AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Narendra Modi: ಭಾರತೀಯರ ಸುರಕ್ಷತೆ ನಮ್ಮ ಹೊಣೆ ಎಂದು ಆಸ್ಟ್ರೇಲಿಯಾದ ಪ್ರಧಾನಿ ಭರವಸೆ ನೀಡಿದ್ದಾರೆ: ಮೋದಿ

ಇತ್ತೀಚೆಗೆ ಆಸ್ಟ್ರೇಲಿಯಾದಲ್ಲಿ ನಡೆದ ದೇವಾಲಯಗಳ ಧ್ವಂಸ ಘಟನೆಗಳಿಗೆ ಸಂಬಂಧಿಸಿದಂತೆ, ಭಾರತೀಯ ಸಮುದಾಯದ ಸುರಕ್ಷತೆಯ ಬಗ್ಗೆ ಆಸ್ಟ್ರೇಲಿಯಾದ ಪ್ರಧಾನಿ ಆಂಟನಿ ಅಲ್ಬನೀಸ್ ಭರವಸೆ ನೀಡಿದ್ದಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

Follow us
TV9 Web
| Updated By: ಅಕ್ಷಯ್​ ಪಲ್ಲಮಜಲು​​

Updated on:Mar 10, 2023 | 2:28 PM

ದೆಹಲಿ: ಭಾರತಕ್ಕೆ ಭೇಟಿ ನೀಡಿರುವ ಆಸ್ಟ್ರೇಲಿಯಾದ ಪ್ರಧಾನಿ ಆಂಟನಿ ಅಲ್ಬನೀಸ್ ಮತ್ತು ಪ್ರಧಾನಿ ಮೋದಿ ನಡುವೆ ಅನೇಕ ಯೋಜನೆಗಳ ಒಪ್ಪಂದ ಮತ್ತು ವಿಚಾರಗಳ ಬಗ್ಗೆ ಚರ್ಚೆಗಳು ನಡೆದಿದೆ. ಅದರಲ್ಲಿ ಇತ್ತೀಚೆಗೆ ಆಸ್ಟ್ರೇಲಿಯಾದಲ್ಲಿ ನಡೆದ ದೇವಾಲಯಗಳ ಧ್ವಂಸ ಘಟನೆಗಳಿಗೆ ಸಂಬಂಧಿಸಿದಂತೆ, ಭಾರತೀಯ ಸಮುದಾಯದ ಸುರಕ್ಷತೆಯ ಬಗ್ಗೆ ಆಸ್ಟ್ರೇಲಿಯಾದ ಪ್ರಧಾನಿ ಆಂಟನಿ ಅಲ್ಬನೀಸ್ ಭರವಸೆ ನೀಡಿದ್ದಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ಆಸ್ಟ್ರೇಲಿಯಾದಲ್ಲಿ ದೇವಾಲಯಗಳ ಮೇಲಿನ ದಾಳಿಯ ವರದಿಗಳನ್ನು ನಾನು ನೋಡಿದ್ದೇನೆ. ನಾನು ಇದನ್ನು ಪ್ರಧಾನಿ ಅಲ್ಬನೀಸ್‌ಗೆ ತಿಳಿಸಿದ್ದೇನೆ ಮತ್ತು ಆಸ್ಟ್ರೇಲಿಯಾದಲ್ಲಿರುವ ಭಾರತೀಯ ಸಮುದಾಯದ ಸುರಕ್ಷತೆ ಮತ್ತು ಯೋಗಕ್ಷೇಮಕ್ಕೆ ಆದ್ಯತೆಯನ್ನು ನೀಡುತ್ತೇವೆ ಎಂದು ನನಗೆ ಭರವಸೆ ನೀಡಿದ್ದಾರೆ ಎಂದು ಪ್ರಧಾನಿ ಮೋದಿ ಹೇಳಿದರು.

