AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Quit India Movement Day ಸ್ವಾತಂತ್ರ್ಯ ಹೋರಾಟದ ಆಗಸ್ಟ್ ಕ್ರಾಂತಿಯ ಕಹಳೆ ‘ಭಾರತ ಬಿಟ್ಟು ತೊಲಗಿ ಚಳವಳಿ’

ಮಹಾತ್ಮ ಗಾಂಧಿ ನೇತೃತ್ವದ ಇಂಡಿಯನ್ ನ್ಯಾಷನಲ್ ಕಾಂಗ್ರೆಸ್, ಬಾಂಬೆಯಲ್ಲಿ 1942 ಆಗಸ್ಟ್8ರಂದು ಕ್ವಿಟ್ ಇಂಡಿಯಾ ನಿರ್ಣಯವನ್ನು ಮಂಡಿಸಿತ್ತು.

Quit India Movement Day ಸ್ವಾತಂತ್ರ್ಯ ಹೋರಾಟದ ಆಗಸ್ಟ್ ಕ್ರಾಂತಿಯ ಕಹಳೆ ‘ಭಾರತ ಬಿಟ್ಟು ತೊಲಗಿ ಚಳವಳಿ’
ಕ್ವಿಟ್ ಇಂಡಿಯಾ ಚಳವಳಿ
TV9 Web
| Updated By: ರಶ್ಮಿ ಕಲ್ಲಕಟ್ಟ|

Updated on:Aug 08, 2022 | 1:03 PM

Share

ಆಗಸ್ಟ್ 8, 1942ರಂದು ಮಹಾತ್ಮಾ ಗಾಂಧಿ ಕ್ವಿಟ್ ಇಂಡಿಯಾ ಚಳವಳಿ (Quit India Movement) ಅಥವಾ ಭಾರತ ಬಿಟ್ಟು ತೊಲಗಿ ಆಂದೋಲನ ಆರಂಭಿಸಿದ್ದು. ಆಗಸ್ಟ್ ಕ್ರಾಂತಿ (August Kranti) ಎಂದು ಕರೆಯಲ್ಪಡುವ ಈ ಚಳುವಳಿಯ ನೆನಪಿಗೆ ಆಗಸ್ಟ್ 8ನ್ನು ಕ್ವಿಟ್ ಇಂಡಿಯಾ ಚಳವಳಿ ದಿನ ಎಂದು ಸ್ಮರಿಸಲಾಗುತ್ತದೆ. ಭಾರತದ ಸ್ವಾತಂತ್ರ್ಯ ಹೋರಾಟದಲ್ಲಿ ಕ್ವಿಟ್ ಇಂಡಿಯಾ ಚಳವಳಿ ಪ್ರಧಾನ ಪಾತ್ರವಹಿಸಿತ್ತು. ಮಹಾತ್ಮ ಗಾಂಧಿ ಅವರು ಈ ಚಳವಳಿಯನ್ನು ಆರಂಭಿಸಿ ಮಾಡಿದ ಭಾಷಣದಲ್ಲಿ ಈ ಹೋರಾಟ ಮಾಡು ಇಲ್ಲವೇ ಮಡಿ ಎಂದು ಹೇಳಿದ್ದರು. ಅಸಹಕಾರ ಚಳವಳಿಯು ಶಾಂತ ಮತ್ತು ಅಹಿಂಸಾ ಚಳವಳಿ ಆಗಿದ್ದು, ಬ್ರಿಟಿಷರನ್ನು ಭಾರತದಿಂದ ಓಡಿಸಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಡುವಲ್ಲಿ ಪ್ರಧಾನ ಪಾತ್ರ ವಹಿಸಿತ್ತು.

ಇತಿಹಾಸ

ಮಹಾತ್ಮ ಗಾಂಧಿ ನೇತೃತ್ವದ ಇಂಡಿಯನ್ ನ್ಯಾಷನಲ್ ಕಾಂಗ್ರೆಸ್, ಬಾಂಬೆಯಲ್ಲಿ 1942 ಆಗಸ್ಟ್8ರಂದು ಕ್ವಿಟ್ ಇಂಡಿಯಾ ನಿರ್ಣಯವನ್ನು ಮಂಡಿಸಿದ್ದು, ಅವು ಹೀಗಿವೆ

1. ಭಾರತದ ಮೇಲಿನ ಬ್ರಿಟಿಷ್ ವಸಾಹತುಶಾಹಿ ಆಳ್ವಿಕೆಯನ್ನು ತಕ್ಷಣವೇ ಕೊನೆಗೊಳಿಸಬೇಕು

2. ಎಲ್ಲಾ ರೀತಿಯ ಫ್ಯಾಸಿಸಂ ಮತ್ತು ಸಾಮ್ರಾಜ್ಯಶಾಹಿಯಿಂದ ತನ್ನನ್ನು ತಾನು ರಕ್ಷಿಸಿಕೊಳ್ಳಲು ಮುಕ್ತ ಭಾರತದ ಬದ್ಧತೆಯ ಘೋಷಣೆ.

3. ಬ್ರಿಟಿಷರು ಹೋದ ನಂತರ ಭಾರತದಲ್ಲಿ ತಾತ್ಕಾಲಿಕ ಸರ್ಕಾರವನ್ನು ರಚಿಸಬೇಕು.

