Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹಾರಾಷ್ಟ್ರದ ಔರಂಗಾಬಾದ್​ ಹೆಸರು ಬದಲಿಸಲು ಮುಂದಾದ ಶಿವಸೇನೆ; ಕಾಂಗ್ರೆಸ್ ಅಸಮಾಧಾನ

ನಗರದ ಹೆಸರು ಬದಲಾವಣೆ ವಿಚಾರದಲ್ಲಿ ಶಿವಸೇನೆಯ ಬದ್ಧತೆಯನ್ನು ಪ್ರಶ್ನಿಸಿರುವ ಬಿಜೆಪಿಗೂ ‘ಸಾಮ್ನಾ’ ತಿರುಗೇಟು ನೀಡಿದೆ. ಪಾಕಿಸ್ತಾನದಲ್ಲಿ ದೇವಾಲಯಗಳ ಧ್ವಂಸವಾಗುತ್ತಿದೆ. ನೀವು ಆ ಕೃತ್ಯಗಳತ್ತ ಗಮನಹರಿಸಿ. ರಾಜ್ಯಸರ್ಕಾರವನ್ನು ಅಸ್ಥಿರಗೊಳಿಸುವ ಪ್ರಯತ್ನಕ್ಕೆ ಅವಕಾಶ ಹುಡುಕುವುದು ಬೇಡ ಎಂದಿದೆ.

ಮಹಾರಾಷ್ಟ್ರದ ಔರಂಗಾಬಾದ್​ ಹೆಸರು ಬದಲಿಸಲು ಮುಂದಾದ ಶಿವಸೇನೆ; ಕಾಂಗ್ರೆಸ್ ಅಸಮಾಧಾನ
ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್​​ ಠಾಕ್ರೆ
Follow us
TV9 Web
| Updated By: ganapathi bhat

Updated on:Apr 06, 2022 | 11:15 PM

ಮುಂಬೈ: ಮಹಾರಾಷ್ಟ್ರದ ಔರಂಗಾಬಾದ್ ನಗರದ ಹೆಸರನ್ನು ಬದಲಾಯಿಸಲು ಶಿವಸೇನೆ ಒಲವು ತೋರಿದೆ. ಔರಂಗಾಬಾದ್ ಹೆಸರನ್ನು ಮರಾಠ ರಾಜ ಛತ್ರಪತಿ ಸಾಂಭಾಜಿ ಮಹಾರಾಜ್ ಹೆಸರಿಗೆ ಬದಲಿಸಬೇಕು ಎಂದು ಶಿವಸೇನೆ ಹೇಳಿದೆ. ಈ ಬಗ್ಗೆ ಅಸಮಧಾನ ವ್ಯಕ್ತಪಡಿಸಿರುವ ಕಾಂಗ್ರೆಸ್, ಅಂಥಾ ಯಾವುದೇ ಹೆಜ್ಜೆಯನ್ನು ವಿರೋಧಿಸುವುದಾಗಿ ತಿಳಿಸಿದೆ.

ಈ ಬೆಳವಣಿಗೆಗಳು ಮಿತ್ರಪಕ್ಷಗಳಾದ ಕಾಂಗ್ರೆಸ್, ಶಿವಸೇನೆ ನಡುವೆ ಬಿರುಕು ಮೂಡಿಸುವ ಅಪಾಯ ತೋರಿದೆ. ಆದರೆ, ಕಾಂಗ್ರೆಸ್ ವಿರೋಧದಿಂದ ಶಿವಸೇನೆಯೊಂದಿಗಿನ ಕಾಂಗ್ರೆಸ್ ಮೈತ್ರಿಗೆ ಧಕ್ಕೆ ಉಂಟಾಗಲಿದೆ ಎಂಬ ಆರೋಪವನ್ನು ಶಿವಸೇನೆಯ ಮುಖವಾಣಿ ‘ಸಾಮ್ನಾ’ ಅಲ್ಲಗಳೆದಿದೆ. ಔರಂಗಾಬಾದ್ ನಗರದ ಹೆಸರು ಬದಲಾವಣೆ ಶಿವಸೇನೆಯ ಬಹುವರ್ಷಗಳ ಕನಸು. ಕಾಂಗ್ರೆಸ್ ವಿರೋಧವೂ ಈ ಹಿಂದಿನಿಂದ ಇತ್ತು. ಅದ್ದರಿಂದ, ಹಳೆಯ ವಿಚಾರಗಳು ಇಂದಿನ ಮೈತ್ರಿ ಸರ್ಕಾರಕ್ಕೆ ತೊಂದರೆಯಾಗುತ್ತದೆ ಎಂದು ಊಹಿಸುವುದು ಮೂರ್ಖ ಚಿಂತನೆಯಾಗುತ್ತದೆ ಎಂದು ಹೇಳಿದೆ.

