AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೆಹಲಿಯ ರಸ್ತೆ ಮರುನಾಮಕರಣ: ಔರಂಗಜೇಬ್ ಲೇನ್ ಈಗ ಡಾ ಎಪಿಜೆ ಅಬ್ದುಲ್ ಕಲಾಂ ಲೇನ್‌

17 ನೇ ಶತಮಾನದ ಮೊಘಲ್ ಚಕ್ರವರ್ತಿ ಹೆಸರು ಲೇನ್‌ನ ಹೊಸ ಗುರುತಿಗೆ 'ಅನುಚಿತ' ಎಂದು ಪರಿಗಣಿಸಲಾಗಿದೆ. ಆ ಪ್ರದೇಶದ ಸಮಕಾಲೀನ ಸಂದರ್ಭದಲ್ಲಿ ಔರಂಗಜೇಬನಿಗೆ ಯಾವುದೇ ಪ್ರಸ್ತುತತೆ ಅಥವಾ ಸ್ಥಾನವಿಲ್ಲ ಎಂದು NDMC ಉಪಾಧ್ಯಕ್ಷ ಸತೀಶ್ ಉಪಾಧ್ಯಾಯ ಹೇಳಿದ್ದಾರೆ.

ದೆಹಲಿಯ ರಸ್ತೆ ಮರುನಾಮಕರಣ: ಔರಂಗಜೇಬ್ ಲೇನ್ ಈಗ ಡಾ ಎಪಿಜೆ ಅಬ್ದುಲ್ ಕಲಾಂ ಲೇನ್‌
ಡಾ ಎಪಿಜೆ ಅಬ್ದುಲ್ ಕಲಾಂ ಲೇನ್‌
ರಶ್ಮಿ ಕಲ್ಲಕಟ್ಟ
ರಶ್ಮಿ ಕಲ್ಲಕಟ್ಟ|

Updated on: Jul 06, 2023 | 2:06 PM

Share

ದೆಹಲಿ ನಗರದ ಮಧ್ಯಭಾಗದಲ್ಲಿರುವ ಔರಂಗಜೇಬ್ ಲೇನ್ (Aurangzeb Lane) ಅನ್ನು ಡಾ ಎಪಿಜೆ ಅಬ್ದುಲ್ ಕಲಾಂ ಲೇನ್‌ (Dr APJ Abdul Kalam Lane)  ಎಂದು ಮರುನಾಮಕರಣ ಮಾಡಲಾಗಿದೆ. ಕಳೆದ ವಾರ ಕರೆದಿದ್ದ ವಿಶೇಷ ಸಭೆಯಲ್ಲಿ ನವದೆಹಲಿ ಮುನ್ಸಿಪಲ್ ಕೌನ್ಸಿಲ್ (NDMC) ಈ ಬದಲಾವಣೆಯನ್ನು ಸರ್ವಾನುಮತದಿಂದ ಅಂಗೀಕರಿಸಿದೆ. ಒಂದು ಕಾಲದಲ್ಲಿ ಔರಂಗಜೇಬ್ ಲೇನ್ ಆಗಿದ್ದು ಇದನ್ನು 2015 ರಲ್ಲಿ ಡಾ ಎಪಿಜೆ ಅಬ್ದುಲ್ ಕಲಾಂ ರಸ್ತೆ ಎಂದು ಮರುನಾಮಕರಣ ಮಾಡಲಾಯಿತು. 17 ನೇ ಶತಮಾನದ ಮೊಘಲ್ ಚಕ್ರವರ್ತಿ ಹೆಸರು ಲೇನ್‌ನ ಹೊಸ ಗುರುತಿಗೆ ‘ಅನುಚಿತ’ ಎಂದು ಪರಿಗಣಿಸಲಾಗಿದೆ. ಆ ಪ್ರದೇಶದ ಸಮಕಾಲೀನ ಸಂದರ್ಭದಲ್ಲಿ ಔರಂಗಜೇಬನಿಗೆ ಯಾವುದೇ ಪ್ರಸ್ತುತತೆ ಅಥವಾ ಸ್ಥಾನವಿಲ್ಲ ಎಂದು NDMC ಉಪಾಧ್ಯಕ್ಷ ಸತೀಶ್ ಉಪಾಧ್ಯಾಯ ಹೇಳಿದ್ದಾರೆ.

ಎನ್‌ಡಿಎಂಸಿ ಪ್ರದೇಶದ ಅಡಿಯಲ್ಲಿ ‘ಔರಂಗಜೇಬ್ ಲೇನ್’ ಅನ್ನು ‘ಡಾ ಎಪಿಜೆ ಅಬ್ದುಲ್ ಕಲಾಂ ಲೇನ್’ ಎಂದು ಮರುನಾಮಕರಣ ಮಾಡಲು ಉಪ-ಕಲಂ (ಎ) ಪ್ರಕಾರ ಕೌನ್ಸಿಲ್‌ನ ಮುಂದೆ ಅಜೆಂಡಾ ಇರಿಸಲಾಗಿದೆ. ನವದೆಹಲಿ ಮುನ್ಸಿಪಲ್ ಆಕ್ಟ್, 1994 ರ ಸೆಕ್ಷನ್ 231 ರ ವಿಭಾಗ (1) ಔರಂಗಜೇಬ್ ಲೇನ್ ಅನ್ನು ಡಾ ಎಪಿಜೆ ಅಬ್ದುಲ್ ಕಲಾಂ ಲೇನ್ ಎಂದು ಮರುನಾಮಕರಣ ಮಾಡಲು ಕೌನ್ಸಿಲ್ ಅನುಮೋದಿಸಿದೆ ಎಂದು ನಾಗರಿಕ ಸಂಸ್ಥೆ ತಮ್ಮ ಹೇಳಿಕೆಯಲ್ಲಿ ತಿಳಿಸಿದೆ.

