AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹಾರಾಷ್ಟ್ರದ ಔರಂಗಾಬಾದ್​ ಹೆಸರು ಬದಲಿಸಲು ಮುಂದಾದ ಶಿವಸೇನೆ; ಕಾಂಗ್ರೆಸ್ ಅಸಮಾಧಾನ

ನಗರದ ಹೆಸರು ಬದಲಾವಣೆ ವಿಚಾರದಲ್ಲಿ ಶಿವಸೇನೆಯ ಬದ್ಧತೆಯನ್ನು ಪ್ರಶ್ನಿಸಿರುವ ಬಿಜೆಪಿಗೂ ‘ಸಾಮ್ನಾ’ ತಿರುಗೇಟು ನೀಡಿದೆ. ಪಾಕಿಸ್ತಾನದಲ್ಲಿ ದೇವಾಲಯಗಳ ಧ್ವಂಸವಾಗುತ್ತಿದೆ. ನೀವು ಆ ಕೃತ್ಯಗಳತ್ತ ಗಮನಹರಿಸಿ. ರಾಜ್ಯಸರ್ಕಾರವನ್ನು ಅಸ್ಥಿರಗೊಳಿಸುವ ಪ್ರಯತ್ನಕ್ಕೆ ಅವಕಾಶ ಹುಡುಕುವುದು ಬೇಡ ಎಂದಿದೆ.

ಮಹಾರಾಷ್ಟ್ರದ ಔರಂಗಾಬಾದ್​ ಹೆಸರು ಬದಲಿಸಲು ಮುಂದಾದ ಶಿವಸೇನೆ; ಕಾಂಗ್ರೆಸ್ ಅಸಮಾಧಾನ
ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್​​ ಠಾಕ್ರೆ
TV9 Web
| Edited By: |

Updated on:Apr 06, 2022 | 11:15 PM

Share

ಮುಂಬೈ: ಮಹಾರಾಷ್ಟ್ರದ ಔರಂಗಾಬಾದ್ ನಗರದ ಹೆಸರನ್ನು ಬದಲಾಯಿಸಲು ಶಿವಸೇನೆ ಒಲವು ತೋರಿದೆ. ಔರಂಗಾಬಾದ್ ಹೆಸರನ್ನು ಮರಾಠ ರಾಜ ಛತ್ರಪತಿ ಸಾಂಭಾಜಿ ಮಹಾರಾಜ್ ಹೆಸರಿಗೆ ಬದಲಿಸಬೇಕು ಎಂದು ಶಿವಸೇನೆ ಹೇಳಿದೆ. ಈ ಬಗ್ಗೆ ಅಸಮಧಾನ ವ್ಯಕ್ತಪಡಿಸಿರುವ ಕಾಂಗ್ರೆಸ್, ಅಂಥಾ ಯಾವುದೇ ಹೆಜ್ಜೆಯನ್ನು ವಿರೋಧಿಸುವುದಾಗಿ ತಿಳಿಸಿದೆ.

ಈ ಬೆಳವಣಿಗೆಗಳು ಮಿತ್ರಪಕ್ಷಗಳಾದ ಕಾಂಗ್ರೆಸ್, ಶಿವಸೇನೆ ನಡುವೆ ಬಿರುಕು ಮೂಡಿಸುವ ಅಪಾಯ ತೋರಿದೆ. ಆದರೆ, ಕಾಂಗ್ರೆಸ್ ವಿರೋಧದಿಂದ ಶಿವಸೇನೆಯೊಂದಿಗಿನ ಕಾಂಗ್ರೆಸ್ ಮೈತ್ರಿಗೆ ಧಕ್ಕೆ ಉಂಟಾಗಲಿದೆ ಎಂಬ ಆರೋಪವನ್ನು ಶಿವಸೇನೆಯ ಮುಖವಾಣಿ ‘ಸಾಮ್ನಾ’ ಅಲ್ಲಗಳೆದಿದೆ. ಔರಂಗಾಬಾದ್ ನಗರದ ಹೆಸರು ಬದಲಾವಣೆ ಶಿವಸೇನೆಯ ಬಹುವರ್ಷಗಳ ಕನಸು. ಕಾಂಗ್ರೆಸ್ ವಿರೋಧವೂ ಈ ಹಿಂದಿನಿಂದ ಇತ್ತು. ಅದ್ದರಿಂದ, ಹಳೆಯ ವಿಚಾರಗಳು ಇಂದಿನ ಮೈತ್ರಿ ಸರ್ಕಾರಕ್ಕೆ ತೊಂದರೆಯಾಗುತ್ತದೆ ಎಂದು ಊಹಿಸುವುದು ಮೂರ್ಖ ಚಿಂತನೆಯಾಗುತ್ತದೆ ಎಂದು ಹೇಳಿದೆ.

