AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಿವ ಸೇನೆ-ಕಾಂಗ್ರೆಸ್​ ನಡುವೆ ಕಿಡಿ ಹಚ್ಚಿದ ‘ಔರಂಗಾಬಾದ್’​ ಮರುನಾಮಕರಣ! ಸಂಭಾಜಿನಗರವೇ.. ಅಂತಿಮ ಎಂದ ಸಂಜಯ್​ ರಾವತ್​

ಔರಂಗಜೇಬ್​ಗೆ ಇತರ ಧರ್ಮಗಳ ಬಗ್ಗೆ ಅತಿಯಾದ ದ್ವೇಷ ಇತ್ತು. ಹಿಂದು ಮತ್ತು ಸಿಖ್​ರಿಗೆ ಆತ ತುಂಬ ಹಿಂಸೆ ನೀಡಿದ್ದಾನೆ. ಔರಂಗಜೇಬನಿಗೆ ಸಂಬಂಧಪಟ್ಟ ಅವಶೇಷ, ಹೆಸರಿನ ಬಗ್ಗೆ ನಾವು ಗಮನಹರಿಸಬೇಕಿಲ್ಲ. ಅಷ್ಟಕ್ಕೂ ಔರಂಗಜೇಬ್​ ಯಾರು? ಎಂದು ಸಂಜಯ್​ ರಾವತ್​ ಪ್ರಶ್ನಿಸಿದ್ದಾರೆ.

ಶಿವ ಸೇನೆ-ಕಾಂಗ್ರೆಸ್​ ನಡುವೆ ಕಿಡಿ ಹಚ್ಚಿದ ‘ಔರಂಗಾಬಾದ್’​ ಮರುನಾಮಕರಣ! ಸಂಭಾಜಿನಗರವೇ.. ಅಂತಿಮ ಎಂದ ಸಂಜಯ್​ ರಾವತ್​
ಸಂಜಯ್​ ರಾವತ್​
Lakshmi Hegde
| Edited By: |

Updated on: Jan 18, 2021 | 12:57 PM

Share

ದೆಹಲಿ: ಮಹಾರಾಷ್ಟ್ರದಲ್ಲಿ ಔರಂಗಾಬಾದ್​ಗೆ ಸಂಭಾಜಿನಗರ ಎಂದು ಹೆಸರಿಡುವ ವಿಚಾರಕ್ಕೆ ಶಿವಸೇನೆ ಮತ್ತು ಕಾಂಗ್ರೆಸ್​ ನಡುವೆ ಭಿನ್ನಾಭಿಪ್ರಾಯ ಮೂಡಿದೆ.

ಔರಂಗಾಬಾದ್​ಗೆ ಸಂಭಾಜಿನಗರವೆಂದು ನಾಮಕರಣ ಮಾಡಲು ಶಿವಸೇನೆ ತುದಿಗಾಲಿನಲ್ಲಿ ನಿಂತಿದ್ದರೂ, ಅದರ ಮೈತ್ರಿ ಪಕ್ಷ ಕಾಂಗ್ರೆಸ್​ ವಿರೋಧ ವ್ಯಕ್ತಪಡಿಸುತ್ತಿದೆ. ಈ ಬಗ್ಗೆ ಇಂದು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಶಿವಸೇನೆ ಸಂಸದ ಸಂಜಯ್​ ರಾವತ್​, ನಮಗೇನೂ ಗೊತ್ತಿಲ್ಲ..ಔರಂಗಾಬಾದ್ ಇನ್ನು ಮುಂದೆ ಸಂಭಾಜಿನಗರ ಎಂದು ಮುಖ್ಯಮಂತ್ರಿ ಉದ್ಧವ್​ ಠಾಕ್ರೆ ನಮಗೆ ಸ್ಪಷ್ಟವಾಗಿ ಹೇಳಿಬಿಟ್ಟಿದ್ದಾರೆ. ಹಾಗೇ ಮುಂದುವರಿಯಲಿದೆ ಕೂಡ ಎಂದು ತಿಳಿಸಿದ್ದಾರೆ.

ಆದರೆ ಈ ವಿಚಾರಕ್ಕೆ ಕಾಂಗ್ರೆಸ್ ಯಾಕೆ ವಿರೋಧ ವ್ಯಕ್ತಪಡಿಸುತ್ತಿದೆ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ನಾವು ನಿರ್ಧಾರವನ್ನಂತೂ ತೆಗೆದುಕೊಂಡು ಆಗಿದೆ. ಇದು ಜನರ ಭಾವನೆಗೆ ಸಂಬಂಧಪಟ್ಟ ವಿಷಯ ಆಗಿದ್ದರಿಂದ ಕಾಂಗ್ರೆಸ್ ವಿರೋಧಿಸುತ್ತಿರಬಹುದು. ನಾವು ಈ ಬಗ್ಗೆ ಚರ್ಚಿಸುತ್ತೇವೆ ಎಂದು ಸಂಜಯ್​ ರಾವತ್ ಹೇಳಿದ್ದಾರೆ.

