AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊಲೆ ಯತ್ನ ಪ್ರಕರಣ: ಲಕ್ಷದ್ವೀಪ ಸಂಸದನ ಶಿಕ್ಷೆಗೆ ತಡೆ ನೀಡಿದ ಕೇರಳ ಹೈಕೋರ್ಟ್ ಆದೇಶವನ್ನು ರದ್ದುಗೊಳಿಸಿದ ಸುಪ್ರೀಂ

ಕೇಂದ್ರ ಸಚಿವ ಪಿಎಂ ಸಯೀದ್ ಅವರ ಅಳಿಯ ಮೊಹಮ್ಮದ್ ಸಾಲಿಹ್ ಅವರನ್ನು ಕೊಲೆ ಮಾಡಲು ಪ್ರಯತ್ನಿಸಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಲಕ್ಷದ್ವೀಪದ ಲೋಕಸಭಾ ಸಂಸದ ಮೊಹಮ್ಮದ್ ಫೈಜಲ್ ಅವರ ಅಪರಾಧ ಮತ್ತು ಶಿಕ್ಷೆಯನ್ನು ಅಮಾನತುಗೊಳಿಸಿದ ಕೇರಳ ಹೈಕೋರ್ಟ್ ಆದೇಶವನ್ನು ಇಂದು (ಆ.22) ಸುಪ್ರೀಂ ಕೋರ್ಟ್​ ರದ್ದುಗೊಳಿಸಿದೆ.

ಕೊಲೆ ಯತ್ನ ಪ್ರಕರಣ: ಲಕ್ಷದ್ವೀಪ ಸಂಸದನ ಶಿಕ್ಷೆಗೆ ತಡೆ ನೀಡಿದ ಕೇರಳ ಹೈಕೋರ್ಟ್ ಆದೇಶವನ್ನು ರದ್ದುಗೊಳಿಸಿದ ಸುಪ್ರೀಂ
ಮೊಹಮ್ಮದ್ ಫೈಜಲ್
Follow us
ಅಕ್ಷಯ್​ ಪಲ್ಲಮಜಲು​​
|

Updated on: Aug 22, 2023 | 2:51 PM

ದೆಹಲಿ, ಆ.22: ಕೇಂದ್ರ ಸಚಿವ ಪಿಎಂ ಸಯೀದ್ ಅವರ ಅಳಿಯ ಮೊಹಮ್ಮದ್ ಸಾಲಿಹ್ ಅವರನ್ನು ಕೊಲೆ ಮಾಡಲು ಪ್ರಯತ್ನಿಸಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಲಕ್ಷದ್ವೀಪದ ಲೋಕಸಭಾ (Lakshadweep Lok Sabha) ಸಂಸದ ಮೊಹಮ್ಮದ್ ಫೈಜಲ್ (Mohammed Faizal) ಅವರ ಅಪರಾಧ ಮತ್ತು ಶಿಕ್ಷೆಯನ್ನು ಅಮಾನತುಗೊಳಿಸಿದ ಕೇರಳ ಹೈಕೋರ್ಟ್ ಆದೇಶವನ್ನು ಇಂದು (ಆ.22) ಸುಪ್ರೀಂ ಕೋರ್ಟ್​ ರದ್ದುಗೊಳಿಸಿದೆ. ಮತ್ತೆ ಈ ಬಗ್ಗೆ ವಿಚಾರಣೆ ನಡೆಸುವಂತೆ, ಪ್ರಕರಣಕ್ಕೆ ಸಂಬಂಧಿಸಿದಂತೆ ಮರುತನಿಖೆ ನಡೆಸುವಂತೆ ಪ್ರಕರಣವನ್ನು ಸುಪ್ರೀಂ ಕೋರ್ಟ್​ ಕೇರಳ ಹೈಕೋರ್ಟ್​ಗೆ ಹಿಂತಿರುಗಿಸಿದೆ. ಸುಪ್ರೀಂ ಕೋರ್ಟ್​ನ ನ್ಯಾಯಮೂರ್ತಿಗಳಾದ ಬಿ.ವಿ.ನಾಗರತ್ನ ಮತ್ತು ಉಜ್ಜಲ್ ಭುಯಾನ್ ಅವರನ್ನೊಳಗೊಂಡ ಪೀಠವು ಈ ಪ್ರಕರಣದಲ್ಲಿ ಲೋಕಸಭೆಯ ಸಂಸದರ ಅಪರಾಧ ಮತ್ತು ಶಿಕ್ಷೆಯನ್ನು ಅಮಾನತುಗೊಳಿಸುವಲ್ಲಿ ಹೈಕೋರ್ಟ್‌ನ ವಿಧಾನವು ತಪ್ಪು ಎಂದು ಹೇಳಿದೆ.

