾಯ ಇತ್ಯಾದಿ: 18,60,500 ರೂ.
  •  ಎಲ್ಐಸಿ ಅಥವಾ ಇತರ ವಿಮಾ ಪಾಲಿಸಿಗಳು: ರೂ 5,00,000.

ಶೈಕ್ಷಣಿಕ ಹಿನ್ನಲೆ

ಅತಿಶಿ ಉತ್ತಮ ಶೈಕ್ಷಣಿಕ ಅರ್ಹತೆ ಹೊಂದಿದ್ದಾರೆ. ಅವರು ಸೇಂಟ್ ಸ್ಟೀಫನ್ಸ್ ಕಾಲೇಜಿನಲ್ಲಿ ಇತಿಹಾಸವನ್ನು ಅಧ್ಯಯನ ಮಾಡಿದ್ದು ದೆಹಲಿ ವಿಶ್ವವಿದ್ಯಾಲಯದಲ್ಲಿ ಟಾಪರ್ ಆಗಿದ್ದರು. ಅವರು ಚೆವೆನಿಂಗ್ ವಿದ್ಯಾರ್ಥಿವೇತನದಲ್ಲಿ ಆಕ್ಸ್‌ಫರ್ಡ್ ವಿಶ್ವವಿದ್ಯಾಲಯದಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದರು.  2006 ರಲ್ಲಿ ರೋಡ್ಸ್ ವಿದ್ವಾಂಸರಾಗಿ ಆಕ್ಸ್‌ಫರ್ಡ್‌ನಿಂದ ಶೈಕ್ಷಣಿಕ ಸಂಶೋಧನೆಯಲ್ಲಿ ಎರಡನೇ ಸ್ನಾತಕೋತ್ತರ ಪದವಿಯನ್ನು ಪಡೆದರು.

ಇದನ್ನೂ ಓದಿ: Atishi Marlena: ಅತಿಶಿ ಮಾರ್ಲೆನಾ ದೆಹಲಿಯ ನೂತನ ಮುಖ್ಯಮಂತ್ರಿ

ಅತಿಶಿ ಅವರ ಬಗ್ಗೆ ಇನ್ನಷ್ಟು

ಆಮ್ ಆದ್ಮಿ ಪಕ್ಷಕ್ಕೆ (ಎಎಪಿ) ಸೇರುವ ಮೊದಲು ಅತಿಶಿ ಆಂಧ್ರಪ್ರದೇಶದ ರಿಷಿ ವ್ಯಾಲಿ ಶಾಲೆಯಲ್ಲಿ ಇತಿಹಾಸ ಮತ್ತು ಇಂಗ್ಲಿಷ್ ಕಲಿಸುತ್ತಿದ್ದರು. ಪ್ರಸ್ತುತ, ಅವರು ಕೇಜ್ರಿವಾಲ್ ನೇತೃತ್ವದ ದೆಹಲಿ ಸರ್ಕಾರದಲ್ಲಿ ಹಣಕಾಸು, ಯೋಜನೆ, ಲೋಕೋಪಯೋಗಿ ಇಲಾಖೆ (PWD), ನೀರು, ವಿದ್ಯುತ್, ಶಿಕ್ಷಣ, ಉನ್ನತ ಶಿಕ್ಷಣ, TTE, ಸೇವೆಗಳು, ಸಾರ್ವಜನಿಕ ಸಂಪರ್ಕಗಳು ಮತ್ತು ವಿಜಿಲೆನ್ಸ್ ಸೇರಿದಂತೆ ವ್ಯಾಪಕ ಶ್ರೇಣಿಯ ಜವಾಬ್ದಾರಿಗಳನ್ನು ನಿರ್ವಹಿಸುತ್ತಿದ್ದಾರೆ. ಅತಿಶಿ ಅವರು 11 ಇಲಾಖೆಗಳನ್ನು ನೋಡಿಕೊಳ್ಳುತ್ತಾರೆ, ಇದು ದೆಹಲಿ ಕ್ಯಾಬಿನೆಟ್‌ನಲ್ಲಿ ಯಾವುದೇ ಸಚಿವರನ್ನು ಹೊಂದಿರುವ ಅತಿ ಹೆಚ್ಚು ಸಂಖ್ಯೆಯಾಗಿದೆ. ಈಕೆ ಪ್ರಸ್ತುತ ಕ್ಯಾಬಿನೆಟ್‌ನಲ್ಲಿರುವ ಏಕೈಕ ಸಚಿವೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!