AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಔರಂಗಾಬಾದ್‌: ಹಿಜಾಬ್ ಧರಿಸಿದ ಮಹಿಳೆಗೆ ಕಿರುಕುಳ ನೀಡುತ್ತಿರುವ ವಿಡಿಯೊ ವೈರಲ್; ಮೂವರು ವ್ಯಕ್ತಿಗಳ ಬಂಧನ

ಪೊಲೀಸರು ವಿಡಿಯೊ ನೋಡಿ ಮಹಿಳೆಯನ್ನು ಗುರುತಿಸಿ ದೂರು ದಾಖಲಿಸುವಂತೆ ತಿಳಿಸಿದ್ದಾರೆ. ಆದರೆ ಆಕೆ ದೂರು ನೀಡಲು ನಿರಾಕರಿಸಿದ್ದು, ಪೊಲೀಸರು ಸ್ವಯಂ ಪ್ರೇರಿತ ದೂರು ದಾಖಲಿಸಿಕೊಳ್ಳುವ ಪ್ರಕ್ರಿಯೆ ಆರಂಭಿಸಿದ್ದಾರೆ.

ಔರಂಗಾಬಾದ್‌: ಹಿಜಾಬ್ ಧರಿಸಿದ ಮಹಿಳೆಗೆ ಕಿರುಕುಳ ನೀಡುತ್ತಿರುವ ವಿಡಿಯೊ ವೈರಲ್; ಮೂವರು ವ್ಯಕ್ತಿಗಳ ಬಂಧನ
ಮಹಿಳೆಗೆ ಕಿರುಕುಳ ನೀಡುತ್ತಿರುವ ವಿಡಿಯೊ ವೈರಲ್
ರಶ್ಮಿ ಕಲ್ಲಕಟ್ಟ
|

Updated on: Apr 27, 2023 | 1:38 PM

Share

ಮಹಾರಾಷ್ಟ್ರದ(Maharashtra) ಔರಂಗಾಬಾದ್‌ನಲ್ಲಿ (Aurangabad)ಹಿಜಾಬ್ ಧರಿಸಿದ ಮುಸ್ಲಿಂ ಮಹಿಳೆಗೆ (Muslim) ಕಿರುಕುಳ ನೀಡಿದ ಮೂವರು ವ್ಯಕ್ತಿಗಳನ್ನುಪೊಲೀಸರು ಬಂಧಿಸಿದ್ದಾರೆ. ಮಕೈ ಗೇಟ್ ಪ್ರದೇಶದಲ್ಲಿ ಸೋಮವಾರ ಈ ಘಟನೆ ನಡೆದಿದ್ದು, ಈ ವಿಡಿಯೊ ವೈರಲ್ ಆಗಿದೆ.ಮಹಿಳೆ ಸ್ವತಃ ದೂರು ನೀಡಲು ನಿರಾಕರಿಸಿದ ಹಿನ್ನೆಲೆಯಲ್ಲಿ ಬೇಗಂಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿಕೊಳ್ಳಲು ಪೊಲೀಸರು ಪ್ರಕ್ರಿಯೆ ಆರಂಭಿಸಿದ್ದಾರೆ. ವಿಡಿಯೊ ಪ್ರಕಾರ ಯುವಕರ ಗುಂಪೊಂದು ಮಹಿಳೆಯನ್ನು ಅಡ್ಡಗಟ್ಟಿ ಮೊಬೈಲ್ ಕಸಿದುಕೊಂಡಿದ್ದಾರೆ. ಮಹಿಳೆ ತನ್ನ ಫೋನ್ ಹಿಂತಿರುಗಿಸುವಂತೆ ಮನವಿ ಮಾಡುವುದನ್ನು ಕಾಣಬಹುದು. ಯುವತಿ ಹಿಂದೂ ಯುವಕನೊಂದಿಗೆ ತಿರುಗಾಡುತ್ತಿದ್ದಾಳೆ ಎಂದು ಶಂಕಿಸಿದ ಯುವಕರು ಆಕೆಯನ್ನು ಹಿಂಬಾಲಿಸಿ ಕಿರುಕುಳ ನೀಡಿದ್ದಾರೆ. ಮಹಿಳೆ ಔರಂಗಾಬಾದ್‌ನ ಪ್ರಸಿದ್ಧ ಬೀಬಿ ಕಾ ಮಕ್ಬಾರಾವನ್ನು ಭೇಟಿ ಮಾಡಲು ಬಂದಿದ್ದರು.

ಈ ಯುವಕರ ಗುಂಪು ಆಕೆಯನ್ನು ಕೆಟ್ಟ ಮಾತುಗಳಿಂದ ಹೀಯಾಳಿಸುತ್ತಿರುವುದನ್ನೂ ಕೇಳಬಹುದು.

ಪೊಲೀಸರು ವಿಡಿಯೊ ನೋಡಿ ಮಹಿಳೆಯನ್ನು ಗುರುತಿಸಿ ದೂರು ದಾಖಲಿಸುವಂತೆ ತಿಳಿಸಿದ್ದಾರೆ. ಆದರೆ ಆಕೆ ದೂರು ನೀಡಲು ನಿರಾಕರಿಸಿದ್ದು, ಪೊಲೀಸರು ಸ್ವಯಂ ಪ್ರೇರಿತ ದೂರು ದಾಖಲಿಸಿಕೊಳ್ಳುವ ಪ್ರಕ್ರಿಯೆ ಆರಂಭಿಸಿದ್ದಾರೆ.

ಇದನ್ನೂ ಓದಿ: Madhya Pradesh: ಮದುವೆಯಾಗು ಎಂದು ಯುವತಿಗೆ ಕಿರುಕುಳ: ಒಪ್ಪದಿದ್ದಕ್ಕೆ ರಸ್ತೆ ಮಧ್ಯೆ ಗುಂಡು ಹಾರಿಸಿದ ರೋಡ್ ರೋಮಿಯೋ

ಪೊಲೀಸರು ಕ್ರಮ ಕೈಗೊಂಡಿದ್ದು, ಘಟನೆಯಲ್ಲಿ ಭಾಗಿಯಾಗಿರುವ ಮೂವರನ್ನು ವಶಕ್ಕೆ ಪಡೆದಿದ್ದಾರೆ ಎಂದು ಉಪ ಪೊಲೀಸ್ ಆಯುಕ್ತ ದೀಪಕ್ ಗಿರ್ಹೆ ತಿಳಿಸಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