AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಬರಿಮಲೆ ದೇವಾಲಯ ಪ್ರವೇಶಿಸಿ ವಿವಾದ ಸೃಷ್ಟಿಸಿದ್ದ ಬಿಂದು ಅಮ್ಮಿನಿ ಮೇಲೆ ಹಲ್ಲೆ; ಕೆಳಗೆ ಬೀಳುವವರೆಗೂ ಹೊಡೆದ ಎಂದ ಹೋರಾಟಗಾರ್ತಿ

ಶಬರಿಮಲೆಗೆ ಎಲ್ಲ ವಯಸ್ಸಿನ ಮಹಿಳೆಯರೂ ಪ್ರವೇಶಿಸಬಹುದು ಎಂದು ಸುಪ್ರೀಂಕೋರ್ಟ್ ತೀರ್ಪು ನೀಡಿದ ಮೇಲೆ, ಆ ದೇಗುಲ ಪ್ರವೇಶಿಸಿ ಮೊದಲ ಮಹಿಳೆ ಈ ಬಿಂದು ಅಮ್ಮಿನಿ. ಇವರ ಪ್ರವೇಶ ಆಗುತ್ತಿದ್ದಂತೆ ಶಬರಿಮಲೆ ಪ್ರದೇಶ ರಣರಂಗವಾದಂತೆ ಆಗಿತ್ತು.

ಶಬರಿಮಲೆ ದೇವಾಲಯ ಪ್ರವೇಶಿಸಿ ವಿವಾದ ಸೃಷ್ಟಿಸಿದ್ದ ಬಿಂದು ಅಮ್ಮಿನಿ ಮೇಲೆ ಹಲ್ಲೆ; ಕೆಳಗೆ ಬೀಳುವವರೆಗೂ ಹೊಡೆದ ಎಂದ ಹೋರಾಟಗಾರ್ತಿ
ಬಿಂದು ಅಮ್ಮಿನಿ
TV9 Web
| Updated By: Lakshmi Hegde|

Updated on:Jan 06, 2022 | 10:28 AM

Share

ಬಿಂದು ಅಮ್ಮಿನಿ (Bindu Ammini) ನೆನಪಿರಬೇಕಲ್ಲ. 2018ರಲ್ಲಿ ಶಬರಿಮಲೆ ದೇಗುಲ(Sabarimala Temple)ಪ್ರವೇಶಿಸಿ ಪ್ರಾರ್ಥನೆ ಸಲ್ಲಿಸುವ ಮೂಲಕ ಬಹುದೊಡ್ಡ ಮಟ್ಟದ ವಿವಾದ ಸೃಷ್ಟಿಸಿದ ಮಹಿಳೆ ಈಕೆ. ದೇವಾಲಯಕ್ಕೆ 10-50ವರ್ಷದ ಮಹಿಳೆಯರು ಪ್ರವೇಶ ಮಾಡಬಾರದು ಎಂಬ ನಿಯಮ ಹಿಂದೆ ಇತ್ತು. ನಂತರ 2018ರಲ್ಲಿ ಸುಪ್ರೀಂಕೋರ್ಟ್ ಐತಿಹಾಸಿಕ ತೀರ್ಪು ನೀಡುವ ಮೂಲಕ, ಶಬರಿಮಲೆ ದೇಗುಲಕ್ಕೆ ಎಲ್ಲ ವಯಸ್ಸಿನ ಮಹಿಳೆಯೂ ಪ್ರವೇಶಿಸಿ, ಪೂಜೆ ಸಲ್ಲಿಸಬಹುದು ಎಂದು ಹೇಳಿತ್ತು. ಅದರ ಬೆನ್ನಲ್ಲೇ 2019ರಲ್ಲಿ ಬಿಂದು ಅಮ್ಮಿನಿ ಶಬರಿಮಲೆಗೆ ಹೋಗಿ, ಪ್ರಾರ್ಥನೆ ಸಲ್ಲಿಸಿದ್ದರು. ಆದರೂ ಕೂಡ ಇದು ವಿವಾದಕ್ಕೆ ಕಾರಣವಾಗಿತ್ತು.  ಆ ಬಿಂದು ಅಮ್ಮಿನಿ ಮೇಲೆ ಕೋಝಿಕ್ಕೋಡ್ ಬೀಚ್​​ನಲ್ಲಿ ಅಪರಿಚಿತ ವ್ಯಕ್ತಿಯೊಬ್ಬ ಹಲ್ಲೆ ಮಾಡಿದ್ದಾನೆ. ನಾನು ಕೋರ್ಟ್​ ಕೇಸ್​​ಗೆ ಸಂಬಂಧಪಟ್ಟ ಕೆಲಸಕ್ಕೆ ಕೋಝಿಕ್ಕೋಡ್​​ನ ಉತ್ತರದ ಬೀಚ್​​ಗೆ ಭೇಟಿ ಕೊಟ್ಟಿದ್ದೆ. ಅಲ್ಲಿಗೆ ಹೋಗುತ್ತಿದ್ದಂತೆ ನನ್ನ ಮೇಲೆ ಹಲ್ಲೆಯಾಗಿದೆ ಎಂದು ದಲಿತ ಹೋರಾಟಗಾರ್ತಿ ಬಿಂದು ಅಮ್ಮಿನಿ ಆರೋಪಿಸಿದ್ದಾರೆ. ಪೊಲೀಸರಿಗೆ ದೂರು ನೀಡಿದ್ದು, ಆ ವ್ಯಕ್ತಿ ನನಗೆ ಹೊಡೆದಿದ್ದಾನೆ. ನಾನು ಕೆಳಗೆ ರಸ್ತೆಯಮೇಲೆ ಬೀಳುವವರೆಗೂ ಹೊಡೆದ ಎಂದು ತಿಳಿಸಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಪೊಲೀಸರು, ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಅಲ್ಲಿನ ಸಿಸಿಟಿವಿ ದೃಶ್ಯಗಳನ್ನು ಪರಿಶೀಲಿಸಲಾಗುತ್ತಿದೆ ಎಂದು ಮಾಹಿತಿ ನೀಡಿದ್ದಾರೆ. 