ನಗರದ ಹೆಸರು ಬದಲಾವಣೆ ವಿಚಾರದಲ್ಲಿ ಶಿವಸೇನೆಯ ಬದ್ಧತೆಯನ್ನು ಪ್ರಶ್ನಿಸಿರುವ ಬಿಜೆಪಿಗೂ ‘ಸಾಮ್ನಾ’ ತಿರುಗೇಟು ನೀಡಿದೆ. ಪಾಕಿಸ್ತಾನದಲ್ಲಿ ದೇವಾಲಯಗಳ ಧ್ವಂಸವಾಗುತ್ತಿದೆ. ನೀವು ಆ ಕೃತ್ಯಗಳತ್ತ ಗಮನಹರಿಸಿ. ರಾಜ್ಯಸರ್ಕಾರವನ್ನು ಅಸ್ಥಿರಗೊಳಿಸುವ ಪ್ರಯತ್ನಕ್ಕೆ ಅವಕಾಶ ಹುಡುಕುವುದು ಬೇಡ ಎಂದಿದೆ.

ಔರಂಗಾಬಾದ್ ನಗರ ಹೆಸರು ಬದಲಾವಣೆ ವಿಚಾರದ ಹಿನ್ನೆಲೆ ಮೊಘಲ್ ಚಕ್ರವರ್ತಿ ಔರಂಗಜೇಬ್ ಆ ಪ್ರದೇಶದಲ್ಲಿ ತನ್ನ ಕೊನೆಯ ದಿನಗಳನ್ನು ಕಳೆದಿದ್ದ ಎಂಬ ಕಾರಣದಿಂದ ಆ ನಗರಕ್ಕೆ ಔರಂಗಾಬಾದ್ ಎಂಬ ಹೆಸರು ಬಂದಿದೆ. ಶಿವಸೇನೆ ಹಾಗೂ ಬಿಜೆಪಿ ಒಕ್ಕೂಟವು ಔರಂಗಾಬಾದ್ ನಗರಸಭೆಯಲ್ಲಿ ಎರಡು ವರ್ಷ ಆಡಳಿತ ನಡೆಸಿತ್ತು. 1995ರಲ್ಲಿ ಬಿಜೆಪಿ-ಶಿವಸೇನೆ ಒಕ್ಕೂಟದ ಕಾರ್ಪೊರೇಷನ್, ಔರಂಗಾಬಾದ್ ಹೆಸರನ್ನು ಬದಲಿಸುವಂತೆ ರಾಜ್ಯ ಸರ್ಕಾರಕ್ಕೆ ಶಿಫಾರಸು ಮಾಡಿತ್ತು.

ಶಿವಸೇನೆ ಹಾಗೂ ಬಿಜೆಪಿ ಮೈತ್ರಿಕೂಟ ರಾಜ್ಯದ ಆಡಳಿತ ನಡೆಸುತ್ತಿದ್ದಾಗಲೂ ಔರಂಗಾಬಾದ್ ಹೆಸರು ಬದಲಾವಣೆಯ ಕುರಿತು ಬೆಳವಣಿಗೆಗಳಾಗಿದ್ದವು. ಆಗಿನ ಮಹಾರಾಷ್ಟ್ರ ಮುಖ್ಯಮಂತ್ರಿ ಮನೋಹರ್ ಜೋಶಿ, ಔರಂಗಾಬಾದ್​ನ್ನು ಸಾಂಭಾಜಿನಗರ್ ಎಂದು ಬದಲಾಯಿಸುವಂತೆ ನಿರ್ಣಯ ಮಂಡಿಸಿದ್ದರು. ಸರ್ಕಾರದ ಈ ನಿರ್ಣಯವನ್ನು ಬಾಂಬೆ ಹೈಕೋರ್ಟ್​ನ ಔರಂಗಾಬಾದ್ ನ್ಯಾಯಪೀಠ ಆಕ್ಷೇಪಿಸಿ, ತಿರಸ್ಕರಿಸಿತ್ತು.

