AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ರನ್ನು ಹೊಗಳಿ, ಸಹಾಯ ಕೋರಿದ ಆಸ್ಟ್ರೇಲಿಯಾ ಸಂಸದ ಕ್ರೇಗ್​ ಕೆಲ್ಲಿ

ಹಿರಿಯ ನಾಗರಿಕರಿಗೆ ಅನುಕೂಲವಾಗಲೆಂದು ಯೋಗಿ ಆದಿತ್ಯನಾಥ್​ ಪ್ರಾರಂಭಿಸಿದ ಆರೋಗ್ಯ ಮತ್ತು ಕಾನೂನು ಸಹಾಯವಾಣಿ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿ ಪ್ರಧಾನಿ ನರೇಂದ್ರ ಮೋದಿ ಕೂಡ ಕಳೆದ ತಿಂಗಳು ಟ್ವೀಟ್ ಮಾಡಿದ್ದರು.

ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ರನ್ನು ಹೊಗಳಿ, ಸಹಾಯ ಕೋರಿದ ಆಸ್ಟ್ರೇಲಿಯಾ ಸಂಸದ ಕ್ರೇಗ್​ ಕೆಲ್ಲಿ
ಕ್ರೇಗ್​ ಕೆಲ್ಲಿ
TV9 Web
| Edited By: |

Updated on:Jul 14, 2021 | 10:09 AM

Share

ಉತ್ತರಪ್ರದೇಶದಲ್ಲಿ ಕೊರೊನಾ ಸೋಂಕಿನ ಸನ್ನಿವೇಶವನ್ನು ಯಶಸ್ವಿಯಾಗಿ ನಿಭಾಯಿಸಿದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ಅವರನ್ನು ಆಸ್ಟ್ರೇಲಿಯಾದ ಸಂಸದ ಕ್ರೇಗ್ ಕೆಲ್ಲಿ ಶ್ಲಾಘಿಸಿದ್ದಾರೆ. ಅಲ್ಲದೆ, ನಮ್ಮ ಆಸ್ಟ್ರೇಲಿಯಾದಲ್ಲೂ ಕೊರೊನಾ ಸಾಂಕ್ರಾಮಿಕ ನಿಯಂತ್ರಿಸಲು ನೀವು ಸಹಾಯ ಮಾಡಬಹುದಾ ಎಂದು ಕೇಳಿದ್ದಾರೆ.

ಟ್ವೀಟ್ ಮಾಡಿರುವ ಆಸ್ಟ್ರೇಲಿಯಾ ಎಂಪಿ ಕ್ರೇಗ್​ ಕೆಲ್ಲಿ, ಭಾರತದ ಉತ್ತರಪ್ರದೇಶ ರಾಜ್ಯದಲ್ಲಿ ಕೊರೊನಾ 2ನೇ ಅಲೆಯನ್ನು ನಿಯಂತ್ರಿಸುವಲ್ಲಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ಸರ್ಕಾರ ತುಂಬ ಪರಿಣಾಮಕಾರಿಯಾಗಿ ಶ್ರಮಿಸಿದೆ. ಕೊರೊನಾ ಸೋಂಕನ್ನು ತಡೆಗಟ್ಟಲು ಉತ್ತರ ಪ್ರದೇಶ ಐವರ್ಮೆಕ್ಟಿನ್​​ನ್ನು ಪರಿಚಯಿಸಿದ್ದು ನಿಜಕ್ಕೂ ಅತ್ಯುತ್ತಮ ಕೆಲಸ ಎಂದು ಹೇಳಿದ್ದಾರೆ. ಹಾಗೇ ಇನ್ನೊಂದು ಟ್ವೀಟ್​ನಲ್ಲಿ, ನಮ್ಮಲ್ಲಿ ಮೊದಲಿದ್ದವರು ಸೃಷ್ಟಿಸಿದ ಅವ್ಯವಸ್ಥೆಯನ್ನು ಹೋಗಲಾಡಿಸಿ, ಕೊರೊನಾ ಸೋಂಕನ್ನು ಹಿಮ್ಮೆಟ್ಟಿಸಲು ಉತ್ತರ ಪ್ರದೇಶದ ಜನರು ಅವರ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ರನ್ನು ನಮಗೆ ಸಾಲ ಕೊಡಬಹುದಾ ಎಂದು ಹೊಗಳಿಕೆ ರೂಪದಲ್ಲಿ ಪ್ರಶ್ನಿಸಿದ್ದಾರೆ.

ಕಳೆದ ತಿಂಗಳು ಪ್ರಧಾನಮಂತ್ರಿ ನರೇಂದ್ರ ಮೋದಿಯವರೂ ಸಹ ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ಅವರನ್ನು ಶ್ಲಾಘಿಸಿದ್ದರು. ಹಿರಿಯ ನಾಗರಿಕರಿಗೆ ಅನುಕೂಲವಾಗಲೆಂದು ಯೋಗಿ ಆದಿತ್ಯನಾಥ್​ ಪ್ರಾರಂಭಿಸಿದ ಆರೋಗ್ಯ ಮತ್ತು ಕಾನೂನು ಸಹಾಯವಾಣಿ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿ ಟ್ವೀಟ್ ಮಾಡಿದ್ದರು.

