Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೇದಾರನಾಥ ಚಾರಣ ಮಾರ್ಗದಲ್ಲಿ ಸಿಲುಕಿದ್ದ 8,000 ಯಾತ್ರಿಕರ ರಕ್ಷಣೆ

ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ರಕ್ಷಣಾ ಕಾರ್ಯಾಚರಣೆಯನ್ನು ನಿಗಾ ವಹಿಸುತ್ತಿದ್ದಾರೆ ಎಂದು ರಾಜ್ಯ ಸರ್ಕಾರದ ಪ್ರಕಟಣೆ ತಿಳಿಸಿದೆ. ಸಿಎಂ ಧಾಮಿ ಅವರ ನಿರ್ದೇಶನದ ಮೇರೆಗೆ ಗರ್ವಾಲ್ ವಿಭಾಗದ ಆಯುಕ್ತ ವಿನಯ್ ಶಂಕರ್ ಪಾಂಡೆ ಅವರನ್ನು ಕೇದಾರನಾಥ ಮಾರ್ಗದಲ್ಲಿ ಮೂಲಸೌಕರ್ಯ ಮರುಸ್ಥಾಪನೆಗೆ ನೋಡಲ್ ಅಧಿಕಾರಿಯಾಗಿ ನೇಮಿಸಲಾಗಿದೆ.

ಕೇದಾರನಾಥ ಚಾರಣ ಮಾರ್ಗದಲ್ಲಿ ಸಿಲುಕಿದ್ದ 8,000 ಯಾತ್ರಿಕರ ರಕ್ಷಣೆ
ಕೇದಾರನಾಥದಲ್ಲಿ ಪ್ರಯಾಣಿಕರ ರಕ್ಷಣೆ
Follow us
ರಶ್ಮಿ ಕಲ್ಲಕಟ್ಟ
|

Updated on: Aug 03, 2024 | 8:13 PM

ಡೆಹ್ರಾಡೂನ್/ಮಸ್ಸೂರಿ ಆಗಸ್ಟ್ 03: ಬುಧವಾರ ರಾತ್ರಿ ಭಾರೀ ಮಳೆಯಿಂದಾಗಿ ಕೇದಾರನಾಥ (Kedarnath)ಟ್ರೆಕ್ ಮಾರ್ಗದಲ್ಲಿ ಸಿಲುಕಿಕೊಂಡಿದ್ದ 8495 ಯಾತ್ರಾರ್ಥಿಗಳನ್ನು ರಕ್ಷಿಸಲಾಗಿದೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿರುವ ಉತ್ತರಾಖಂಡದ (Uttarakhand) ರಾಜ್ಯ ವಿಪತ್ತು ನಿರ್ವಹಣಾ ಪಡೆ (SDRF) ಅಧಿಕಾರಿಗಳು, ಕೇದಾರನಾಥ ಟ್ರೆಕ್ ಮಾರ್ಗದ ವಿವಿಧ ಸ್ಥಳಗಳಲ್ಲಿ ಸಿಲುಕಿರುವ ಯಾತ್ರಾರ್ಥಿಗಳನ್ನು ರಕ್ಷಿಸುವ ಪ್ರಯತ್ನಗಳು ಶನಿವಾರ ಮಧ್ಯಾಹ್ನ 3 ಗಂಟೆಯವರೆಗೆ ಮುಂದುವರಿದಿದ್ದು, 1,101 ಜನರನ್ನು ಗೌರಿಕುಂಡ್-ಸೋನ್‌ಪ್ರಯಾಗ ಪರ್ಯಾಯ ಮಾರ್ಗ, ಕೇದಾರನಾಥ-ಚೌಮಾಸಿ ಟ್ರೆಕ್ ಮೂಲಕ ಮತ್ತು 414 ಜನರನ್ನು ಹೆಲಿಕಾಪ್ಟರ್‌ಗಳ ಮೂಲಕ ರಕ್ಷಿಸಲಾಗಿದೆ.

ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ರಕ್ಷಣಾ ಕಾರ್ಯಾಚರಣೆಯನ್ನು ನಿಗಾ ವಹಿಸುತ್ತಿದ್ದಾರೆ ಎಂದು ರಾಜ್ಯ ಸರ್ಕಾರದ ಪ್ರಕಟಣೆ ತಿಳಿಸಿದೆ. ಸಿಎಂ ಧಾಮಿ ಅವರ ನಿರ್ದೇಶನದ ಮೇರೆಗೆ ಗರ್ವಾಲ್ ವಿಭಾಗದ ಆಯುಕ್ತ ವಿನಯ್ ಶಂಕರ್ ಪಾಂಡೆ ಅವರನ್ನು ಕೇದಾರನಾಥ ಮಾರ್ಗದಲ್ಲಿ ಮೂಲಸೌಕರ್ಯ ಮರುಸ್ಥಾಪನೆಗೆ ನೋಡಲ್ ಅಧಿಕಾರಿಯಾಗಿ ನೇಮಿಸಲಾಗಿದೆ.

ಲೋಕೋಪಯೋಗಿ ಇಲಾಖೆ ಕಾರ್ಯದರ್ಶಿ ಆರ್.ಕೆ.ಸುಧಾಂಶು ಹೊರಡಿಸಿರುವ ಆದೇಶದ ಪ್ರಕಾರ, ಕೇದಾರನಾಥ ಮಾರ್ಗದಲ್ಲಿ ಭಾರೀ ಮಳೆಯಿಂದ ಉಂಟಾದ ಹಾನಿಗೆ ಸ್ಪಂದಿಸಿ, ರಕ್ಷಣಾ ಮತ್ತು ಪುನಶ್ಚೇತನ ಕಾರ್ಯಗಳಿಗೆ ಅನುಕೂಲವಾಗುವಂತೆ ಸಂಬಂಧಪಟ್ಟ ಇಲಾಖೆಗಳ ಹಿರಿಯ ಅಧಿಕಾರಿಗಳು ಭೇಟಿ ನೀಡಲಿದ್ದಾರೆ. ಜಿಲ್ಲೆಗೆ, ಗರ್ವಾಲ್ ವಿಭಾಗದ ಆಯುಕ್ತರು ರಕ್ಷಣಾ ಮತ್ತು ಮರುಸ್ಥಾಪನೆ ಕ್ರಮಗಳ ಪರಿಣಾಮಕಾರಿ ಅನುಷ್ಠಾನವನ್ನು ಖಚಿತಪಡಿಸಿಕೊಳ್ಳಲು ನೋಡಲ್ ಅಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಾರೆ.

ರುದ್ರಪ್ರಯಾಗ ಜಿಲ್ಲಾ ಮಾಹಿತಿ ಅಧಿಕಾರಿ ರತಿ ಲಾಲಾ ಅವರು, “ಬುಧವಾರ ರಾತ್ರಿಯಿಂದ ಕೇದಾರನಾಥ ಮಾರ್ಗದ ವಿವಿಧ ಸ್ಥಳಗಳಿಂದ ನಾವು ಇಲ್ಲಿಯವರೆಗೆ ಮೂರು ಮೃತದೇಹಗಳನ್ನು ಪಡೆದಿದ್ದೇವೆ.” ಎಂದಿದ್ದಾರೆ.

ಭೂಕುಸಿತದಿಂದಾಗಿ ಮುಚ್ಚಲಾಗಿದ್ದ ಚಿರ್ಬಸಾ ಹೆಲಿಪ್ಯಾಡ್ ಅನ್ನು ಎಸ್‌ಡಿಆರ್‌ಎಫ್‌ನ ತಂಡವು ಪುನಃಸ್ಥಾಪಿಸಿದೆ. ಈ ಹೆಲಿಪ್ಯಾಡ್‌ನ ಮರುಸ್ಥಾಪನೆಯು ರಕ್ಷಣಾ ಕಾರ್ಯಾಚರಣೆಗೆ ಗಣನೀಯ ನೆರವು ನೀಡಿದೆ ಎಂದು ಎಸ್‌ಡಿಆರ್‌ಎಫ್‌ನ ಕಮಾಂಡೆಂಟ್ ಮಣಿಕಾಂತ್ ಮಿಶ್ರಾ ಹೇಳಿದ್ದಾರೆ.