ನಗರದ ಹೆಸರು ಬದಲಾವಣೆ ವಿಚಾರದಲ್ಲಿ ಶಿವಸೇನೆಯ ಬದ್ಧತೆಯನ್ನು ಪ್ರಶ್ನಿಸಿರುವ ಬಿಜೆಪಿಗೂ ‘ಸಾಮ್ನಾ’ ತಿರುಗೇಟು ನೀಡಿದೆ. ಪಾಕಿಸ್ತಾನದಲ್ಲಿ ದೇವಾಲಯಗಳ ಧ್ವಂಸವಾಗುತ್ತಿದೆ. ನೀವು ಆ ಕೃತ್ಯಗಳತ್ತ ಗಮನಹರಿಸಿ. ರಾಜ್ಯಸರ್ಕಾರವನ್ನು ಅಸ್ಥಿರಗೊಳಿಸುವ ಪ್ರಯತ್ನಕ್ಕೆ ಅವಕಾಶ ಹುಡುಕುವುದು ಬೇಡ ಎಂದಿದೆ.

ಔರಂಗಾಬಾದ್ ನಗರ ಹೆಸರು ಬದಲಾವಣೆ ವಿಚಾರದ ಹಿನ್ನೆಲೆ ಮೊಘಲ್ ಚಕ್ರವರ್ತಿ ಔರಂಗಜೇಬ್ ಆ ಪ್ರದೇಶದಲ್ಲಿ ತನ್ನ ಕೊನೆಯ ದಿನಗಳನ್ನು ಕಳೆದಿದ್ದ ಎಂಬ ಕಾರಣದಿಂದ ಆ ನಗರಕ್ಕೆ ಔರಂಗಾಬಾದ್ ಎಂಬ ಹೆಸರು ಬಂದಿದೆ. ಶಿವಸೇನೆ ಹಾಗೂ ಬಿಜೆಪಿ ಒಕ್ಕೂಟವು ಔರಂಗಾಬಾದ್ ನಗರಸಭೆಯಲ್ಲಿ ಎರಡು ವರ್ಷ ಆಡಳಿತ ನಡೆಸಿತ್ತು. 1995ರಲ್ಲಿ ಬಿಜೆಪಿ-ಶಿವಸೇನೆ ಒಕ್ಕೂಟದ ಕಾರ್ಪೊರೇಷನ್, ಔರಂಗಾಬಾದ್ ಹೆಸರನ್ನು ಬದಲಿಸುವಂತೆ ರಾಜ್ಯ ಸರ್ಕಾರಕ್ಕೆ ಶಿಫಾರಸು ಮಾಡಿತ್ತು.

ಶಿವಸೇನೆ ಹಾಗೂ ಬಿಜೆಪಿ ಮೈತ್ರಿಕೂಟ ರಾಜ್ಯದ ಆಡಳಿತ ನಡೆಸುತ್ತಿದ್ದಾಗಲೂ ಔರಂಗಾಬಾದ್ ಹೆಸರು ಬದಲಾವಣೆಯ ಕುರಿತು ಬೆಳವಣಿಗೆಗಳಾಗಿದ್ದವು. ಆಗಿನ ಮಹಾರಾಷ್ಟ್ರ ಮುಖ್ಯಮಂತ್ರಿ ಮನೋಹರ್ ಜೋಶಿ, ಔರಂಗಾಬಾದ್​ನ್ನು ಸಾಂಭಾಜಿನಗರ್ ಎಂದು ಬದಲಾಯಿಸುವಂತೆ ನಿರ್ಣಯ ಮಂಡಿಸಿದ್ದರು. ಸರ್ಕಾರದ ಈ ನಿರ್ಣಯವನ್ನು ಬಾಂಬೆ ಹೈಕೋರ್ಟ್​ನ ಔರಂಗಾಬಾದ್ ನ್ಯಾಯಪೀಠ ಆಕ್ಷೇಪಿಸಿ, ತಿರಸ್ಕರಿಸಿತ್ತು.

Published On - 2:52 pm, Sun, 3 January 21

ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್
ಪಾಕ್ ಆಟಗಾರನ ವಿರುದ್ಧ ಸಿಡಿದೆದ್ದ ವೈಭವ್ ಸೂರ್ಯವಂಶಿ
ಪಾಕ್ ಆಟಗಾರನ ವಿರುದ್ಧ ಸಿಡಿದೆದ್ದ ವೈಭವ್ ಸೂರ್ಯವಂಶಿ
ಗುಡಿಬಂಡೆ ಬಳಿ ಇದೆಯಾ ಚಿನ್ನದ ನಿಕ್ಷೇಪ?
ಗುಡಿಬಂಡೆ ಬಳಿ ಇದೆಯಾ ಚಿನ್ನದ ನಿಕ್ಷೇಪ?