ಕೆನರಾ ಬ್ಯಾಂಕ್‌ ಮಹಿಳಾ ಅಧಿಕಾರಿ ಮೇಲೆ ಹಲ್ಲೆ, ಪೊಲೀಸ್ ಅಧಿಕಾರಿ ಸಸ್ಪೆಂಡ್​ಗೆ ಸಚಿವೆ ನಿರ್ಮಲಾ ಸೂಚನೆ

ಸೂರತ್: ಸೂರತ್ ನಲ್ಲಿರುವ ಕೆನರಾ ಬ್ಯಾಂಕ್​ಗೆ ನುಗ್ಗಿ ಮಹಿಳಾ ಅಧಿಕಾರಿ ಮೇಲೆ ಹಲ್ಲೆ ನಡೆಸಿರುವ ಘಟನೆ ನಿನ್ನೆ ವರದಿಯಾಗಿದೆ. ಹಲ್ಲೆ ಮಾಡಿದ ಪೊಲೀಸ್ ಅಧಿಕಾರಿಯ ವಿರುದ್ಧ ತೀವ್ರ ಆಕ್ರೋಶ ವ್ಯಕ್ತವಾಗಿದ್ದು, ಗುಜರಾತ್‌ನ ಸೂರತ್ ಜಿಲ್ಲಾಧಿಕಾರಿಗೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಂಗಳವಾರ ರಾತ್ರಿ ಕರೆ ಮಾಡಿ, ಪೊಲೀಸ್ ಅಧಿಕಾರಿ ವಿರುದ್ಧ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದ್ದಾರೆ. ಸೂರತ್ ಕೆನರಾ ಬ್ಯಾಂಕ್​ನಲ್ಲಿ ಪಾಸ್​ ಬುಕ್ ಪ್ರಿಂಟ್​ ಹಾಕುವ ವಿಚಾರವಾಗಿ ಮಹಿಳಾ ಅಧಿಕಾರಿ ಮೇಲೆ ಪೊಲೀಸ್ ಅಧಿಕಾರಿ ಹಲ್ಲೆ […]

ಕೆನರಾ ಬ್ಯಾಂಕ್‌ ಮಹಿಳಾ ಅಧಿಕಾರಿ ಮೇಲೆ ಹಲ್ಲೆ, ಪೊಲೀಸ್ ಅಧಿಕಾರಿ ಸಸ್ಪೆಂಡ್​ಗೆ ಸಚಿವೆ ನಿರ್ಮಲಾ ಸೂಚನೆ
ಸಾಧು ಶ್ರೀನಾಥ್​

Updated on: Jun 24, 2020 | 11:12 AM

ಸೂರತ್: ಸೂರತ್ ನಲ್ಲಿರುವ ಕೆನರಾ ಬ್ಯಾಂಕ್​ಗೆ ನುಗ್ಗಿ ಮಹಿಳಾ ಅಧಿಕಾರಿ ಮೇಲೆ ಹಲ್ಲೆ ನಡೆಸಿರುವ ಘಟನೆ ನಿನ್ನೆ ವರದಿಯಾಗಿದೆ. ಹಲ್ಲೆ ಮಾಡಿದ ಪೊಲೀಸ್ ಅಧಿಕಾರಿಯ ವಿರುದ್ಧ ತೀವ್ರ ಆಕ್ರೋಶ ವ್ಯಕ್ತವಾಗಿದ್ದು, ಗುಜರಾತ್‌ನ ಸೂರತ್ ಜಿಲ್ಲಾಧಿಕಾರಿಗೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಂಗಳವಾರ ರಾತ್ರಿ ಕರೆ ಮಾಡಿ, ಪೊಲೀಸ್ ಅಧಿಕಾರಿ ವಿರುದ್ಧ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದ್ದಾರೆ.

ಸೂರತ್ ಕೆನರಾ ಬ್ಯಾಂಕ್​ನಲ್ಲಿ ಪಾಸ್​ ಬುಕ್ ಪ್ರಿಂಟ್​ ಹಾಕುವ ವಿಚಾರವಾಗಿ ಮಹಿಳಾ ಅಧಿಕಾರಿ ಮೇಲೆ ಪೊಲೀಸ್ ಅಧಿಕಾರಿ ಹಲ್ಲೆ ನಡೆಸಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಸಚಿವೆ ನಿರ್ಮಲಾ ಸೀತಾರಾಮನ್ ಸೂರತ್ ಜಿಲ್ಲಾಧಿಕಾರಿ ಧವಲ್ ಪಟೇಲ್ ಜೊತೆಗೆ ಮಾತನಾಡಿದ್ದಾರೆ. ಘಟನೆ ಬಗ್ಗೆ ಪೊಲೀಸ್ ಅಧಿಕಾರಿ ವಿರುದ್ಧ ಎಫ್ಐಆರ್ ದಾಖಲಾಗಿದೆ ಎಂದು ತಿಳಿದುಬಂದಿದೆ.

ಪೊಲೀಸ್ ಅಧಿಕಾರಿ ಕುಡಿದುಬಂದು ದ್ವೇಷದಿಂದ ಮಹಿಳಾ ಅಧಿಕಾರಿ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಇದೇ ವೇಳೆ ಕೊರೊನಾ ಸೋಂಕು ವಿರುದ್ಧದ ಮಾರ್ಗಸೂಚಿಯಂತೆ ಆತ ಮುಖಕ್ಕೆ ಮಾಸ್ಕ್​ ಸಹ ಹಾಕದೇ ಮಹಿಳಾ ಅಧಿಕಾರಿ ಮೇಲೆ ದೈಹಿಕ ಹಲ್ಲೆ ನಡೆಸಿದ್ದಾರೆ. ಈ ಹಿನ್ನೆಲೆಯಲ್ಲಿ ಆತನನ್ನು ಸಸ್ಪೆಂಡ್​ ಮಾಡಬೇಕು ಎಂದೂ ಬ್ಯಾಂಕ್​ ಅಧಿಕಾರಿಗಳು ಒತ್ತಾಯಿಸಿದ್ದಾರೆ.

Published On - 11:03 am, Wed, 24 June 20

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us