AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ayodhya: ರಾಮ ಜನ್ಮಭೂಮಿ ಮೇಲೆ ದಾಳಿಗೆ ಹೊಂಚು ಹಾಕಿದ್ದ ಉಗ್ರರ ಬಂಧನ; ಕಾಶ್ಮೀರ, ದೆಹಲಿಯಲ್ಲಿ ಹೈ ಅಲರ್ಟ್

Independence Day 2021: ಆ. 15ರಂದು ಭಾರತದ ಪ್ರಮುಖ ಸ್ಥಳಗಳ ಮೇಲೆ ಉಗ್ರರು ದಾಳಿ ನಡೆಸಲು ಹೊಂಚು ಹಾಕಿರುವುದರಿಂದ ಜಮ್ಮು ಕಾಶ್ಮೀರ ಮತ್ತು ದೆಹಲಿಯ ಸುತ್ತಮುತ್ತ ಹೈ ಅಲರ್ಟ್​ ಘೋಷಣೆ ಮಾಡಲಾಗಿದೆ.

Ayodhya: ರಾಮ ಜನ್ಮಭೂಮಿ ಮೇಲೆ ದಾಳಿಗೆ ಹೊಂಚು ಹಾಕಿದ್ದ ಉಗ್ರರ ಬಂಧನ; ಕಾಶ್ಮೀರ, ದೆಹಲಿಯಲ್ಲಿ ಹೈ ಅಲರ್ಟ್
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on:Aug 14, 2021 | 5:18 PM

Share

ಶ್ರೀನಗರ: ನಾಳೆ ಭಾರತದ ಸ್ವಾತಂತ್ರ್ಯ ದಿನಾಚರಣೆ (Independence Day) . ಈ ಸಂಭ್ರಮವನ್ನು ಕರಾಳ ದಿನವನ್ನಾಗಿಸಬೇಕೆಂದು ಹೊಂಚು ಹಾಕಿದ್ದ ಉಗ್ರರು ಜಮ್ಮು ಕಾಶ್ಮೀರದ ಅಡಗುತಾಣದಲ್ಲಿ ಸಂಚು ರೂಪಿಸಿದ್ದರು. ದಿನದಂದು ಪಾಕಿಸ್ತಾನ ಮೂಲದ ಜೈಷ್-ಇ-ಮೊಹಮ್ಮದ್ (JeM) ಉಗ್ರ ಸಂಘಟನೆಯ ಆ ಅಡಗುತಾಣದ ಮೇಲೆ ದಾಳಿ ನಡೆಸಿರುವ ಜಮ್ಮು ಮತ್ತು ಕಾಶ್ಮೀರ ಪೊಲೀಸರು ನಾಲ್ವರು ಉಗ್ರರನ್ನು ಬಂಧಿಸಿದ್ದಾರೆ. ಈ ಉಗ್ರರು ದೆಹಲಿಯ ಪ್ರಮುಖ ಸ್ಮಾರಕಗಳು ಹಾಗೂ ಸ್ವಾತಂತ್ರ್ಯ ದಿನಾಚರಣೆ ನಡೆಯುವ ಜಾಗ, ಅಯೋಧ್ಯೆಯ ರಾಮ ಮಂದಿರ (Ram Temple in Ayodhya) ನಿರ್ಮಾಣವಾಗುತ್ತಿರುವ ಜಾಗದಲ್ಲಿ ಬಾಂಬ್ ಸ್ಫೋಟಿಸಲು ಸಂಚು ರೂಪಿಸಿದ್ದರು ಎನ್ನಲಾಗಿದೆ. ಆದರೆ, ಆ ಉಗ್ರರನ್ನು ಪೊಲೀಸರು ಬಂಧಿಸಿರುವುದರಿಂದ ಭಾರೀ ಅನಾಹುತವೊಂದು ತಪ್ಪಿದಂತಾಗಿದೆ. ಆ. 15ರಂದು ಭಾರತದ ಪ್ರಮುಖ ಸ್ಥಳಗಳ ಮೇಲೆ ಉಗ್ರರು ದಾಳಿ ನಡೆಸಲು ಹೊಂಚು ಹಾಕಿರುವುದರಿಂದ ಜಮ್ಮು ಕಾಶ್ಮೀರ ಮತ್ತು ದೆಹಲಿಯ ಸುತ್ತಮುತ್ತ ಹೈ ಅಲರ್ಟ್​ ಘೋಷಣೆ ಮಾಡಲಾಗಿದೆ.

