Atul Subhash: ಅತುಲ್​ಗೆ ನೀನ್ಯಾಕೆ ಆತ್ಮಹತ್ಯೆ ಮಾಡಿಕೊಳ್ಬಾರ್ದು ಎಂಬ ನಿಕಿತಾ ಪ್ರಶ್ನೆಗೆ ನಕ್ಕಿದ್ದ ಜಡ್ಜ್​ ರೀಟಾ

ಉತ್ತರ ಪ್ರದೇಶ ಮೂಲದ ಟೆಕ್ಕಿ ಅತುಲ್ ಸುಭಾಷ್ ಬೆಂಗಳೂರಿನಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಸಾಯುವ ಮುನ್ನ 24 ಪುಟಗಳ ಡೆತ್​ನೋಟ್​ ಬರೆದಿಟ್ಟಿದ್ದಷ್ಟೇ ಅಲ್ಲದೆ 90 ನಿಮಿಷಗಳ ವಿಡಿಯೋವನ್ನು ಕೂಡ ಮಾಡಿಟ್ಟಿದ್ದಾರೆ. ಅವರ ವಿರುದ್ಧ ಪತ್ನಿ ನಿಕಿತಾ ವರದಕ್ಷಿಣೆ ಕಿರುಕುಳ ಸೇರಿದಂತೆ ಒಟ್ಟು 9 ಪ್ರಕರಣಗಳನ್ನು ದಾಖಲಿಸಿದ್ದರು. 6 ಪ್ರಕರಣಗಳು ಕೆಳ ನ್ಯಾಯಾಲಯದಲ್ಲಿದ್ದರೆ 3 ಪ್ರಕರಣಗಳು ಹೈಕೋರ್ಟ್​ನಲ್ಲಿತ್ತು.

Atul Subhash: ಅತುಲ್​ಗೆ ನೀನ್ಯಾಕೆ ಆತ್ಮಹತ್ಯೆ ಮಾಡಿಕೊಳ್ಬಾರ್ದು ಎಂಬ ನಿಕಿತಾ ಪ್ರಶ್ನೆಗೆ ನಕ್ಕಿದ್ದ ಜಡ್ಜ್​ ರೀಟಾ
ಅತುಲ್
Image Credit source: NDTV

Updated on: Dec 12, 2024 | 11:12 AM

ಉತ್ತರ ಪ್ರದೇಶ ಮೂಲದ ಟೆಕ್ಕಿ ಅತುಲ್ ಸುಭಾಷ್ ಬೆಂಗಳೂರಿನಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಸಾಯುವ ಮುನ್ನ 24 ಪುಟಗಳ ಡೆತ್​ನೋಟ್​ ಬರೆದಿಟ್ಟಿದ್ದಷ್ಟೇ ಅಲ್ಲದೆ 90 ನಿಮಿಷಗಳ ವಿಡಿಯೋವನ್ನು ಕೂಡ ಮಾಡಿಟ್ಟಿದ್ದಾರೆ. ಅವರ ವಿರುದ್ಧ ಪತ್ನಿ ನಿಕಿತಾ ವರದಕ್ಷಿಣೆ ಕಿರುಕುಳ ಸೇರಿದಂತೆ ಒಟ್ಟು 9 ಪ್ರಕರಣಗಳನ್ನು ದಾಖಲಿಸಿದ್ದರು. 6 ಪ್ರಕರಣಗಳು ಕೆಳ ನ್ಯಾಯಾಲಯದಲ್ಲಿದ್ದರೆ 3 ಪ್ರಕರಣಗಳು ಹೈಕೋರ್ಟ್​ನಲ್ಲಿತ್ತು.

ವಿಚಾರಣೆ ವೇಳೆ ಅತುಲ್ ಬೇಸರದಿಂದ ಈ ರೀತಿ ಕಿರುಕುಳ ಕೊಟ್ಟರೆ ಆತ್ಮಹತ್ಯೆ ಮಾಡಿಕೊಳ್ಳುವುದು ಬಿಟ್ಟು ಬೇರೆ ದಾರಿ ಇಲ್ಲ ಎಂದು ಹೇಳಿದಾಗ ನಿಕಿತಾ ಹಾಗಾದರೆ ಯಾಕಿನ್ನು ಬದುಕಿದ್ದೀಯಾ ಆತ್ಮಹತ್ಯೆ ಮಾಡಿಕೊಂಡಿಲ್ಲ ಎಂದು ಪ್ರಶ್ನಿಸಿದ್ದಳು, ಅದಕ್ಕೆ ಜಡ್ಜ್​ ರೀಟಾ ನಕ್ಕಿದ್ದರು ಈ ವಿಷಯವನ್ನು ಡೆತ್​ನೋಟ್​ನಲ್ಲಿ ಸುಭಾಷ್ ಬರೆದಿದ್ದಾರೆ.  ಅಷ್ಟೇ ಅಲ್ಲದೆ ರೀಟಾ 5 ಲಕ್ಷ ರೂ. ಲಂಚ ಕೇಳಿದ್ದರು ಎಂಬುದನ್ನೂ ಉಲ್ಲೇಖಿಸಿದ್ದಾರೆ.

