AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವೈದ್ಯಕೀಯ ತುರ್ತು ಪರಿಸ್ಥಿತಿ ಇರುವವರಿಗೆ ಉಚಿತ ಸೇವೆ ನೀಡುತ್ತಿರುವ ಆಟೋ ಡ್ರೈವರ್

ರಾಂಚಿ ನಿವಾಸಿ ರವಿ ಅಗರ್​ವಾಲ್ಎಂಬಾತ ಆಟೋ ಡ್ರೈವರ್ ಆಗಿ ಕೆಲಸ ಮಾಡುತ್ತಿದ್ದಾರೆ. ಆಸ್ಪತ್ರೆಗೆ ಹೋಗಬೇಕಾದ ಜನರಿಂದ ಒಂದು ರೂಪಾಯಿ ಹಣವನ್ನು ಪಡೆಯದೆ ಉಚಿತವಾಗಿ ಆಸ್ಪತ್ರೆಯತ್ತ ಕರೆದೊಯ್ಯುತ್ತಾರೆ. ಜೊತೆಗೆ ರವಿ ಅಗರ್​ವಾಲ್ ಆಟೋ ಹಿಂಬದಿಯಲ್ಲಿ ತುರ್ತು ಸೇವೆಯಲ್ಲಿ ಉಚಿತ ಸೇವೆ ಎಂಬ ಪೋಸ್ಟ್ ಅಂಟಿಸಿ ತಮ್ಮ ಮೊಬೈಲ್ ಸಂಖ್ಯೆಯನ್ನು ಅಂಟಿಸಿದ್ದಾರೆ.

ವೈದ್ಯಕೀಯ ತುರ್ತು ಪರಿಸ್ಥಿತಿ ಇರುವವರಿಗೆ ಉಚಿತ ಸೇವೆ ನೀಡುತ್ತಿರುವ ಆಟೋ ಡ್ರೈವರ್
ಆಟೋ ಡ್ರೈವರ್ ರವಿ ಅಗರ್​ವಾಲ್
Follow us
sandhya thejappa
|

Updated on: Apr 24, 2021 | 1:37 PM

ಜಾರ್ಖಂಡ್: ದೇಶದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಸಾವಿನ ಸಂಖ್ಯೆಯೂ ಗಣನೀಯವಾಗಿ ಏರಿಕೆಯಾಗುತ್ತಿದೆ. ಕೆಲವು ರಾಜ್ಯಗಳಲ್ಲಿ ನೈಟ್ ಕರ್ಫ್ಯೂ ಸೇರಿದಂತೆ ವೀಕೆಂಡ್ ಕರ್ಫ್ಯೂನ ಜಾರಿಗೊಳಿಸಲಾಗಿದೆ. ಈ ನಡುವೆ ಜಾರ್ಖಂಡ್​ನ ರಾಂಚಿಯಲ್ಲಿ ಆಟೋ ಚಾಲಕರೊಬ್ಬರು ತನ್ನದೇ ಆದ ವಿಶಿಷ್ಟ ಸಹಾಯದಿಂದ ಎಲ್ಲರ ಗಮನ ಸೆಳೆಯುವ ಮೂಲಕ ಇತರರಿಗೆ ಮಾದರಿಯಾಗಿದ್ದಾರೆ.

ರಾಂಚಿ ನಿವಾಸಿ ರವಿ ಅಗರ್​ವಾಲ್ಎಂಬಾತ ಆಟೋ ಡ್ರೈವರ್ ಆಗಿ ಕೆಲಸ ಮಾಡುತ್ತಿದ್ದಾರೆ. ಆಸ್ಪತ್ರೆಗೆ ಹೋಗಬೇಕಾದ ಜನರಿಂದ ಒಂದು ರೂಪಾಯಿ ಹಣವನ್ನು ಪಡೆಯದೆ ಉಚಿತವಾಗಿ ಆಸ್ಪತ್ರೆಯತ್ತ ಕರೆದೊಯ್ಯುತ್ತಾರೆ. ಜೊತೆಗೆ ರವಿ ಅಗರ್​ವಾಲ್ ಆಟೋ ಹಿಂಬದಿಯಲ್ಲಿ ತುರ್ತು ಸೇವೆಯಲ್ಲಿ ಉಚಿತ ಸೇವೆ ಎಂಬ ಪೋಸ್ಟ್ ಅಂಟಿಸಿ ತಮ್ಮ ಮೊಬೈಲ್ ಸಂಖ್ಯೆಯನ್ನು ಅಂಟಿಸಿದ್ದಾರೆ. ಕೊರೊನಾ ಸಾಂಕ್ರಾಮಿಕ ರೋಗದಿಂದ ಆಸ್ಪತ್ರೆಗೆ ಕರೆದುಕೊಂಡು ಹೋಗಲು ಹಿಂಜರಿಯುವ ಆಟೋ ಚಾಲಕರ ಮಧ್ಯೆ ರವಿ ಅಗರ್​ವಾಲ್​ರವರ ಈ ಸೇವೆಗೆ ನಿಜಕ್ಕೂ ಮೆಚ್ಚುಗೆ ವ್ಯಕ್ತಪಡಿಸುವ ವಿಷಯ.