4. ಬ್ರಿಟಿಷ್ ಆಡಳಿತದ ವಿರುದ್ಧ ನಾಗರಿಕ ಅಸಹಕಾರ ಚಳುವಳಿ.

ಆಂದೋಲನವನ್ನು ವಸಾಹತುಶಾಹಿ ಸರ್ಕಾರವು ಹಿಂಸಾತ್ಮಕ ರೀತಿಯಲ್ಲಿ ಹತ್ತಿಕ್ಕಿತು. ಸುಮಾರು ಒಂದು ಲಕ್ಷ ಜನರನ್ನು ಬಂಧಿಸಲಾಯಿತು, ಜನರ ಮೇಲೆ ಲಾಠಿ ಪ್ರಹಾರ ಮಾಡಲಾಯಿತು. ದೊಡ್ಡ ಮೊತ್ತದ ದಂಡವನ್ನು ವಿಧಿಸಲಾಯಿತು ಮತ್ತು ಕಾಂಗ್ರೆಸ್ ಪಕ್ಷವನ್ನು ಕಾನೂನುಬಾಹಿರ ಸಂಘವೆಂದು ಘೋಷಿಸಲಾಯಿತು.

ಹೋರಾಟದ  ಮಹತ್ವ

ಈ ಚಳುವಳಿ ತುಂಬಾ ಮಹತ್ವದ್ದಾಗಿದ್ದು, ಬ್ರಿಟಿಷರು ಭಾರತ ಬಿಟ್ಟು ತೊಲಗುವುದಕ್ಕೆ ಕಾರಣವಾಗಿದೆ. ದೇಶಕ್ಕೆ ಸ್ವಾತಂತ್ರ್ಯ ದೊರಕಿಸಲು ಪ್ರಾಣವನ್ನು ನೀಡಿದ ಸ್ವಾತಂತ್ರ್ಯ ಹೋರಾಟಗಾರರಿಗೆ ಶ್ರದ್ದಾಂಜಲಿ ಸಲ್ಲಿಸುವ ಮೂಲಕ ಈ ದಿನವನ್ನು ಆಚರಿಸಲಾಗುತ್ತದೆ

ಕ್ವಿಟ್ ಇಂಡಿಯಾ ಚಳವಳಿ

1. ಬ್ರಿಟಿಷ್ ಪಡೆಗಳಿಂದ ಹಿಂಸಾತ್ಮಕ ನಿಗ್ರಹದ ಬೆದರಿಕೆಗಳ ಹೊರತಾಗಿಯೂ ಜನರು ಹೋರಾಟ ಮತ್ತು ಹೋರಾಟವನ್ನು ಮುಂದುವರೆಸಿದರು.

2. ಕ್ರಿಪ್ಸ್ ಮಿಷನ್ ಮಹಾತ್ಮಾ ಗಾಂಧಿಯನ್ನು ಕ್ವಿಟ್ ಇಂಡಿಯಾ ಚಳುವಳಿಯನ್ನು ಪ್ರಾರಂಭಿಸಲು ಪ್ರಚೋದಿಸಿತು. ಕ್ರಿಪ್ಸ್ ಮಿಷನ್ 2 ನೇ ಮಹಾಯುದ್ಧದಲ್ಲಿ ಭಾರತದಿಂದ ಸಂಪೂರ್ಣ ಬೆಂಬಲ ಮತ್ತು ಸಹಕಾರವನ್ನು ಪಡೆಯಲು ಬ್ರಿಟಿಷ್ ಸರ್ಕಾರದ ವಿಫಲ ಪ್ರಯತ್ನವಾಗಿತ್ತು.

3. ಸಮಾಜವಾದಿ ನಾಯಕ ಮತ್ತು ಸ್ವಾತಂತ್ರ್ಯ ಹೋರಾಟಗಾರ ಯೂಸುಫ್ ಮೆಹರ್ ಅಲಿ ಅವರು ‘ಕ್ವಿಟ್ ಇಂಡಿಯಾ’ ಎಂಬ ಪದವನ್ನು ಸೃಷ್ಟಿಸಿದರು. ಇವರು ಮುಂಬೈನ ಮೇಯರ್ ಆಗಿಯೂ ಸೇವೆ ಸಲ್ಲಿಸಿದ್ದರು.

4. ಮಹಾತ್ಮ ಗಾಂಧಿಯವರ ‘ಮಾಡು ಇಲ್ಲವೇ ಮಡಿ’ ಭಾಷಣದ ಕೆಲವೇ ಗಂಟೆಗಳಲ್ಲಿ ಕಾಂಗ್ರೆಸ್ ಪಕ್ಷದ ಬಹುತೇಕ ನಾಯಕರನ್ನು ಯಾವುದೇ ವಿಚಾರಣೆಗೊಳಪಡಿಸದೆ ಬಂಧಿಸಲಾಯಿತು.

5. ಜನರು ವಸಾಹತುಶಾಹಿ ವಿರುದ್ಧ ದಂಗೆ ಎದ್ದು ಟೆಲಿಗ್ರಾಫ್ ತಂತಿಗಳನ್ನು ಕತ್ತರಿಸಿದರು, . ಬ್ಯಾಂಕುಗಳನ್ನು ಲೂಟಿ ಮಾಡಿದರು ಮತ್ತು ಸರ್ಕಾರಿ ಕಟ್ಟಡಗಳಿಗೆ ಬೆಂಕಿ ಹಚ್ಚಿದರು.

Published On - 1:02 pm, Mon, 8 August 22

ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!