“ಭಾರೀ ಮಳೆಯಿಂದ ಉಂಟಾದ ಭೂಕುಸಿತದಿಂದಾಗಿ ಚಿರಬಸಾ ಹೆಲಿಪ್ಯಾಡ್‌ನಿಂದ ಹೆಲಿಕಾಪ್ಟರ್ ಸೇವೆಗಳು ಸಂಪೂರ್ಣವಾಗಿ ಸ್ಥಗಿತಗೊಂಡಿವೆ. ನಮ್ಮ ತಂಡವು ಹೆಲಿಪ್ಯಾಡ್‌ನಿಂದ ದೊಡ್ಡ ಬಂಡೆಗಳನ್ನು ತೆಗೆದುಹಾಕಿದೆ, ಅದನ್ನು ಮತ್ತೆ ಕಾರ್ಯಗತಗೊಳಿಸಿದೆ.ಇದು ರಕ್ಷಣಾ ತಂಡಗಳಿಗೆ ಗಮನಾರ್ಹ ಪರಿಹಾರವಾಗಿದೆ ಎಂದಿದ್ದಾರೆ ಮಿಶ್ರಾ.

“ಮಧ್ಯಾಹ್ನ 3:30 ರ ಹೊತ್ತಿಗೆ, ನಾವು ಚಿರಬಸಾ ಹೆಲಿಪ್ಯಾಡ್‌ನಿಂದ 40 ಜನರನ್ನು ರಕ್ಷಿಸಿದ್ದೇವೆ” ಎಂದು ಅವರು ಹೇಳಿದರು. ರಕ್ಷಣಾ ಕಾರ್ಯಾಚರಣೆಯ ಬಗ್ಗೆ ಮಾಹಿತಿ ನೀಡಿದ ರುದ್ರಪ್ರಯಾಗದ ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಪಿ) ವಿಶಾಖ ಅಶೋಕ್ ಭಾದನೆ, “ಜುಲೈ 31 ರಂದು, ಭಾರೀ ಮಳೆಯಿಂದ ಉಂಟಾದ ಭೂಕುಸಿತದಿಂದಾಗಿ ಕೇದಾರನಾಥ ಟ್ರೆಕ್ ಮಾರ್ಗವು ಹಲವಾರು ಹಂತಗಳಲ್ಲಿ ತೀವ್ರವಾಗಿ ಹಾನಿಗೊಳಗಾಯಿತು. ಅಂದಿನಿಂದ ರಕ್ಷಣಾ ತಂಡಗಳು ಸಿಕ್ಕಿಬಿದ್ದ ಯಾತ್ರಾರ್ಥಿಗಳ ರಕ್ಷಣೆಗಾಗಿ ಕಾರ್ಯಾಚರಣೆ ನಡೆಸುತ್ತಿವೆ. ಭಾರೀ ಮಳೆ ಮತ್ತು ನೆಟ್‌ವರ್ಕ್ ಸಮಸ್ಯೆಗಳಿಂದಾಗಿ ಅನೇಕ ಜನರು ಆರಂಭದಲ್ಲಿ ತಮ್ಮ ಕುಟುಂಬಗಳನ್ನು ಸಂಪರ್ಕಿಸಲು ಸಾಧ್ಯವಾಗಲಿಲ್ಲ.

ಹೆಚ್ಚಿನ ಸಂಖ್ಯೆಯ ಜನರು ನಾಪತ್ತೆಯಾಗಿದ್ದಾರೆ ಎಂಬ ವರದಿಗಳನ್ನು ತಳ್ಳಿಹಾಕಿದ ಎಸ್‌ಪಿ, ಅವರ ಬಳಿ ಲಭ್ಯವಿರುವ ಮಾಹಿತಿಯ ಆಧಾರದ ಮೇಲೆ, ಮೊದಲು ತಲುಪಲಾಗದವರು ತಮ್ಮ ಕುಟುಂಬಗಳೊಂದಿಗೆ ಮರುಸಂಪರ್ಕಿಸಿದ್ದಾರೆ. ಅನೇಕರು ರಕ್ಷಿಸಲ್ಪಟ್ಟ ನಂತರ ಮನೆಗೆ ತಲುಪಿದ್ದಾರೆ ಎಂದು ಹೇಳಿದರು.

ಯಾವುದೇ ತಪ್ಪುದಾರಿಗೆಳೆಯುವ ಮಾಹಿತಿಯನ್ನು ನಂಬಬೇಡಿ. ಕೇದಾರನಾಥ ಟ್ರೆಕ್ ಮಾರ್ಗದಲ್ಲಿ ಸಿಕ್ಕಿಬಿದ್ದಿರುವ ಅವರ ಕುಟುಂಬ ಸದಸ್ಯರಿಗೆ ಸಂಬಂಧಿಸಿದ ಯಾವುದೇ ಮಾಹಿತಿಗಾಗಿ ಪೊಲೀಸರನ್ನು ಸಂಪರ್ಕಿಸುವಂತೆ ಭಾದನೆ ಸಾರ್ವಜನಿಕರಿಗೆ ಹೇಳಿದ್ದಾರೆ.