ಇದನ್ನೂ ಓದಿ: Accident; ಕ್ಯಾಂಟರ್‌ಗೆ ಬೈಕ್ ಡಿಕ್ಕಿ ಸ್ಥಳದಲ್ಲೇ ಸವಾರ ಸಾವು, ಹಿಂಬದಿ ಸವಾರನಿಗೆ ಗಂಭೀರ ಗಾಯ

Australian MP Craig Kelly has asked Yogi Adityanath to help his country in tackling the Corona pandemic

Published On - 10:07 am, Wed, 14 July 21

Follow Us
ಪರಿಷತ್​​ ಚುನಾವಣೆ: ಜೆಡಿಎಸ್​​ ಶಾಸಕರ ಅಡ್ಡ ಮತದಾನದ ಹಿಂದಿದೆ ಹಲವು ಕಾರಣ
ಪರಿಷತ್​​ ಚುನಾವಣೆ: ಜೆಡಿಎಸ್​​ ಶಾಸಕರ ಅಡ್ಡ ಮತದಾನದ ಹಿಂದಿದೆ ಹಲವು ಕಾರಣ
ಮೈತ್ರಿ ಕುಸ್ತಿ? ರೇವಣ್ಣಗೆ ಮಾತಾಡೋ ಅಧಿಕಾರವಿಲ್ಲ: ಅಶೋಕ್ ತಿರುಗೇಟು
ಮೈತ್ರಿ ಕುಸ್ತಿ? ರೇವಣ್ಣಗೆ ಮಾತಾಡೋ ಅಧಿಕಾರವಿಲ್ಲ: ಅಶೋಕ್ ತಿರುಗೇಟು
ಪತ್ನಿ ಸಮೇತ ತಿರುಪತಿ ತಿಮ್ಮಪ್ಪನ ದರ್ಶನ ಪಡೆದ ಸಿಎಂ ಡಿ.ಕೆ. ಶಿವಕುಮಾರ್
ಪತ್ನಿ ಸಮೇತ ತಿರುಪತಿ ತಿಮ್ಮಪ್ಪನ ದರ್ಶನ ಪಡೆದ ಸಿಎಂ ಡಿ.ಕೆ. ಶಿವಕುಮಾರ್
ದಲಿತರ ಮೇಲೆ ದಬ್ಬಾಳಿಕೆ ಆರೋಪ: ಗ್ರಾಮದ ರಸ್ತೆ ಬಂದ್​​ ಮಾಡಿ ಪ್ರತಿಭಟನೆ
ದಲಿತರ ಮೇಲೆ ದಬ್ಬಾಳಿಕೆ ಆರೋಪ: ಗ್ರಾಮದ ರಸ್ತೆ ಬಂದ್​​ ಮಾಡಿ ಪ್ರತಿಭಟನೆ
ಮೊಬೈಲ್ ಕಸಿದು ಪರಾರಿಯಾಗಲು ಯತ್ನಿಸಿದವ‌ ಕ್ಷಣ ಮಾತ್ರದಲ್ಲಿ ಸಾವು!
ಮೊಬೈಲ್ ಕಸಿದು ಪರಾರಿಯಾಗಲು ಯತ್ನಿಸಿದವ‌ ಕ್ಷಣ ಮಾತ್ರದಲ್ಲಿ ಸಾವು!
ನೀಟ್ ಪರೀಕ್ಷೆಗೆ ಇನ್ನೊಂದೇ ದಿನ ಬಾಕಿ; ಕಟ್ಟುನಿಟ್ಟಿನ ಭದ್ರತಾ ವ್ಯವಸ್ಥೆ
ನೀಟ್ ಪರೀಕ್ಷೆಗೆ ಇನ್ನೊಂದೇ ದಿನ ಬಾಕಿ; ಕಟ್ಟುನಿಟ್ಟಿನ ಭದ್ರತಾ ವ್ಯವಸ್ಥೆ
JDS ಶಾಸಕರ ಅಡ್ಡಮತದಾನದ ಬಗ್ಗೆ ಹೆಚ್​ಡಿ ಕುಮಾರಸ್ವಾಮಿ ಹೇಳಿದ್ದೇನು ನೋಡಿ
JDS ಶಾಸಕರ ಅಡ್ಡಮತದಾನದ ಬಗ್ಗೆ ಹೆಚ್​ಡಿ ಕುಮಾರಸ್ವಾಮಿ ಹೇಳಿದ್ದೇನು ನೋಡಿ
ಬಿಗ್ ಬಾಸ್ ಕಾಂಪಿಟೇಷನ್​ ವಿಡಿಯೋ ಕಳುಹಿಸಲು ಕೊನೆಯ ದಿನಾಂಕ ತಿಳಿಸಿದ ಕಲರ್ಸ್
ಬಿಗ್ ಬಾಸ್ ಕಾಂಪಿಟೇಷನ್​ ವಿಡಿಯೋ ಕಳುಹಿಸಲು ಕೊನೆಯ ದಿನಾಂಕ ತಿಳಿಸಿದ ಕಲರ್ಸ್
ತಾಯಿ ಆನೆ ಮಡಿಲಲ್ಲಿ ಮಲಗಿದ್ದ ಮರಿಗಳ ಕ್ಯೂಟ್ ದೃಶ್ಯ ವೈರಲ್
ತಾಯಿ ಆನೆ ಮಡಿಲಲ್ಲಿ ಮಲಗಿದ್ದ ಮರಿಗಳ ಕ್ಯೂಟ್ ದೃಶ್ಯ ವೈರಲ್
ತ್ಯಾಜ್ಯ ಸಂಸ್ಕರಣಾ ಘಟಕದಲ್ಲಿ ದುರಂತ: ಬಿಹಾರ, ತಮಿಳುನಾಡಿನ ಇಬ್ಬರು ನಾಪತ್ತೆ
ತ್ಯಾಜ್ಯ ಸಂಸ್ಕರಣಾ ಘಟಕದಲ್ಲಿ ದುರಂತ: ಬಿಹಾರ, ತಮಿಳುನಾಡಿನ ಇಬ್ಬರು ನಾಪತ್ತೆ