ಜಮ್ಮುವಿನಲ್ಲಿದ್ದ ಜೈಷ್-ಇ-ಮೊಹಮ್ಮದ್ ಸಂಘಟನೆಯ ನಾಲ್ವರು ಉಗ್ರರು ಪಾಕಿಸ್ತಾನದ ಜೈಷ್ ಕಮಾಂಡರ್​ಗಳ ಜೊತೆ ನಿಕಟ ಸಂಪರ್ಕದಲ್ಲಿದ್ದಾರೆ ಎಂಬ ಮಾಹಿತಿ ಜಮ್ಮು ಕಾಶ್ಮೀರದ ಪೊಲೀಸರಿಗೆ ಲಭ್ಯವಾಗಿತ್ತು. ಆ ನಾಲ್ವರಲ್ಲಿ ಒಬ್ಬನಾದ ಇಜಾಹರ್ ಖಾನ್ ಉತ್ತರ ಪ್ರದೇಶದ ಶಾಮ್ಲಿಯವನಾಗಿದ್ದು, ಆತನನ್ನು ಅಯೋಧ್ಯೆಯ ರಾಮಜನ್ಮಭೂಮಿ ಹಾಗೂ ಪಾಣಿಪತ್ ಮೇಲೆ ದಾಳಿ ಮಾಡಲು ನಿಯೋಜನೆ ಮಾಡಲಾಗಿತ್ತು. ಆದರೆ, ಆ ಉಗ್ರರು ಅಯೋಧ್ಯೆ ಹಾಗೂ ದೆಹಲಿಯ ನಾನಾ ಭಾಗಗಳಲ್ಲಿ ದಾಳಿ ನಡೆಸುವ ಮೊದಲೇ ಜಮ್ಮು ಕಾಶ್ಮೀರದ ಪೊಲೀಸರನ್ನು ಅವರನ್ನು ಬಂಧಿಸಿದ್ದಾರೆ.

ಕಾಶ್ಮೀರದಲ್ಲಿದ್ದ ಜೈಷ್​-ಇ-ಮೊಹಮ್ಮದ್ ಅಡಗುತಾಣಗಳ ಮೇಲೆ ಇಂದು ಜಮ್ಮು ಮತ್ತು ಕಾಶ್ಮೀರ ಪೊಲೀಸರು ದಾಳಿ ನಡೆಸಿದ್ದು, ನಾಲ್ವರು ಉಗ್ರರನ್ನು ಬಂಧಿಸಿದ್ದಾರೆ. ಬಂಧಿತ ನಾಲ್ವರು ಉಗ್ರರು ಜೈಷ್-ಇ-ಮೊಹಮ್ಮದ್ ಉಗ್ರ ಸಂಘಟನೆಗೆ ಸೇರಿದವರಾಗಿದ್ದಾರೆ. ಈ ಉಗ್ರರು ಸ್ವಾತಂತ್ರ್ಯ ದಿನಾಚರಣೆಯ ದಿನದಂದು ದಾಳಿ ನಡೆಸಲು ಶಸ್ತ್ರಾಸ್ತ್ರಗಳನ್ನು ಸಂಗ್ರಹಿಸಿ ಡ್ರೋಣ್ ಮೂಲಕ ಕಾಶ್ಮೀರದಲ್ಲಿರುವ ಉಗ್ರರಿಗೆ ರವಾನಿಸುತ್ತಿದ್ದರು. ಈ ಹಿನ್ನೆಲೆಯಲ್ಲಿ ದೆಹಲಿಯಿಂದ ಜಮ್ಮು ಕಾಶ್ಮೀರದವರೆಗೆ ಭದ್ರತೆಯನ್ನು ಹೆಚ್ಚಿಸಲಾಗಿದೆ. ಭದ್ರತಾ ಪಡೆ ಸಿಬ್ಬಂದಿ ದೆಹಲಿಯ ಎಲ್ಲೆಡೆ ಬೀಡುಬಿಟ್ಟಿದ್ದಾರೆ. ಈ ಭಾಗಗಳಲ್ಲಿ ಡ್ರೋನ್​ಗಳನ್ನು ಹಾರಿಸದಂತೆ ಆದೇಶ ಹೊರಡಿಸಲಾಗಿದೆ.

ನಾಳೆಯ ಸ್ವಾತಂತ್ರ್ಯ ದಿನಾಚರಣೆಗೆ ಉಗ್ರರಿಂದ ಅಡ್ಡಿಯಾಗುವ ಆತಂಕ ಇರುವುದರಿಂದ ದೇಶದ ಐತಿಹಾಸಿಕ ಮತ್ತು ಧಾರ್ಮಿಕ ಸ್ಥಳಗಳಲ್ಲಿ ಮಫ್ತಿಯಲ್ಲಿರುವ ಪೊಲೀಸರನ್ನು ನಿಯೋಜಿಸಲಾಗಿದೆ. ಹಾಗೇ ಇಂದು ಸಂಜೆಯಿಂದ ದೆಹಲಿಯಲ್ಲಿ ಸೆಕ್ಷನ್ 144 ಜಾರಿಗೊಳಿಸಲಾಗಿದೆ.