ಆಟೋ ಚಾಲಕ ರವಿ ಅಗರ್​ವಾಲ್ ಏಪ್ರಿಲ್ 15ರಿಂದ ಈ ಉಚಿತ ಸೇವೆಯನ್ನು ಮಾಡುತ್ತಿದ್ದಾರೆ. ಇಲ್ಲಿವರೆಗೆ ಸುಮಾರು 16 ಜನರಿಗೆ ಈ ಸೇವೆಯನ್ನು ನೀಡಿದ್ದೇನೆ ಎಂದು ಮಾತನಾಡಿದ ರವಿ ಅಗರ್​ವಾಲ್ , ಮಹಿಳೆಯೊಬ್ಬರು ರಿಮ್ಸ್ (ರಾಜೇಂದ್ರ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್) ಗೆ ಹೋಗಬೇಕಿತ್ತು. ಆದರೆ ಯಾರೊಬ್ಬ ಆಟೋ ಡ್ರೈವರ್ ಆಕೆಯನ್ನು ಕರೆದುಕೊಂಡು ಹೋಗಲು ಒಪ್ಪಲಿಲ್ಲ. ನೀವು ಕೇಳುವಷ್ಟು ಹಣವನ್ನು ನೀಡುತ್ತೇನೆ ಎಂದು ಮಹಿಳೆ ಆಟೋ ಡ್ರೈವರ್​ಗಳಿಗೆ ಹೇಳಿದರೂ ಯಾರು ಸಿದ್ಧರಾಗಿರಲಿಲ್ಲ. ಆ ಮಹಿಳೆ ಕೊರೊನಾ ಸೋಂಕಿತಳಾ ಎಂದು ನನಗೆ ತಿಳಿದಿಲ್ಲ. ಆದರೆ ಆಕೆ ಹೋಗಬೇಕಾದ ಕಡೆ ಉಚಿತವಾಗಿ ಕರೆದುಕೊಂಡು ಹೋಗಿದ್ದೇನೆ ಎಂದು ತಿಳಿಸಿದರು.

ಅಲ್ಲದೇ ನನ್ನ ಪೋನ್ ನಂಬರ್​ನ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದೇನೆ. ಉಚಿತವಾಗಿ ಸೇವೆ ಮಾಡಲು ಸಿದ್ದನಾಗಿದ್ದೇನೆ. ಆಸ್ಪತ್ರೆಗೆ ಹೋಗಬೇಕಾದವರಿಗೆ ಆಟೋ ಅಗತ್ಯವಿದ್ದರೆ ನನ್ನನ್ನು ಸುಲಭವಾಗಿ ಸಂಪರ್ಕಿಸಬಹುದೆಂದು ಹೇಳಿದ್ದಾರೆ.

ಇದನ್ನೂ ಓದಿ

ಗರ್ಭಾವಸ್ಥೆಯಲ್ಲೂ ರಸ್ತೆಗಿಳಿದು ಕಾರ್ಯ ನಿರ್ವಹಿಸಿದ ಡಿಎಸ್​ಪಿ ಶಿಲ್ಪಾ ಸಾಹುಗೆ ಎಲ್ಲೆಡೆ ಮೆಚ್ಚುಗೆ

ಕರ್ನಾಟಕದಲ್ಲಿ 50 ಸಾವಿರ ಕೋವಿಡ್ ಬೆಡ್​​ಗಳಿಗೆ ದಿನಕ್ಕೆ 1,600 ಟನ್​ ಆಕ್ಸಿಜನ್​ ಬೇಕಾಗಿದೆ! ಉತ್ಪಾದನೆ ಹೇಗೆ? ಸರಬರಾಜು ಹೇಗೆ?

(Auto driver is providing free service for those with medical emergencies at Ranchi)

