AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಔರಂಗಾಬಾದ್‌: ಹಿಜಾಬ್ ಧರಿಸಿದ ಮಹಿಳೆಗೆ ಕಿರುಕುಳ ನೀಡುತ್ತಿರುವ ವಿಡಿಯೊ ವೈರಲ್; ಮೂವರು ವ್ಯಕ್ತಿಗಳ ಬಂಧನ

ಪೊಲೀಸರು ವಿಡಿಯೊ ನೋಡಿ ಮಹಿಳೆಯನ್ನು ಗುರುತಿಸಿ ದೂರು ದಾಖಲಿಸುವಂತೆ ತಿಳಿಸಿದ್ದಾರೆ. ಆದರೆ ಆಕೆ ದೂರು ನೀಡಲು ನಿರಾಕರಿಸಿದ್ದು, ಪೊಲೀಸರು ಸ್ವಯಂ ಪ್ರೇರಿತ ದೂರು ದಾಖಲಿಸಿಕೊಳ್ಳುವ ಪ್ರಕ್ರಿಯೆ ಆರಂಭಿಸಿದ್ದಾರೆ.

ಔರಂಗಾಬಾದ್‌: ಹಿಜಾಬ್ ಧರಿಸಿದ ಮಹಿಳೆಗೆ ಕಿರುಕುಳ ನೀಡುತ್ತಿರುವ ವಿಡಿಯೊ ವೈರಲ್; ಮೂವರು ವ್ಯಕ್ತಿಗಳ ಬಂಧನ
ಮಹಿಳೆಗೆ ಕಿರುಕುಳ ನೀಡುತ್ತಿರುವ ವಿಡಿಯೊ ವೈರಲ್
ರಶ್ಮಿ ಕಲ್ಲಕಟ್ಟ
ರಶ್ಮಿ ಕಲ್ಲಕಟ್ಟ|

Updated on: Apr 27, 2023 | 1:38 PM

Share

ಮುಖ್ಯಾಂಶಗಳು

  • ಬೇಗಂಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ ಪೊಲೀಸರು
  • ಯುವಕರ ಗುಂಪೊಂದು ಮಹಿಳೆಯನ್ನು ಅಡ್ಡಗಟ್ಟಿ ಮೊಬೈಲ್ ಕಸಿದುಕೊಂಡಿದೆ
  • ಯುವತಿ ಹಿಂದೂ ಯುವಕನೊಂದಿಗೆ ತಿರುಗಾಡುತ್ತಿದ್ದಾಳೆ ಎಂದು ಶಂಕಿಸಿದ ಕಿರುಕುಳ ನೀಡಿದ ಯುವಕರ ಗುಂಪು

ಮಹಾರಾಷ್ಟ್ರದ(Maharashtra) ಔರಂಗಾಬಾದ್‌ನಲ್ಲಿ (Aurangabad)ಹಿಜಾಬ್ ಧರಿಸಿದ ಮುಸ್ಲಿಂ ಮಹಿಳೆಗೆ (Muslim) ಕಿರುಕುಳ ನೀಡಿದ ಮೂವರು ವ್ಯಕ್ತಿಗಳನ್ನುಪೊಲೀಸರು ಬಂಧಿಸಿದ್ದಾರೆ. ಮಕೈ ಗೇಟ್ ಪ್ರದೇಶದಲ್ಲಿ ಸೋಮವಾರ ಈ ಘಟನೆ ನಡೆದಿದ್ದು, ಈ ವಿಡಿಯೊ ವೈರಲ್ ಆಗಿದೆ.ಮಹಿಳೆ ಸ್ವತಃ ದೂರು ನೀಡಲು ನಿರಾಕರಿಸಿದ ಹಿನ್ನೆಲೆಯಲ್ಲಿ ಬೇಗಂಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿಕೊಳ್ಳಲು ಪೊಲೀಸರು ಪ್ರಕ್ರಿಯೆ ಆರಂಭಿಸಿದ್ದಾರೆ. ವಿಡಿಯೊ ಪ್ರಕಾರ ಯುವಕರ ಗುಂಪೊಂದು ಮಹಿಳೆಯನ್ನು ಅಡ್ಡಗಟ್ಟಿ ಮೊಬೈಲ್ ಕಸಿದುಕೊಂಡಿದ್ದಾರೆ. ಮಹಿಳೆ ತನ್ನ ಫೋನ್ ಹಿಂತಿರುಗಿಸುವಂತೆ ಮನವಿ ಮಾಡುವುದನ್ನು ಕಾಣಬಹುದು. ಯುವತಿ ಹಿಂದೂ ಯುವಕನೊಂದಿಗೆ ತಿರುಗಾಡುತ್ತಿದ್ದಾಳೆ ಎಂದು ಶಂಕಿಸಿದ ಯುವಕರು ಆಕೆಯನ್ನು ಹಿಂಬಾಲಿಸಿ ಕಿರುಕುಳ ನೀಡಿದ್ದಾರೆ. ಮಹಿಳೆ ಔರಂಗಾಬಾದ್‌ನ ಪ್ರಸಿದ್ಧ ಬೀಬಿ ಕಾ ಮಕ್ಬಾರಾವನ್ನು ಭೇಟಿ ಮಾಡಲು ಬಂದಿದ್ದರು.

ಈ ಯುವಕರ ಗುಂಪು ಆಕೆಯನ್ನು ಕೆಟ್ಟ ಮಾತುಗಳಿಂದ ಹೀಯಾಳಿಸುತ್ತಿರುವುದನ್ನೂ ಕೇಳಬಹುದು.

ಪೊಲೀಸರು ವಿಡಿಯೊ ನೋಡಿ ಮಹಿಳೆಯನ್ನು ಗುರುತಿಸಿ ದೂರು ದಾಖಲಿಸುವಂತೆ ತಿಳಿಸಿದ್ದಾರೆ. ಆದರೆ ಆಕೆ ದೂರು ನೀಡಲು ನಿರಾಕರಿಸಿದ್ದು, ಪೊಲೀಸರು ಸ್ವಯಂ ಪ್ರೇರಿತ ದೂರು ದಾಖಲಿಸಿಕೊಳ್ಳುವ ಪ್ರಕ್ರಿಯೆ ಆರಂಭಿಸಿದ್ದಾರೆ.

ಇದನ್ನೂ ಓದಿ: Madhya Pradesh: ಮದುವೆಯಾಗು ಎಂದು ಯುವತಿಗೆ ಕಿರುಕುಳ: ಒಪ್ಪದಿದ್ದಕ್ಕೆ ರಸ್ತೆ ಮಧ್ಯೆ ಗುಂಡು ಹಾರಿಸಿದ ರೋಡ್ ರೋಮಿಯೋ

ಪೊಲೀಸರು ಕ್ರಮ ಕೈಗೊಂಡಿದ್ದು, ಘಟನೆಯಲ್ಲಿ ಭಾಗಿಯಾಗಿರುವ ಮೂವರನ್ನು ವಶಕ್ಕೆ ಪಡೆದಿದ್ದಾರೆ ಎಂದು ಉಪ ಪೊಲೀಸ್ ಆಯುಕ್ತ ದೀಪಕ್ ಗಿರ್ಹೆ ತಿಳಿಸಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