AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹಾರಾಷ್ಟ್ರದ ಔರಂಗಾಬಾದ್​ ಹೆಸರು ಬದಲಿಸಲು ಮುಂದಾದ ಶಿವಸೇನೆ; ಕಾಂಗ್ರೆಸ್ ಅಸಮಾಧಾನ

ನಗರದ ಹೆಸರು ಬದಲಾವಣೆ ವಿಚಾರದಲ್ಲಿ ಶಿವಸೇನೆಯ ಬದ್ಧತೆಯನ್ನು ಪ್ರಶ್ನಿಸಿರುವ ಬಿಜೆಪಿಗೂ ‘ಸಾಮ್ನಾ’ ತಿರುಗೇಟು ನೀಡಿದೆ. ಪಾಕಿಸ್ತಾನದಲ್ಲಿ ದೇವಾಲಯಗಳ ಧ್ವಂಸವಾಗುತ್ತಿದೆ. ನೀವು ಆ ಕೃತ್ಯಗಳತ್ತ ಗಮನಹರಿಸಿ. ರಾಜ್ಯಸರ್ಕಾರವನ್ನು ಅಸ್ಥಿರಗೊಳಿಸುವ ಪ್ರಯತ್ನಕ್ಕೆ ಅವಕಾಶ ಹುಡುಕುವುದು ಬೇಡ ಎಂದಿದೆ.

ಮಹಾರಾಷ್ಟ್ರದ ಔರಂಗಾಬಾದ್​ ಹೆಸರು ಬದಲಿಸಲು ಮುಂದಾದ ಶಿವಸೇನೆ; ಕಾಂಗ್ರೆಸ್ ಅಸಮಾಧಾನ
ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್​​ ಠಾಕ್ರೆ
TV9 Web
| Edited By: |

Updated on:Apr 06, 2022 | 11:15 PM

Share

ಮುಂಬೈ: ಮಹಾರಾಷ್ಟ್ರದ ಔರಂಗಾಬಾದ್ ನಗರದ ಹೆಸರನ್ನು ಬದಲಾಯಿಸಲು ಶಿವಸೇನೆ ಒಲವು ತೋರಿದೆ. ಔರಂಗಾಬಾದ್ ಹೆಸರನ್ನು ಮರಾಠ ರಾಜ ಛತ್ರಪತಿ ಸಾಂಭಾಜಿ ಮಹಾರಾಜ್ ಹೆಸರಿಗೆ ಬದಲಿಸಬೇಕು ಎಂದು ಶಿವಸೇನೆ ಹೇಳಿದೆ. ಈ ಬಗ್ಗೆ ಅಸಮಧಾನ ವ್ಯಕ್ತಪಡಿಸಿರುವ ಕಾಂಗ್ರೆಸ್, ಅಂಥಾ ಯಾವುದೇ ಹೆಜ್ಜೆಯನ್ನು ವಿರೋಧಿಸುವುದಾಗಿ ತಿಳಿಸಿದೆ.

ಈ ಬೆಳವಣಿಗೆಗಳು ಮಿತ್ರಪಕ್ಷಗಳಾದ ಕಾಂಗ್ರೆಸ್, ಶಿವಸೇನೆ ನಡುವೆ ಬಿರುಕು ಮೂಡಿಸುವ ಅಪಾಯ ತೋರಿದೆ. ಆದರೆ, ಕಾಂಗ್ರೆಸ್ ವಿರೋಧದಿಂದ ಶಿವಸೇನೆಯೊಂದಿಗಿನ ಕಾಂಗ್ರೆಸ್ ಮೈತ್ರಿಗೆ ಧಕ್ಕೆ ಉಂಟಾಗಲಿದೆ ಎಂಬ ಆರೋಪವನ್ನು ಶಿವಸೇನೆಯ ಮುಖವಾಣಿ ‘ಸಾಮ್ನಾ’ ಅಲ್ಲಗಳೆದಿದೆ. ಔರಂಗಾಬಾದ್ ನಗರದ ಹೆಸರು ಬದಲಾವಣೆ ಶಿವಸೇನೆಯ ಬಹುವರ್ಷಗಳ ಕನಸು. ಕಾಂಗ್ರೆಸ್ ವಿರೋಧವೂ ಈ ಹಿಂದಿನಿಂದ ಇತ್ತು. ಅದ್ದರಿಂದ, ಹಳೆಯ ವಿಚಾರಗಳು ಇಂದಿನ ಮೈತ್ರಿ ಸರ್ಕಾರಕ್ಕೆ ತೊಂದರೆಯಾಗುತ್ತದೆ ಎಂದು ಊಹಿಸುವುದು ಮೂರ್ಖ ಚಿಂತನೆಯಾಗುತ್ತದೆ ಎಂದು ಹೇಳಿದೆ.