Published On - 2:52 pm, Sun, 3 January 21

ಜಾತಿಗಣತಿ ವರದಿ ಜಾರಿ ವಿಚಾರ: ಸ್ವಪಕ್ಷದ ವಿರುದ್ಧ ಶಾಮನೂರು ವಾಗ್ದಾಳಿ
ಜಾತಿಗಣತಿ ವರದಿ ಜಾರಿ ವಿಚಾರ: ಸ್ವಪಕ್ಷದ ವಿರುದ್ಧ ಶಾಮನೂರು ವಾಗ್ದಾಳಿ
28 ಸೆಕೆಂಡಲ್ಲಿ 20 ಹೊಡೆತ; ಉತ್ತರಾಖಂಡದ ಮೆಡಿಕಲ್ ಶಾಪ್ ಮಾಲೀಕರ ಮೇಲೆ ಹಲ್ಲೆ
28 ಸೆಕೆಂಡಲ್ಲಿ 20 ಹೊಡೆತ; ಉತ್ತರಾಖಂಡದ ಮೆಡಿಕಲ್ ಶಾಪ್ ಮಾಲೀಕರ ಮೇಲೆ ಹಲ್ಲೆ
ಕಾಮಿಡಿ ಶೋಗಳಲ್ಲಿ ಅಡಲ್ಟ್ ಭಾಷೆ ಯಾಕೆ? ಸಮರ್ಥನೆ ನೀಡಿದ ನಿರೂಪ್, ಶ್ರವಣ್
ಕಾಮಿಡಿ ಶೋಗಳಲ್ಲಿ ಅಡಲ್ಟ್ ಭಾಷೆ ಯಾಕೆ? ಸಮರ್ಥನೆ ನೀಡಿದ ನಿರೂಪ್, ಶ್ರವಣ್
ಲೋಕಾಯುಕ್ತ ಬಿ ರಿಪೋರ್ಟ್ ಸಲ್ಲಿಕೆ ಪ್ರಶ್ನಿಸಿ ದೂರುದಾರರಿಂದ ತಕರಾರು ಅರ್ಜಿ
ಲೋಕಾಯುಕ್ತ ಬಿ ರಿಪೋರ್ಟ್ ಸಲ್ಲಿಕೆ ಪ್ರಶ್ನಿಸಿ ದೂರುದಾರರಿಂದ ತಕರಾರು ಅರ್ಜಿ
ಗೃಹಲಕ್ಷ್ಮಿ ಹಣದಿಂದ ತೋಟದಲ್ಲಿ ಬೋರ್​ವೆಲ್ ಕೊರೆಸಿದ ದಂಪತಿ
ಗೃಹಲಕ್ಷ್ಮಿ ಹಣದಿಂದ ತೋಟದಲ್ಲಿ ಬೋರ್​ವೆಲ್ ಕೊರೆಸಿದ ದಂಪತಿ
ಸಿದ್ದರಾಮಯ್ಯ ದಲಿತರ ಕೈ ಬಿಟ್ಟು ಮುಸಲ್ಮಾನರ ಕೈ ಹಿಡಿದಿದ್ದಾರೆ: ಅಶೋಕ
ಸಿದ್ದರಾಮಯ್ಯ ದಲಿತರ ಕೈ ಬಿಟ್ಟು ಮುಸಲ್ಮಾನರ ಕೈ ಹಿಡಿದಿದ್ದಾರೆ: ಅಶೋಕ
ಸ್ಟ್ಯಾಂಡಪ್ ಕಾಮಿಡಿಯನ್ ನಿರೂಪ್ ಮೋಹನ್ ಬಗ್ಗೆ ನಿಮಗೆಷ್ಟು ಗೊತ್ತು?
ಸ್ಟ್ಯಾಂಡಪ್ ಕಾಮಿಡಿಯನ್ ನಿರೂಪ್ ಮೋಹನ್ ಬಗ್ಗೆ ನಿಮಗೆಷ್ಟು ಗೊತ್ತು?
ಮತೀಯ ಭಾವನೆಗಳನ್ನು ಯಾರೂ ಕೆರಳಿಸಬಾರದು: ಕೋಲಾರ ಮಸೀದಿಯೊಂದರ ಮೌಲ್ವಿ
ಮತೀಯ ಭಾವನೆಗಳನ್ನು ಯಾರೂ ಕೆರಳಿಸಬಾರದು: ಕೋಲಾರ ಮಸೀದಿಯೊಂದರ ಮೌಲ್ವಿ
ವರದಿ ಮೇಲಿನ ಚರ್ಚೆಗೆ ಸಿಎಂ ವಿಶೇಷ ಅಧಿವೇಶನ ಕರೆಯಲು ಮನವಿ: ಜಾರಕಿಹೊಳಿ
ವರದಿ ಮೇಲಿನ ಚರ್ಚೆಗೆ ಸಿಎಂ ವಿಶೇಷ ಅಧಿವೇಶನ ಕರೆಯಲು ಮನವಿ: ಜಾರಕಿಹೊಳಿ
ಮಧ್ಯಂತರ ವರದಿಯನ್ನು ಅಧಿಕಾರಿಗಳು ಅಂತಿಮ ವರದಿ ಅಂದಿದ್ದಾರೆ: ಸ್ನೇಹಮಯಿ
ಮಧ್ಯಂತರ ವರದಿಯನ್ನು ಅಧಿಕಾರಿಗಳು ಅಂತಿಮ ವರದಿ ಅಂದಿದ್ದಾರೆ: ಸ್ನೇಹಮಯಿ