ಇದನ್ನೂ ಓದಿ: Kinnaur Landslide: ಹಿಮಾಚಲ ಪ್ರದೇಶದಲ್ಲಿ ಭೂಕುಸಿತ; ಸಾವನ್ನಪ್ಪಿದವರ ಸಂಖ್ಯೆ 23ಕ್ಕೆ ಏರಿಕೆ

ನರಕವಾಗಿದೆ ಅಫ್ಘಾನಿಸ್ತಾನ; ಆಟವಾಡುವ ಮಕ್ಕಳೂ ಇಲ್ಲಿ ತಾಲಿಬಾನ್ ಉಗ್ರರ ಲೈಂಗಿಕ ಕ್ರಿಯೆಗೆ ಮೀಸಲು!

(Attack on Ayodhya Ram Temple Failed as Jammu Kashmir Police Arrested 4 Jaish Terrorists amid of Independence Day)

Published On - 5:17 pm, Sat, 14 August 21

Follow Us
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾ ಬೆಂಬಲಕ್ಕೆ ನಿಂತ ಭಕ್ತ ಸಮೂಹ
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾ ಬೆಂಬಲಕ್ಕೆ ನಿಂತ ಭಕ್ತ ಸಮೂಹ
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ?
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ?
ಯುದ್ಧ ಪೀಡಿತ ಪ್ರದೇಶದಲ್ಲಿರೋ ಕನ್ನಡಿಗರ ಬಗ್ಗೆ ಕುಮಾರಸ್ವಾಮಿ ಶಾಕಿಂಗ್ ಹೇಳಿ
ಯುದ್ಧ ಪೀಡಿತ ಪ್ರದೇಶದಲ್ಲಿರೋ ಕನ್ನಡಿಗರ ಬಗ್ಗೆ ಕುಮಾರಸ್ವಾಮಿ ಶಾಕಿಂಗ್ ಹೇಳಿ
ಭಾರತ ಮತ್ತು ಇಲ್ಲಿನ ಜನರ ಪ್ರೀತಿ ಅದ್ಭುತ: ಇರಾನ್ ಮೂಲದ ಪೈಲ್ವಾನ್ ಮಿರ್ಜಾ
ಭಾರತ ಮತ್ತು ಇಲ್ಲಿನ ಜನರ ಪ್ರೀತಿ ಅದ್ಭುತ: ಇರಾನ್ ಮೂಲದ ಪೈಲ್ವಾನ್ ಮಿರ್ಜಾ
ಅಧಿಕಾರ ಹಂಚಿಕೆ ಜಟಾಪಟಿ: ಅಚ್ಚರಿಯ ಹೇಳಿಕೆ ಕೊಟ್ಟ ಸತೀಶ್​​ ಜಾರಕಿಹೊಳಿ
ಅಧಿಕಾರ ಹಂಚಿಕೆ ಜಟಾಪಟಿ: ಅಚ್ಚರಿಯ ಹೇಳಿಕೆ ಕೊಟ್ಟ ಸತೀಶ್​​ ಜಾರಕಿಹೊಳಿ
ಸಿಲಿಂಡರ್​​ ಸ್ಫೋಟಗೊಂಡು ಮನೆಗೆ ಮನೆಯೇ ಸರ್ವನಾಶ!
ಸಿಲಿಂಡರ್​​ ಸ್ಫೋಟಗೊಂಡು ಮನೆಗೆ ಮನೆಯೇ ಸರ್ವನಾಶ!
ಕುವೈತ್​ನಲ್ಲಿರುವ ಅಮೆರಿಕ ರಾಯಭಾರ ಕಚೇರಿ ಆವರಣದಲ್ಲಿ ಇರಾನ್ ಡ್ರೋನ್ ದಾಳಿ
ಕುವೈತ್​ನಲ್ಲಿರುವ ಅಮೆರಿಕ ರಾಯಭಾರ ಕಚೇರಿ ಆವರಣದಲ್ಲಿ ಇರಾನ್ ಡ್ರೋನ್ ದಾಳಿ
ಬೆಂಗಳೂರಿನಿಂದ ವಿದೇಶಕ್ಕೆ ಹೋಗಬೇಕಾದ, ಬರಬೇಕಾದ ಒಟ್ಟು 24 ವಿಮಾನ ರದ್ದು
ಬೆಂಗಳೂರಿನಿಂದ ವಿದೇಶಕ್ಕೆ ಹೋಗಬೇಕಾದ, ಬರಬೇಕಾದ ಒಟ್ಟು 24 ವಿಮಾನ ರದ್ದು
ಉಚಿತ ಗ್ಯಾರಂಟಿಗೆ ‘ಕೈ’ ಶಾಸಕರಿಂದಲೇ ಮತ್ತೆ ಅಪಸ್ವರ
ಉಚಿತ ಗ್ಯಾರಂಟಿಗೆ ‘ಕೈ’ ಶಾಸಕರಿಂದಲೇ ಮತ್ತೆ ಅಪಸ್ವರ