ಇದನ್ನೂ ಓದಿ: ಮಧ್ಯಪ್ರದೇಶದಲ್ಲಿ ಶಾಲೆಯಿಂದ ಮನೆಗೆ ಹೋಗುತ್ತಿದ್ದಾಗ ಗೋಡೆ ಕುಸಿದು ನಾಲ್ವರು ಮಕ್ಕಳ ಸಾವು

ಅಧಿಕಾರಿಗಳ ಪ್ರಕಾರ, ಅವರು ಕೇದಾರನಾಥ ಮಾರ್ಗದಲ್ಲಿ ಸಿಕ್ಕಿಬಿದ್ದ ಯಾತ್ರಾರ್ಥಿಗಳಿಗೆ ಆಹಾರ ಪ್ಯಾಕೆಟ್‌ಗಳನ್ನು ನೀಡುವುದನ್ನು ಮುಂದುವರೆಸಿದ್ದಾರೆ. “ ಮೂರನೇ ದಿನ, ಜಿಲ್ಲಾ ಆಹಾರ ಮತ್ತು ಸರಬರಾಜು ಇಲಾಖೆಯು ಟ್ರೆಕ್ ಮಾರ್ಗದಲ್ಲಿ ಭೀಮಾಲಿ ಮತ್ತು ಇತರ ಸ್ಥಳಗಳಲ್ಲಿ ಸಿಕ್ಕಿಬಿದ್ದ ಯಾತ್ರಾರ್ಥಿಗಳಿಗೆ ಆಹಾರ ಪ್ಯಾಕೆಟ್‌ಗಳನ್ನು ವಿತರಿಸಿತು. ಮತ್ತೊಂದೆಡೆ, ಗರ್ವಾಲ್ ಮಂಡಲ್ ವಿಕಾಸ್ ನಿಗಮ್ (ಜಿಎಂವಿಎನ್) ಕೇದಾರನಾಥ ದೇಗುಲ ಪ್ರದೇಶದಲ್ಲಿ ಸಿಕ್ಕಿಬಿದ್ದ ಯಾತ್ರಾರ್ಥಿಗಳಿಗೆ ಆಹಾರ ವ್ಯವಸ್ಥೆಯನ್ನು ಸಹ ಮಾಡಿದೆ ಎಂದು ಜಿಲ್ಲಾ ಮಾಹಿತಿ ಅಧಿಕಾರಿ ರತಿ ಲಾಲಾ ಹೇಳಿದ್ದಾರೆ.