2023ರ ಜನವರಿಯಲ್ಲಿ ಕೇಂದ್ರ ಸಚಿವ ಪಿಎಂ ಸಯೀದ್ ಅವರ ಅಳಿಯ ಮೊಹಮ್ಮದ್ ಸಾಲಿಹ್ ಅವರನ್ನು ಕೊಲ್ಲಲು ಪ್ರಯತ್ನಿಸಿದ್ದಕ್ಕಾಗಿ ಮೊಹಮ್ಮದ್ ಫೈಜಲ್ ಅವರಿಗೆ 10 ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಲಾಯಿತು. ಬಳಿಕ ಅವರು ಕೆಳ ನ್ಯಾಯಾಲಯದ ಆದೇಶವನ್ನು ಪ್ರಶ್ನಿಸಿ ಕೇರಳ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದರು.

ವಿಚಾರಣಾ ನ್ಯಾಯಾಲಯದ ಆದೇಶದ ವಿರುದ್ಧದ ಮೇಲ್ಮನವಿಯನ್ನು ವಿಚಾರಣೆ ಮಾಡುವವರೆಗೆ ಎನ್‌ಸಿಪಿ ನಾಯಕ ಮೊಹಮ್ಮದ್ ಫೈಜಲ್ ಅವರ ಅಪರಾಧ ಮತ್ತು ಶಿಕ್ಷೆಯನ್ನು ಅಮಾನತುಗೊಳಿಸುವುದಾಗಿ ಹೈಕೋರ್ಟ್ ಹೇಳಿತ್ತು. ಹೈಕೋರ್ಟ್​ನ ಈ ಆದೇಶವನ್ನು ಲಕ್ಷದ್ವೀಪ ಸರ್ಕಾರವು ಸುಪ್ರೀಂ ಕೋರ್ಟ್‌ನಲ್ಲಿ ಪ್ರಶ್ನಿಸಿತ್ತು. ಮೊಹಮ್ಮದ್ ಫೈಜಲ್ ಅವರ ಪರವಾಗಿ ನೀಡಿರುವ ಈ ಆದೇಶವು, ನ್ಯಾಯಾಂಗದ ಮೇಲಿನ ನಂಬಿಕೆ ಜನರಲ್ಲಿ ಹೋಗುತ್ತದೆ ಎಂದು ಸರ್ಕಾರ ತಿಳಿಸಿದೆ.

ಇದನ್ನೂ ಓದಿ: ಕೊಲೆ ಯತ್ನ ಪ್ರಕರಣದಲ್ಲಿ ಲಕ್ಷದ್ವೀಪದ ಸಂಸದ ಮೊಹಮ್ಮದ್ ಫೈಝಲ್​ಗೆ 10 ವರ್ಷ ಜೈಲು ಶಿಕ್ಷೆ ಪ್ರಕಟ