ನಗರದ ಹೆಸರು ಬದಲಾವಣೆ ವಿಚಾರದಲ್ಲಿ ಶಿವಸೇನೆಯ ಬದ್ಧತೆಯನ್ನು ಪ್ರಶ್ನಿಸಿರುವ ಬಿಜೆಪಿಗೂ ‘ಸಾಮ್ನಾ’ ತಿರುಗೇಟು ನೀಡಿದೆ. ಪಾಕಿಸ್ತಾನದಲ್ಲಿ ದೇವಾಲಯಗಳ ಧ್ವಂಸವಾಗುತ್ತಿದೆ. ನೀವು ಆ ಕೃತ್ಯಗಳತ್ತ ಗಮನಹರಿಸಿ. ರಾಜ್ಯಸರ್ಕಾರವನ್ನು ಅಸ್ಥಿರಗೊಳಿಸುವ ಪ್ರಯತ್ನಕ್ಕೆ ಅವಕಾಶ ಹುಡುಕುವುದು ಬೇಡ ಎಂದಿದೆ.

ಔರಂಗಾಬಾದ್ ನಗರ ಹೆಸರು ಬದಲಾವಣೆ ವಿಚಾರದ ಹಿನ್ನೆಲೆ ಮೊಘಲ್ ಚಕ್ರವರ್ತಿ ಔರಂಗಜೇಬ್ ಆ ಪ್ರದೇಶದಲ್ಲಿ ತನ್ನ ಕೊನೆಯ ದಿನಗಳನ್ನು ಕಳೆದಿದ್ದ ಎಂಬ ಕಾರಣದಿಂದ ಆ ನಗರಕ್ಕೆ ಔರಂಗಾಬಾದ್ ಎಂಬ ಹೆಸರು ಬಂದಿದೆ. ಶಿವಸೇನೆ ಹಾಗೂ ಬಿಜೆಪಿ ಒಕ್ಕೂಟವು ಔರಂಗಾಬಾದ್ ನಗರಸಭೆಯಲ್ಲಿ ಎರಡು ವರ್ಷ ಆಡಳಿತ ನಡೆಸಿತ್ತು. 1995ರಲ್ಲಿ ಬಿಜೆಪಿ-ಶಿವಸೇನೆ ಒಕ್ಕೂಟದ ಕಾರ್ಪೊರೇಷನ್, ಔರಂಗಾಬಾದ್ ಹೆಸರನ್ನು ಬದಲಿಸುವಂತೆ ರಾಜ್ಯ ಸರ್ಕಾರಕ್ಕೆ ಶಿಫಾರಸು ಮಾಡಿತ್ತು.

ಶಿವಸೇನೆ ಹಾಗೂ ಬಿಜೆಪಿ ಮೈತ್ರಿಕೂಟ ರಾಜ್ಯದ ಆಡಳಿತ ನಡೆಸುತ್ತಿದ್ದಾಗಲೂ ಔರಂಗಾಬಾದ್ ಹೆಸರು ಬದಲಾವಣೆಯ ಕುರಿತು ಬೆಳವಣಿಗೆಗಳಾಗಿದ್ದವು. ಆಗಿನ ಮಹಾರಾಷ್ಟ್ರ ಮುಖ್ಯಮಂತ್ರಿ ಮನೋಹರ್ ಜೋಶಿ, ಔರಂಗಾಬಾದ್​ನ್ನು ಸಾಂಭಾಜಿನಗರ್ ಎಂದು ಬದಲಾಯಿಸುವಂತೆ ನಿರ್ಣಯ ಮಂಡಿಸಿದ್ದರು. ಸರ್ಕಾರದ ಈ ನಿರ್ಣಯವನ್ನು ಬಾಂಬೆ ಹೈಕೋರ್ಟ್​ನ ಔರಂಗಾಬಾದ್ ನ್ಯಾಯಪೀಠ ಆಕ್ಷೇಪಿಸಿ, ತಿರಸ್ಕರಿಸಿತ್ತು.

Published On - 2:52 pm, Sun, 3 January 21

Follow Us
Web contact
Web contact

TV9 Kannada

Read More
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​