AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Narendra Modi: ಭಾರತೀಯರ ಸುರಕ್ಷತೆ ನಮ್ಮ ಹೊಣೆ ಎಂದು ಆಸ್ಟ್ರೇಲಿಯಾದ ಪ್ರಧಾನಿ ಭರವಸೆ ನೀಡಿದ್ದಾರೆ: ಮೋದಿ

ಇತ್ತೀಚೆಗೆ ಆಸ್ಟ್ರೇಲಿಯಾದಲ್ಲಿ ನಡೆದ ದೇವಾಲಯಗಳ ಧ್ವಂಸ ಘಟನೆಗಳಿಗೆ ಸಂಬಂಧಿಸಿದಂತೆ, ಭಾರತೀಯ ಸಮುದಾಯದ ಸುರಕ್ಷತೆಯ ಬಗ್ಗೆ ಆಸ್ಟ್ರೇಲಿಯಾದ ಪ್ರಧಾನಿ ಆಂಟನಿ ಅಲ್ಬನೀಸ್ ಭರವಸೆ ನೀಡಿದ್ದಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

TV9 Web
| Edited By: |

Updated on:Mar 10, 2023 | 2:28 PM

Share

ದೆಹಲಿ: ಭಾರತಕ್ಕೆ ಭೇಟಿ ನೀಡಿರುವ ಆಸ್ಟ್ರೇಲಿಯಾದ ಪ್ರಧಾನಿ ಆಂಟನಿ ಅಲ್ಬನೀಸ್ ಮತ್ತು ಪ್ರಧಾನಿ ಮೋದಿ ನಡುವೆ ಅನೇಕ ಯೋಜನೆಗಳ ಒಪ್ಪಂದ ಮತ್ತು ವಿಚಾರಗಳ ಬಗ್ಗೆ ಚರ್ಚೆಗಳು ನಡೆದಿದೆ. ಅದರಲ್ಲಿ ಇತ್ತೀಚೆಗೆ ಆಸ್ಟ್ರೇಲಿಯಾದಲ್ಲಿ ನಡೆದ ದೇವಾಲಯಗಳ ಧ್ವಂಸ ಘಟನೆಗಳಿಗೆ ಸಂಬಂಧಿಸಿದಂತೆ, ಭಾರತೀಯ ಸಮುದಾಯದ ಸುರಕ್ಷತೆಯ ಬಗ್ಗೆ ಆಸ್ಟ್ರೇಲಿಯಾದ ಪ್ರಧಾನಿ ಆಂಟನಿ ಅಲ್ಬನೀಸ್ ಭರವಸೆ ನೀಡಿದ್ದಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ಆಸ್ಟ್ರೇಲಿಯಾದಲ್ಲಿ ದೇವಾಲಯಗಳ ಮೇಲಿನ ದಾಳಿಯ ವರದಿಗಳನ್ನು ನಾನು ನೋಡಿದ್ದೇನೆ. ನಾನು ಇದನ್ನು ಪ್ರಧಾನಿ ಅಲ್ಬನೀಸ್‌ಗೆ ತಿಳಿಸಿದ್ದೇನೆ ಮತ್ತು ಆಸ್ಟ್ರೇಲಿಯಾದಲ್ಲಿರುವ ಭಾರತೀಯ ಸಮುದಾಯದ ಸುರಕ್ಷತೆ ಮತ್ತು ಯೋಗಕ್ಷೇಮಕ್ಕೆ ಆದ್ಯತೆಯನ್ನು ನೀಡುತ್ತೇವೆ ಎಂದು ನನಗೆ ಭರವಸೆ ನೀಡಿದ್ದಾರೆ ಎಂದು ಪ್ರಧಾನಿ ಮೋದಿ ಹೇಳಿದರು.

ಕಳೆದ ವಾರ, ಬ್ರಿಸ್ಬೇನ್‌ನಲ್ಲಿರುವ ಪ್ರಮುಖ ಹಿಂದೂ ದೇವಾಲಯವಾದ ಲಕ್ಷ್ಮೀ ನಾರಾಯಣ ದೇವಾಲಯದ ಮೇಲೆ ಖಲಿಸ್ತಾನ್ ಪರ ಬೆಂಬಲಿಗರು ದಾಳಿ ನಡೆಸಿದ್ದರು. ಆಸ್ಟ್ರೇಲಿಯಾದಲ್ಲಿ ಎರಡು ತಿಂಗಳ ಅವಧಿಯಲ್ಲಿ ಹಿಂದೂ ದೇವಾಲಯಗಳ ಮೇಲೆ ನಡೆದ ಧ್ವಂಸ ಘಟನೆಗಳಲ್ಲಿ ನಾಲ್ಕನೇ ಘಟನೆ ಇದಾಗಿದೆ.

ಇದನ್ನೂ ಓದಿ: IND vs AUS 4th Test: ಆಸ್ಟ್ರೇಲಿಯಾ ಪ್ರಧಾನಿ ಆಂಥೋನಿ ಆಲ್ಬನೀಸ್, ರೋಹಿತ್ ಶರ್ಮಾ ಕೈ ಮೇಲೆತ್ತಿ ಖುಷಿ ವ್ಯಕ್ತಪಡಿಸಿದ ನರೇಂದ್ರ ಮೋದಿ

ಜನವರಿ 23 ರಂದು, ಮೆಲ್ಬೋರ್ನ್‌ನ ಆಲ್ಬರ್ಟ್ ಪಾರ್ಕ್‌ನಲ್ಲಿರುವ ಇಸ್ಕಾನ್ ದೇವಾಲಯದ ಗೋಡೆಗಳಲ್ಲಿ ಹಿಂದೂಸ್ತಾನ್ ಮುರ್ದಾಬಾದ್ ಎಂಬ ಬರಹವನ್ನು ಗೀಚಿದ್ದರು, ಜನವರಿ 16 ರಂದು, ವಿಕ್ಟೋರಿಯಾದ ಕ್ಯಾರಮ್ ಡೌನ್ಸ್‌ನಲ್ಲಿರುವ ಐತಿಹಾಸಿಕ ಶಿವ ವಿಷ್ಣು ದೇವಾಲಯವನ್ನು ಇದೇ ರೀತಿಯಲ್ಲಿ ಧ್ವಂಸಗೊಳಿಸಲಾಯಿತು.

ಜನವರಿ 12ರಂದು, ಮೆಲ್ಬೋರ್ನ್‌ನಲ್ಲಿರುವ ಸ್ವಾಮಿನಾರಾಯಣ ದೇವಸ್ಥಾನವನ್ನು ಭಾರತ ವಿರೋಧಿ ಬರಹಗಳನ್ನು ಗೀಚುಲಾಗಿತ್ತು. ಆಸ್ಟ್ರೇಲಿಯಾದಲ್ಲಿ ಹಿಂದೂ ದೇವಾಲಯಗಳ ಮೇಲಿನ ಧ್ವಂಸವನ್ನು ಭಾರತ ಪದೇ ಪದೇ ಖಂಡಿಸಿದೆ. ಈ ವಿಚಾರವಾಗಿ ಆಸ್ಟ್ರೇಲಿಯಾ ಸರ್ಕಾರದ ಮುಂದೆ ಈ ವಿಷಯವನ್ನು ಪ್ರಸ್ತಾಪಿಸಿದೆ.

Published On - 1:46 pm, Fri, 10 March 23

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್