ಉಗ್ರರ ವಿರುದ್ಧ ಕ್ರಮಕೈಗೊಳ್ಳಿ, ಮೋದಿ ಜೊತೆ ನಾವಿದ್ದೇವೆ: ಮುಸ್ಲಿಂ ಮುಖಂಡರು
ಉಗ್ರರ ವಿರುದ್ಧ ಕ್ರಮಕೈಗೊಳ್ಳಿ, ಮೋದಿ ಜೊತೆ ನಾವಿದ್ದೇವೆ: ಮುಸ್ಲಿಂ ಮುಖಂಡರು
‘ಕಿತ್ಗೊಂಡು ತಿನ್ನುವವರಿಗೆ ಹೊಟ್ಟೆ ತುಂಬಲ್ಲ’; ಹಾಡು ಹೇಳಿದ ಸಾಧು ಕೋಕಿಲ
‘ಕಿತ್ಗೊಂಡು ತಿನ್ನುವವರಿಗೆ ಹೊಟ್ಟೆ ತುಂಬಲ್ಲ’; ಹಾಡು ಹೇಳಿದ ಸಾಧು ಕೋಕಿಲ
ಕಾರ್ಯಕ್ರಮದಲ್ಲಿ ಸಚಿವ ವೆಂಕಟೇಶ್​ರನ್ನು ವಿಶೇಷವಾಗಿ ಹೊಗಳಿದ ಸಿದ್ದರಾಮಯ್ಯ
ಕಾರ್ಯಕ್ರಮದಲ್ಲಿ ಸಚಿವ ವೆಂಕಟೇಶ್​ರನ್ನು ವಿಶೇಷವಾಗಿ ಹೊಗಳಿದ ಸಿದ್ದರಾಮಯ್ಯ
ಅಮಿತ್ ಶಾ ಆದೇಶ ಕೇಳಿ ಪಾಕಿಸ್ತಾನಿ ಮಹಿಳೆಯ ಅತ್ತೆಗೆ ಹೃದಯಾಘಾತ
ಅಮಿತ್ ಶಾ ಆದೇಶ ಕೇಳಿ ಪಾಕಿಸ್ತಾನಿ ಮಹಿಳೆಯ ಅತ್ತೆಗೆ ಹೃದಯಾಘಾತ
‘ಅವರು ಹೇಡಿಗಳು, ಗಂಡಸ್ತನ ಇದ್ರೆ ಸೈನಿಕರ ವಿರುದ್ಧ ಹೋರಾಡಲಿ’; ಚಂದನ್ ಶೆಟ್ಟ
‘ಅವರು ಹೇಡಿಗಳು, ಗಂಡಸ್ತನ ಇದ್ರೆ ಸೈನಿಕರ ವಿರುದ್ಧ ಹೋರಾಡಲಿ’; ಚಂದನ್ ಶೆಟ್ಟ
ಬರವಣಿಗೆ ನನ್ನ ಶಕ್ತಿಯಾಗಿತ್ತು ಎನ್ನುತ್ತಾರೆ 425 ನೇ ರ‍್ಯಾಂಕ್ ಪಡೆದ ಮೇಘನಾ
ಬರವಣಿಗೆ ನನ್ನ ಶಕ್ತಿಯಾಗಿತ್ತು ಎನ್ನುತ್ತಾರೆ 425 ನೇ ರ‍್ಯಾಂಕ್ ಪಡೆದ ಮೇಘನಾ
ಇಂದಿನಿಂದ ಹುಬ್ಬಳ್ಳಿಯಲ್ಲಿ ಆರಂಭವಾಗಿರುವ 2-ದಿನದ ಎಜುಕೇಶನ್ ಎಕ್ಸ್​ಪೋ
ಇಂದಿನಿಂದ ಹುಬ್ಬಳ್ಳಿಯಲ್ಲಿ ಆರಂಭವಾಗಿರುವ 2-ದಿನದ ಎಜುಕೇಶನ್ ಎಕ್ಸ್​ಪೋ
ಯುದ್ಧದ ಬಗ್ಗೆ ಸಿಎಂ ಸಿದ್ದರಾಮಯ್ಯ ಏನು ಹೇಳಿದ್ದಾರೆ ಗೊತ್ತಿಲ್ಲ: ಲಕ್ಷ್ಮಿ
ಯುದ್ಧದ ಬಗ್ಗೆ ಸಿಎಂ ಸಿದ್ದರಾಮಯ್ಯ ಏನು ಹೇಳಿದ್ದಾರೆ ಗೊತ್ತಿಲ್ಲ: ಲಕ್ಷ್ಮಿ
ಕೋಲಾರದಲ್ಲಿ ಜನಪದ ಗಾಯಕನಿಂದ ನಿರ್ಮಾಣವಾದ ಹೈಟೆಕ್ ​ಬಸ್ ನಿಲ್ದಾಣ
ಕೋಲಾರದಲ್ಲಿ ಜನಪದ ಗಾಯಕನಿಂದ ನಿರ್ಮಾಣವಾದ ಹೈಟೆಕ್ ​ಬಸ್ ನಿಲ್ದಾಣ
ಪಾಕಿಸ್ತಾನಕ್ಕೆ ಅದರದ್ದೇ ಭಾಷೆಯಲ್ಲಿ ಉತ್ತರ ಕೊಡಬೇಕು: ಧ್ರುವ ಸರ್ಜಾ
ಪಾಕಿಸ್ತಾನಕ್ಕೆ ಅದರದ್ದೇ ಭಾಷೆಯಲ್ಲಿ ಉತ್ತರ ಕೊಡಬೇಕು: ಧ್ರುವ ಸರ್ಜಾ