ಪ್ರಾಸಿಕ್ಯೂಷನ್ ಪ್ರಕಾರ, ಮೊಹಮ್ಮದ್ ಫೈಜಲ್ ಮತ್ತು ಇತರ ಕೆಲವು ವ್ಯಕ್ತಿಗಳು ಮಾರಣಾಂತಿಕ ಶಸ್ತ್ರಾಸ್ತ್ರಗಳನ್ನು ಹಿಡಿದು ಮೊಹಮ್ಮದ್ ಸಾಲಿಹ್ ಮೇಲೆ ದಾಳಿ ಮಾಡಿದ್ದರು ಎಂದು ಹೇಳಲಾಗಿದೆ. ಈ ಪ್ರಕರಣದಲ್ಲಿ 37 ಆರೋಪಿಗಳಿದ್ದು, ಅವರಲ್ಲಿ ಇಬ್ಬರು ವಿಚಾರಣೆ ವೇಳೆ ಸಾವನ್ನಪ್ಪಿದ್ದಾರೆ. ಉಳಿದ 35 ಜನರಲ್ಲಿ, ಅನರ್ಹಗೊಂಡ ಸಂಸದ ಮತ್ತು ಅವರ ಸಹೋದರ ಸೇರಿದಂತೆ ನಾಲ್ವರು ಆರೋಪಿಗಳಿಗೆ 10 ವರ್ಷಗಳ ಜೈಲು ಶಿಕ್ಷೆಯನ್ನು ನೀಡಲಾಗಿತ್ತು. ಇನ್ನು ಉಳಿದವರನ್ನು ಖುಲಾಸೆಗೊಳಿಸಲಾಯಿತು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಬಾಲ್ಯವಿವಾಹದಲ್ಲಿ ಭಾಗಿಯಾಗುವುದೂ ಶಿಕ್ಷಾರ್ಹ ಅಪರಾಧವಾಗಿದೆ!
ಬಾಲ್ಯವಿವಾಹದಲ್ಲಿ ಭಾಗಿಯಾಗುವುದೂ ಶಿಕ್ಷಾರ್ಹ ಅಪರಾಧವಾಗಿದೆ!
ಬ್ಯಾಚುಲರ್ಸ್ ವೇದಿಕೆ ಮೇಲೆ ಡ್ಯಾನ್ಸ್; ಎಲ್ಲರನ್ನೂ ಮೀರಿಸಿದ ರವಿಚಂದ್ರನ್
ಬ್ಯಾಚುಲರ್ಸ್ ವೇದಿಕೆ ಮೇಲೆ ಡ್ಯಾನ್ಸ್; ಎಲ್ಲರನ್ನೂ ಮೀರಿಸಿದ ರವಿಚಂದ್ರನ್
ಬೆಂಗಳೂರಿಗೆ ಬಂದ ಅಮಿತ್ ಶಾಗೆ ಬಿವೈವಿ, ಯಡಿಯೂರಪ್ಪ ಸ್ವಾಗತ
ಬೆಂಗಳೂರಿಗೆ ಬಂದ ಅಮಿತ್ ಶಾಗೆ ಬಿವೈವಿ, ಯಡಿಯೂರಪ್ಪ ಸ್ವಾಗತ
Daily Devotional: ಯಾವ ದಿನ, ಯಾವ ದಾನ ಮಾಡಿದರೆ ಶ್ರೇಷ್ಠ ತಿಳಿಯಿರಿ
Daily Devotional: ಯಾವ ದಿನ, ಯಾವ ದಾನ ಮಾಡಿದರೆ ಶ್ರೇಷ್ಠ ತಿಳಿಯಿರಿ
Daily horoscope: ಈ ರಾಶಿಯವರ ಪ್ರಯತ್ನಕ್ಕೆ ತಕ್ಕ ಫಲ ಸಿಗಲಿದೆ
Daily horoscope: ಈ ರಾಶಿಯವರ ಪ್ರಯತ್ನಕ್ಕೆ ತಕ್ಕ ಫಲ ಸಿಗಲಿದೆ
ಉತ್ತರ ಪ್ರದೇಶದಲ್ಲಿ 2 ತಲೆ, 3 ಕಣ್ಣುಗಳೊಂದಿಗೆ ಜನಿಸಿದ ಕರು; ಜನರಿಂದ ಪೂಜೆ
ಉತ್ತರ ಪ್ರದೇಶದಲ್ಲಿ 2 ತಲೆ, 3 ಕಣ್ಣುಗಳೊಂದಿಗೆ ಜನಿಸಿದ ಕರು; ಜನರಿಂದ ಪೂಜೆ
ಕಮಲ್ ಹಾಸನ್ ತಪ್ಪು ಒಪ್ಪಿಕೊಂಡು ಕ್ಷಮೆ ಕೇಳಲೇಬೇಕು: ವಾಟಾಳ್ ನಾಗರಾಜ್
ಕಮಲ್ ಹಾಸನ್ ತಪ್ಪು ಒಪ್ಪಿಕೊಂಡು ಕ್ಷಮೆ ಕೇಳಲೇಬೇಕು: ವಾಟಾಳ್ ನಾಗರಾಜ್
ಪ್ರಿಯಾಂಕ್​ ಖರ್ಗೆಗೆ ಎಲ್ಲಾದರಲ್ಲೂ ರಾಜಕಿಯ ಮಾಡುವ ಚಟ: ಸಿಟಿ ರವಿ
ಪ್ರಿಯಾಂಕ್​ ಖರ್ಗೆಗೆ ಎಲ್ಲಾದರಲ್ಲೂ ರಾಜಕಿಯ ಮಾಡುವ ಚಟ: ಸಿಟಿ ರವಿ
ಫೈಲ್‌ ಎತ್ತಿ ಇಟ್ಟುಬಿಡ್ತಾರೆ, ಅಲೆದಾಡಿಸ್ತಾರೆ..ಇದಕ್ಕೆ ಹೊಸ ಅಸ್ತ್ರ!
ಫೈಲ್‌ ಎತ್ತಿ ಇಟ್ಟುಬಿಡ್ತಾರೆ, ಅಲೆದಾಡಿಸ್ತಾರೆ..ಇದಕ್ಕೆ ಹೊಸ ಅಸ್ತ್ರ!
‘ಉತ್ತರಕಾಂಡ’ ಸಿನಿಮಾ ಶೂಟಿಂಗ್ ನಿಂತಿದ್ದು ಯಾಕೆ? ಕಾರಣ ನೀಡಿದ ಚಿತ್ರತಂಡ
‘ಉತ್ತರಕಾಂಡ’ ಸಿನಿಮಾ ಶೂಟಿಂಗ್ ನಿಂತಿದ್ದು ಯಾಕೆ? ಕಾರಣ ನೀಡಿದ ಚಿತ್ರತಂಡ