ಆದರೆ ಒಂದು ಜೀವದ ಪ್ರಶ್ನೆ ಬಂದಾಗ ಕೋರ್ಟ್​ನಲ್ಲಿ ನ್ಯಾಯದ ಪರ ನಿಲ್ಲಬೇಕಾದವರೇ ಈ ವಿಚಾರವನ್ನು ಗಂಭೀರವಾಗಿ ತೆಗೆದುಕೊಳ್ಳದೆ ನಕ್ಕಿದ್ದರು ಎನ್ನುವ ವಿಚಾರದ ಬಗ್ಗೆ ಎಲ್ಲರೂ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಸುಭಾಷ್ ತಮ್ಮನೂ ಮಾತನಾಡಿದ್ದಾರೆ.  ಸುಭಾಷ್ ಪ್ರಕರಣದ ವಿಚಾರಣೆಗಾಗಿ 40 ಬಾರಿ ಬೆಂಗಳೂರಿನಿಂದ ಜೌನ್​ಪುರಕ್ಕೆ ಪ್ರಯಾಣಬೆಳೆಸಿದ್ದ ಎಂದು ಪೋಷಕರು ತಿಳಿಸಿದ್ದಾರೆ.

ಮತ್ತಷ್ಟು ಓದಿ: Atul Subhash: ಬೆಂಗಳೂರಿನಲ್ಲಿ ಟೆಕ್ಕಿ ಅತುಲ್ ಸುಭಾಷ್ ಆತ್ಮಹತ್ಯೆ ಪ್ರಕರಣ, ಕ್ರಿಮಿನಲ್ ಲಾಯರ್ ವಿಕಾಸ್ ಹೇಳಿದ್ದೇನು?

ಅಷ್ಟೇ ಅಲ್ಲದೆ 1 ಕೋಟಿ ರೂ. ಕೊಟ್ಟರೆ ಪ್ರಕರಣಗಳಿಂದ ಮುಕ್ತಗೊಳಿಸಿತ್ತೇನೆ ಎಂದಿದ್ದ ಆಕೆ ಆಮೇಲೆ 3 ಕೋಟಿ ರೂ.ಗೆ ಬೇಡಿಕೆ ಇಟ್ಟಿದ್ದಳು. ಅಷ್ಟೇ ಅಲ್ಲದೆ ಪ್ರಕರಣ ಇತ್ಯರ್ಥ ಮಾಡಿಕೊಡಲು ನ್ಯಾಯಾಧೀಶೆ ಕೂಡ 5 ಲಕ್ಷ ರೂ.ಗೆ ಬೇಡಿಕೆ ಇಟ್ಟಿರುವುದಾಗಿ ಅವರು ಡೆತ್​ನೋಟ್​ನಲ್ಲಿ ಬರೆದಿದ್ದಾರೆ.

ನನ್ನ ಮಗನಿಗೆ ಚಿತ್ರಹಿಂಸೆ ಕೊಟ್ಟರು, ನಮಗೂ ನೋವು ಕೊಟ್ಟಿದ್ದಾರೆ, ಆದರೆ ಮಗ ಇದೆಲ್ಲವನ್ನೂ ಸಹಿಸಿಕೊಂಡಿದ್ದ. 2019ರಲ್ಲಿ ಮದುವೆಯಾಗಿತ್ತು, 2020ರಲ್ಲಿ ಗಂಡು ಮಗುವಿಗೆ ಜನ್ಮ ನೀಡಿದ್ದಳು. ಆಕೆಯ ಮನೆಯವರು ಪದೇ ಪದೇ ಹಣಕ್ಕೆ ಬೇಡಿಕೆ ಇಡುತ್ತಿದ್ದರು. ನಿರಾಕರಿಸಿದ್ದರಿಂದ ಆಕೆ ಮಗನನ್ನು ಕರೆದುಕೊಂಡು 2021ರಲ್ಲಿ ಮನೆ ಬಿಟ್ಟು ಹೋಗಿದ್ದಳು.

ಅದಾದ ಬಳಿಕ ವರದಕ್ಷಿಣೆ ಪ್ರಕರಣ ಸೇರಿ ಆತನ ಮೇಲೆ 9 ಪ್ರಕರಣಗಳನ್ನು ದಾಖಲಿಸಿದ್ದಳು. ಜತೆಗೆ ಆಕೆಯ ತಂದೆಗೆ ಮೊದಲೇ ಹೃದಯ ಸಂಬಂಧಿ ಕಾಯಿಲೆ ಇದ್ದರೂ ಅದನ್ನು ಮುಚ್ಚಿಟ್ಟು ಅವರ ಸಾವಿಗೆ ಅತುಲ್​ ಕಾರಣ ಎಂದು ಬಿಂಬಿಸಲು ಟ್ರೈ ಮಾಡಿದ್ದಳು.

 

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
Follow Us