ಗರ್ವಾಲ್ ಸಂಸದ ಅನಿಲ್ ಬಲುನಿ ಅವರು ಶನಿವಾರ ಸೋನ್‌ಪ್ರಯಾಗದಲ್ಲಿ ವಿಪತ್ತು ಪೀಡಿತ ಪ್ರದೇಶಗಳಿಗೆ ತೆರಳಿ ಪರಿಶೀಲನೆ ನಡೆಸಿದರು. ಬಲುನಿ ಅವರು ವಿವಿಧ ಸ್ಥಳಗಳಲ್ಲಿ ಸಿಲುಕಿರುವ ಯಾತ್ರಾರ್ಥಿಗಳು ಮತ್ತು ಸ್ಥಳೀಯ ನಿವಾಸಿಗಳ ರಕ್ಷಣೆಗಾಗಿ ಜಿಲ್ಲಾಡಳಿತಕ್ಕೆ ಅಗತ್ಯ ನಿರ್ದೇಶನಗಳನ್ನು ನೀಡಿದರು.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಕಷ್ಟದಲ್ಲಿ ಬಿಟ್ಟುಹೋಗುವವನು ನಾನಲ್ಲ: ದರ್ಶನ್ ಸ್ನೇಹದ ಬಗ್ಗೆ ಧನ್ವೀರ್ ಮಾತು
ಕಷ್ಟದಲ್ಲಿ ಬಿಟ್ಟುಹೋಗುವವನು ನಾನಲ್ಲ: ದರ್ಶನ್ ಸ್ನೇಹದ ಬಗ್ಗೆ ಧನ್ವೀರ್ ಮಾತು
ಸೈಕಲ್ ತುಳಿಯುವ ಅಗತ್ಯವಿಲ್ಲಾಂತ ಮುಖಂಡರನ್ನು ತುಳಿಯುತ್ತಾರೆಯೇ? ಅಭಿಮಾನಿಗಳು
ಸೈಕಲ್ ತುಳಿಯುವ ಅಗತ್ಯವಿಲ್ಲಾಂತ ಮುಖಂಡರನ್ನು ತುಳಿಯುತ್ತಾರೆಯೇ? ಅಭಿಮಾನಿಗಳು
ಹೊಸಪಕ್ಷ ಕಟ್ಟಿದರೆ 224 ಸ್ಥಾನಗಳಿಗೆ ಅಭ್ಯರ್ಥಿಗಳೂ ಸಿಗಲ್ಲ: ರೇಣುಕಾಚಾರ್ಯ
ಹೊಸಪಕ್ಷ ಕಟ್ಟಿದರೆ 224 ಸ್ಥಾನಗಳಿಗೆ ಅಭ್ಯರ್ಥಿಗಳೂ ಸಿಗಲ್ಲ: ರೇಣುಕಾಚಾರ್ಯ
ಮೋದಿ ಬಳಿ ಅಶೋಕ ಚಕ್ರದ ವಿಶೇಷತೆ ಕೇಳಿದ ಚಿಲಿಯ ಅಧ್ಯಕ್ಷ
ಮೋದಿ ಬಳಿ ಅಶೋಕ ಚಕ್ರದ ವಿಶೇಷತೆ ಕೇಳಿದ ಚಿಲಿಯ ಅಧ್ಯಕ್ಷ
ಕೆಮ್ಮು ಬಾಧಿಸಲಾರಂಭಿಸಿದಾಗ ಯಡಿಯೂರಪ್ಪ ಮಗನಿಗೆ ಮಾತಾಡುವಂತೆ ಹೇಳಿದರು
ಕೆಮ್ಮು ಬಾಧಿಸಲಾರಂಭಿಸಿದಾಗ ಯಡಿಯೂರಪ್ಪ ಮಗನಿಗೆ ಮಾತಾಡುವಂತೆ ಹೇಳಿದರು
ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆ ಯತ್ನಾಳ್ ಚರ್ಚಿಸಿಲ್ಲ: ನಡಹಳ್ಳಿ
ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆ ಯತ್ನಾಳ್ ಚರ್ಚಿಸಿಲ್ಲ: ನಡಹಳ್ಳಿ
ಧಾರವಾಡ: ಮದ್ಯ ಮಾರಾಟದ ಅಂಗಡಿಗಳಿಗೆ ಮಹಿಳೆಯರ ಮುತ್ತಿಗೆ
ಧಾರವಾಡ: ಮದ್ಯ ಮಾರಾಟದ ಅಂಗಡಿಗಳಿಗೆ ಮಹಿಳೆಯರ ಮುತ್ತಿಗೆ
ನನ್ನ ವರ್ತನೆ ಮತ್ತು ವರಸೆ ಯಾವ ಕಾರಣಕ್ಕೂ ಬದಲಾಗದು: ಯತ್ನಾಳ್
ನನ್ನ ವರ್ತನೆ ಮತ್ತು ವರಸೆ ಯಾವ ಕಾರಣಕ್ಕೂ ಬದಲಾಗದು: ಯತ್ನಾಳ್
ಬಿವಿ ಕಾರಂತರು ನಾಯಿ ತಿಥಿಗೆ ಹೋದ ಕತೆ, ರಂಗಾಯಣ ರಘು ಅನುಕರಣೆ ನೋಡಿ
ಬಿವಿ ಕಾರಂತರು ನಾಯಿ ತಿಥಿಗೆ ಹೋದ ಕತೆ, ರಂಗಾಯಣ ರಘು ಅನುಕರಣೆ ನೋಡಿ
ಹಿಂದೂ ಕಾರ್ಯಕರ್ತರು ಯಾವ ಕಾರಣಕ್ಕೂ ಎದೆಗುಂದಬಾರದು: ಯತ್ನಾಳ್
ಹಿಂದೂ ಕಾರ್ಯಕರ್ತರು ಯಾವ ಕಾರಣಕ್ಕೂ ಎದೆಗುಂದಬಾರದು: ಯತ್ನಾಳ್