ಔರಂಗಜೇಬ್ ರಸ್ತೆಯನ್ನು ಮರು ನಾಮಕರಣ ಮಾಡುವ 2015 ರ ನಿರ್ಧಾರವನ್ನು ಕೆಲವು ಇತಿಹಾಸಕಾರರು ಟೀಕಿಸಿದ್ದಾರೆ. ಇದು ಇತಿಹಾಸದ ‘ಓರೆಯಾದ ದೃಷ್ಟಿಕೋನ’ವನ್ನು ಪ್ರತಿಬಿಂಬಿಸುತ್ತದೆ.ಇದು ಇತರ ಪರಿಣಾಮಗಳಿಗೆ ಕಾರಣವಾಗಬಹುದು ಎಂದು ಅವರು ವಾದಿಸಿದ್ದಾರೆ.

ಇತಿಹಾಸದ ತಿಳುವಳಿಕೆಯ ಕೊರತೆಯಿಂದಾಗಿ ಮರು ನಾಮಕರಣದ ಕಸರತ್ತು ನಡೆದಿದೆ ಎಂದು ಖ್ಯಾತ ಇತಿಹಾಸ ತಜ್ಞೆ ನಾರಾಯಣಿ ಗುಪ್ತಾ ಹೇಳಿದ್ದಾರೆ. ಅಕ್ಬರ್ ಮತ್ತು ಷಹಜಹಾನ್ ರಂತಹ ಮೊಘಲ್ ದೊರೆಗಳ ಹೆಸರನ್ನು ಹೊಂದಿರುವ ರಸ್ತೆಯನ್ನು ನವದೆಹಲಿಯ ವಿನ್ಯಾಸದ ಸಮಯದಲ್ಲಿ ಬ್ರಿಟಿಷರಿಂದ ಗೊತ್ತುಪಡಿಸಲಾಯಿತು.

ಇದನ್ನೂ ಓದಿGadkari on Petrol Price: ಹೀಗಾದರೆ ಪ್ರತಿ ಲೀಟರ್ ಪೆಟ್ರೋಲ್ ₹15 ಕ್ಕೆ ಮಾರಾಟ ಮಾಡಬಹುದು; ಸಚಿವ ನಿತಿನ್ ಗಡ್ಕರಿ ಹೇಳಿದ್ದೇನು?

ಅಶೋಕನಂತಹ ಗೌರವಾನ್ವಿತ ಆಡಳಿತಗಾರರನ್ನು ಒಳಗೊಂಡಂತೆ ಈ ಹೆಸರುಗಳನ್ನು ಆ ಸಮಯದಲ್ಲಿ ದೆಹಲಿಯ ಸೇಂಟ್ ಸ್ಟೀಫನ್ಸ್ ಕಾಲೇಜಿನಲ್ಲಿ ಇತಿಹಾಸವನ್ನು ಬೋಧಿಸುತ್ತಿದ್ದ ಪ್ರಖ್ಯಾತ ಇತಿಹಾಸಕಾರ ಪರ್ಸಿವಲ್ ಸ್ಪಿಯರ್ ಸೂಚಿಸಿದರು. ಐತಿಹಾಸಿಕ ಸಂದರ್ಭವನ್ನು ಪರಿಗಣಿಸದೆ ಔರಂಗಜೇಬ್ ಅವರಂತಹ ಐತಿಹಾಸಿಕವಾಗಿ ಮಹತ್ವದ ಹೆಸರುಗಳನ್ನು ತೆಗೆದುಹಾಕುವುದರ ವಿರುದ್ಧ ವಾದಿಸಿದ ಗುಪ್ತಾ ಅವರು ಡಾ ಕಲಾಂ ಅವರಿಗೆ ಹೆಚ್ಚು ಸೂಕ್ತವಾದ ಗೌರವವಾಗಿ ವಿಜ್ಞಾನ ವಸ್ತುಸಂಗ್ರಹಾಲಯವನ್ನು ಸ್ಥಾಪಿಸಲು ಸಲಹೆ ನೀಡಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Rashmi Kallakatta
Rashmi Kallakatta

ಊರು ಕಾಸರಗೋಡು. ಓದಿದ್ದು ಇಂಜಿನಿಯರಿಂಗ್, ಪಬ್ಲಿಕ್ ಅಡ್ಮಿನಿಸ್ಟ್ರೇಷನ್ ಮತ್ತು ಇಂಗ್ಲಿಷ್ ಸ್ನಾತಕೋತ್ತರ ಪದವಿ. ಕನ್ನಡಪ್ರಭ, ಪ್ರಜಾವಾಣಿ ಡಿಜಿಟಲ್ ಮತ್ತು ಪ್ರಿಂಟ್ ವಿಭಾಗದಲ್ಲಿ ಕೆಲಸದ ಅನುಭವ. ಬ್ಲಾಗರ್, ಸಾಹಿತ್ಯ ಪ್ರೇಮಿ. ಇಲ್ಲಿವರೆಗೆ 2 ಪುಸ್ತಕಗಳು ಪ್ರಕಟವಾಗಿವೆ. ಕಲೆ,ಸಾಹಿತ್ಯ,ತಂತ್ರಜ್ಞಾನ,ಸಂದರ್ಶನ, ಫ್ಯಾಕ್ಟ್ ಚೆಕಿಂಗ್ ಆಸಕ್ತಿಕರ ವಿಷಯಗಳು. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷ ಅನುಭವ

ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್