ತನ್ನ ಮೇಲೆ ಹಲ್ಲೆ ನಡೆಸಿದ್ದು ಹಿಂದು ಸಂಘಟನೆಗಳು ಎಂದು ಬಿಂದು ಅಮ್ಮಿನಿ ಆರೋಪಿಸಿದ್ದಾರೆ.  ಹಾಗೇ, ನನ್ನ ಮೇಲೆ ಹಲ್ಲೆಯಾಗಿದ್ದು ಇದೇ ಮೊದಲೂ ಅಲ್ಲ. ಕಳೆದ ತಿಂಗಳು ವೇಗವಾಗಿ ಬಂದ ಆಟೋರಿಕ್ಷಾ ನನಗೆ ಡಿಕ್ಕಿ ಹೊಡೆದಿತ್ತು. ಆಗ ನಾನು ಆಸ್ಪತ್ರೆಯಲ್ಲಿ ದಾಖಲಾಗಿದ್ದೆ ಎಂದೂ ಬಿಂದು ಅಮ್ಮಿನಿ ಹೇಳಿದ್ದಾರೆ.  ಹಾಗೇ, ಬುಧವಾರ ವಕೀಲರೊಬ್ಬರನ್ನು ಭೇಟಿಯಾಗಲು ಕೋಝಿಕ್ಕೋಡ್ ಬೀಚ್​ಗೆ ತೆರಳಿದ್ದೆ. ಒಮ್ಮೆಲೇ ಬಂದ ವ್ಯಕ್ತಿ ನನ್ನ ದ್ವಿಚಕ್ರವಾಹನವನ್ನು ಅಡ್ಡಗಟ್ಟಿದ. ನನ್ನ ಮೇಲೆ ಹಲ್ಲೆ ನಡೆಯುತ್ತಿರುವುದನ್ನು ನೋಡಿ ಒಂದಷ್ಟು ಜನರು ಅಲ್ಲಿಗೆ ಬಂದರು. ಆಗ ಆತ ಓಡಿ ಹೋದ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಶಬರಿಮಲೆಗೆ ಎಲ್ಲ ವಯಸ್ಸಿನ ಮಹಿಳೆಯರೂ ಪ್ರವೇಶಿಸಬಹುದು ಎಂದು ಸುಪ್ರೀಂಕೋರ್ಟ್ ತೀರ್ಪು ನೀಡಿದ ಮೇಲೆ, ಆ ದೇಗುಲ ಪ್ರವೇಶಿಸಿ ಮೊದಲ ಮಹಿಳೆ ಈ ಬಿಂದು ಅಮ್ಮಿನಿ. ಇವರ ಪ್ರವೇಶ ಆಗುತ್ತಿದ್ದಂತೆ ಶಬರಿಮಲೆ ಪ್ರದೇಶ ರಣರಂಗವಾದಂತೆ ಆಗಿತ್ತು. ದೇಗುಲ ಶುದ್ಧೀಕರಣಕ್ಕಾಗಿ ಆಡಳಿತ ಮಂಡಳಿಯವರು ದೇವಾಲಯದ ಬಾಗಿಲನ್ನೇ ಮುಚ್ಚಿಬಿಟ್ಟಿದ್ದರು. ಬಹುದೊಡ್ಡ ಮಟ್ಟದ ಪ್ರತಿಭಟನೆಗಳು ಕೇರಳದ ಬೀದಿಬೀದಿಯಲ್ಲಿ ನಡೆದಿದ್ದವು. ಬಸ್​ಗೆ ಬೆಂಕಿ ಹಚ್ಚಲಾಗಿತ್ತು. ಪ್ರಮುಖ ನಾಯಕರ ಮನೆಗಳ ಮೇಲೆ ಬಾಂಬ್​ ಎಸೆಯಲಾಗಿತ್ತು. ಈ ಘಟನೆಗೆ ಸಂಬಂಧಪಟ್ಟಂತೆ ಪೊಲೀಸರು 10 ಸಾವಿರ ಮಂದಿಯನ್ನು ವಶಕ್ಕೆ ಪಡೆದಿದ್ದರು. ಇದೀಗ ಹಲ್ಲೆಗೆ ಒಳಗಾಗಿರುವ ಬಿಂದು ಅಮ್ಮಿನಿ, ತನಗೆ ಕೇರಳ ಪೊಲೀಸರ ಮೇಲೆ ನಂಬಿಕೆಯಿಲ್ಲ. ಅವರು ನನಗೆ ನ್ಯಾಯ ಒದಗಿಸುತ್ತಾರೆ ಎಂದು ಅನ್ನಿಸುವುದಿಲ್ಲ ಎಂದು ಕೂಡ ಹೇಳಿದ್ದಾರೆ.

ಇದನ್ನೂ ಓದಿ: ವಯಸ್ಕರಿಗೆ 2ನೇ ಡೋಸ್ ಲಸಿಕೆ ನೀಡಿಕೆಯಲ್ಲಿ ಕರ್ನಾಟಕಕ್ಕೆ 3ನೇ ಸ್ಥಾನ; ಆರೋಗ್ಯ ಸಚಿವ ಸುಧಾಕರ್ ಟ್ವೀಟ್

Published On - 9:26 am, Thu, 6 January 22

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