ಕಳೆದ ವಾರ, ಬ್ರಿಸ್ಬೇನ್‌ನಲ್ಲಿರುವ ಪ್ರಮುಖ ಹಿಂದೂ ದೇವಾಲಯವಾದ ಲಕ್ಷ್ಮೀ ನಾರಾಯಣ ದೇವಾಲಯದ ಮೇಲೆ ಖಲಿಸ್ತಾನ್ ಪರ ಬೆಂಬಲಿಗರು ದಾಳಿ ನಡೆಸಿದ್ದರು. ಆಸ್ಟ್ರೇಲಿಯಾದಲ್ಲಿ ಎರಡು ತಿಂಗಳ ಅವಧಿಯಲ್ಲಿ ಹಿಂದೂ ದೇವಾಲಯಗಳ ಮೇಲೆ ನಡೆದ ಧ್ವಂಸ ಘಟನೆಗಳಲ್ಲಿ ನಾಲ್ಕನೇ ಘಟನೆ ಇದಾಗಿದೆ.

ಇದನ್ನೂ ಓದಿ: IND vs AUS 4th Test: ಆಸ್ಟ್ರೇಲಿಯಾ ಪ್ರಧಾನಿ ಆಂಥೋನಿ ಆಲ್ಬನೀಸ್, ರೋಹಿತ್ ಶರ್ಮಾ ಕೈ ಮೇಲೆತ್ತಿ ಖುಷಿ ವ್ಯಕ್ತಪಡಿಸಿದ ನರೇಂದ್ರ ಮೋದಿ

ಜನವರಿ 23 ರಂದು, ಮೆಲ್ಬೋರ್ನ್‌ನ ಆಲ್ಬರ್ಟ್ ಪಾರ್ಕ್‌ನಲ್ಲಿರುವ ಇಸ್ಕಾನ್ ದೇವಾಲಯದ ಗೋಡೆಗಳಲ್ಲಿ ಹಿಂದೂಸ್ತಾನ್ ಮುರ್ದಾಬಾದ್ ಎಂಬ ಬರಹವನ್ನು ಗೀಚಿದ್ದರು, ಜನವರಿ 16 ರಂದು, ವಿಕ್ಟೋರಿಯಾದ ಕ್ಯಾರಮ್ ಡೌನ್ಸ್‌ನಲ್ಲಿರುವ ಐತಿಹಾಸಿಕ ಶಿವ ವಿಷ್ಣು ದೇವಾಲಯವನ್ನು ಇದೇ ರೀತಿಯಲ್ಲಿ ಧ್ವಂಸಗೊಳಿಸಲಾಯಿತು.

ಜನವರಿ 12ರಂದು, ಮೆಲ್ಬೋರ್ನ್‌ನಲ್ಲಿರುವ ಸ್ವಾಮಿನಾರಾಯಣ ದೇವಸ್ಥಾನವನ್ನು ಭಾರತ ವಿರೋಧಿ ಬರಹಗಳನ್ನು ಗೀಚುಲಾಗಿತ್ತು. ಆಸ್ಟ್ರೇಲಿಯಾದಲ್ಲಿ ಹಿಂದೂ ದೇವಾಲಯಗಳ ಮೇಲಿನ ಧ್ವಂಸವನ್ನು ಭಾರತ ಪದೇ ಪದೇ ಖಂಡಿಸಿದೆ. ಈ ವಿಚಾರವಾಗಿ ಆಸ್ಟ್ರೇಲಿಯಾ ಸರ್ಕಾರದ ಮುಂದೆ ಈ ವಿಷಯವನ್ನು ಪ್ರಸ್ತಾಪಿಸಿದೆ.

