AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಔರಂಗಾಬಾದ್‌: ಹಿಜಾಬ್ ಧರಿಸಿದ ಮಹಿಳೆಗೆ ಕಿರುಕುಳ ನೀಡುತ್ತಿರುವ ವಿಡಿಯೊ ವೈರಲ್; ಮೂವರು ವ್ಯಕ್ತಿಗಳ ಬಂಧನ

ಪೊಲೀಸರು ವಿಡಿಯೊ ನೋಡಿ ಮಹಿಳೆಯನ್ನು ಗುರುತಿಸಿ ದೂರು ದಾಖಲಿಸುವಂತೆ ತಿಳಿಸಿದ್ದಾರೆ. ಆದರೆ ಆಕೆ ದೂರು ನೀಡಲು ನಿರಾಕರಿಸಿದ್ದು, ಪೊಲೀಸರು ಸ್ವಯಂ ಪ್ರೇರಿತ ದೂರು ದಾಖಲಿಸಿಕೊಳ್ಳುವ ಪ್ರಕ್ರಿಯೆ ಆರಂಭಿಸಿದ್ದಾರೆ.

ಔರಂಗಾಬಾದ್‌: ಹಿಜಾಬ್ ಧರಿಸಿದ ಮಹಿಳೆಗೆ ಕಿರುಕುಳ ನೀಡುತ್ತಿರುವ ವಿಡಿಯೊ ವೈರಲ್; ಮೂವರು ವ್ಯಕ್ತಿಗಳ ಬಂಧನ
ಮಹಿಳೆಗೆ ಕಿರುಕುಳ ನೀಡುತ್ತಿರುವ ವಿಡಿಯೊ ವೈರಲ್
ರಶ್ಮಿ ಕಲ್ಲಕಟ್ಟ
|

Updated on: Apr 27, 2023 | 1:38 PM

Share

ಮಹಾರಾಷ್ಟ್ರದ(Maharashtra) ಔರಂಗಾಬಾದ್‌ನಲ್ಲಿ (Aurangabad)ಹಿಜಾಬ್ ಧರಿಸಿದ ಮುಸ್ಲಿಂ ಮಹಿಳೆಗೆ (Muslim) ಕಿರುಕುಳ ನೀಡಿದ ಮೂವರು ವ್ಯಕ್ತಿಗಳನ್ನುಪೊಲೀಸರು ಬಂಧಿಸಿದ್ದಾರೆ. ಮಕೈ ಗೇಟ್ ಪ್ರದೇಶದಲ್ಲಿ ಸೋಮವಾರ ಈ ಘಟನೆ ನಡೆದಿದ್ದು, ಈ ವಿಡಿಯೊ ವೈರಲ್ ಆಗಿದೆ.ಮಹಿಳೆ ಸ್ವತಃ ದೂರು ನೀಡಲು ನಿರಾಕರಿಸಿದ ಹಿನ್ನೆಲೆಯಲ್ಲಿ ಬೇಗಂಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿಕೊಳ್ಳಲು ಪೊಲೀಸರು ಪ್ರಕ್ರಿಯೆ ಆರಂಭಿಸಿದ್ದಾರೆ. ವಿಡಿಯೊ ಪ್ರಕಾರ ಯುವಕರ ಗುಂಪೊಂದು ಮಹಿಳೆಯನ್ನು ಅಡ್ಡಗಟ್ಟಿ ಮೊಬೈಲ್ ಕಸಿದುಕೊಂಡಿದ್ದಾರೆ. ಮಹಿಳೆ ತನ್ನ ಫೋನ್ ಹಿಂತಿರುಗಿಸುವಂತೆ ಮನವಿ ಮಾಡುವುದನ್ನು ಕಾಣಬಹುದು. ಯುವತಿ ಹಿಂದೂ ಯುವಕನೊಂದಿಗೆ ತಿರುಗಾಡುತ್ತಿದ್ದಾಳೆ ಎಂದು ಶಂಕಿಸಿದ ಯುವಕರು ಆಕೆಯನ್ನು ಹಿಂಬಾಲಿಸಿ ಕಿರುಕುಳ ನೀಡಿದ್ದಾರೆ. ಮಹಿಳೆ ಔರಂಗಾಬಾದ್‌ನ ಪ್ರಸಿದ್ಧ ಬೀಬಿ ಕಾ ಮಕ್ಬಾರಾವನ್ನು ಭೇಟಿ ಮಾಡಲು ಬಂದಿದ್ದರು.

ಈ ಯುವಕರ ಗುಂಪು ಆಕೆಯನ್ನು ಕೆಟ್ಟ ಮಾತುಗಳಿಂದ ಹೀಯಾಳಿಸುತ್ತಿರುವುದನ್ನೂ ಕೇಳಬಹುದು.

ಪೊಲೀಸರು ವಿಡಿಯೊ ನೋಡಿ ಮಹಿಳೆಯನ್ನು ಗುರುತಿಸಿ ದೂರು ದಾಖಲಿಸುವಂತೆ ತಿಳಿಸಿದ್ದಾರೆ. ಆದರೆ ಆಕೆ ದೂರು ನೀಡಲು ನಿರಾಕರಿಸಿದ್ದು, ಪೊಲೀಸರು ಸ್ವಯಂ ಪ್ರೇರಿತ ದೂರು ದಾಖಲಿಸಿಕೊಳ್ಳುವ ಪ್ರಕ್ರಿಯೆ ಆರಂಭಿಸಿದ್ದಾರೆ.

ಇದನ್ನೂ ಓದಿ: Madhya Pradesh: ಮದುವೆಯಾಗು ಎಂದು ಯುವತಿಗೆ ಕಿರುಕುಳ: ಒಪ್ಪದಿದ್ದಕ್ಕೆ ರಸ್ತೆ ಮಧ್ಯೆ ಗುಂಡು ಹಾರಿಸಿದ ರೋಡ್ ರೋಮಿಯೋ

ಪೊಲೀಸರು ಕ್ರಮ ಕೈಗೊಂಡಿದ್ದು, ಘಟನೆಯಲ್ಲಿ ಭಾಗಿಯಾಗಿರುವ ಮೂವರನ್ನು ವಶಕ್ಕೆ ಪಡೆದಿದ್ದಾರೆ ಎಂದು ಉಪ ಪೊಲೀಸ್ ಆಯುಕ್ತ ದೀಪಕ್ ಗಿರ್ಹೆ ತಿಳಿಸಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!