ಸಾಮ್ನಾದಲ್ಲಿ ಅಸಮಾಧಾನ ಇನ್ನು ಔರಂಗಾಬಾದ್​ಗೆ ಸಂಭಾಜಿನಗರ ಎಂದು ನಾಮಕರಣ ಮಾಡಲು ವಿರೋಧಿಸುತ್ತಿರುವ ಕಾಂಗ್ರೆಸ್​ ಬಗ್ಗೆ ಶಿವಸೇನಾ ನಿನ್ನೆ ತನ್ನ ಮುಖವಾಣಿ ಸಾಮ್ನಾ ಪತ್ರಿಕೆಯಲ್ಲಿ ಅಸಮಾಧಾನ ವ್ಯಕ್ತಪಡಿಸಿತ್ತು. ಔರಂಗಾಬಾದ್ ಹೆಸರು ಬದಲಾವಣೆ ಮಾಡುವುದರಿಂದ ಮುಸ್ಲಿಂ ಸಮುದಾಯಕ್ಕೆ ಬೇಸರವಾಗಬಹುದು ಎಂಬ ಕಾರಣಕ್ಕೆ ಕೆಲವು ಜಾತ್ಯತೀತಗಳು ವಿರೋಧ ಮಾಡುತ್ತಿವೆ. ಆ ಪಕ್ಷಗಳಿಗೆ ತಮ್ಮ ವೋಟ್​ಬ್ಯಾಂಕ್​ ಬಗ್ಗೆ ಚಿಂತೆಯಾಗಿರಬಹುದು ಎಂದು ಹೇಳಿತ್ತು.

ಔರಂಗಜೇಬ್​ಗೆ ಇತರ ಧರ್ಮಗಳ ಬಗ್ಗೆ ಅತಿಯಾದ ದ್ವೇಷ ಇತ್ತು. ಹಿಂದು ಮತ್ತು ಸಿಖ್​ರಿಗೆ ಆತ ತುಂಬ ಹಿಂಸೆ ನೀಡಿದ್ದಾನೆ. ಔರಂಗಜೇಬನಿಗೆ ಸಂಬಂಧಪಟ್ಟ ಅವಶೇಷ, ಹೆಸರಿನ ಬಗ್ಗೆ ನಾವು ಗಮನಹರಿಸಬೇಕಿಲ್ಲ. ಅಷ್ಟಕ್ಕೂ ಔರಂಗಜೇಬ್​ ಯಾರು? ಅದನ್ನು ನಾವು ವಿವರಿಸುವ ಅಗತ್ಯವಿಲ್ಲ ಎಂದುಕೊಳ್ಳುತ್ತೇವೆ. ಒಬ್ಬ ನಿಜವಾದ ಮರಾಠಿಗ, ಹಿಂದೂಗಳು ಈ ಔರಂಗಜೇಬನ ವಿಚಾರದಲ್ಲಿ ಆಸಕ್ತಿ ಹೊಂದುವ ಅಗತ್ಯವಿಲ್ಲ ಎಂದು ಕಟುವಾಗಿ ಪತ್ರಿಕೆಯಲ್ಲಿ ಬರೆಯಲಾಗಿತ್ತು.

ಶಿವಸೇನೆಯದ್ದು ಬೂಟಾಟಿಕೆ ಎಂದ ಕಾಂಗ್ರೆಸ್​ ಹಾಗೇ ಔರಂಗಾಬಾದ್​ಗೆ ಮರುನಾಮಕರಣ ಮಾಡಲು ಮುಂದಾಗಿದ್ದು ಶಿವಸೇನೆಯ ಬೂಟಾಟಿಕೆ ಎಂದು ಮಹಾರಾಷ್ಟ್ರ ಕಂದಾಯ ಸಚಿವ, ಕಾಂಗ್ರೆಸ್ ನಾಯಕ ಬಾಳಾಸಾಹೇಬ್​ ಥೋರಟ್ ಹೇಳಿದ್ದಾರೆ. ಅಷ್ಟೇ ಅಲ್ಲ, ಕಳೆದ ಐದು ವರ್ಷಗಳಲ್ಲಿ ಈ ಬಗ್ಗೆ ಮಾತನಾಡದ ಶಿವಸೇನೆ ಈಗ್ಯಾಕೆ ಮಾತನಾಡುತ್ತಿದೆ ಎಂದೂ ಪ್ರಶ್ನಿಸಿದ್ದಾರೆ. ತಮ್ಮ ರಾಜಕೀಯ ಅನುಕೂಲಕ್ಕಾಗಿ ಇವರು ಔರಂಗಾಬಾದ್​ಗೆ ಬೇರೆ ಹೆಸರಿಡಲು ಮುಂದಾಗುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

ಇಂದು ಠಾಕ್ರೆಗೆ ಏನೇ ಗೊಂದಲಗಳಿದ್ದರೂ ಅವರು ಕಾಂಗ್ರೆಸ್​ ಪಕ್ಷವನ್ನೇ ಪ್ರಶ್ನಿಸಬೇಕು -ಸಿ.ಟಿ. ರವಿ

Follow Us
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?
ಜಾತ್ರೆಯಲ್ಲಿ ಯುವತಿಯರನ್ನು ಹಿಂಬಾಲಿಸಿ ಖಾಸಗಿ ಭಾಗ ಮುಟ್ಟಿ ಹಿಂಸೆ
ಜಾತ್ರೆಯಲ್ಲಿ ಯುವತಿಯರನ್ನು ಹಿಂಬಾಲಿಸಿ ಖಾಸಗಿ ಭಾಗ ಮುಟ್ಟಿ ಹಿಂಸೆ