Published On - 1:46 pm, Fri, 10 March 23

Daily Devotional: ಜಪ ಮಾಡುವುದರ ಹಿಂದಿನ ರಹಸ್ಯ ಹಾಗೂ ಉಪಯೋಗ ತಿಳಿಯಿರಿ
Daily Devotional: ಜಪ ಮಾಡುವುದರ ಹಿಂದಿನ ರಹಸ್ಯ ಹಾಗೂ ಉಪಯೋಗ ತಿಳಿಯಿರಿ
ಈ ರಾಶಿಯವರ ಆದಾಯದಲ್ಲಿ ಏರಿಕೆ, ವಾಹನ ಖರೀದಿಸುವವರು ಎಚ್ಚರ!
ಈ ರಾಶಿಯವರ ಆದಾಯದಲ್ಲಿ ಏರಿಕೆ, ವಾಹನ ಖರೀದಿಸುವವರು ಎಚ್ಚರ!
ದರ್ಶನ್ ಹೆಸರು ಹೇಳಿ ವಿನೋದ್ ಪ್ರಭಾಕರ್ ಅವರ ಕೊಂಡಾಡಿದ ಶ್ರುತಿ
ದರ್ಶನ್ ಹೆಸರು ಹೇಳಿ ವಿನೋದ್ ಪ್ರಭಾಕರ್ ಅವರ ಕೊಂಡಾಡಿದ ಶ್ರುತಿ
ಒಂದು ವಾರದಲ್ಲಿ ಗೃಹ ಲಕ್ಷ್ಮಿಯರ ಖಾತೆಗೆ ಹಣ ಜಮೆ: ಲಕ್ಷ್ಮೀ ಹೆಬ್ಬಾಳ್ಕರ್​
ಒಂದು ವಾರದಲ್ಲಿ ಗೃಹ ಲಕ್ಷ್ಮಿಯರ ಖಾತೆಗೆ ಹಣ ಜಮೆ: ಲಕ್ಷ್ಮೀ ಹೆಬ್ಬಾಳ್ಕರ್​
ಕಮಲ್ ಹಾಸನ್ ಕ್ಷಮೆ ಕೇಳದಿದ್ರೆ ರಾಜ್ಯ ಬಂದ್​ಗೆ ಕರೆ ಕೊಡ್ತಿವಿ: ವಾಟಾಳ್​
ಕಮಲ್ ಹಾಸನ್ ಕ್ಷಮೆ ಕೇಳದಿದ್ರೆ ರಾಜ್ಯ ಬಂದ್​ಗೆ ಕರೆ ಕೊಡ್ತಿವಿ: ವಾಟಾಳ್​
ವೃದ್ಧೆಯನ್ನು ಡೋಲಿಯಲ್ಲಿ ಹೊತ್ತು ಆಸ್ಪತ್ರೆಗೆ ಸಾಗಿಸಿದ ಗ್ರಾಮಸ್ಥರು
ವೃದ್ಧೆಯನ್ನು ಡೋಲಿಯಲ್ಲಿ ಹೊತ್ತು ಆಸ್ಪತ್ರೆಗೆ ಸಾಗಿಸಿದ ಗ್ರಾಮಸ್ಥರು
ಸಿಎಂ ಸಿದ್ದರಾಮಯ್ಯರನ್ನು ಹಾಡಿ ಹೊಗಳಿದ ಕೇಂದ್ರ ಸಚಿವ ಸೋಮಣ್ಣ
ಸಿಎಂ ಸಿದ್ದರಾಮಯ್ಯರನ್ನು ಹಾಡಿ ಹೊಗಳಿದ ಕೇಂದ್ರ ಸಚಿವ ಸೋಮಣ್ಣ
ಚಾರ್ಮಾಡಿ ಹಸಿರು ರಾಶಿಯ ಮೇಲೆ ಮಂಜಿನ ಚಿತ್ತಾರ: ಪ್ರವಾಸಕ್ಕೆ ಸೂಕ್ತ ಸಮಯ
ಚಾರ್ಮಾಡಿ ಹಸಿರು ರಾಶಿಯ ಮೇಲೆ ಮಂಜಿನ ಚಿತ್ತಾರ: ಪ್ರವಾಸಕ್ಕೆ ಸೂಕ್ತ ಸಮಯ
ಕಮಲ್ ಹಾಸನ್ ವಿವಾದ, ಬಂದ್​ಗೆ ಕರೆ ಕೊಡುವುದಾಗಿ ವಾಟಾಳ್ ಎಚ್ಚರಿಕೆ
ಕಮಲ್ ಹಾಸನ್ ವಿವಾದ, ಬಂದ್​ಗೆ ಕರೆ ಕೊಡುವುದಾಗಿ ವಾಟಾಳ್ ಎಚ್ಚರಿಕೆ
ಮಾತೃಭಾಷೆ ಮರೆಯಲ್ಲ, ಬೇರೆ ಭಾಷೆ ಬಗ್ಗೆ ಕಮೆಂಟ್ ಮಾಡಲ್ಲ: ರಚಿತಾ ರಾಮ್
ಮಾತೃಭಾಷೆ ಮರೆಯಲ್ಲ, ಬೇರೆ ಭಾಷೆ ಬಗ್ಗೆ ಕಮೆಂಟ್ ಮಾಡಲ್ಲ: ರಚಿತಾ ರಾಮ್